Homeಮುಖಪುಟವಿಕಾಸ್ ದುಬೆಗೆ ದಾಳಿಯ ಮಾಹಿತಿ ಸೋರಿಕೆ: ಪೋಲಿಸ್ ಬಂಧನ!

ವಿಕಾಸ್ ದುಬೆಗೆ ದಾಳಿಯ ಮಾಹಿತಿ ಸೋರಿಕೆ: ಪೋಲಿಸ್ ಬಂಧನ!

ದಾಳಿಯ ಮಾಹಿತಿ ಬಿಟ್ಟುಕೊಟ್ಟದ್ದರು ಎನ್ನುವ ಆರೋಪದ ಮೇಲೆ ಅಮಾನತುಗೊಂಡಿರುವ ಉತ್ತರ ಪ್ರದೇಶದ ಪೊಲೀಸ್ ಇನ್ಸ್‌ಪೆಕ್ಟರ್ ವಿನಯ್ ತಿವಾರಿ ಅವರನ್ನು ಪೋಲಿಸರು ಇಂದು ಬಂಧಿಸಿದ್ದಾರೆ.

- Advertisement -
- Advertisement -

ಕಳೆದ ವಾರ ನಡೆದ ದಾಳಿಯಲ್ಲಿ ದರೋಡೆಕೋರ ವಿಕಾಸ್ ದುಬೆ ಮತ್ತವನ ಗುಂಪು ಸೇರಿ ಎಂಟು ಮಂದಿ ಪೊಲೀಸರು ಹತ್ಯೆಗೈದಿದ್ದನು. ಅವನಿಗೆ ದಾಳಿಯ ಮಾಹಿತಿ ಬಿಟ್ಟುಕೊಟ್ಟದ್ದರು ಎನ್ನುವ ಆರೋಪದ ಮೇಲೆ ಅಮಾನತುಗೊಂಡಿರುವ ಉತ್ತರ ಪ್ರದೇಶದ ಪೊಲೀಸ್ ಇನ್ಸ್‌ಪೆಕ್ಟರ್ ವಿನಯ್ ತಿವಾರಿಯನ್ನು ಪೋಲಿಸರು ಇಂದು ಬಂಧಿಸಿದ್ದಾರೆ.

ವಿನಯ್ ತಿವಾರಿ, ಕಾನ್ಪುರದ ವಿಕಾಸ್ ದುಬೆ ಅವರ ಹಳ್ಳಿಯ ಚೌಬೆಪುರ ಪೊಲೀಸ್ ಠಾಣೆಯ ಉಸ್ತುವಾರಿ ವಹಿಸಿದ್ದರು ಮತ್ತು ಹಿಂದಿನ ಪ್ರಕರಣಗಳಲ್ಲಿ ಅವರ ವಿರುದ್ಧದ ಆರೋಪಗಳಿದ್ದವು.

“ಸಾಕಷ್ಟು ಸಾಕ್ಷ್ಯಾಧಾರಗಳ ನಂತರ ನಾವು ಬಂಧನಗಳನ್ನು ಮಾಡಿದ್ದೇವೆ. ಯಾರಾದರೂ ಪೊಲೀಸರ ಮೇಲೆ ಹಲ್ಲೆ ನಡೆಸಿದರೆ ಅಥವಾ ಕೆಲಸ ಮಾಡುವುದನ್ನು ತಡೆಯುತ್ತಿದ್ದರೆ ಅಥವಾ ಪೊಲೀಸರ ಮೇಲೆ ಹಲ್ಲೆ ನಡೆಸಲು ಸಂಚು ಮಾಡಿದರೆ, ಅವರು ಪೋಲೀಸರೇ  ಆಗಿದ್ದರೂ ನಾವು ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಕಾನ್ಪುರದ ಪೊಲೀಸ್ ಮುಖ್ಯಸ್ಥ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ಅಪರಾಧಿ ಜೊತೆಗಿನ ಸಂಪರ್ಕದಲ್ಲಿದ್ದ ಕಾರಣ ವಿನಯ್ ತಿವಾರಿ ಅವರನ್ನು ಭಾನುವಾರ ಅಮಾನತುಗೊಳಿಸಲಾಗಿದೆ. ಅದೇ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಕೆ.ಕೆ.ಶರ್ಮಾ ಅವರನ್ನೂ ಬಂಧಿಸಲಾಗಿದೆ.

ವಿಕಾಸ್ ದುಬೆ ಅವರ ಆಪ್ತರಲ್ಲಿ ಒಬ್ಬರಾದ ಅಮನ್ ದುಬೆ ಅವರನ್ನು ಇಂದು ಬೆಳಿಗ್ಗೆ ಗುಂಡಿಕ್ಕಿ ಕೊಲ್ಲಲಾಯಿತು ಮತ್ತು ಇನ್ನೂ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.

ಕೊಲೆ, ಅಪಹರಣ ಮತ್ತು ಸುಲಿಗೆ ಸೇರಿದಂತೆ 60 ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಇಂದು ಫರಿದಾಬಾದ್, ಗುರುಗ್ರಾಮ್ ಬಳಿ ಹೊಟೇಲ್ ನಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಕಳೆದ ಕೆಲವು ದಿನಗಳಿಂದ, ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ ಪತ್ರವೊಂದರಲ್ಲಿ ವಿಕಾಸ್ ದುಬೆಗೆ ಪೊಲೀಸರು ಸಹಾಯ ಮಾಡಿದ್ದಾರೆ ಎಂದು ಸೂಚಿಸಲಾಗಿತ್ತು. ಈ ಆಧಾರದಲ್ಲಿ ತನಿಖೆ ನಡೆಸಿ ವಿನಯ್ ತಿವಾರಿಯನ್ನು ಬಂಧಿಸಲಾಗಿದೆ.

ಪತ್ರವನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿರುವ ಅನಂತ್ ಡಿಯೋ ಅವರನ್ನು ಉತ್ತರ ಪ್ರದೇಶ ಸರ್ಕಾರ ವರ್ಗಾಯಿಸಿದೆ. ವಿಶೇಷ ಕಾರ್ಯಪಡೆಯ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಗಿರುವ ಶ್ರೀ ಡಿಯೊ ಅವರನ್ನು ಮೊರಾದಾಬಾದ್‌ನ ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿಗೆ ವರ್ಗಾಯಿಸಲಾಗಿದೆ`


ಇದನ್ನೂ ಓದಿ : ಯುಪಿಯ 8 ಪೋಲಿಸರ ಹತ್ಯೆ : ದೆಹಲಿ ಹೋಟೆಲ್‌ನಲ್ಲಿ ಆರೋಪಿ ವಿಕಾಸ್ ದುಬೆ ಸುಳಿವು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...