Homeಮುಖಪುಟವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ಗಡಿಗಳೆಲ್ಲವೂ ಮುಚ್ಚಿರುವಾಗ, ಪೊಲೀಸರು ಎಚ್ಚರದಿಂದಿರುವಾಗ ವಿಕಾಸ್ ದುಬೆ ಕಾನ್ಪುರದಿಂದ ದೆಹಲಿ ಬಳಿಯ ಫರಿದಾಬಾದ್‌‌ಗೆ ಅಲ್ಲಿಂದ ಉಜ್ಜಯಿನಿಗೆ ಹೇಗೆ ಪ್ರಯಾಣಿಸಿದ ಕಾಂಗ್ರೆಸ್ ವ್ಯಂಗ್ಯವಾಗಿ ಪ್ರಶ್ನಿಸಿದೆ.

- Advertisement -
- Advertisement -

ದರೋಡೆಕೋರ ವಿಕಾಸ್ ದುಬೆಯ ಬಂಧನವನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಪೂರ್ವ ನಿರ್ಧರಿತ ಎಂದು ಆರೋಪಿಸಿದೆ. ಜುಲೈ 3 ರಂದು ತನ್ನನ್ನು ಬಂಧಿಸಲು ಬಂದ ಎಂಟು ಪೊಲೀಸರನ್ನು ಕೊಂದ ದುಬೆಯನ್ನು ಮಧ್ಯಪ್ರದೇಶದ ಉಜ್ಜಯಿನಿಯ ಪೊಲೀಸರು ಇಂದು ಬಂಧಿಸಿ ಉತ್ತರ ಪ್ರದೇಶ ಪೊಲೀಸರಿಗೆ ಮಾಹಿತಿ ನೀಡಿದ್ದರು.

ದುಬೆಯ ಬಂಧನವನ್ನು ಮಧ್ಯಪ್ರದೇಶ ಸರ್ಕಾರ ತನ್ನ ರಾಜಕೀಯ ಲಾಭಕ್ಕೆ ಪಡೆಯಲು ಮುಂದಾಗಿದ್ದು, ಮುಖ್ಯಮಂತ್ರಿ ಶಿವರಾಜ್ ಚೌಹಾನ್ ಟ್ವೀಟ್ ಮಾಡಿ “ಮಹಾಕಲ್‌ಗೆ ಹೋಗುವ ಮೂಲಕ ತಮ್ಮ ಪಾಪಗಳು ತೊಳೆಯುತ್ತವೆ ಎಂದು ಭಾವಿಸುವವರು ಭಗವಂತನನ್ನು ಅರ್ಥಮಾಡಿಕೊಂಡಿಲ್ಲ. ನಮ್ಮ ಸರ್ಕಾರ ಯಾವುದೇ ಅಪರಾಧಿಯನ್ನು ಬಿಡುವುದಿಲ್ಲ” ಎಂದು ಬರೆದಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟ್ವೀಟ್ ಮಾಡಿ, ದುಬೆಯ ಬಂಧನವು ಶರಣಾಗತಿಯೆ ಅಥವಾ ಬಂಧನವೇ ಎಂದು ಸ್ಪಷ್ಟಪಡಿಸುವಂತೆ ಸರ್ಕಾರವನ್ನು ಕೇಳಿದ್ದಾರೆ. ದುಬೆಯ ಫೋನ್ ದಾಖಲೆಯನ್ನು ಸಾರ್ವಜನಿಕಗೊಳಿಸಿ ದರೋಡೆ ಕೋರರೊಂದಿಗೆ ಸಹಕರಿಸಿದ ಜನರನ್ನು ಬಹಿರಂಗಪಡಿಸುವಂತೆ ಹೇಳಿದ್ದಾರೆ.

ಉಜ್ಜಯಿನಿ ಪೊಲೀಸರಿಗೆ ಸುಳಿವು ದೊರೆತ ನಂತರ ವಿಕಾಸ್ ದುಬೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದರು. ಅಷ್ಟೇ ಅಲ್ಲದೆ ಜುಲೈ 3 ರಂದು 650 ಕಿ.ಮೀ ದೂರದ ಕಾನ್ಪುರದಲ್ಲಿ ಘಟನೆ ನಡೆದ ನಂತರ ತಾನು ಪೊಲೀಸರಲ್ಲಿ ಎಚ್ಚರದಲ್ಲಿ ಇರಬೇಕೆಂದು ಮಧ್ಯಪ್ರದೇಶದಾದ್ಯಂತ ಪೊಲೀಸರಿಗೆ ತಿಳಿಸಿದ್ದೆ ಎಂದು ಹೇಳಿದ್ದಾರೆ.

ವಿಕಾಸ್ ದುಬೆ ಬಂಧನವು ಯುಪಿ ಪೊಲೀಸರ ಸಂಪೂರ್ಣವಾಗಿ ವಿಫಲತೆಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. “ಎಚ್ಚರಿಕೆಯ ಹೊರತಾಗಿಯೂ, ಉಜ್ಜಯಿನಿಯವರೆಗೂ ತಲುಪಿರುವುದು ಭದ್ರತೆಯಲ್ಲಿನ ವಿಫಲತೆ ಹಾಗೂ ಸಹಭಾಗಿತ್ವವನ್ನು ಬಹಿರಂಗಪಡಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಕಾನ್ಪುರದ ಸ್ಥಳೀಯ ಪೊಲೀಸ್ ಅಧಿಕಾರಿಗಳು ವಿಕಾಸ್ ದುಬೆ ಹೆಸರನ್ನು ಮೋಸ್ಟ್ ವಾಂಟೆಡ್ ಅಪರಾಧಿಗಳ ಪಟ್ಟಿಯಿಂದ ಹೊರಗಿಟ್ಟಿದ್ದಾರೆ ಎಂಬ ವರದಿಗಳನ್ನು ಪ್ರಿಯಾಂಕ ಗಾಂಧಿ ಉಲ್ಲೇಖಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ವಿಕಾಸ್ ದುಬೆ ದೇವಾಲಯದಿಂದ ಬರಿಗಾಲಿನಿಂದ ನಡೆದುಕೊಂಡು ಹೊರಗೆ ಹೋಗುವುದು ಹಾಗೂ ಖಾಸಗಿ ಭದ್ರತಾ ಸಿಬ್ಬಂದಿ ಅವರೊಂದಿಗೆ ನಡೆದುಕೊಂಡು ಹೋಗುತ್ತಿರುವುದು ಕಾಣಬಹುದಾಗಿದೆ.

ಈ ಬಗ್ಗೆ ತೀವ್ರ ದಾಳಿ ಮಾಡಿದ ಯುವ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಬಿ.ವಿ, “ಇದು ಪೂರ್ವ ನಿರ್ಧರಿತ ಘಟನೆ, ಯಾವ ಕೋನದಿಂದ ಭಯೋತ್ಪಾದಕ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಕಂಡುಬರುತ್ತದೆ?. ಈ ವೀಡಿಯೊ ಇದಕ್ಕೆ ಪುರಾವೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

 

ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ, ಪೊಲೀಸರು ಎಚ್ಚರಿಕೆಯಿಂದ ಇದ್ದರು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ “ಒಳ್ಳೆಯ ಜೋಕ್” ಎಂದು ಹೇಳಿದ್ದಾರೆ.

ಪೊಲೀಸರು ಎಷ್ಟು ಜಾಗರೂಕರಾಗಿದ್ದರು ಎಂದರೆ ಉತ್ತರ ಪ್ರದೇಶದ ವಿಕಾಸ್ ಮಧ್ಯಪ್ರದೇಶದಲ್ಲಿದ್ದಾನೆ ಎಂದು ಪೊಲೀಸರು ತಿಳಿದಾಗ ಆತನೆ ತನ್ನನ್ನು ತಾನು ಗುರುತಿಸಿಕೊಳ್ಳಲು ಕಿರುಚಿ ಕೊಂಡಿದ್ದಾನೆ, ಎಂದು ಶ್ರೀನಿವಾಸ್ ವ್ಯಂಗ್ಯ ಮಾಡಿದ್ದಾರೆ.

ಗಡಿಗಳೆಲ್ಲವೂ ಮುಚ್ಚಿರುವಾಗ, ಪೊಲೀಸರು ಎಚ್ಚರದಿಂದಿರುವಾಗ ವಿಕಾಸ್ ದುಬೆ ಕಾನ್ಪುರದಿಂದ ದೆಹಲಿ ಬಳಿಯ ಫರಿದಾಬಾದ್‌‌ಗೆ, ನಂತರ ಉಜ್ಜಯಿನಿಗೆ ಹೇಗೆ ಪ್ರಯಾಣಿಸಿದ. ಉಜ್ಜಯಿನಿ ತಲುಪಲು ಆತನೇನು ’ಮಿಸ್ಟರ್‌ ಇಂಡಿಯಾ’ ಆಗಿ ಮಾರ್ಪಾಟಾಗಿದ್ದಾನೆಯೆ ಎಂದು ಕಾಂಗ್ರೆಸ್‌ ನಾಯಕ ಪ್ರಶ್ನಿಸಿದ್ದಾರೆ.

ಮಿಸ್ಟರ್‌ ಇಂಡಿಯಾ ಎಂಬುವುದು 1980 ರ ದಶಕದಲ್ಲಿ ಅನಿಲ್ ಕುಮಾರ್ ನಟಿಸಿದ ಚಲನಚಿತ್ರದ ಪಾತ್ರವಾಗಿದೆ. ಅದರಲ್ಲಿರುವ ನಾಯಕ ’ಮಿಸ್ಟರ್‌ ಇಂಡಿಯಾ’ ಇದ್ದಕ್ಕಿಂದತೆ ಪ್ರತ್ಯಕ್ಷ ಹಾಗೂ ಅಪ್ರತ್ಯಕ್ಷನಾಗುತ್ತಾನೆ.


ಓದಿ: 8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆ ಬಂಧನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...