Homeಮುಖಪುಟಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ: ಇದು ಮಾನವೀಯತೆ ಮೆರೆದ ಮನುಷ್ಯರ ಕತೆ

ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ: ಇದು ಮಾನವೀಯತೆ ಮೆರೆದ ಮನುಷ್ಯರ ಕತೆ

ಕೊರೊನಾ ಭಯಕ್ಕೆ ಸ್ವತಃ ಸಂಬಂಧಿಕರು ಕೂಡಾ ಮೃತದೇಹದ ಹತ್ತಿರ ಸುಳಿಯಲು ಭಯಪಡುತ್ತಿದ್ದರೆ ಅವೆಲ್ಲವನ್ನೂ ಮೀರಿ, ಮೃತಪಟ್ಟವರ ಸಂಪ್ರಾದಾಯಕ್ಕೆ ತಕ್ಕಂತೆ, ಘನತಯಿಂದ, ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡುವ ನಿಸ್ವಾರ್ಥ ಮನುಷ್ಯರಿದ್ದಾರೆ ಇಲ್ಲಿ.

- Advertisement -
- Advertisement -

ರಾಜ್ಯದಲ್ಲಿ ಎರಡು ತಿಂಗಳ ಹಿಂದೆ ಕೊರೊನಾ ಸೋಂಕು ಪೀಡಿತ ವೃದ್ದ ಮಹಿಳೆಯ ಶವ ಸಂಸ್ಕಾರ ಮಾಡದಂತೆ ತಡೆದ ಮಂಗಳೂರಿನ ಶಾಸಕರ ನಡೆಗೆ ಇಡೀ ರಾಜ್ಯವೇ ಬೆಚ್ಚಿಬಿದ್ದು ಪಕ್ಷಾತೀತವಾಗಿ ಖಂಡಿಸಿತು. ಆದರೆ ಈಗ ಅಂತಹ ಘಟನೆಗಳು ಸಾಮಾನ್ಯವಾಗಿವೆ. ಕೊರೊನಾ ಕಾರಣಕ್ಕೆ ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಜನರು ಮೃತ ಶವಗಳಿಂದಲೂ ಕೊರೊನಾ ಹರಡಬಹುದು ಎಂಬ ಮೂಢನಂಬಿಕೆಗೆ ಒಳಗಾಗಿ ತಮ್ಮ ಪ್ರದೇಶದ ಬಳಿ ಅಂತ್ಯ ಸಂಸ್ಕಾರಕ್ಕೆ  ಅವಕಾಶ ಕೊಡದ ಘಟನೆಗಳು ಜರುಗುತ್ತಿವೆ. ಮೃತ ವ್ಯಕ್ತಿಯ ಕುಟುಂಬಸ್ಥರೇ ಶವ ಸಂಸ್ಕಾರಕ್ಕೆ ಹೆದರುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ.

ಕೊರೊನಾ ಸೋಂಕಿತ ಮೃತದೇಹವನ್ನು ಅಂತ್ಯ ಸಂಸ್ಕಾರ ಮಾಡಲು ಸರ್ಕಾರ ಹಲವಾರು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದರೂ ಮೃತದೇಹದೊಂದಿಗೆ ನಡೆಯುತ್ತಿರುವ ಅಮಾನವೀಯ ರೀತಿ ಇನ್ನೂ ಕಡಿಮೆಯಾಗಿಲ್ಲ. ಮಾನವನೊಬ್ಬ ತನ್ನ ಸಾವಿನಲ್ಲೂ ಘನತೆಯನ್ನು ಪಡೆಯದಿದ್ದರೆ ನಮ್ಮ ವ್ಯವಸ್ಥೆ ನಮ್ಮನ್ನು ಎಂತಹ ಅಧಃಪತನಕ್ಕೆ ತಲುಪಿಸಿದೆ ನೋಡಿ. ಜನ ಹೀಗೆ ಮಾಡುವುದಕ್ಕೆ ಹೆಚ್ಚಿನ ಕಾರಣ ಮಾಧ್ಯಮಗಳು ಸೃಷ್ಟಿಸಿರುವ ಆರ್ಭಟ ಎಂದರೂ ತಪ್ಪಿಲ್ಲ.

ಕೇವಲ ಕೊರೊನಾದಿಂದ ಮೃತಪಟ್ಟವರು ಮಾತ್ರವಲ್ಲ, ಸಾಮಾನ್ಯವಾಗಿ ಸತ್ತಾಗಲೂ ಜನರು ಮೃತದೇಹದತ್ತ ಸುಳಿಯುತ್ತಿಲ್ಲ. ಹಾಸನದಲ್ಲಿ ತನ್ನ ಪತಿಯ ಶವದ ಮುಂದೆ ನಿಂತು ವೃದ್ದೆ ಪತ್ನಿ ಕಣ್ಣೀರು ಹಾಕಿದಾಗಲೂ ಸ್ವತಃ ಮೃತಪಟ್ಟವರ ಸಂಬಂಧಿಕರೂ ಮುಟ್ಟಲು ತಯಾರಿರಲಿಲ್ಲ. ಹಾವೇರಿಯಲ್ಲಿ ಕೂಡಾ ಇಂತಹದ್ದೆ ಘಟನೆ ನಡೆಯಿತು, ಅಧಿಕಾರಿಗಳು ಪಿಪಿಇ ಕಿಟ್ ಕೊಡುತ್ತೇವೆ ಬಂದು ಶವಸಂಸ್ಕಾರ ನಡೆಸಿಯೆಂದರೂ ಶವದ ಅಂತಿಮ ದರ್ಶನಕ್ಕೂ ಸಂಬಂಧಪಟ್ಟವರು ಬಂದಿಲ್ಲ.

ಇದರಾಚೆಗೂ ಹಲವಾರು ಅಪ್ಪಟ ಮನುಷ್ಯರ, ಮಾನವೀಯತೆಯ ಕತೆಗಳೂ ಹೇಳಲಿಕ್ಕಿದೆ. ಕೊರೊನಾ ಭಯಕ್ಕೆ ಸ್ವತಃ ಸಂಬಂಧಿಕರು ಕೂಡಾ ಮೃತದೇಹದ ಹತ್ತಿರ ಸುಳಿಯಲು ಭಯಪಡುತ್ತಿದ್ದರೆ ಅವೆಲ್ಲವನ್ನೂ ಮೀರಿ ಇಲ್ಲಿ ಮೃತಪಟ್ಟವರ ಸಂಪ್ರಾದಾಯಕ್ಕೆ ತಕ್ಕಂತೆ, ಘನತಯಿಂದ, ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡುವ ನಿಸ್ವಾರ್ಥ ಮನುಷ್ಯರಿದ್ದಾರೆ.

ಅಂತ್ಯ ಸಂಸ್ಕಾರಕ್ಕೆ ಜನ ಹೆದರುತ್ತಿರುವುದನ್ನು ಅರಿತ ಬೀದರ್‌ನ ಮಹ್ಮದ್ ಮಜೀದ್ ಬಿಲಾಲ್ ಹಾಗೂ ಸ್ನೇಹಿತರು ಆರೋಗ್ಯ ಇಲಾಖೆ ಮತ್ತು ನಗರಸಭೆಯ ಪರವಾನಿಗೆ ಪಡೆದು ಇದುವರೆಗೂ ಕೋವಿಡ್‌ನಿಂದ ಮೃತಪಟ್ಟ ಮೂವರ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಈ ಮೊದಲು ಸಹ ಅವರು ಹತ್ತಾರು ಅನಾಥ ಶವಗಳ ಅಂತ್ಯ ಸಂಸ್ಕಾರ ನೆರವೇರಿಸಿ ಸಾಮಾಜಿಕ ಸೇವೆಯಲ್ಲಿ ತೊಡಿಗಿಸಿಕೊಂಡಿದ್ದರು ಎನ್ನುವುದು ಹೆಮ್ಮೆಯ ಸಂಗತಿ. ತಮ್ಮ ಫೋನ್ ನಂಬರ್‌ ಅನ್ನು ಸಾರ್ವಜನಿಕವಾಗಿ ಪ್ರಕಟಿಸಿ ಅಂತ್ಯ ಸಂಸ್ಕಾರಕ್ಕೆ ಸಹಾಯ ಬೇಕಿದ್ದರೆ ತಿಳಿಸಿ ಎಂದು ಹೃದಯ ವೈಶಾಲ್ಯತೆ ಮೆರೆದಿದ್ದಾರೆ.

ಅಪರಿಚಿತರಾಗಿರುವ ಜೀವಂತ ಮನುಷ್ಯರನ್ನೇ ಮುಟ್ಟಲು ಭಯಪಡುವ ಈ ಸಂಧರ್ಭದಲ್ಲಿ ಅನಾಥ ಶವವನ್ನು ಕೂಡಾ ಅಂತ್ಯಸಂಸ್ಕಾರ ಮಾಡುವ ಚೆನ್ನಪಟ್ಟಣದ ಮಹಿಳೆ ಆಶಾರಂತವರೂ ನಮ್ಮ ನಡುವೆಯಿದ್ದಾರೆ. ಕಳೆದ ಮೂರು ವರ್ಷದಿಂದ ಈ ಸೇವೆಯನ್ನು ಮಾಡುತ್ತಾ ಬರುತ್ತಿರುವ ಇವರು ಕೊರೊನಾ ಕಾಲದಲ್ಲಿಯೂ ಇನ್ನೂ ತಮ್ಮ ಸೇವೆಯನ್ನು ಮುಂದುವರೆಸಿದ್ದಾರೆ.

ಕೃಪೆ: ಪ್ರಜಾವಾಣಿ

ಮೈಸೂರಿನ ಆರೋಗ್ಯ ಇಲಾಖೆಯ ಚಾಲಕರಾದ ನಾಗರಾಜ್ ಕೂಡಾ ಕೊರೊನಾದಿಂದ ಮೃತಪಟ್ಟವನ್ನು ಘನತೆಯಿಂದ ಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ. ಸಾವಿರಾರು ಶವ ಸಾಗಿಸಿರುವ ಅವರು ಮೃತಪಟ್ಟವರನ್ನು ಮುಟ್ಟಲಾಗದ ಇಂದಿನ ಸ್ಥಿತಿಗೆ ಮರುಗುತ್ತಾರೆ.

ಪಿಎಫ್‌ಐ ಸಂಘಟನೆ ರಾಜ್ಯಾದ್ಯಂತ ಕೊರೊನಾ ಮೃತದೇಹಗಳ ಅಂತ್ಯಸಂಸ್ಕಾರಕ್ಕೆಂದೆ ತಂಡವನ್ನೇ ಕಟ್ಟಿದೆ. ಒಂದು ಫೋನ್ ಮಾಡಿದರೆ ಸಾಕು ತಮ್ಮದೇ ಖರ್ಚಿನಲ್ಲಿ ನಿಸ್ವಾರ್ಥವಾಗಿ ಅವರವರ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಇದುವರೆಗೂ ಹತ್ತಾರು ಶವಗಳ ಅಂತ್ಯಸಂಸ್ಕಾರದಲ್ಲಿ ಇವರ ಪಾಲಿದೆ.

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನಲ್ಲಿ ಕೊರೊನಾ ಕಾರಣಕ್ಕೆ ಮೃತಪಟ್ಟ ವ್ಯಕ್ತಿಯ ಶವಸಂಸ್ಕಾರ ಮಾಡಲು ಯಾರು ಮುಂದೆ ಬಾರದಿದ್ದಾಗ ಮಾಗಡಿ ತಾಲ್ಲೂಕಿನ ಆರೋಗ್ಯ ಅಧಿಕಾರಿಗಳು ಪಿಎಫ್‌ಐ ಪದಾಧಿಕಾರಿಗಳಿಗೆ ಪತ್ರ ಬರೆದು ಶವಸಂಸ್ಕಾರ ಮಾಡುವಂತೆ ಮನವಿ ಮಾಡಿದ್ದಾರೆ.

ಯಾದಗಿರಿಯಲ್ಲಿ ಕೊರೊನಾ ಮೃತದೇಹವನ್ನು ನೆಲದ ಮೇಲೆ ಮಲಗಿಸಿ ಎಳೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿರುವಂತಹ ಘಟನೆ ನಡೆದಿರುವಾಗ ಮಂಗಳೂರಿನ ಬೈಕಂಪಾಡಿಯಲ್ಲಿ ನಡೆದ ಶವ ಸಂಸ್ಕಾರ ನಮಗೆ ಮಾದರಿಯಾಗಬೇಕು. ಮಂಗಳೂರಿನಲ್ಲಿ ಜಿಲ್ಲಾಡಳಿತ ಕೊರೊನಾ ಮೃತದೇಹಗಳ ಶವಸಂಸ್ಕಾರಕ್ಕೆಂದೆ ನಿಸ್ವಾರ್ಥ ಸ್ವಯಂಸೇವಕರ ತಂಡವನ್ನು ತರಬೇತಿ ನೀಡಿ ಸಜ್ಜುಗೊಳಿಸಿದೆ. ಈ ತಂಡವು ಮೃತಪಟ್ಟವರ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುತ್ತಿದೆ.

ಸರ್ಕಾರ ಹಾಗೂ ವಿಶ್ವ ಆರೋಗ್ಯ ಸಂಸ್ಥೆ ಕೊರೊನಾದಿಂದ ಮೃತಪಟ್ಟವರನ್ನು ಅಂತ್ಯಸಂಸ್ಕಾರವನ್ನು ಹೇಗೆ ಮಾಡಬೇಕು ಎಂಬ ಮಾರ್ಗಸೂಚಿಗಳನ್ನು ಕೊಟ್ಟಿರುವಾಗ ಜನರು ಮೃತದೇವನ್ನು ಸಂಸ್ಕಾರ ಮಾಡಲು ಹೆದರುವುದರಲ್ಲಿ ಯಾವುದೇ ಅರ್ಥವಿಲ್ಲ.

ಮೃತದೇಹದೊಂದಿಗೆ ನಡೆಯುತ್ತಿರುವ ಈ ಅಮಾನವೀಯ ನಡೆಗೆ ಕೇವಲ ಜನರನ್ನು ದೂರಿದರೆ ಪ್ರಯೋಜನವಿಲ್ಲ. ಏಕೆಂದರೆ ಕೊರೊನಾ ಓಡಿಸಲು ತಟ್ಟೆ ದೀಪ ಇತ್ಯಾದಿಗಳನ್ನು ಬಡಿಯಲು ಭಾರೀ ಪ್ರಮಾಣದಲ್ಲಿ ಪ್ರಚಾರ ಮಾಡಿದ ಸರ್ಕಾರ ಹಾಗೂ ಮಾಧ್ಯಮಗಳು ಮೃತದೇಹದಿಂದ ಸೋಂಕು ಹರಡುವುದಿಲ್ಲ ಎಂದು ಮತ್ತು ಹೇಗೆ ಸಂಸ್ಕಾರ ಮಾಡಬೇಕು ಎಂಬುದನ್ನು ಪ್ರಚಾರ ಮಾಡಲೇ ಇಲ್ಲ.

ಒಟ್ಟಿನಲ್ಲಿ ಕುಬ್ಜನಾಗಿರುವ ಮನುಷ್ಯನನ್ನು ಕೊರೊನಾ ಸಾಂಕ್ರಮಿಕ ರೋಗ ಮತ್ತಷ್ಟು ಕುಬ್ಜನನ್ನಾಗಿಸಿದೆ. ಇದು ನಿಜವಾಗಿಯೂ ಮನುಷ್ಯರು ಮತ್ತಷ್ಟು ವಿಶಾದ ದೃಷ್ಟಿಯಿಂದ, ಮಾನವೀಯತೆಯಿಂದ ವರ್ತಿಸಲು ಕಲಿಯುವುದಕ್ಕೆ ಸದಾವಕಾಶವಾಗಿತ್ತು. ಆದರೆ ಅದನ್ನು ಹೆಚ್ಚಿನವರು ಮಾಡದಿದ್ದರೂ ಕೆಲವರಾದರೂ ನಿಸ್ವಾರ್ಥವಾಗಿ ಮಾಡುತ್ತಾ ನಮಗೆಲ್ಲ ಮಾದರಿಯಾಗಿದ್ದಾರೆ.


ಓದಿ:


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...