Homeಮುಖಪುಟವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ...

ವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ…

- Advertisement -
- Advertisement -

ಜುಲೈ 3 ರಂದು ಕಾನ್ಪುರದಲ್ಲಿ ದರೋಡೆಕೋರ ವಿಕಾಸ್ ದುಬೆಯನ್ನು ಬಂಧಿಸುವ ಪ್ರಯತ್ನದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿ ಕೊಲ್ಲಲ್ಪಟ್ಟ ನಂತರ ಅಪರಾಧಿಯನ್ನು ಜೀವಂತವಾಗಿ ಹಿಡಿಯುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಪೊಲೀಸರು ಕಾನೂನು ಪಾಲಿಸುತ್ತಾರೆ ಎಂಬುದರ ಬಗ್ಗೆ ಸ್ವಲ್ಪ ನಂಬಿಕೆಯಿತ್ತು. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ದುಬೆಯನ್ನು ಗುರುವಾರ ಬಂಧಿಸಿದಾಗ ಅದು ಅಚ್ಚರಿಯ ಸಂಗತಿಯಾಗಿತ್ತು.

ರಾಜಕೀಯ ಸಂಪರ್ಕ ಹೊಂದಿದ ದುಬೆಯನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಗೆ ಒಪ್ಪಿಸಿದ ಕೂಡಲೇ ಆತನನ್ನು ಹತ್ಯೆಗೈಯ್ಯಲಾಗಿದೆ.

ಆತನನ್ನು ಉತ್ತರ ಪ್ರದೇಶಕ್ಕೆ ಕರೆದೊಯ್ಯುವ ವಾಹನವೊಂದು ಅಪಘಾತ ಸಂಭವಿಸಿದಾಗ ಆತ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ. ಹಾಗಾಗಿ ಆತನನ್ನು”ಎನ್ಕೌಂಟರ್” ಮಾಡಲಾಯಿತು ಎಂಬ ಪೊಲೀಸರ ಹೇಳಿಕೆಯನ್ನು ಯಾರು ನಂಬಲಾರರು.

ಒಮ್ಮೆ ದುಬೆ ಪೊಲೀಸರ ವಶದಲ್ಲಿದ್ದಾಗ ಅವರ ಕೆಲಸವೆಂದರೆ, ಆತನ ವಿರುದ್ಧ ಪ್ರಕರಣ ದಾಖಲಾಗಿರುವ ಅಪರಾಧಗಳ ಸುದೀರ್ಘ ಪಟ್ಟಿಯಲ್ಲಿ ಸೂಕ್ತ ವಿಚಾರನೆ ನಡೆಸಿ ನ್ಯಾಯಾಲಯದಲ್ಲಿ ಅವನನ್ನು ಹೊಣೆಗಾರರನ್ನಾಗಿ ಮಾಡುವುದು. ಅವನೊಂದಿಗೆ ಸಂಬಂಧ ಹೊಂದಿದ ವ್ಯಕ್ತಿಗಳನ್ನು ಬಂಧಿಸುವುದು ಮತ್ತು ವಿಚಾರಣೆ ನಡೆಸುವುದು. ಎಲ್ಲರಿಗೂ ಕಾನೂನಿನ ಪ್ರಕಾರ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು. ಇಷ್ಟು ಮಾಡಿದರೆ ಯುಪಿ ಪೊಲೀಸರಿಗೆ ಗೌರವ ಸಲ್ಲುತ್ತಿತ್ತು.

ಬದಲಾಗಿ, ಅವನನ್ನು ಉಜ್ಜಯಿನಿಯಿಂದ ಕಾನ್ಪುರಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸುವ ಸರಳ ಕೆಲಸವನ್ನು ನಿರ್ವಹಿಸಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಈ ಲೆಕ್ಕದಲ್ಲಿ ಉತ್ತರ ಪ್ರೆದೇಶ ಪೊಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ದುಬೆಯೊಂದಿಗೆ ಸಂಬಂಧ ಹೊಂದಿದ್ದ ರಾಜಕಾರಣಿಗಳು ಮತ್ತು ಪೊಲೀಸ್ ಪಡೆಗಳನ್ನು ಒಳಗೊಂಡ ವಿವಿಧ ದುಷ್ಟಗುಂಪುಗಳನ್ನು ಬಹಿರಂಗಪಡಿಸುವ ರೀತಿಯಲ್ಲಿ ದುಬೆಯನ್ನು ವಿಚಾರಣೆಗೆ ಒಳಪಡಿಸುವ ಅವಕಾಶವನ್ನು ಪೊಲೀಸರು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಗಳಿಗೆ ನೀಡಿಲ್ಲ. ಆ ಅವಕಾಶವನ್ನು ಕಿತ್ತುಕೊಳ್ಳುವ ಮೂಲಕ ಅಪರಾಧದಲ್ಲಿ ತಾವೂ ಭಾಗಿ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಪೊಲೀಸರು ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ದುಬೆಯನ್ನು ಕೊಂದರು. ಸಾಮಾನ್ಯ ಜನರು ಇದೇ ಸರಿಯಾದ ಮಾರ್ಗ ಎಂದೂ ಸಹ ಭಾವಿಸಬಹುದು. ಈ ರೀತಿಯ ನ್ಯಾಯಾಂಗಬಾಹಿರ ಹತ್ಯೆಗಳು ಭಾರತದಲ್ಲಿ ಹೊಸದೇನಲ್ಲ. ಇದನ್ನು ಅನೇಕ ಜನರು ಹುರಿದುಂಬಿಸುತ್ತಾರೆ ಮತ್ತು ಚಲನಚಿತ್ರಗಳಲ್ಲಿ ವೈಭವೀಕರಿಸುತ್ತಾರೆ. ಆದರೆ ಅಂತಹ ಕ್ರಮಗಳು ನಮ್ಮನ್ನು ಸುರಕ್ಷಿತವಾಗಿರಿಸುತ್ತವೆಯೇ? ನಮಗೆ ನಿಜವಾದ ನ್ಯಾಯವನ್ನು ನೀಡುತ್ತವೆಯೇ?

ನ್ಯಾಯಾಂಗದ ಮೇಲಿನ ನಂಬಿಕೆಯಿಲ್ಲದ್ದರಿಂದ ಜನರು ಈ ಫೇಕ್ ಎನ್‌ಕೌಂಟರ್‌ಗಳನ್ನು ಬೆಂಬಲಿಸುತ್ತೇವೆ. ಏಕೆಂದರೆ ನ್ಯಾಯಾಲಯಗಳು ಸಮಯೋಚಿತ ನ್ಯಾಯವನ್ನು ನೀಡುವುದಿಲ್ಲ ಎಂದು ಹಲವರು ನಂಬುತ್ತಾರೆ. ಅಲ್ಲದೆ ಪೊಲೀಸರಿಗೆ ಅನಿಯಂತ್ರಿತ ಅಧಿಕಾರ ನೀಡುವುದನ್ನು ಪ್ರೋತ್ಸಾಹಿಸುತ್ತಾರೆ. ಪೊಲೀಸ್ ಸಿಬ್ಬಂದಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದಕ್ಕೆ ಕಳೆದ ಹದಿನೈದು ದಿನಗಳಲ್ಲಿ ನಡೆದ ತಮಿಳುನಾಡಿ ಲಾಕಪ್ ಡೆತ್ ಮತ್ತು ಉತ್ತರಪ್ರದೇಶದ ಈ ಘಟನೆಗಳೆ ಸಾಕ್ಷಿ.

ಮಾಜಿ ಭಾರತೀಯ ಪೊಲೀಸ್ ಸೇವಾ ಅಧಿಕಾರಿ ಎನ್‌.ಸಿ.ಅಸ್ತಾನಾ ಅವರು “ಉತ್ತರ ಪ್ರದೇಶ ಪೊಲೀಸರು ನ್ಯಾಯಾಂಗದ ಹೊರತಾದ ಹತ್ಯೆಗಳಿಗೆ ಹೆಚ್ಚು ಪ್ರಯತ್ನಿಸುತ್ತಾರೆ. ಇದರಿಂದ ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆ ಅವರದು. ಆದರೆ ವಾಸ್ತವದಲ್ಲಿ ಅದು ಹೆಚ್ಚು ಹಿಂಸಾಚಾರಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದೆ ಕಣ್ಣೆದುರಿಗಿನ ಸಾಕ್ಷಿ’ ಎಂದು ವಿವರಿಸುತ್ತಾರೆ.

“ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಕೊಲ್ಲಲು ಕಾರಣವೇನೆಂದರೆ ಅವರು ತನ್ನನು ಬಂಧಿಸುತ್ತಾರೆ ಎಂಬುದಲ್ಲ. ಬದಲಿಗೆ ಎನ್‌ಕೌಂಟರ್ ಹೆಸರಿನಲ್ಲಿ ನನ್ನನ್ನು ಕೊಲ್ಲುತ್ತಾರೆ ಎಂದು ಆತ ಪ್ರಾಮಾಣಿಕವಾಗಿ ನಂಬಿದ್ದ. ಯುಪಿಯಲ್ಲಿ ನಡೆದ ಹಲವು ಎನ್‌ಕೌಂಟರ್‌ಗಳು ಅವನಿಗೆ ಆ ನಂಬಿಕೆ ಬರುವಂತೆ ಮಾಡಿದ್ದವು. ಹಾಗಾಗಿಯೇ ಆತ ಜುಲೈ 3 ರಂದು ಉದ್ದೇಶಪೂರ್ವಕವಾಗಿ ಗುಂಡು ಹಾರಿಸಿದ್ದ. ಪೊಲೀಸರು ಹೇಗೆ ಎನ್‌ಕೌಂಟರ್ ಮಾಡುತ್ತಾರೆ ಅದಕ್ಕೆ ಆತನ ಕೌಂಟರ್ ಮಾಡಿದ್ದ”.

ಒಟ್ಟಿನಲ್ಲಿ ಈ ಪ್ರಕರಣ ಶಾಂತಿ ಸುವ್ಯವಸ್ಥೇ ಕಾಯ್ದುಕೊಳ್ಳಲು ಉತ್ತರ ಪ್ರದೇಶ ಪೊಲೀಸರು ಸಂಪೂರ್ಣ ವಿಫಲವಾಗಿದ್ದಾರೆ. ಅದಕ್ಕೆ ರಾಜಕೀಯ ಪಕ್ಷಗಳ, ಆಳುವವರ ಹಸ್ತಕ್ಷೇಪವೂ ಕಾರಣ ಎಂಬುದನ್ನು ಸಾರಿ ಹೇಳುತ್ತದೆ. ಜನರು ಎಲ್ಲಿಯವರೆಗೆ ಈ ಅನೈತಿಕ ರಾಜಕಾರಣವನ್ನು ಪ್ರಶ್ನಿಸುವುದಿಲ್ಲವೋ ಅಲ್ಲಿಯವರೆಗು ಈ ರೀತಿಯ ಪ್ರಕರಣಗಳು ಸಹ ನಿಲ್ಲುವುದಿಲ್ಲ.


ಇದನ್ನೂ ಓದಿ; ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...