Homeಮುಖಪುಟಕ್ರಿಮಿನಲ್ ವಿಕಾಸ್ ದುಬೆಯನ್ನು ಹತ್ಯೆಗೈದ ಯುಪಿ ಪೊಲೀಸ್!

ಕ್ರಿಮಿನಲ್ ವಿಕಾಸ್ ದುಬೆಯನ್ನು ಹತ್ಯೆಗೈದ ಯುಪಿ ಪೊಲೀಸ್!

ವಿಕಾಸ್ ದುಬೆ ಬದುಕಿದ್ದಲ್ಲಿ ವಿಚಾರಣೆ ವೇಳೆ ಆತನ ಕುಕೃತ್ಯಗಳಲ್ಲಿ ಭಾಗಿಯಾದ ಮತ್ತು ಆತನಿಗೆ ರಕ್ಷಣೆ ನೀಡಿದ ಪೊಲೀಸರ ಮತ್ತು ರಾಜಕಾರಣಿಗಳ ಹೆಸರು ಬಾಯಿ ಬಿಡುತ್ತಾನೆಂದು ಆತನನ್ನು ಪೊಲೀಸರು ಮುಗಿಸಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

- Advertisement -
- Advertisement -

8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆಯನ್ನು ಪೊಲೀಸರು ಇಂದು ಮುಂಜಾನೆ ಹೈತ್ಯೆಗೈದಿದ್ದಾರೆ.

ನಿನ್ನೆ ತಾನೇ ಮಧ್ಯಪ್ರದೇಶದಲ್ಲಿ ಶರಣಾಗಿದ್ದ ವಿಕಾಸ್ ದುಬೆಯನ್ನು ಅಲ್ಲಿಂದ ಉತ್ತರ ಪ್ರದೇಶಕ್ಕೆ ಕರೆತರುವಾಗ ಸಚೇಂದಿಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಿಂದ ಉತ್ತರ ಪ್ರದೇಶದ ಕಾನ್ಪುರಕ್ಕೆ ಕರೆದೊಯ್ಯುತ್ತಿದ್ದಾಗ ಮಳೆಯ ಕಾರಣದಿಂದ ಕಾನ್ಪುರ ಬಳಿಯ ಸಚೇಂದಿಯಲ್ಲಿ ಕಾರು ಲಯ ತಪ್ಪಿತು. ಆ ಸಂದರ್ಭದಲ್ಲಿ ವಿಕಾಸ್ ದುಬೆ ಪೊಲೀಸ್ ಒಬ್ಬನಿಂದ ಬಂದೂಕು ಕಸಿದುಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ. ಆಗ ಆತನ ಮೇಲೆ ಗುಂಡಿಕ್ಕಿ ಕೊಲ್ಲಲಾಯಿತು ಎಂದು ವಿಶೇಷ ಕಾರ್ಯಪಡೆಯ ಪೊಲೀಸರು ತಿಳಿಸಿದ್ದಾರೆ.

“ಇಂದು ಅಪಘಾತದಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸ್ ಎನ್‌ಕೌಂಟರ್‌ನಲ್ಲಿ ವಿಕಾಸ್ ದುಬೆ ಸಾವನ್ನಪ್ಪಿದ್ದಾನೆ” ಎಂದು ಕಾನ್ಪುರದ ಇನ್ಸ್ಪೆಕ್ಟರ್ ಜನರಲ್ ಮೋಹಿತ್ ಅಗರ್ವಾಲ್ ಹೇಳಿದ್ದಾರೆ.

ನಿನ್ನೆಯ ವಿಕಾಸ್ ದುಬೆ ಬಂಧನವನ್ನು ವಿರೋಧ ಪಕ್ಷಗಳು ಸೇರಿದಂತೆ ಹಲವಾರು ಜನ ಪೂರ್ವ ನಿರ್ಧರಿತ ಎಂದು ಟೀಕಿಸಿದ್ದರು. ಪೊಲೀಸರ, ರಾಜಕಾರಣಿಗಳ ಬೆಂಬಲದಿಂದಲೇ ವಿಕಾಸ್ ದುಬೆ ಇಷ್ಟು ಬೆಳೆಯಲು ಸಾಧ್ಯವಾಗಿದ್ದು ಎಂದು ಟೀಕಿಸಿದ್ದರು. ಇನ್ನು ಕೆಲವರು ದುಬೆ ಶರಣಾದರೂ ಸಹ ಅವನನ್ನು ಎನ್‌ಕೌಂಟರ್ ಮಾಡುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದರು. ಅದನ್ನು ಉತ್ತರ ಪ್ರದೇಶ ಪೊಲೀಸರು ಇಂದು ನಿಜ ಮಾಡಿದ್ದಾರೆ.

ಇಂದಿನ ಪೊಲೀಸ್ ಎನ್‌ಕೌಂಟರ್‌ ಅನ್ನು ಬಹಳಷ್ಟು ಜನ ಇದು ನೈಸರ್ಗಿಕವಾದುದ್ದಲ್ಲ ಬದಲಿಗೆ ಇದು ಕೂಡ ಪೂರ್ವ ನಿಯೋಜಿತವಾದುದು ಎಂದು ಆರೋಪಿಸಿದ್ದಾರೆ. ವಿಕಾಸ್ ದುಬೆ ಬದುಕಿದ್ದಲ್ಲಿ ವಿಚಾರಣೆ ವೇಳೆ ಆತನ ಕುಕೃತ್ಯಗಳಲ್ಲಿ ಭಾಗಿಯಾದ ಮತ್ತು ಆತನಿಗೆ ರಕ್ಷಣೆ ನೀಡಿದ ಪೊಲೀಸರ ಮತ್ತು ರಾಜಕಾರಣಿಗಳ ಹೆಸರು ಬಾಯಿ ಬಿಡುತ್ತಾನೆಂದು ಆತನನ್ನು ಪೊಲೀಸರು ಮುಗಿಸಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

ರಾಜಕೀಯ ಸಂಪರ್ಕಗಳಿರುವ ಕ್ರಿಮಿನಲ್ ಒಬ್ಬ ಸರ್ಕಾರಿ ವ್ಯವಸ್ಥೆಯ ಕೈಗೆ ಸೆರೆ ಸಿಕ್ಕರೆ ಜನ ತಕ್ಷಣವೇ “ಓ.. ಅವನು ಎನ್ಕೌಂಟರ್ ಆಗ್ತಾನೆ” ಅಂತ ಪ್ರತಿಕ್ರಿಯಿಸ್ತಾರೆ.
ಮರುದಿನ ಬೆಳಗ್ಗೆ ಅವನು ಎನ್ಕೌಂಟರ್‌ಗೆ ಈಡಾಗುತ್ತಾನೆ.
ಇದು ಸಿನಿಮಾವೂ ಅಲ್ಲ, ಆಫ್ರಿಕಾದ ಯಾವುದೋ ಕಾಡು ರಾಜ್ಯದ ಸುದ್ದಿಯೂ ಅಲ್ಲ. ನಮ್ಮದೇ ದೇಶದ ಸುದ್ದಿ…
ನಾಡಿಗಿಂತ ಕಾಡೇ ಹೆಚ್ಚು ನ್ಯಾಯಯುತ ಈಗ!
ಇಂತಹದೊಂದು ವ್ಯವಸ್ಥೆಯ ಭಾಗ ಆಗಿರುವುದಕ್ಕೆ ತಲೆತಗ್ಗಿಸೋಣ.
#ShameOnUs ಎಂದು ಹಿರಿಯ ಪತ್ರಕರ್ತ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ಇದನ್ನೂ ಓದಿ: ವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...