Homeಮುಖಪುಟಕ್ರಿಮಿನಲ್ ವಿಕಾಸ್ ದುಬೆಯನ್ನು ಹತ್ಯೆಗೈದ ಯುಪಿ ಪೊಲೀಸ್!

ಕ್ರಿಮಿನಲ್ ವಿಕಾಸ್ ದುಬೆಯನ್ನು ಹತ್ಯೆಗೈದ ಯುಪಿ ಪೊಲೀಸ್!

ವಿಕಾಸ್ ದುಬೆ ಬದುಕಿದ್ದಲ್ಲಿ ವಿಚಾರಣೆ ವೇಳೆ ಆತನ ಕುಕೃತ್ಯಗಳಲ್ಲಿ ಭಾಗಿಯಾದ ಮತ್ತು ಆತನಿಗೆ ರಕ್ಷಣೆ ನೀಡಿದ ಪೊಲೀಸರ ಮತ್ತು ರಾಜಕಾರಣಿಗಳ ಹೆಸರು ಬಾಯಿ ಬಿಡುತ್ತಾನೆಂದು ಆತನನ್ನು ಪೊಲೀಸರು ಮುಗಿಸಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

- Advertisement -
- Advertisement -

8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆಯನ್ನು ಪೊಲೀಸರು ಇಂದು ಮುಂಜಾನೆ ಹೈತ್ಯೆಗೈದಿದ್ದಾರೆ.

ನಿನ್ನೆ ತಾನೇ ಮಧ್ಯಪ್ರದೇಶದಲ್ಲಿ ಶರಣಾಗಿದ್ದ ವಿಕಾಸ್ ದುಬೆಯನ್ನು ಅಲ್ಲಿಂದ ಉತ್ತರ ಪ್ರದೇಶಕ್ಕೆ ಕರೆತರುವಾಗ ಸಚೇಂದಿಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಿಂದ ಉತ್ತರ ಪ್ರದೇಶದ ಕಾನ್ಪುರಕ್ಕೆ ಕರೆದೊಯ್ಯುತ್ತಿದ್ದಾಗ ಮಳೆಯ ಕಾರಣದಿಂದ ಕಾನ್ಪುರ ಬಳಿಯ ಸಚೇಂದಿಯಲ್ಲಿ ಕಾರು ಲಯ ತಪ್ಪಿತು. ಆ ಸಂದರ್ಭದಲ್ಲಿ ವಿಕಾಸ್ ದುಬೆ ಪೊಲೀಸ್ ಒಬ್ಬನಿಂದ ಬಂದೂಕು ಕಸಿದುಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ. ಆಗ ಆತನ ಮೇಲೆ ಗುಂಡಿಕ್ಕಿ ಕೊಲ್ಲಲಾಯಿತು ಎಂದು ವಿಶೇಷ ಕಾರ್ಯಪಡೆಯ ಪೊಲೀಸರು ತಿಳಿಸಿದ್ದಾರೆ.

“ಇಂದು ಅಪಘಾತದಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸ್ ಎನ್‌ಕೌಂಟರ್‌ನಲ್ಲಿ ವಿಕಾಸ್ ದುಬೆ ಸಾವನ್ನಪ್ಪಿದ್ದಾನೆ” ಎಂದು ಕಾನ್ಪುರದ ಇನ್ಸ್ಪೆಕ್ಟರ್ ಜನರಲ್ ಮೋಹಿತ್ ಅಗರ್ವಾಲ್ ಹೇಳಿದ್ದಾರೆ.

ನಿನ್ನೆಯ ವಿಕಾಸ್ ದುಬೆ ಬಂಧನವನ್ನು ವಿರೋಧ ಪಕ್ಷಗಳು ಸೇರಿದಂತೆ ಹಲವಾರು ಜನ ಪೂರ್ವ ನಿರ್ಧರಿತ ಎಂದು ಟೀಕಿಸಿದ್ದರು. ಪೊಲೀಸರ, ರಾಜಕಾರಣಿಗಳ ಬೆಂಬಲದಿಂದಲೇ ವಿಕಾಸ್ ದುಬೆ ಇಷ್ಟು ಬೆಳೆಯಲು ಸಾಧ್ಯವಾಗಿದ್ದು ಎಂದು ಟೀಕಿಸಿದ್ದರು. ಇನ್ನು ಕೆಲವರು ದುಬೆ ಶರಣಾದರೂ ಸಹ ಅವನನ್ನು ಎನ್‌ಕೌಂಟರ್ ಮಾಡುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದರು. ಅದನ್ನು ಉತ್ತರ ಪ್ರದೇಶ ಪೊಲೀಸರು ಇಂದು ನಿಜ ಮಾಡಿದ್ದಾರೆ.

ಇಂದಿನ ಪೊಲೀಸ್ ಎನ್‌ಕೌಂಟರ್‌ ಅನ್ನು ಬಹಳಷ್ಟು ಜನ ಇದು ನೈಸರ್ಗಿಕವಾದುದ್ದಲ್ಲ ಬದಲಿಗೆ ಇದು ಕೂಡ ಪೂರ್ವ ನಿಯೋಜಿತವಾದುದು ಎಂದು ಆರೋಪಿಸಿದ್ದಾರೆ. ವಿಕಾಸ್ ದುಬೆ ಬದುಕಿದ್ದಲ್ಲಿ ವಿಚಾರಣೆ ವೇಳೆ ಆತನ ಕುಕೃತ್ಯಗಳಲ್ಲಿ ಭಾಗಿಯಾದ ಮತ್ತು ಆತನಿಗೆ ರಕ್ಷಣೆ ನೀಡಿದ ಪೊಲೀಸರ ಮತ್ತು ರಾಜಕಾರಣಿಗಳ ಹೆಸರು ಬಾಯಿ ಬಿಡುತ್ತಾನೆಂದು ಆತನನ್ನು ಪೊಲೀಸರು ಮುಗಿಸಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

ರಾಜಕೀಯ ಸಂಪರ್ಕಗಳಿರುವ ಕ್ರಿಮಿನಲ್ ಒಬ್ಬ ಸರ್ಕಾರಿ ವ್ಯವಸ್ಥೆಯ ಕೈಗೆ ಸೆರೆ ಸಿಕ್ಕರೆ ಜನ ತಕ್ಷಣವೇ “ಓ.. ಅವನು ಎನ್ಕೌಂಟರ್ ಆಗ್ತಾನೆ” ಅಂತ ಪ್ರತಿಕ್ರಿಯಿಸ್ತಾರೆ.
ಮರುದಿನ ಬೆಳಗ್ಗೆ ಅವನು ಎನ್ಕೌಂಟರ್‌ಗೆ ಈಡಾಗುತ್ತಾನೆ.
ಇದು ಸಿನಿಮಾವೂ ಅಲ್ಲ, ಆಫ್ರಿಕಾದ ಯಾವುದೋ ಕಾಡು ರಾಜ್ಯದ ಸುದ್ದಿಯೂ ಅಲ್ಲ. ನಮ್ಮದೇ ದೇಶದ ಸುದ್ದಿ…
ನಾಡಿಗಿಂತ ಕಾಡೇ ಹೆಚ್ಚು ನ್ಯಾಯಯುತ ಈಗ!
ಇಂತಹದೊಂದು ವ್ಯವಸ್ಥೆಯ ಭಾಗ ಆಗಿರುವುದಕ್ಕೆ ತಲೆತಗ್ಗಿಸೋಣ.
#ShameOnUs ಎಂದು ಹಿರಿಯ ಪತ್ರಕರ್ತ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ಇದನ್ನೂ ಓದಿ: ವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...