Homeಮುಖಪುಟಉದ್ಯೋಗದಲ್ಲಿ 75% ಸ್ಥಳೀಯರಿಗೆ ಆದ್ಯತೆ: ಹರಿಯಾಣ ಸರ್ಕಾರದ ನಿರ್ಧಾರಕ್ಕೆ ವಿರೋಧ..

ಉದ್ಯೋಗದಲ್ಲಿ 75% ಸ್ಥಳೀಯರಿಗೆ ಆದ್ಯತೆ: ಹರಿಯಾಣ ಸರ್ಕಾರದ ನಿರ್ಧಾರಕ್ಕೆ ವಿರೋಧ..

ಖಾಸಗಿ ವಲಯದಲ್ಲಿನ ನೇಮಕಾತಿಗಳಲ್ಲಿ 75% ಸ್ಥಳೀಯ ಆದ್ಯತೆ ಮತ್ತು 50,000 ಕ್ಕೆ ಕಡಿಮೆ ಇಲ್ಲದಂತೆ ವೇತನ ನೀಡುವ ‘ಸ್ಥಳೀಯ ಅಭ್ಯರ್ಥಿಗಳ ಹರಿಯಾಣ ರಾಜ್ಯ ಉದ್ಯೋಗ 2020’ನ್ನು ರೂಪಿಸಲು ರಾಜ್ಯ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.

- Advertisement -
- Advertisement -

ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಹರಿಯಾಣದ ಬಿಜೆಪಿ ಸರ್ಕಾರದ ಸ್ಥಳೀಯರಿಗೆ 75% ಹೊಸ ಉದ್ಯೋಗಗಳನ್ನು ಕಾಯ್ದಿರಿಸುವ ಪ್ರಸ್ತಾಪಕ್ಕೆ ಕೈಗಾರಿಕಾ ಸಂಸ್ಥೆಗಳು, ಟ್ರೇಡ್ ಯೂನಿಯನ್ ಕಾರ್ಯಕರ್ತರು ಮತ್ತು ಶಿಕ್ಷಣ ತಜ್ಞರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಖಾಸಗಿ ವಲಯದಲ್ಲಿನ ನೇಮಕಾತಿಗಳಲ್ಲಿ 75% ಸ್ಥಳೀಯರಿಗೆ ಆದ್ಯತೆ ಮತ್ತು 50,000 ಕ್ಕೆ ಕಡಿಮೆ ಇಲ್ಲದಂತೆ ವೇತನ ನೀಡುವ ‘ಸ್ಥಳೀಯ ಅಭ್ಯರ್ಥಿಗಳ ಹರಿಯಾಣ ರಾಜ್ಯ ಉದ್ಯೋಗ ನೀತಿ 2020’ನ್ನು ರೂಪಿಸಲು ರಾಜ್ಯ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.

ಸುಗ್ರೀವಾಜ್ಞೆಯ ಕರಡನ್ನು ಅದರ ಮುಂದಿನ ಸಭೆಯಲ್ಲಿ ಸಚಿವರ ಪರಿಷತ್ತಿನ ಮುಂದೆ ಇಡಲು ನಿರ್ಧರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದಕ್ಕೆ ರಾಷ್ಟ್ರಪತಿಗಳ ಒಪ್ಪಿಗೆ ಅಗತ್ಯವಾಗಿರುತ್ತದೆ.

ಕಳೆದ ವರ್ಷ ಆಂಧ್ರಪ್ರದೇಶ ಸರ್ಕಾರವು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಮತ್ತು ಮುಂಬರುವ ಕೈಗಾರಿಕೆಗಳು ಸ್ಥಳೀಯರಿಗೆ ಉದ್ಯೋಗವನ್ನು ಕಾಯ್ದಿರಿಸುವುದನ್ನು ಕಡ್ಡಾಯಗೊಳಿಸಿತು. ಅಂತೆಯೇ, ಮಧ್ಯಪ್ರದೇಶದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವೂ ಕೈಗಾರಿಕೆಗಳಲ್ಲಿ ಇದೇ ರೀತಿಯ ಸ್ಥಳೀಯರಿಗೆ ಆದ್ಯತೆ ನೀಡುವ ಕಾಯ್ದೆಯನ್ನು ಘೋಷಿಸಿತ್ತು.

“ಇಂತಹ ನೀತಿಗಳು ಹಲವಾರು ರಾಜ್ಯಗಳಲ್ಲಿನ ಕಾರ್ಮಿಕರ ಪೂರೈಕೆ ಮತ್ತು ಬೇಡಿಕೆಯ ನಡುವೆ ಕಂದಕವನ್ನು ಉಂಟು ಮಾಡುತ್ತವೆ” ಎಂದು ಐಐಟಿ-ದೆಹಲಿಯ ಸಹಾಯಕ ಪ್ರಾಧ್ಯಾಪಕ ಜೈನ್ ಜೋಸ್ ಥಾಮಸ್ ಹೇಳಿದರು. “ಕಾರ್ಮಿಕರು ಮತ್ತು ಕೈಗಾರಿಕೀಕರಣ” ಎಂಬುದು ಇವರ ಸಂಶೋಧನಾ ವಿಷಯವಾಗಿದೆ.

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಮಾನೇಸರ್ ಘಟಕದ ಪ್ರಧಾನ ಕಾರ್ಯದರ್ಶಿ ಸತ್‌ಬಿರ್ ಸಿಂಗ್ ಹರಿಯಾಣ ಸರ್ಕಾರದ ಕ್ರಮವನ್ನು “ಪೊಲಿಟಿಕಲ್ ಗಿಮಿಕ್” ಎಂದು ಕರೆದಿದ್ದಾರೆ. “ರಾಜ್ಯದಲ್ಲಿ ಸಾಕಷ್ಟು ಉದ್ಯೋಗಗಳು ಇಲ್ಲದಿದ್ದಾಗ ಮೀಸಲಾತಿಯನ್ನು ಘೋಷಿಸುವ ಮೂಲಕ ಸ್ಥಳೀಯರನ್ನು ಮರುಳು ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ” ಎಂದು ಅವರು ಹೇಳಿದ್ದಾರೆ. ಸ್ಥಳೀಯರು ಮತ್ತು ವಲಸೆ ಕಾರ್ಮಿಕರ ನಡುವೆ ಬಿರುಕು ಮೂಡಿಸುವುದು ಮತ್ತು ಕಾರ್ಮಿಕ ವರ್ಗವನ್ನು ವಿಭಜಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮಾನೇಸರ್ ಕೈಗಾರಿಕಾ ಸಂಘದ ಪ್ರಧಾನ ಕಾರ್ಯದರ್ಶಿ ಮನಮೋಹನ್ ಗೇನ್ಡ್ ಇದನ್ನು ಕಠಿಣ ನಡೆ ಎಂದು ಕರೆದಿದ್ದಾರೆ. ಇದು ಲಂಚ ಮತ್ತು ದಂಡಕ್ಕೆ ಆಹ್ವಾನ ನೀಡುತ್ತದೆ. ಮಾನೇಸರ್ ನಲ್ಲಿ 80% ಕಾರ್ಮಿಕರು ವಲಸಿಗರು. ಇವರನ್ನು ತೆಗೆದು ಹಾಕಿ ಈಗ ಸ್ಥಳೀಯರಿಗೆ ಅವಕಾಶ ನೀಡುವುದು ಅಸಾಧ್ಯವಾಗಿದೆ. ಈಗಾಗಲೇ ಕೈಗಾರಿಕೆಗಳು ಹಿನ್ನಡೆಯುತ್ತಿರುವಾಗ, ಇಂತಹ ಕ್ರಮವನ್ನು ತರುತ್ತಿರುವುದು ಆಶ್ಚರ್ಯಕರವಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...