Homeಸಾಮಾಜಿಕಇಟ್ಟಿಹರೆಜ್ಜೆ ನಮ್ಮ ಜನ, ಗೆದ್ದೇ ಗೆಲ್ಲುವೆವು ಮುಂದೊಂದು ದಿನ

ಇಟ್ಟಿಹರೆಜ್ಜೆ ನಮ್ಮ ಜನ, ಗೆದ್ದೇ ಗೆಲ್ಲುವೆವು ಮುಂದೊಂದು ದಿನ

- Advertisement -
- Advertisement -

ಕಳೆದ ಒಂದು ದಶಕದಿಂದ ಇಡೀ ರಾಜ್ಯವೇ ಬರಗಾಲದ ಬೇಗೆಯಲ್ಲಿ ನಲುಗುತ್ತಿದೆ. ಇದಕ್ಕೆ ಮರೆಮಲೆನಾಡು ಪ್ರದೇಶವಾಗಿರುವ ಹಾಸನ ಜಿಲ್ಲೆಯೇನೂ ಹೊರತಾಗಿಲ್ಲ. ಹಾಸನವನ್ನೂ ಒಳಗೊಂಡಂತೆ ಜಿಲ್ಲೆಯ 5 ತಾಲ್ಲೂಕುಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೋದ ವರ್ಷ ಬರ ಪೀಡಿತ ರಾಜ್ಯಗಳ ಪಟ್ಟಿಗೆ ಸೇರಿಸಿವೆ. ಕಳೆದೆರಡು ವರ್ಷಗಳಲ್ಲಿ 200ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ದಾರುಣತೆಯೂ ಜೊತೆಗೂಡಿದೆ. ಮಳೆ ಬಾರದಿದ್ದಾಗ ನೀರಿನ ಹಾಹಾಕಾರವಿರುವ ನಗರಪ್ರದೇಶಗಳಿಗೆ, ಹಳ್ಳಿಗಳಿಗೆ ಟ್ಯಾಂಕರ್‍ಗಳ ಮೂಲಕ ಒಂದಷ್ಟು ದಿನಗಳ ಕಾಲ ನೀರುಕೊಟ್ಟು ಕೈತೊಳೆದುಕೊಳ್ಳುತ್ತಿದ್ದ ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್‍ಗಳ ಮಧ್ಯೆ ಸದ್ದಿಲ್ಲದೆ ಚಿಗುರೊಡೆದದ್ದು ಹಸಿರುಭೂಮಿ ಪ್ರತಿಷ್ಠಾನ.
ಪರಿಸರದ ಬಗೆಗಿನ ಕಾಳಜಿಯುಳ್ಳ ಪರಿಸರ ಸಂಬಂಧಿ ಚಟುವಟಿಕೆಗಳು, ಬರಹಗಳು, ಹೋರಾಟಗಳನ್ನು ಮಾಡುತ್ತಿದ್ದ ಹಾಸನದ ಸಮಾನ ಮನಸ್ಸುಗಳು 2017ರ ಏಪ್ರಿಲ್‍ನಲ್ಲಿ ಒಂದೆಡೆ ಸೇರಿ, ನೀರಿನ ಬಗೆಯ ಅಧ್ಯಯನದೊಂದಿಗೆ, ಬರದ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವಲ್ಲಿ ಮುಂದಡಿ ಇಟ್ಟವರು. ಅಮೀರ್‍ಖಾನ್ ಮಹಾರಾಷ್ಟ್ರದಲ್ಲಿ ಬರದ ವಿರುದ್ಧ ಪಾನೀ ಫೌಂಡೇಶನ್ ಮೂಲಕ ನಡೆಸುತ್ತಿರುವ ಕೆಲಸಗಳ ಸಾಕ್ಷ್ಯಚಿತ್ರ ‘ದಿ ಬ್ಯಾಟಲ್ ಎಗೆನೆಸ್ಟ್ ಡ್ರಾಟ್’ ವೀಕ್ಷಿಸಿ, ನಂತರ ನಡೆಸಿದ ಚರ್ಚೆ ಅಲ್ಲಿ ನೆರೆದಿದ್ದ ಸಾಹಿತಿಗಳು, ಹೋರಾಟಗಾರರು, ಅಧಿಕಾರಿಗಳು, ಪತ್ರಕರ್ತರು, ಪರಿಸರಪ್ರೇಮಿಗಳು, ಕಲಾವಿದರಲ್ಲಿ ಕ್ರಿಯಾಶೀಲತೆಯಿಂದ ನೀರಿನ ಕೆಲಸದಲ್ಲಿ ತೊಡಗಲು ‘ಹಸಿರುಭೂಮಿ ಪ್ರತಿಸ್ಠಾನ’ವನ್ನು ಸ್ಥಾಪಿಸುವಂತೆ ಮಾಡಿತು.
ಪರಿಸರ ಮತ್ತು ಅಂತರ್ಜಲದ ಬಗೆಗೆ ನಾಡಿನ ಖ್ಯಾತ ಜಲ ಮತ್ತು ಅಂತರ್ಜಲ ತಜ್ಞರ ಮೂಲಕ ತರಬೇತಿ ಪಡೆದ ಹಸಿರುಭೂಮಿ ಪ್ರತಿಸ್ಠಾನದ ತಂಡ, ಆನಂತರ ಹೂಳು ತುಂಬಿ ಬತ್ತಿಹೋದ ಕೆರೆಗಳಲ್ಲಿ ಅಂತರ್ಜಲ ಹುಡುಕಿ ಕೆರೆ-ಕಲ್ಯಾಣಿಗಳಲ್ಲಿ ಹೂಳೆತ್ತುವ ಕಾರ್ಯದಲ್ಲಿ ತೊಡಗಿಕೊಂಡಿದ್ದು ಈಗ ಇತಿಹಾಸ. 2017ರ ಮೇ 1ರ ಕಾರ್ಮಿಕ ದಿನದಂದು ಹಾಸನ ತಾಲ್ಲೂಕಿನ ದೊಡ್ಡಕೊಂಡಗುಳ ಗ್ರಾಮದಲ್ಲಿ ಗ್ರಾಮಸ್ಥರನ್ನು ಸೇರಿಸಿಕೊಂಡು ಹೋಯ್ಸಳರ ಕಾಲದ 2 ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸುವ ಕೆಲಸವನ್ನು ಆರಂಭಿಸಿತು. ಹೂಳು ತುಂಬಿದ್ದ ಕಲ್ಯಾಣಿಗಳ ತಳಮಟ್ಟಕ್ಕೆ ಹೂಳು ತೆಗೆಯುತ್ತಿದ್ದಂತೆ ಜಲಚಿಲುಮೆ ಪಸರಿಸಿತು. ಆನಂತರ ಅದೇ ಊರಿನ ಕೆರೆಯನ್ನೂ ದಾನಿಗಳ ನೆರವಿನಿಂದ ಸುಮಾರು 6 ಲಕ್ಷ ಹಣವನ್ನು ವಿನಿಯೋಗಿಸಿ 20 ದಿನಗಳಲ್ಲಿ ಯಮತ್ರಗಳ ನೆರವಿನಿಂದ ಪುನಶ್ಚೇತನಗೊಳಿಸಿ ದಾಖಲೆ ಬರೆಯಿತು. ಆರಂಭದ ಮೊದಲನೆಯ ಪ್ರಯೋಗ ಯಶಸ್ಸು ಕಂಡ ಹುಮ್ಮಸ್ಸಿನಲ್ಲಿ ಮುನ್ನಡೆದ ತಂಡ ಹಾಸನ, ಚನ್ನರಾಯಪಟ್ಟಣ, ಅರಕಲಗೂಡು, ಬೇಲೂರು ತಾಲ್ಲೂಕುಗಳ ಹಲವಾರು ಹಳ್ಳಿಗಳಲ್ಲಿ ಸ್ಥಳೀಯರ ನೆರವಿನೊಂದಿಗೆ ತಂಡ ಕಟ್ಟಿ, ಜಲದ ಜಾಡನ್ನು ಹಿಡಿದು 35ಕ್ಕೂ ಹೆಚ್ಚಿನ ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸಿತು. ಹಾಗೂ ದಾನಿಗಳು, ಖಾಸಗಿ ಸಂಸ್ಥೆಗಳ ಸಾಮಾಜಿಕ ನಿಧಿಯ ನೆರವಿನೊಂದಿಗೆ 5ಕೆರೆಗಳನ್ನು 10ಅಡಿಗಳಷ್ಟು ಆಳಕ್ಕೆ ಹೂಳು ತೆಗೆದು ಪುನಶ್ಚೇತನಗೊಳಿಸುವಲ್ಲಿ ಹಸಿರುಭೂಮಿ ಪ್ರತಿಸ್ಠಾನ ಯಶಸ್ಸು ಕಂಡಿದೆ.
ಮೊದಲ ಯಶಸ್ಸು ಕಂಡ ದೊಡ್ಡಕೊಂಡಗುಳ ಕೆರೆಗೆ ನೀರು ಭರ್ತಿಯಾಗಿ ಸುತ್ತಮುತ್ತಲಿನ ಜಮೀನಿಗೆ, ಜಲಚರಗಳಿಗೆ, ಪ್ರಾಣಿ ಪಕ್ಷಿಗಳಿಗೆ, ಜನಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆಯನ್ನು ನೀಗಿಸಿದೆ. ಅಲ್ಲದೆ ತೆರೆದ ಬಾವಿಗಳು, ಕೊಳವೆಬಾವಿಗಳು ಅಂತರ್ಜಲ ವೃದ್ಧಿಸಿದ ಕಾರಣ ಭರ್ತಿಯಾಗಿವೆ. ಪ್ರತಿಷ್ಠಾನವು ಹಲವು ಗ್ರಾವiಗಳಲ್ಲಿ ಗ್ರಾಮ ಸ್ವರಾಜ್ ಸಮಿತಿಯನ್ನು ರಚನೆ ಮಾಡಿ ಇಂತಹ ಕೆಲಸಗಳಲ್ಲಿ ತೊಡಗಿಸಲು ಶ್ರಮಿಸುತ್ತಿದೆ. ದೊಡ್ಡಕೊಂಡಗುಳ ಗ್ರಾಮಸ್ವರಾಜ್ ಸಮಿತಿಯು ಹೋದ ವರ್ಷ ಕೆರೆಗೆ 15000 ಮೀನಿನ ಮರಿಗಳನ್ನು ಬಿಟ್ಟಿದ್ದು, ಕೆರೆಯನ್ನು ಸ್ವಚ್ಛವಾಗಿಸಿ, ಮೀನುಗಳ ಪೋಷಣೆ ಮಾಡಿದ್ದರ ಫಲವಾಗಿ ಮೀನುಗಳು ಅಭಿವೃದ್ಧಿಗೊಂಡು ಕಳೆದ ತಿಂಗಳು ಈ ಕೆರೆಯಲ್ಲಿ ಮೀನಗಳನ್ನು ಹಿಡಿದು ಕನಿಷ್ಠ ಬೆಲೆಗೆ ಮಾರಾಟ ಮಾಡಿದ್ದು ಒಂದು ಸಂತೋಷದ ವಿಚಾರ. ಈಗ 350 ಕೆ.ಜಿ ಇಂದ 35000 ರೂ ಆದಾಯ ತೊರೆತಿದೆ. ಮುಂದೆ ಒಂದೂವರೆ ಲಕ್ಷ ಆದಾಯದ ನಿರೀಕ್ಷೆಯಿದೆ. ಈ ಹಣವನ್ನು ಸಮಿತಿಯವರು ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಬಳೆಸಿಕೊಳ್ಳುವುದಾಗಿ ನಿರ್ಧರಿಸಿದ್ದಾರೆ. ಸಮಿತಿಯು ಪ್ರತಿಷ್ಠಾನದೊಂದಿಗೆ ಕೈ ಜೋಡಿಸಿ ಶಾಲಾವರಣ, ಕೆರೆಯ ಸುತ್ತಮುತ್ತ, ಗುಂಡುತೋಪಿನಲ್ಲಿ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದು ಇದೂ ಕೂಡ ಗ್ರಾಮಕ್ಕೆ ಆದಾಯದ ಮೂಲವಾಗಿದ್ದು ಗ್ರಾಮವು ಸ್ವಾವಲಂಬಿ ಹಾಗೂ ಮಾದರಿ ಗ್ರಾವiವಾಗಿ ಪರಿವರ್ತನೆಗೊಳ್ಳಲು ಹಸಿರುಭೂಮಿ ಪ್ರತಿಷ್ಠಾನ ಅಹರ್ನಿಶಿ ಶ್ರಮಿಸುತ್ತಿದೆ.
ಹಾಸನದ ಉಪವಿಭಾಗಾಧಿಕಾರಿಗಳಾದ ಡಾ. ಎಚ್.ಎಲ್.ನಾಗರಾಜ್, ಚಿಂತಕರಾದ ರೂಪ ಹಾಸನ, ಪತ್ರಕರ್ತರಾದ ಆರ್.ಪಿ.ವೆಂಕಟೇಶಮೂರ್ತಿ, ಪರಿಸರಪ್ರಿಯ ಚ.ನಾ.ಅಶೋಕ್, ಇಂಜಿನಿಯರ್ ಸುಬ್ಬಸ್ವಾಮಿ, ವೆಂಕಟೇಗೌಡ, ದಾನಿಗಳಾದ ಡಾ.ಸಾವಿತ್ರಿ, ನಿವೃತ್ತ ಉಪನ್ಯಾಸಕರಾದ ಶಿವಶಂಕರಪ್ಪ, ಅಪ್ಪಾಜಿಗೌಡ, ಹಿರಿಯರಾದ ಪುಟ್ಟಯ್ಯ, ಸದ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜೀವೇಗೌಡ, ಅಹರ್ನಿಶಿ ಪ್ರತಿಷ್ಠಾನದ ಕೆಲಸದಲ್ಲಿ ತೊಡಗಿರುವ ಡಾ.ಮಂಜುನಾಥ್, ಮಂಜುನಾಥ್ ಮೋರೆ, ಅಹಮದ್, ಸೌಭಾಗ್ಯ, ಬಿ.ಎಸ್.ದೇಸಾಯಿ, ತಿಮ್ಮೇಶ್‍ಪ್ರಭು, ಚಿನ್ನೇನಹಳ್ಳಿಸ್ವಾಮಿ, ಎಸ್.ಎಸ್.ಪಾಷಾ, ಪ್ರಸನ್ನ….. ಹೀಗೆ ಹಲವು ಪ್ರಜ್ಞಾವಂತ ಸದಸ್ಯರು ತಮ್ಮ ಉಳಿದೆಲ್ಲ ಕಾರ್ಯಗಳು, ಭಾಷಣಗಳನ್ನು ಬಿಟ್ಟು ಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದರ ಫಲವಾಗಿ ಇಂದು ಹಾಸನ ಜಿಲ್ಲೆಯ ಕೆಲವು ಹಳ್ಳಿಗಳು ಬರದ ಮಧ್ಯೆಯೂ ಜೀವಂತವಾಗಿ ಉಸಿರಾಡಲು ಸಾಧ್ಯವಾಗಿದೆ. ಇಂತಹ ಸ್ಫೂರ್ತಿ ನಾಡಿನ ಉದ್ದಕ್ಕೂ ಹಬ್ಬಲಿ, ರೈತರ ಬದುಕು ಹಸನಾಗಲಿ ಎಂಬುದು ನಮ್ಮ ಹಾರೈಕೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...