Homeಕರೋನಾ ತಲ್ಲಣಸರ್ಕಾರೀ ಆದೇಶಕ್ಕೆ ಕಿಮ್ಮತ್ತಿಲ್ಲ: ಕೊರೊನಾ ರೋಗಿಗೆ 11.5 ಲಕ್ಷ ರೂ ಶುಲ್ಕ ವಿಧಿಸಿದ ಖಾಸಗೀ ಆಸ್ಪತ್ರೆ!

ಸರ್ಕಾರೀ ಆದೇಶಕ್ಕೆ ಕಿಮ್ಮತ್ತಿಲ್ಲ: ಕೊರೊನಾ ರೋಗಿಗೆ 11.5 ಲಕ್ಷ ರೂ ಶುಲ್ಕ ವಿಧಿಸಿದ ಖಾಸಗೀ ಆಸ್ಪತ್ರೆ!

ಮನಬಂದಂತೆ ದರ ವಿದಿಸುತ್ತಿರುವ ಖಾಸಗೀ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತೆಲಂಗಾಣ ಕಿರಿಯ ವೈದ್ಯರ ಸಂಘ (ಟಿಜೆಯುಡಿಎ) ಮತ್ತು ತೆಲಂಗಾಣ ಸರ್ಕಾರಿ ವೈದ್ಯರ ಸಂಘ ಒತ್ತಾಯಿಸಿದೆ.

- Advertisement -
- Advertisement -

ಕಳೆದ ಮಂಗಳವಾರ ಬೆಳಿಗ್ಗೆ 28 ವರ್ಷದ ನವೀನ್ ಕುಮಾರ್ ಎಂಬುವವರು ಸಿಕಂದರಾಬಾದ್‌ನ ಖಾಸಗೀ ಕಾರ್ಪೊರೇಟ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವಾಗ ನಿಧನರಾದರು. ಚಿಕಿತ್ಸೆಗೆ ಆಸ್ಪತ್ರೆಯು 11.5 ಲಕ್ಷ ರೂ.ಗಳನ್ನು ಶುಲ್ಕ ವಿಧಿಸಿದೆ. ಈ ಮೊದಲೇ 6.5 ಲಕ್ಷ ರೂ. ಪಾವತಿಸಿದ ರೋಗಿಯ ಕುಟುಂಬಕ್ಕೆ ಉಳಿದ ಮೊತ್ತ ಪಾವತಿಸದಿದ್ದರೆ ಮೃತ ದೇಹ ಕೊಡದಂತೆ ಆಸ್ಪತ್ರೆ ಬೆದರಿಕೆ ಹಾಕಿದೆಯೆಂದು ತೆಲುಗು ದೈನಿಕ ಸಾಕ್ಷಿ ವರದಿ ಮಾಡಿದೆ.

ಇದರಿಂದ ನೊಂದ ರೋಗಿಯ ಕುಟುಂಬವು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ ನಂತರ ಆಸ್ಪತ್ರೆಯು 20,000 ರೂ ಕಟ್ಟಿಸಿಕೊಂಡು ನವೀನ್ ಕುಮಾರ್ ಅವರ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದೆ.

ತೆಲಂಗಾಣದ ರಾಜಧಾನಿಯಲ್ಲಿ ಕಳೆದ ಕೆಲವು ದಿನಗಳಿಂದ ಖಾಸಗೀ ಆಸ್ಪತ್ರೆಗಳು ನಡೆದುಕೊಳ್ಳುತ್ತಿರುವ ರೀತಿಗೆ ಇದೊಂದು ಉದಾಹರಣೆಯಾಗಿದೆ.

ಮತ್ತೊಂದೆಡೆ, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ (GHMC) ಸುಮಾರು 90% ಪ್ರಕರಣಗಳು ವರದಿಯಾಗಿವೆ.

ಜುಲೈ 7 ರಂದು ರಾಜ್ಯವು 1879 ಹೊಸ ಪ್ರಕರಣಗಳನ್ನು ವರದಿ ಮಾಡಿದೆ. ಇದರಿಂದ ರಾಜ್ಯದಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 27,612 ಕ್ಕೆ ಏರಿದೆ. ಒಟ್ಟು ಸಾವಿನ ಸಂಖ್ಯೆ 313 ಕ್ಕೆ ತಲುಪಿದೆ. ಒಟ್ಟು 16,287 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ.

ಖಾಸಗಿ ಆಸ್ಪತ್ರೆಗಳು ಸರ್ಕಾರವು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕವನ್ನು ಕೊರೊನಾ ರೋಗಿಗಳಿಗೆ ವಿಧಿಸುತ್ತಿವೆ ಎಂದು ತೆಲಂಗಾಣ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತು ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ವಕೀಲ ಶ್ರೀಕಿಶನ್ ಶರ್ಮಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ  ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಾಘವೇಂದ್ರ ಸಿಂಗ್ ಚೌಹಾನ್ ಮತ್ತು ನ್ಯಾಯಮೂರ್ತಿ ಬಿ. ವಿಜಯ್ಸೆನ್ ರೆಡ್ಡಿ ಅವರನ್ನೊಳಗೊಂಡ ವಿಭಾಗೀಯ ಪೀಠವು “ಅತಿಯಾದ ಶುಲ್ಕ ವಿಧಿಸಿದ್ದಕ್ಕಾಗಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕೈಗೊಳ್ಳಲು ಮತ್ತು ಎಲ್ಲಾ ರೋಗಿಗಳಿಗೆ ಚಿಕಿತ್ಸೆ, ಬಿಲ್ ವಿಷಯದಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಮಾರ್ಗಸೂಚಿಗಳನ್ನು ಜಾರಿಗೊಳಿಸಲು” ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿದೆ.

ಅಲ್ಲದೆ ಈ ಕುರಿತು ವಿವರಣೆ ನೀಡುವಂತೆ ಮೆಡಿಕೋವರ್ ಆಸ್ಪತ್ರೆ, ಯಶೋದಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಸನ್ ಶೈನ್ ಆಸ್ಪತ್ರೆ ಮತ್ತು ಹೈದರಾಬಾದ್‌ನ ಕೇರ್ ಆಸ್ಪತ್ರೆ ಸೇರಿದಂತೆ ನಾಲ್ಕು ಖಾಸಗಿ ಕಾರ್ಪೊರೇಟ್ ಆಸ್ಪತ್ರೆಗಳಿಗೆ ಕೋರ್ಟ್‌ ನೋಟಿಸ್ ನೀಡಿದೆ. ಈ ಪ್ರಕರಣದ ವಿಚಾರನೆಯನ್ನು ಜುಲೈ 14 ಕ್ಕೆ ಮುಂದೂಡಲಾಗಿದೆ.

ಜೂನ್ 15 ರಂದು ಹೊರಡಿಸಲಾದ ರಾಜ್ಯ ಸರ್ಕಾರದ ಆದೇಶದ ಪ್ರಕಾರ (ಜಿಒ 248), ಖಾಸಗಿ ಆಸ್ಪತ್ರೆಗಳು ಕೋವಿಡ್ -19 ಚಿಕಿತ್ಸೆಗೆ ವಿಧಿಸಬಹುದಾದ ಬೆಲೆಗಳ ಕುರಿತು ರಾಜ್ಯ ಸರ್ಕಾರ ಒಂದು ದರ ನಿಗದಿಪಡಿಸಿದೆ. ಅದರಂತೆ, ದಿನನಿತ್ಯದ ವಾರ್ಡ್ ಮತ್ತು ಐಸೋಲೇಷನ್ ಗೆ ಶುಲ್ಕವನ್ನು ದಿನಕ್ಕೆ 4,000 ರೂ.ಗಳು. ಹಾಗೆಯೇ ವೆಂಟಿಲೇಟರ್ ಮತ್ತು ಐಸೊಲೇಷನ್ ಐಸಿಯುಗೆ ದಿನಕ್ಕೆ 9,000 ರೂ. ನಿಗದಿಪಡಿಸಿದೆ.

ಸಾಮಾನ್ಯ ಜನರು ಕೊರೊನಾ ವೈರಸ್ ಪರೀಕ್ಷೆಗೆ ಒಳಗಾಗಲು, ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗಳನ್ನು ತಲುಪಲು ಆಂಬ್ಯುಲೆನ್ಸ್‌ಗಾಗಿ ಹೆಣಗಾಡುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸಿದ ಕಾರಣಕ್ಕೆ ಅನೇಕ ರೋಗಿಗಳು ಸಾವನ್ನಪ್ಪಿದ್ದಾರೆ.  ಕೊರೊನಾ ವೈರಸ್ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹಲವಾರು ಜನ ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ಹೈದರಾಬಾದ್‌ನ ಸರ್ಕಾರಿ ವೈದ್ಯರೊಬ್ಬರಿಗೆ ಕೊರೊನಾ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಯು ಒಂದು ದಿನಕ್ಕೆ 1.19 ಲಕ್ಷ ರೂ. ದರ ವಿಧಿಸಿದೆ. ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಡಾಕ್ಟರ್ ಸುಲ್ತಾನಾ ಇದರ ಬಗ್ಗೆ ವಿವರಿಸುವ ವಿಡಿಯೋ ವೈರಲ್ ಆಗಿದೆ.

ಮನಬಂದಂತೆ ದರ ವಿದಿಸುತ್ತಿರುವ ಖಾಸಗೀ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತೆಲಂಗಾಣ ಕಿರಿಯ ವೈದ್ಯರ ಸಂಘ (ಟಿಜೆಯುಡಿಎ) ಮತ್ತು ತೆಲಂಗಾಣ ಸರ್ಕಾರಿ ವೈದ್ಯರ ಸಂಘ ಒತ್ತಾಯಿಸಿದೆ.


ಇದನ್ನೂ ಓದಿ : ಕೋವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು: ರೋಗಿಗಳ ಮೇಲೆ ದುಬಾರಿ ಚಿಕಿತ್ಸೆಯ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...