Homeಮುಖಪುಟಗಾಲ್ವನ್‌ ಕುರಿತು ಉತ್ತರಿಸುವಂತೆ 140 ಕ್ಕೂ ಹೆಚ್ಚು ಮಾಜಿ ಯೋಧರಿಂದ ಪ್ರಧಾನಿಗೆ ಪತ್ರ

ಗಾಲ್ವನ್‌ ಕುರಿತು ಉತ್ತರಿಸುವಂತೆ 140 ಕ್ಕೂ ಹೆಚ್ಚು ಮಾಜಿ ಯೋಧರಿಂದ ಪ್ರಧಾನಿಗೆ ಪತ್ರ

ಸಹಿ ಮಾಡಿದ ಎಲ್ಲಾ ಮಾಜಿ ವೀರ ಯೋಧರು ದೇಶದಲ್ಲಿ ಯುದ್ದ ಹಾಗೂ ಶಾಂತಿ ಸಮಯದಲ್ಲಿ ಸೇವೆ ಸಲ್ಲಿಸಿದ ಸಶಸ್ತ್ರ ಪಡೆಗಳ ಪರಿಣಿತರಾಗಿದ್ದಾರೆ.

- Advertisement -
- Advertisement -

ಜೂನ್ 15 ರಂದು ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ 20 ಸೈನಿಕರ ವಿಷಯದಲ್ಲಿ ರಾಜಕೀಯ, ನಾಗರಿಕ ಹಾಗೂ ಸೈನ್ಯದ ವಿಫಲತೆ ಹಾಗೂ ಚೀನಾದ ಆಕ್ರಮಣದ ಕುರಿತು ಉತ್ತರ ಕೋರಿ 140 ಕ್ಕೂ ಹೆಚ್ಚು ಮಾಜಿ ವೀರ ಯೋಧರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.

ಚೀನಾ ಗಾಲ್ವಾನ್ ಕಣಿವೆಯ ಮೇಲಿನ ತನ್ನ ಹಕ್ಕನ್ನು ದೃಢವಾಗಿ ಹೇಳುತ್ತಿರುವಾಗ, ಭಾರತೀಯ ಭೂಪ್ರದೇಶದೊಳಗೆ ಯಾರೂ ಪ್ರವೇಶಿಸಿಲ್ಲ ಹಾಗೂ ಯಾವುದೇ ಭಾರತೀಯ ಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ ಎಂಬ ಪ್ರಧಾನಿ ಮೋದಿಯ ಜೂನ್ 19 ರ ಹೇಳಿಕೆಯನ್ನು ಪತ್ರವು ಪ್ರಶ್ನಿಸಿದೆ.

ಆ ವಿವಾದಾತ್ಮಕ ಹೇಳಿಕೆ ಕುರಿತು ಘರ್ಷಣೆಯ ನಂತರದ ಪರಿಸ್ಥಿತಿಯನ್ನು ಮೋದಿ ಉಲ್ಲೇಖಿಸಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಒಂದು ದಿನದ ನಂತರ ಸ್ಪಷ್ಟೀಕರಣವನ್ನು ನೀಡಿದ್ದರೂ, ನಿವೃತ್ತ ಸೈನಿಕ ಅಧಿಕಾರಿಗಳು ಅದನ್ನು ಪ್ರಶ್ನಿಸಿದ್ದಾರೆ. ಜೂನ್ 15 ರ ನಂತರವೂ ಚೀನಾದ ಅತಿಕ್ರಮಣವನ್ನು ಮುಂದುವರೆಸಿದೆ ಎಂದು ಉಪಗ್ರಹ ಚಿತ್ರಗಳು ಮತ್ತು ಸ್ಥಳೀಯ ವರದಿಗಳನ್ನು ಅವರು ಉಲ್ಲೇಖಿಸಿದ್ದಾರೆ.

ಪ್ರಧಾನಿ ಕಚೇರಿ ನೀಡಿದ ಸ್ಪಷ್ಟೀಕರಣ ಹೇಳಿಕೆಗಳ ವಿರೋಧಾಭಾಸಗಳಿಂದಾಗಿ ಚೀನಾ ಹೇಗೆ ಅನುಕೂಲ ಪಡೆಯಿತು” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಒಳನುಸುಳುವಿಕೆಗಳು, ಆಕ್ರಮಣಗಳು ಮತ್ತು ಅತಿಕ್ರಮಣಗಳ ಕುರಿತು ಸತ್ಯ ಶೋಧನಾ ಸಮಿತಿಯನ್ನು ರಚಿಸುವಂತೆ ಪತ್ರವು ಪ್ರಧಾನಿ ಹಾಗೂ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆದ ರಾಷ್ಟ್ರಪತಿಯನ್ನು ಒತ್ತಾಯಿಸಿದೆ. ಅಲ್ಲದೆ ಈ ಸಮಿತಿಯ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಬೇಕೆಂದು ಕೇಳಿದೆ.

ಪತ್ರವನ್ನು ಮಾಜಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಎಲ್. ರಾಮದಾಸ್ ಅವರು ಬರೆದಿದ್ದು, ಅದಕ್ಕೆ 143 ಮಾಜಿ ಯೋಧರು ಅನುಮೋದಿಸಿದ್ದಾರೆ. ಈ ಪತ್ರವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಮೂರೂ ಸೇನಾ ಮುಖ್ಯಸ್ಥರಿಗೆ ಕೂಡಾ ಕಳಿಸಲಾಗಿದೆ.

ಗಡಿ ಪರಿಸ್ಥಿತಿ ಬಗ್ಗೆ ಅಧಿಕಾರಿಗಳಿಂದ ಹೆಚ್ಚಿನ ಸ್ಪಷ್ಟತೆ ನೀಡುವಂತೆ ಒತ್ತಾಯಿಸಿರುವ ಪತ್ರವು, ವಿರೋಧಿ ರಾಷ್ಟ್ರಗಳು ಲಾಭಪಡೆಯುವಂತಹ ವಿರೋಧಾಭಾಸ ಹೇಳಿಕೆಗಳನ್ನು ನೀಡದಂತೆ ಒತ್ತಾಯಿಸಿದೆ.

ಅಲ್ಲದೆ ಭಾರತವನ್ನು ಜಾತ್ಯಾತೀತ ಆಧಾರದಲ್ಲಿ ಮಾತ್ರ ದೃಢವಾಗಿ ಕಟ್ಟಲು ಸಾಧ್ಯ ಎಂದು ಪತ್ರದಲ್ಲಿ ಒತ್ತಿ ಹೇಳಲಾಗಿದ್ದು, ಧರ್ಮ ಹಾಗೂ ಜಾತಿಗಳ ಆಧಾರದಲ್ಲಿ ವಿಭಜಿಸುವ ನೀತಿಯನ್ನು ಬಿಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆ.

ಸಹಿ ಮಾಡಿದ ಎಲ್ಲಾ ಮಾಜಿ ವೀರ ಯೋಧರು ದೇಶದಲ್ಲಿ ಯುದ್ದ ಹಾಗೂ ಶಾಂತಿ ಸಮಯದಲ್ಲಿ ಸೇವೆ ಸಲ್ಲಿಸಿದ ಸಶಸ್ತ್ರ ಪಡೆಗಳ ಪರಿಣಿತರಾಗಿದ್ದಾರೆ.

“ನಾವು ಯಾವುದೇ ಗುಂಪು ಅಥವಾ ರಾಜಕೀಯ ಪಕ್ಷವನ್ನು ಪ್ರತಿನಿಧಿಸುವುದಿಲ್ಲ. ನಾವು ಪ್ರತಿಯೊಬ್ಬರೂ ಈ ಹೇಳಿಕೆ ನೀಡುವಾಗ ದೇಶದ ಹಾಗೂ ನಮ್ಮ ಸಶಸ್ತ್ರ ಪಡೆಗಳ ಹಿತಾಸಕ್ತಿಯನ್ನು ಮಾತ್ರ ಹೊಂದಿದ್ದೇವೆ. ಆದ್ದರಿಂದ, ನಮ್ಮ ಗೌರವಾನ್ವಿತ ಅಭಿಪ್ರಾಯ, ವಿನಂತಿಗಳು ಮತ್ತು ತುರ್ತುಗಳನ್ನು ಆ ವಿಚಾರದಲ್ಲಿ ಮಾತ್ರ ತೆಗೆದುಕೊಳ್ಳಬೇಕೆಂದು ನಾವು ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಡ್ಮಿರಲ್ ರಾಮದಾಸ್ ನೇತೃತ್ವದ 150 ಕ್ಕೂ ಹೆಚ್ಚು ಯೋಧರು ಕಳೆದ ವರ್ಷದ ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಸಶಸ್ತ್ರ ಪಡೆಗಳನ್ನು ಬಳಸುವುದನ್ನು ವಿರೋಧಿಸಿ ರಾಷ್ಟ್ರಪತಿಗೆ ಪತ್ರ ಬರೆದಿದ್ದರು.


ಓದಿ: ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...