Homeಮುಖಪುಟಕ್ರಿಮಿನಲ್ ವಿಕಾಸ್ ದುಬೆಯನ್ನು ಹತ್ಯೆಗೈದ ಯುಪಿ ಪೊಲೀಸ್!

ಕ್ರಿಮಿನಲ್ ವಿಕಾಸ್ ದುಬೆಯನ್ನು ಹತ್ಯೆಗೈದ ಯುಪಿ ಪೊಲೀಸ್!

ವಿಕಾಸ್ ದುಬೆ ಬದುಕಿದ್ದಲ್ಲಿ ವಿಚಾರಣೆ ವೇಳೆ ಆತನ ಕುಕೃತ್ಯಗಳಲ್ಲಿ ಭಾಗಿಯಾದ ಮತ್ತು ಆತನಿಗೆ ರಕ್ಷಣೆ ನೀಡಿದ ಪೊಲೀಸರ ಮತ್ತು ರಾಜಕಾರಣಿಗಳ ಹೆಸರು ಬಾಯಿ ಬಿಡುತ್ತಾನೆಂದು ಆತನನ್ನು ಪೊಲೀಸರು ಮುಗಿಸಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

- Advertisement -
- Advertisement -

8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆಯನ್ನು ಪೊಲೀಸರು ಇಂದು ಮುಂಜಾನೆ ಹೈತ್ಯೆಗೈದಿದ್ದಾರೆ.

ನಿನ್ನೆ ತಾನೇ ಮಧ್ಯಪ್ರದೇಶದಲ್ಲಿ ಶರಣಾಗಿದ್ದ ವಿಕಾಸ್ ದುಬೆಯನ್ನು ಅಲ್ಲಿಂದ ಉತ್ತರ ಪ್ರದೇಶಕ್ಕೆ ಕರೆತರುವಾಗ ಸಚೇಂದಿಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಿಂದ ಉತ್ತರ ಪ್ರದೇಶದ ಕಾನ್ಪುರಕ್ಕೆ ಕರೆದೊಯ್ಯುತ್ತಿದ್ದಾಗ ಮಳೆಯ ಕಾರಣದಿಂದ ಕಾನ್ಪುರ ಬಳಿಯ ಸಚೇಂದಿಯಲ್ಲಿ ಕಾರು ಲಯ ತಪ್ಪಿತು. ಆ ಸಂದರ್ಭದಲ್ಲಿ ವಿಕಾಸ್ ದುಬೆ ಪೊಲೀಸ್ ಒಬ್ಬನಿಂದ ಬಂದೂಕು ಕಸಿದುಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ. ಆಗ ಆತನ ಮೇಲೆ ಗುಂಡಿಕ್ಕಿ ಕೊಲ್ಲಲಾಯಿತು ಎಂದು ವಿಶೇಷ ಕಾರ್ಯಪಡೆಯ ಪೊಲೀಸರು ತಿಳಿಸಿದ್ದಾರೆ.

“ಇಂದು ಅಪಘಾತದಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸ್ ಎನ್‌ಕೌಂಟರ್‌ನಲ್ಲಿ ವಿಕಾಸ್ ದುಬೆ ಸಾವನ್ನಪ್ಪಿದ್ದಾನೆ” ಎಂದು ಕಾನ್ಪುರದ ಇನ್ಸ್ಪೆಕ್ಟರ್ ಜನರಲ್ ಮೋಹಿತ್ ಅಗರ್ವಾಲ್ ಹೇಳಿದ್ದಾರೆ.

ನಿನ್ನೆಯ ವಿಕಾಸ್ ದುಬೆ ಬಂಧನವನ್ನು ವಿರೋಧ ಪಕ್ಷಗಳು ಸೇರಿದಂತೆ ಹಲವಾರು ಜನ ಪೂರ್ವ ನಿರ್ಧರಿತ ಎಂದು ಟೀಕಿಸಿದ್ದರು. ಪೊಲೀಸರ, ರಾಜಕಾರಣಿಗಳ ಬೆಂಬಲದಿಂದಲೇ ವಿಕಾಸ್ ದುಬೆ ಇಷ್ಟು ಬೆಳೆಯಲು ಸಾಧ್ಯವಾಗಿದ್ದು ಎಂದು ಟೀಕಿಸಿದ್ದರು. ಇನ್ನು ಕೆಲವರು ದುಬೆ ಶರಣಾದರೂ ಸಹ ಅವನನ್ನು ಎನ್‌ಕೌಂಟರ್ ಮಾಡುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದರು. ಅದನ್ನು ಉತ್ತರ ಪ್ರದೇಶ ಪೊಲೀಸರು ಇಂದು ನಿಜ ಮಾಡಿದ್ದಾರೆ.

ಇಂದಿನ ಪೊಲೀಸ್ ಎನ್‌ಕೌಂಟರ್‌ ಅನ್ನು ಬಹಳಷ್ಟು ಜನ ಇದು ನೈಸರ್ಗಿಕವಾದುದ್ದಲ್ಲ ಬದಲಿಗೆ ಇದು ಕೂಡ ಪೂರ್ವ ನಿಯೋಜಿತವಾದುದು ಎಂದು ಆರೋಪಿಸಿದ್ದಾರೆ. ವಿಕಾಸ್ ದುಬೆ ಬದುಕಿದ್ದಲ್ಲಿ ವಿಚಾರಣೆ ವೇಳೆ ಆತನ ಕುಕೃತ್ಯಗಳಲ್ಲಿ ಭಾಗಿಯಾದ ಮತ್ತು ಆತನಿಗೆ ರಕ್ಷಣೆ ನೀಡಿದ ಪೊಲೀಸರ ಮತ್ತು ರಾಜಕಾರಣಿಗಳ ಹೆಸರು ಬಾಯಿ ಬಿಡುತ್ತಾನೆಂದು ಆತನನ್ನು ಪೊಲೀಸರು ಮುಗಿಸಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

ರಾಜಕೀಯ ಸಂಪರ್ಕಗಳಿರುವ ಕ್ರಿಮಿನಲ್ ಒಬ್ಬ ಸರ್ಕಾರಿ ವ್ಯವಸ್ಥೆಯ ಕೈಗೆ ಸೆರೆ ಸಿಕ್ಕರೆ ಜನ ತಕ್ಷಣವೇ “ಓ.. ಅವನು ಎನ್ಕೌಂಟರ್ ಆಗ್ತಾನೆ” ಅಂತ ಪ್ರತಿಕ್ರಿಯಿಸ್ತಾರೆ.
ಮರುದಿನ ಬೆಳಗ್ಗೆ ಅವನು ಎನ್ಕೌಂಟರ್‌ಗೆ ಈಡಾಗುತ್ತಾನೆ.
ಇದು ಸಿನಿಮಾವೂ ಅಲ್ಲ, ಆಫ್ರಿಕಾದ ಯಾವುದೋ ಕಾಡು ರಾಜ್ಯದ ಸುದ್ದಿಯೂ ಅಲ್ಲ. ನಮ್ಮದೇ ದೇಶದ ಸುದ್ದಿ…
ನಾಡಿಗಿಂತ ಕಾಡೇ ಹೆಚ್ಚು ನ್ಯಾಯಯುತ ಈಗ!
ಇಂತಹದೊಂದು ವ್ಯವಸ್ಥೆಯ ಭಾಗ ಆಗಿರುವುದಕ್ಕೆ ತಲೆತಗ್ಗಿಸೋಣ.
#ShameOnUs ಎಂದು ಹಿರಿಯ ಪತ್ರಕರ್ತ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ಇದನ್ನೂ ಓದಿ: ವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...