Homeಮುಖಪುಟವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ...

ವಿಕಾಸ್ ದುಬೆ ಹತ್ಯೆ: ಉತ್ತರ ಪ್ರದೇಶ ಪೊಲೀಸರ ತೀವ್ರ ವೈಫಲ್ಯಕ್ಕೆ ಸಾಕ್ಷಿ…

- Advertisement -
- Advertisement -

ಜುಲೈ 3 ರಂದು ಕಾನ್ಪುರದಲ್ಲಿ ದರೋಡೆಕೋರ ವಿಕಾಸ್ ದುಬೆಯನ್ನು ಬಂಧಿಸುವ ಪ್ರಯತ್ನದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿ ಕೊಲ್ಲಲ್ಪಟ್ಟ ನಂತರ ಅಪರಾಧಿಯನ್ನು ಜೀವಂತವಾಗಿ ಹಿಡಿಯುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಪೊಲೀಸರು ಕಾನೂನು ಪಾಲಿಸುತ್ತಾರೆ ಎಂಬುದರ ಬಗ್ಗೆ ಸ್ವಲ್ಪ ನಂಬಿಕೆಯಿತ್ತು. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ದುಬೆಯನ್ನು ಗುರುವಾರ ಬಂಧಿಸಿದಾಗ ಅದು ಅಚ್ಚರಿಯ ಸಂಗತಿಯಾಗಿತ್ತು.

ರಾಜಕೀಯ ಸಂಪರ್ಕ ಹೊಂದಿದ ದುಬೆಯನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಗೆ ಒಪ್ಪಿಸಿದ ಕೂಡಲೇ ಆತನನ್ನು ಹತ್ಯೆಗೈಯ್ಯಲಾಗಿದೆ.

ಆತನನ್ನು ಉತ್ತರ ಪ್ರದೇಶಕ್ಕೆ ಕರೆದೊಯ್ಯುವ ವಾಹನವೊಂದು ಅಪಘಾತ ಸಂಭವಿಸಿದಾಗ ಆತ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ. ಹಾಗಾಗಿ ಆತನನ್ನು”ಎನ್ಕೌಂಟರ್” ಮಾಡಲಾಯಿತು ಎಂಬ ಪೊಲೀಸರ ಹೇಳಿಕೆಯನ್ನು ಯಾರು ನಂಬಲಾರರು.

ಒಮ್ಮೆ ದುಬೆ ಪೊಲೀಸರ ವಶದಲ್ಲಿದ್ದಾಗ ಅವರ ಕೆಲಸವೆಂದರೆ, ಆತನ ವಿರುದ್ಧ ಪ್ರಕರಣ ದಾಖಲಾಗಿರುವ ಅಪರಾಧಗಳ ಸುದೀರ್ಘ ಪಟ್ಟಿಯಲ್ಲಿ ಸೂಕ್ತ ವಿಚಾರನೆ ನಡೆಸಿ ನ್ಯಾಯಾಲಯದಲ್ಲಿ ಅವನನ್ನು ಹೊಣೆಗಾರರನ್ನಾಗಿ ಮಾಡುವುದು. ಅವನೊಂದಿಗೆ ಸಂಬಂಧ ಹೊಂದಿದ ವ್ಯಕ್ತಿಗಳನ್ನು ಬಂಧಿಸುವುದು ಮತ್ತು ವಿಚಾರಣೆ ನಡೆಸುವುದು. ಎಲ್ಲರಿಗೂ ಕಾನೂನಿನ ಪ್ರಕಾರ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು. ಇಷ್ಟು ಮಾಡಿದರೆ ಯುಪಿ ಪೊಲೀಸರಿಗೆ ಗೌರವ ಸಲ್ಲುತ್ತಿತ್ತು.

ಬದಲಾಗಿ, ಅವನನ್ನು ಉಜ್ಜಯಿನಿಯಿಂದ ಕಾನ್ಪುರಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸುವ ಸರಳ ಕೆಲಸವನ್ನು ನಿರ್ವಹಿಸಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಈ ಲೆಕ್ಕದಲ್ಲಿ ಉತ್ತರ ಪ್ರೆದೇಶ ಪೊಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ದುಬೆಯೊಂದಿಗೆ ಸಂಬಂಧ ಹೊಂದಿದ್ದ ರಾಜಕಾರಣಿಗಳು ಮತ್ತು ಪೊಲೀಸ್ ಪಡೆಗಳನ್ನು ಒಳಗೊಂಡ ವಿವಿಧ ದುಷ್ಟಗುಂಪುಗಳನ್ನು ಬಹಿರಂಗಪಡಿಸುವ ರೀತಿಯಲ್ಲಿ ದುಬೆಯನ್ನು ವಿಚಾರಣೆಗೆ ಒಳಪಡಿಸುವ ಅವಕಾಶವನ್ನು ಪೊಲೀಸರು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಗಳಿಗೆ ನೀಡಿಲ್ಲ. ಆ ಅವಕಾಶವನ್ನು ಕಿತ್ತುಕೊಳ್ಳುವ ಮೂಲಕ ಅಪರಾಧದಲ್ಲಿ ತಾವೂ ಭಾಗಿ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಪೊಲೀಸರು ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ದುಬೆಯನ್ನು ಕೊಂದರು. ಸಾಮಾನ್ಯ ಜನರು ಇದೇ ಸರಿಯಾದ ಮಾರ್ಗ ಎಂದೂ ಸಹ ಭಾವಿಸಬಹುದು. ಈ ರೀತಿಯ ನ್ಯಾಯಾಂಗಬಾಹಿರ ಹತ್ಯೆಗಳು ಭಾರತದಲ್ಲಿ ಹೊಸದೇನಲ್ಲ. ಇದನ್ನು ಅನೇಕ ಜನರು ಹುರಿದುಂಬಿಸುತ್ತಾರೆ ಮತ್ತು ಚಲನಚಿತ್ರಗಳಲ್ಲಿ ವೈಭವೀಕರಿಸುತ್ತಾರೆ. ಆದರೆ ಅಂತಹ ಕ್ರಮಗಳು ನಮ್ಮನ್ನು ಸುರಕ್ಷಿತವಾಗಿರಿಸುತ್ತವೆಯೇ? ನಮಗೆ ನಿಜವಾದ ನ್ಯಾಯವನ್ನು ನೀಡುತ್ತವೆಯೇ?

ನ್ಯಾಯಾಂಗದ ಮೇಲಿನ ನಂಬಿಕೆಯಿಲ್ಲದ್ದರಿಂದ ಜನರು ಈ ಫೇಕ್ ಎನ್‌ಕೌಂಟರ್‌ಗಳನ್ನು ಬೆಂಬಲಿಸುತ್ತೇವೆ. ಏಕೆಂದರೆ ನ್ಯಾಯಾಲಯಗಳು ಸಮಯೋಚಿತ ನ್ಯಾಯವನ್ನು ನೀಡುವುದಿಲ್ಲ ಎಂದು ಹಲವರು ನಂಬುತ್ತಾರೆ. ಅಲ್ಲದೆ ಪೊಲೀಸರಿಗೆ ಅನಿಯಂತ್ರಿತ ಅಧಿಕಾರ ನೀಡುವುದನ್ನು ಪ್ರೋತ್ಸಾಹಿಸುತ್ತಾರೆ. ಪೊಲೀಸ್ ಸಿಬ್ಬಂದಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದಕ್ಕೆ ಕಳೆದ ಹದಿನೈದು ದಿನಗಳಲ್ಲಿ ನಡೆದ ತಮಿಳುನಾಡಿ ಲಾಕಪ್ ಡೆತ್ ಮತ್ತು ಉತ್ತರಪ್ರದೇಶದ ಈ ಘಟನೆಗಳೆ ಸಾಕ್ಷಿ.

ಮಾಜಿ ಭಾರತೀಯ ಪೊಲೀಸ್ ಸೇವಾ ಅಧಿಕಾರಿ ಎನ್‌.ಸಿ.ಅಸ್ತಾನಾ ಅವರು “ಉತ್ತರ ಪ್ರದೇಶ ಪೊಲೀಸರು ನ್ಯಾಯಾಂಗದ ಹೊರತಾದ ಹತ್ಯೆಗಳಿಗೆ ಹೆಚ್ಚು ಪ್ರಯತ್ನಿಸುತ್ತಾರೆ. ಇದರಿಂದ ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆ ಅವರದು. ಆದರೆ ವಾಸ್ತವದಲ್ಲಿ ಅದು ಹೆಚ್ಚು ಹಿಂಸಾಚಾರಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದೆ ಕಣ್ಣೆದುರಿಗಿನ ಸಾಕ್ಷಿ’ ಎಂದು ವಿವರಿಸುತ್ತಾರೆ.

“ದುಬೆ ಎಂಟು ಪೊಲೀಸ್ ಸಿಬ್ಬಂದಿಯನ್ನು ಕೊಲ್ಲಲು ಕಾರಣವೇನೆಂದರೆ ಅವರು ತನ್ನನು ಬಂಧಿಸುತ್ತಾರೆ ಎಂಬುದಲ್ಲ. ಬದಲಿಗೆ ಎನ್‌ಕೌಂಟರ್ ಹೆಸರಿನಲ್ಲಿ ನನ್ನನ್ನು ಕೊಲ್ಲುತ್ತಾರೆ ಎಂದು ಆತ ಪ್ರಾಮಾಣಿಕವಾಗಿ ನಂಬಿದ್ದ. ಯುಪಿಯಲ್ಲಿ ನಡೆದ ಹಲವು ಎನ್‌ಕೌಂಟರ್‌ಗಳು ಅವನಿಗೆ ಆ ನಂಬಿಕೆ ಬರುವಂತೆ ಮಾಡಿದ್ದವು. ಹಾಗಾಗಿಯೇ ಆತ ಜುಲೈ 3 ರಂದು ಉದ್ದೇಶಪೂರ್ವಕವಾಗಿ ಗುಂಡು ಹಾರಿಸಿದ್ದ. ಪೊಲೀಸರು ಹೇಗೆ ಎನ್‌ಕೌಂಟರ್ ಮಾಡುತ್ತಾರೆ ಅದಕ್ಕೆ ಆತನ ಕೌಂಟರ್ ಮಾಡಿದ್ದ”.

ಒಟ್ಟಿನಲ್ಲಿ ಈ ಪ್ರಕರಣ ಶಾಂತಿ ಸುವ್ಯವಸ್ಥೇ ಕಾಯ್ದುಕೊಳ್ಳಲು ಉತ್ತರ ಪ್ರದೇಶ ಪೊಲೀಸರು ಸಂಪೂರ್ಣ ವಿಫಲವಾಗಿದ್ದಾರೆ. ಅದಕ್ಕೆ ರಾಜಕೀಯ ಪಕ್ಷಗಳ, ಆಳುವವರ ಹಸ್ತಕ್ಷೇಪವೂ ಕಾರಣ ಎಂಬುದನ್ನು ಸಾರಿ ಹೇಳುತ್ತದೆ. ಜನರು ಎಲ್ಲಿಯವರೆಗೆ ಈ ಅನೈತಿಕ ರಾಜಕಾರಣವನ್ನು ಪ್ರಶ್ನಿಸುವುದಿಲ್ಲವೋ ಅಲ್ಲಿಯವರೆಗು ಈ ರೀತಿಯ ಪ್ರಕರಣಗಳು ಸಹ ನಿಲ್ಲುವುದಿಲ್ಲ.


ಇದನ್ನೂ ಓದಿ; ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...