Homeಕರೋನಾ ತಲ್ಲಣಸರ್ಕಾರೀ ಆದೇಶಕ್ಕೆ ಕಿಮ್ಮತ್ತಿಲ್ಲ: ಕೊರೊನಾ ರೋಗಿಗೆ 11.5 ಲಕ್ಷ ರೂ ಶುಲ್ಕ ವಿಧಿಸಿದ ಖಾಸಗೀ ಆಸ್ಪತ್ರೆ!

ಸರ್ಕಾರೀ ಆದೇಶಕ್ಕೆ ಕಿಮ್ಮತ್ತಿಲ್ಲ: ಕೊರೊನಾ ರೋಗಿಗೆ 11.5 ಲಕ್ಷ ರೂ ಶುಲ್ಕ ವಿಧಿಸಿದ ಖಾಸಗೀ ಆಸ್ಪತ್ರೆ!

ಮನಬಂದಂತೆ ದರ ವಿದಿಸುತ್ತಿರುವ ಖಾಸಗೀ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತೆಲಂಗಾಣ ಕಿರಿಯ ವೈದ್ಯರ ಸಂಘ (ಟಿಜೆಯುಡಿಎ) ಮತ್ತು ತೆಲಂಗಾಣ ಸರ್ಕಾರಿ ವೈದ್ಯರ ಸಂಘ ಒತ್ತಾಯಿಸಿದೆ.

- Advertisement -
- Advertisement -

ಕಳೆದ ಮಂಗಳವಾರ ಬೆಳಿಗ್ಗೆ 28 ವರ್ಷದ ನವೀನ್ ಕುಮಾರ್ ಎಂಬುವವರು ಸಿಕಂದರಾಬಾದ್‌ನ ಖಾಸಗೀ ಕಾರ್ಪೊರೇಟ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವಾಗ ನಿಧನರಾದರು. ಚಿಕಿತ್ಸೆಗೆ ಆಸ್ಪತ್ರೆಯು 11.5 ಲಕ್ಷ ರೂ.ಗಳನ್ನು ಶುಲ್ಕ ವಿಧಿಸಿದೆ. ಈ ಮೊದಲೇ 6.5 ಲಕ್ಷ ರೂ. ಪಾವತಿಸಿದ ರೋಗಿಯ ಕುಟುಂಬಕ್ಕೆ ಉಳಿದ ಮೊತ್ತ ಪಾವತಿಸದಿದ್ದರೆ ಮೃತ ದೇಹ ಕೊಡದಂತೆ ಆಸ್ಪತ್ರೆ ಬೆದರಿಕೆ ಹಾಕಿದೆಯೆಂದು ತೆಲುಗು ದೈನಿಕ ಸಾಕ್ಷಿ ವರದಿ ಮಾಡಿದೆ.

ಇದರಿಂದ ನೊಂದ ರೋಗಿಯ ಕುಟುಂಬವು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ ನಂತರ ಆಸ್ಪತ್ರೆಯು 20,000 ರೂ ಕಟ್ಟಿಸಿಕೊಂಡು ನವೀನ್ ಕುಮಾರ್ ಅವರ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದೆ.

ತೆಲಂಗಾಣದ ರಾಜಧಾನಿಯಲ್ಲಿ ಕಳೆದ ಕೆಲವು ದಿನಗಳಿಂದ ಖಾಸಗೀ ಆಸ್ಪತ್ರೆಗಳು ನಡೆದುಕೊಳ್ಳುತ್ತಿರುವ ರೀತಿಗೆ ಇದೊಂದು ಉದಾಹರಣೆಯಾಗಿದೆ.

ಮತ್ತೊಂದೆಡೆ, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ (GHMC) ಸುಮಾರು 90% ಪ್ರಕರಣಗಳು ವರದಿಯಾಗಿವೆ.

ಜುಲೈ 7 ರಂದು ರಾಜ್ಯವು 1879 ಹೊಸ ಪ್ರಕರಣಗಳನ್ನು ವರದಿ ಮಾಡಿದೆ. ಇದರಿಂದ ರಾಜ್ಯದಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 27,612 ಕ್ಕೆ ಏರಿದೆ. ಒಟ್ಟು ಸಾವಿನ ಸಂಖ್ಯೆ 313 ಕ್ಕೆ ತಲುಪಿದೆ. ಒಟ್ಟು 16,287 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ.

ಖಾಸಗಿ ಆಸ್ಪತ್ರೆಗಳು ಸರ್ಕಾರವು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕವನ್ನು ಕೊರೊನಾ ರೋಗಿಗಳಿಗೆ ವಿಧಿಸುತ್ತಿವೆ ಎಂದು ತೆಲಂಗಾಣ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತು ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ವಕೀಲ ಶ್ರೀಕಿಶನ್ ಶರ್ಮಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ  ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಾಘವೇಂದ್ರ ಸಿಂಗ್ ಚೌಹಾನ್ ಮತ್ತು ನ್ಯಾಯಮೂರ್ತಿ ಬಿ. ವಿಜಯ್ಸೆನ್ ರೆಡ್ಡಿ ಅವರನ್ನೊಳಗೊಂಡ ವಿಭಾಗೀಯ ಪೀಠವು “ಅತಿಯಾದ ಶುಲ್ಕ ವಿಧಿಸಿದ್ದಕ್ಕಾಗಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕೈಗೊಳ್ಳಲು ಮತ್ತು ಎಲ್ಲಾ ರೋಗಿಗಳಿಗೆ ಚಿಕಿತ್ಸೆ, ಬಿಲ್ ವಿಷಯದಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಮಾರ್ಗಸೂಚಿಗಳನ್ನು ಜಾರಿಗೊಳಿಸಲು” ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿದೆ.

ಅಲ್ಲದೆ ಈ ಕುರಿತು ವಿವರಣೆ ನೀಡುವಂತೆ ಮೆಡಿಕೋವರ್ ಆಸ್ಪತ್ರೆ, ಯಶೋದಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಸನ್ ಶೈನ್ ಆಸ್ಪತ್ರೆ ಮತ್ತು ಹೈದರಾಬಾದ್‌ನ ಕೇರ್ ಆಸ್ಪತ್ರೆ ಸೇರಿದಂತೆ ನಾಲ್ಕು ಖಾಸಗಿ ಕಾರ್ಪೊರೇಟ್ ಆಸ್ಪತ್ರೆಗಳಿಗೆ ಕೋರ್ಟ್‌ ನೋಟಿಸ್ ನೀಡಿದೆ. ಈ ಪ್ರಕರಣದ ವಿಚಾರನೆಯನ್ನು ಜುಲೈ 14 ಕ್ಕೆ ಮುಂದೂಡಲಾಗಿದೆ.

ಜೂನ್ 15 ರಂದು ಹೊರಡಿಸಲಾದ ರಾಜ್ಯ ಸರ್ಕಾರದ ಆದೇಶದ ಪ್ರಕಾರ (ಜಿಒ 248), ಖಾಸಗಿ ಆಸ್ಪತ್ರೆಗಳು ಕೋವಿಡ್ -19 ಚಿಕಿತ್ಸೆಗೆ ವಿಧಿಸಬಹುದಾದ ಬೆಲೆಗಳ ಕುರಿತು ರಾಜ್ಯ ಸರ್ಕಾರ ಒಂದು ದರ ನಿಗದಿಪಡಿಸಿದೆ. ಅದರಂತೆ, ದಿನನಿತ್ಯದ ವಾರ್ಡ್ ಮತ್ತು ಐಸೋಲೇಷನ್ ಗೆ ಶುಲ್ಕವನ್ನು ದಿನಕ್ಕೆ 4,000 ರೂ.ಗಳು. ಹಾಗೆಯೇ ವೆಂಟಿಲೇಟರ್ ಮತ್ತು ಐಸೊಲೇಷನ್ ಐಸಿಯುಗೆ ದಿನಕ್ಕೆ 9,000 ರೂ. ನಿಗದಿಪಡಿಸಿದೆ.

ಸಾಮಾನ್ಯ ಜನರು ಕೊರೊನಾ ವೈರಸ್ ಪರೀಕ್ಷೆಗೆ ಒಳಗಾಗಲು, ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗಳನ್ನು ತಲುಪಲು ಆಂಬ್ಯುಲೆನ್ಸ್‌ಗಾಗಿ ಹೆಣಗಾಡುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸಿದ ಕಾರಣಕ್ಕೆ ಅನೇಕ ರೋಗಿಗಳು ಸಾವನ್ನಪ್ಪಿದ್ದಾರೆ.  ಕೊರೊನಾ ವೈರಸ್ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹಲವಾರು ಜನ ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ಹೈದರಾಬಾದ್‌ನ ಸರ್ಕಾರಿ ವೈದ್ಯರೊಬ್ಬರಿಗೆ ಕೊರೊನಾ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಯು ಒಂದು ದಿನಕ್ಕೆ 1.19 ಲಕ್ಷ ರೂ. ದರ ವಿಧಿಸಿದೆ. ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಡಾಕ್ಟರ್ ಸುಲ್ತಾನಾ ಇದರ ಬಗ್ಗೆ ವಿವರಿಸುವ ವಿಡಿಯೋ ವೈರಲ್ ಆಗಿದೆ.

ಮನಬಂದಂತೆ ದರ ವಿದಿಸುತ್ತಿರುವ ಖಾಸಗೀ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತೆಲಂಗಾಣ ಕಿರಿಯ ವೈದ್ಯರ ಸಂಘ (ಟಿಜೆಯುಡಿಎ) ಮತ್ತು ತೆಲಂಗಾಣ ಸರ್ಕಾರಿ ವೈದ್ಯರ ಸಂಘ ಒತ್ತಾಯಿಸಿದೆ.


ಇದನ್ನೂ ಓದಿ : ಕೋವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು: ರೋಗಿಗಳ ಮೇಲೆ ದುಬಾರಿ ಚಿಕಿತ್ಸೆಯ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...