Homeಅಂತರಾಷ್ಟ್ರೀಯಚೆನ್ನೈಗೆ ನೇರ ವಿಮಾನ ಸೇವೆ ಕಲ್ಪಿಸಿ: ಕಿರ್ಗಿಸ್ತಾನ್ ನಲ್ಲಿರುವ 700 ತಮಿಳು ವಿದ್ಯಾರ್ಥಿಗಳ ಮನವಿ

ಚೆನ್ನೈಗೆ ನೇರ ವಿಮಾನ ಸೇವೆ ಕಲ್ಪಿಸಿ: ಕಿರ್ಗಿಸ್ತಾನ್ ನಲ್ಲಿರುವ 700 ತಮಿಳು ವಿದ್ಯಾರ್ಥಿಗಳ ಮನವಿ

ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿಮಾನ ಕಾರ್ಯಾಚರಣೆಯನ್ನು ತಮಿಳುನಾಡು ಸರ್ಕಾರ ನಿರ್ಬಂಧಿಸಿದೆ ಎಂದು ಕೇಂದ್ರ ಹೇಳಿದೆ.

- Advertisement -
- Advertisement -

ಕೊರೊನಾ ದಿನೇ ದಿನೇ ಉಲ್ಭಣಿಸುತ್ತಿರುವುದರ ಹಿನ್ನೆಲೆಯಲ್ಲಿ ಕಿರ್ಗಿಸ್ತಾನ್ ನಲ್ಲಿ ಸಿಕ್ಕಿಕೊಂಡಿರುವ 700 ತಮಿಳು ವಿದ್ಯಾರ್ಥಿಗಳು ಚೆನ್ನೈಗೆ ನೇರ ವಿಮಾನ ಸೇವೆ ಕಲ್ಪಿಸಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ಕಿರ್ಗಿಸ್ತಾನ್ ಸರ್ಕಾರವು, ಕೊರೊನಾ ಕಾರಣದಿಂದ ನಾವು ನಮ್ಮ ಸ್ವಂತನೆಲಕ್ಕೆ ತೆರಳುವಂತೆ ತಮಿಳುನಾಡಿನ 700 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೇಳಿದೆ. ವಂದೇ ಭಾರತ್ ಮಿಷನ್ ಅಡಿಯಲ್ಲಿ ಚೆನ್ನೈಗೆ ನೇರ ವಿಮಾನಗಳಿಲ್ಲದ ಕಾರಣ, ವಿದ್ಯಾರ್ಥಿಗಳು ತಮಿಳುನಾಡಿಗೆ ಮರಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ತಮಿಳುನಾಡಿಗೆ ವಿಶೇಷ ವಿಮಾನಯಾನ ವ್ಯವಸ್ಥೆ ಮಾಡುವಂತೆ ಅವರು ಕೇಂದ್ರ ಸರ್ಕಾರ ಮತ್ತು ತಮಿಳುನಾಡು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

62 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಕಿರ್ಗಿಸ್ತಾನ್‌ನಲ್ಲಿ 8,141 ಕೊರೊನಾ ಸೋಂಕಿತರಿದ್ದಾರೆ. ಇದರಲ್ಲಿ 6,366 ಪ್ರಕರಣಗಳು ಬಿಷ್ಕೆಕ್ ನಲ್ಲಿ ಕೇಂದ್ರೀಕೃತವಾಗಿವೆ. ಅಲ್ಲಿಯೇ ತಮಿಳುನಾಡಿನ ವೈದ್ಯಕೀಯ ವಿದ್ಯಾರ್ಥಿಗಳು ಸಿಕ್ಕಿಕೊಂಡಿದ್ದಾರೆ. ಹಾಗಾಗಿ ಅವರು ಆದಷ್ಟು ಬೇಗ ತಾವು ತಮಿಳುನಾಡಿಗೆ ಮರಳಬೇಕೆಂದು ಮನವಿ ಮಾಡಿದ್ದಾರೆ.

ಸುಮಾರು 300 ವಿದ್ಯಾರ್ಥಿಗಳು ವಂದೇ ಭಾರತ್ ಮಿಷನ್ ಅಡಿಯಲ್ಲಿ ಭಾರತವನ್ನು ತಲುಪುವಲ್ಲಿ ಯಶಸ್ವಿಯಾದರು. ಆದರೆ ನೇರ ವಿಮಾನಗಳ ಕೊರತೆಯಿಂದಾಗಿ ಇತರೆ ಸುಮಾರು 700 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಲ್ಲಿಯೇ ಸಿಕ್ಕಿಹಾಕಿಕೊಂಡಿದ್ದಾರೆ. “ಸರ್ಕಾರವು ನೇರ ವಿಮಾನಗಳನ್ನು ಒದಗಿಸದಿದ್ದರೆ, ನಮ್ಮ ಆಯ್ಕೆ ದೆಹಲಿಗೆ ಹೋಗಿ 7 ದಿನಗಳ ಕಾಲ ಕ್ವಾರೆಂಟೈನ್ ನಲ್ಲಿ ಉಳಿಯುವುದು. ನಂತರ ನಾವು ತಮಿಳುನಾಡಿಗೆ ತೆರಳಬೇಕು. ತಮಿಳುನಾಡಿಗೆ ನೇರ ವಿಮಾನಗಳ ಕೊರತೆಯಿಂದ ನಮಗೆ ಕಷ್ಟವಾಗುತ್ತಿದೆ. ಟಿಕೆಟ್ ದರವೂ ಹೆಚ್ಚಾಗಿದೆ. ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಕೆಲವು ಸಂಸ್ಥೆಗಳು ಖಾಸಗಿ ವಿಮಾನಯಾನ ವ್ಯವಸ್ಥೆ ಮಾಡಿವೆ. ಆದರೆ ಅನೇಕರು ಸಹಾಯ ಸಿಗದೇ ಇಲ್ಲಿ ಉಳಿದಿದ್ದಾರೆ” ಎಂದು ಕಿರ್ಗಿಸ್ತಾನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿ ಸಂಸುದ್ದೀನ್ ಶಬೀರ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿಮಾನ ಕಾರ್ಯಾಚರಣೆಯನ್ನು ತಮಿಳುನಾಡು ಸರ್ಕಾರ ನಿರ್ಬಂಧಿಸಿದೆ ಎಂದು ಕೇಂದ್ರ ಹೇಳಿದೆ.

ಜೂನ್ 29 ರಂದು ಡಿಎಂಕೆ ಸಲ್ಲಿಸಿದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ”ತಮಿಳುನಾಡು ಸರ್ಕಾರದ ಕೋರಿಕೆಯ ಆಧಾರದ ಮೇಲೆ ರಾಜ್ಯಕ್ಕೆ ಕಡಿಮೆ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ನಡೆಸಲಾಗುತ್ತಿದೆ” ಎಂದು ಕೇಂದ್ರವು ಮದ್ರಾಸ್ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಕಿರ್ಗಿಸ್ತಾನ್‌ನಲ್ಲಿ ವಿದ್ಯಾರ್ಥಿಗಳ ಅವಸ್ಥೆ:

ಕಿರ್ಗಿಸ್ತಾನ್‌ನಲ್ಲಿ ಲಾಕ್‌ಡೌನ್ ಹೇರಿದಾಗಿನಿಂದ ವಿದ್ಯಾರ್ಥಿಗಳಿಗೆ ಯಾವುದೇ ಸಹಾಯ ದೊರೆತಿಲ್ಲ. “ಚೆನ್ನೈಗೆ ಕೊನೆಯ ವಿಮಾನ ಜುಲೈ 4 ರಂದು ಇತ್ತು. ಮುಂದಿನ 15 ದಿನಗಳವರೆಗೆ ನಮಗೆ ವಿಮಾನಗಳಿಲ್ಲ. ಆದರೆ, ಕಿರ್ಗಿಸ್ತಾನ್ ಸರ್ಕಾರ ನಮ್ಮನ್ನು ಸ್ಥಳಾಂತರಗೊಳ್ಳಲು ಹೇಳಿದೆ. ಭಾರತೀಯ ವಿದ್ಯಾರ್ಥಿಗಳಿಗೆ ನಾವು ಜವಾಬ್ದಾರರಲ್ಲ ಎಂದು ಅವರು ನಮಗೆ ತಿಳಿಸಿದ್ದಾರೆ. ಆದ್ದರಿಂದ ನಾವು ಇಲ್ಲಿಂದ ಹೊರಡಲು ಬಯಸುತ್ತೇವೆ. ಇಲ್ಲಿಯವರೆಗೆ ಯಾವುದೇ ವಿದ್ಯಾರ್ಥಿ ಕೊರೊನಾ ಸೋಂಕಿಗೆ ಒಳಗಾಗಿಲ್ಲ ಎಂದು ಸಂಸುದ್ದೀನ್ ತಿಳಿಸಿದರು.

“ಪಾಕಿಸ್ತಾನ ಮತ್ತು ಭಾರತದಿಂದ ಅಕ್ಕಿ ಪೂರೈಕೆ ಕೂಡ ಸ್ಥಗಿತಗೊಂಡಿದ್ದು, ನಾವು ಅಗತ್ಯ ವಸ್ತುಗಳನ್ನು ಖರೀದಿಸುವುದು ಕಷ್ಟಕರವಾಗಿದೆ” ಎಂದು ಅವರು ಹೇಳಿದರು. 


ಇದನ್ನೂ ಓದಿ : 16 ತಿಂಗಳಿಂದ ಬಾರದ ಶಿಷ್ಯವೇತನ: ದಾವಣಗೆರೆ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ 7ನೇ ದಿನಕ್ಕೆ

ವಿದ್ಯಾರ್ಥಿಗಳು ರಾಜಕಾರಣ ಮಾಡುವುದು ಸರಿಯೇ ತಪ್ಪೆ? ಇಲ್ಲಿದೆ ನೋಡಿ ಸ್ಪಷ್ಟ ಉತ್ತರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...