Homeಅಂತರಾಷ್ಟ್ರೀಯಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ ಕುಲಭೂಷಣ್ ಜಾಧವ್: ಪಾಕ್

ಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ ಕುಲಭೂಷಣ್ ಜಾಧವ್: ಪಾಕ್

- Advertisement -
- Advertisement -

ಗೂಢಚರ್ಯೆ ಆರೋಪದ ಮೇಲೆ ಪಾಕಿಸ್ತಾನದ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಶಿಕ್ಷೆಯ ವಿರುದ್ಧ ಮರಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ.

ಮಾರ್ಚ್ 2016 ರಲ್ಲಿ ಬಲೂಚಿಸ್ತಾನದಲ್ಲಿ ಗೂಢಚರ್ಯೆ ನಡೆಸಿದ ಆರೋಪದ ಮೇಲೆ ಆತನನ್ನು ಬಂಧಿಸಲಾಯಿತು ಮತ್ತು ಒಂದು ವರ್ಷದ ನಂತರ ಮಿಲಿಟರಿ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿತು.

“ಮೊದಲ ಸುತ್ತಿನಲ್ಲಿ, ಅವರು ತಮ್ಮ ತಾಯಿ ಮತ್ತು ಹೆಂಡತಿಯನ್ನು ಭೇಟಿಯಾದರು ಮತ್ತು ಈಗ ನಾವು ಅವರ ತಂದೆ ಮತ್ತು ಹೆಂಡತಿಯನ್ನು ಭೇಟಿಯಾಗಲು ಅವಕಾಶ ನೀಡಿದ್ದೇವೆ” ಎಂದು ಪಾಕಿಸ್ತಾನದ ಹೆಚ್ಚುವರಿ ಅಟಾರ್ನಿ ಜನರಲ್ ಅಹ್ಮದ್ ಇರ್ಫಾನ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪಾಕಿಸ್ತಾನ ವಿದೇಶಾಂಗ ಕಚೇರಿಯಲ್ಲಿ ದಕ್ಷಿಣ ಏಷ್ಯಾದ ಮಹಾನಿರ್ದೇಶಕರು ಮತ್ತು ಸಾರ್ಕ್‌ನ ಜಾಹಿದ್ ಹಫೀಜ್ ಚೌಧರಿಯವರೊಂದಿಗೆ ಇರ್ಫಾನ್ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿ, ಪಾಕಿಸ್ತಾನವು ಈ ವರ್ಷದ ಮೇ ತಿಂಗಳಲ್ಲಿ 2020ರ ಅಂತರರಾಷ್ಟ್ರೀಯ ನ್ಯಾಯ ವಿಮರ್ಶೆ ಮತ್ತು ಪುನರ್ವಿಮರ್ಶೆ ಸುಗ್ರೀವಾಜ್ಞೆಯನ್ನು ಜಾರಿಗೆ ತಂದಿದೆ ಎಂದಿದ್ದಾರೆ. ಇದು ಒಂದು ನಿರ್ದಿಷ್ಟ ಅವಧಿಯೊಳಗೆ ಪರಿಶೀಲನಾ ಅರ್ಜಿಗಳನ್ನು ಅನುಮತಿಸುತ್ತದೆ ಎಂದು ತಿಳಿಸಿದ್ದಾರೆ.

ಆದರೆ ಜಾಧವ್ ಅವರಿಗೆ ನೀಡಲಾದ ಮರಣದಂಡನೆ ಶಿಕ್ಷೆ ವಿರುದ್ಧ ಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಜುಲೈನಲ್ಲಿ, ಜಾಧವ್‌ಗೆ ಕಾನ್ಸುಲರ್ ಪ್ರವೇಶವನ್ನು ಒದಗಿಸಲು ಮತ್ತು ಅವರ ಮರಣದಂಡನೆಯನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನಕ್ಕೆ ಅಂತರರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ಆದೇಶಿಸಿತ್ತು.

ಪಾಕಿಸ್ತಾನದ ಹೆಚ್ಚುವರಿ ಅಟಾರ್ನಿ ಜನರಲ್ ಅಹ್ಮದ್ ಇರ್ಫಾನ್ ಅವರು ಕಳೆದ ಜೂನ್ 17 ರಂದು ಕುಲಭೂಷಣ್ ಜಾಧವ್ ಅವರಿಗೆ ತಮ್ಮ ಶಿಕ್ಷೆ ಮತ್ತು ಅಪರಾಧದ ಮರು ಪರಿಶೀಲನೆಗಾಗಿ ಅರ್ಜಿ ಸಲ್ಲಿಸುವಂತೆ ಆಹ್ವಾನಿಸಿದ್ದಾರೆ. ಆದರೆ, ಜಾಧವ್ ಅರ್ಜಿ ಸಲ್ಲಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪಾಕಿಸ್ತಾನ ಸರ್ಕಾರ ಬಾಕಿ ಇರುವ ಕರುಣೆ ಮನವಿಗಳನ್ನು ಪರಿಶೀಲಿಸಲು ಆದ್ಯತೆ ನೀಡಿದೆ ಎಂದು ಪಾಕಿಸ್ತಾನದ ಮಾಧ್ಯಮವನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್‌: ಎರಡು ಪ್ರಕರಣಗಳನ್ನು ದಾಖಲಿಸಿದ ಸಿಬಿಐ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...