Homeಅಂಕಣಗಳುಥೂತ್ತೇರಿ | ಯಾಹೂಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು - ಚಂದ್ರೇಗೌಡರ ಕಟ್ಟೆಪುರಾಣ

ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು – ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ಇದು ಗಾಳಿ ಬೀಸುವ ಕಾಲ, ಬರ್ರೊ ಎಂದು ಬೀಸುವ ಗಾಳಿಯೂ ಕರೋನ ಸೋಂಕನ್ನು ಹೊತ್ತು ತರುತ್ತದೆಂದು ವಾಟಿಸ್ಸೆ ಹೇಳಿದಾಗಿನಿಂದ, ಹೆದರಿದ ಜುಮ್ಮಿ ಮನೆ ಬುಟ್ಟು ಈಚೆ ಬಂದಿರಲಿಲ್ಲ. ಆಗ ಆಗಮಿಸಿದ ಉಗ್ರಿ.

“ಸುಮಲತನಿಗೂ ಕರೋನ ಬಂದದಂತೆ ಕಣೆ” ಎಂದ.

“ಅಯ್ಯೊ ಶಿವನೇ ಅವುಳಿಗ್ಯಾಕೆ ಬತ್ತೂ.”

“ಪಾಪ ಅವಳು ಮನೆವಳಗಿಲ್ದೆಲೆ ಜನಗಳ ಜ್ವತೆ ಮಾತಾಡ್ಯವುಳೆ ಅದ್ಕೆ ಬಂದದೆ.”

“ನೀನು ಎಲ್ಲಿಂದ ಬಂದ್ಲ.”

“ಮನಿಂದ ಬಂದೆ.”

“ಅಂಗಾದ್ರೆ ವಳಿಕೆ ಬಾ, ಎಲ್ಲೆಲ್ಲೊ ನಾಯಿ ತಿರುಗಿದಂಗೆ ತಿರುಗಿದ್ರೆ ಇಲ್ಯಲ್ಲ ಬರದು ಬ್ಯಾಡ.”

“ಆ ಮಾತ ವಾಟಿಸ್ಸೆಗೇಳು.”

“ಯಾವ ಮಾತನಪ್ಪ” ಎನ್ನುತ್ತ ವಾಟಿಸ್ಸೆ ಬಂದ.

“ಇನ್ನ ಮುಂದೆ ಜುಮ್ಮಿ ಮನಿಗೆ ಬರಬೇಕಾದ್ರೆ, ನಿನ್ನ ಮನಿಂದ ಇಲ್ಲಿಗೆ ನೇರವಾಗಿ ಬರಬೇಕಂತೆ. ಅಲ್ಲಿ ಇಲ್ಲಿ ತಿರುಗಿದೊರಿಗೆ ನೊ ಎಂಟ್ರಿ.”

“ಲೇ ಉಗ್ರಿ, ನಾವು ಎಲ್ಯಾರ ತಿರುಗ್ಲಿ. ಆದ್ರೆ ಪೇಸ್‍ನ ಬಟ್ಟೆ ಮಕಾಡದಿಂದ ಕವರ್ ಮಾಡಿರಬೇಕು. ಯಾರತ್ರ ಮಾತಾಡಿದ್ರು ಟೆನ್ ಆರ್ ಪೈ ಪಿಟ್ ದೂರ ಮೆಂಟೇನ್ ಮಾಡಬೇಕು. ಕೈ ಕುಲುಕಬಾರ್ದು. ಎಷ್ಟೇ ಆತ್ಮೀಯರಾದ್ರು ತಬ್ಬಿಕಬಾರ್ದು, ನಿಸರ್ಗನೇ ತಂದಿರೊ ಅಸ್ಪೃಶ್ಯತೆನ ಚಾಚೂ ತಪ್ಪದೆ ಫಾಲೋ ಮಾಡಿದ್ರೆ ಎಲ್ಯಾರ ತಿರುಗಬಹುದು” ಎಂದ ವಾಟಿಸ್ಸೆ.

“ನಿನ್ನಂಗೆ ಮಾತಾಡಿ ಕೃಷ್ಣೇಗೌಡರ ಕತೆ ಏನಾಗ್ಯದೆ ಗೊತ್ತೆ.”

“ಏನಾಗ್ಯದೊ ವಾಟ್ಯಾಪನ್.”

“ವಸ ಇನ್ನೋವಾ ತಗಂಡಿದ್ನಲ್ಲಾ. ಅದ ಯಲ್ಲಾರಿಗೂ ತೋರಿಸಿಗಂಡು ಮಾತಾಡಿಸಿಗಂಡು ತಿರುಗುತಿದ್ದ. ಮನ್ನೆ ದಿನ ಮಂಡ್ಯಾಕ್ಕೂ ಹೋಗಿ ಬಂದನಂತೆ. ಅಷ್ಟೆ. ಅವುನ ಸಮೇತ ಮನಿ ಮಕ್ಕಳಿಗ್ಯಲ್ಲ ಕರೊನ ಹಟಗಾಯಿಸಿಕೊಂಡದೆ.”

“ಛೇ ಪಾಪ ಅಂಗಾಗಬಾರದಿತ್ತು.”

“ನೀನಂಗಂತಿ ಕೇಳಿದೊರ್ಯಲ್ಲ ನಗ್ತರಲ್ಲ ಯಾಕೆ.”

“ಕ್ಯಟ್ಟ ಮನುಸರಿಗೆ ಕರೋನ ಬಂದ್ರೆ ಜನಗಳು ಕ್ಯಟ್ಟ ಕುಶಿಯಿಂದ ನಗ್ತರೆ ಕಣೊ. ಆದ್ರೆ ಇವತ್ತು ಅವುನಿಗೆ ಬಂದಿದ್ದು ನಾಳೆ ನಮಿಗೂ ಬಂದೇ ಬತ್ತದೆ ಅದ್ಕೆ ಆಡಿಕಬಾರ್ದು.”

“ನಿಜ ಕಂಡ್ಳ ನೀನೇಳಿದ್ದು. ನೋಡು ಮದ್ಲು ಮಂಡೇವುಕೆ ಬತ್ತು. ಆಮ್ಯಾಲೆ ನಾಗಮಂಗಲಕ್ಕೆ ಬತ್ತು. ಈಗ ಬಿಂಡಗನೂಲೆ ಹೆಂಗಸಿಗೆ ಬಂದದೆ. ಅಂಗೆ ಇಲ್ಲಿಗೂ ಬರಬಹುದು” ಎಂದಳು ಜುಮ್ಮಿ.

“ಬಂದೆ ಬತ್ತದೆ ಕಣಕ್ಕ. ಯಾಕೆ ಅಂದ್ರೇ ಬೆಂಗಳೂರಲ್ಲಿದ್ರಲ್ಲ ನಮ್ಮ ಜನ ಅವುರ್ಯಲ್ಲ ಮನೆ ಖಾಲಿ ಮಾಡಿಕಂಡು ಊರು ಕಡಿಕೆ ವಂಟವುರೆ. ಅವುರೇನು ಸುಮ್ಮಸುಮ್ಮನೆ ಬಂದರೇ, ಕರೋನ ಹಿಡಕಂಡೇ ಬತ್ತರೆ.”

“ಅಂಗಾದ್ರೆ ಗತಿಯೇನ್ಲ.”

“ಗತಿಯೇನು ಇಲ್ಲ ಕಣಕ್ಕ. ನಿನ್ನ ವಲ್ದತ್ರ ಒಂದು ಗುಡ್ಳಾಯ್ಕಂಡಿರು.”

“ಆಗ ಪ್ಳೇಗು ಕಾಲರ ಬಂದಾಗ ಅಂಗೇ ಮಾಡಿದ್ರಂತೆ.”

“ಈಗ್ಲು ಅಂಗೆ ಮಾಡನ ತಗೊ.”

“ಊರು ಬುಟ್ಟು ಹ್ವರಗೋಗಿ ಗುಡ್ಳಾಯ್ಕಂಡ್ರೆ ಪ್ಲೇಗು ಬತ್ತಿರಲಿಲ್ಲ. ಕರೋನ ಅಂಗಲ್ಲ ಯಾರಿಂದ ಬತ್ತದೆ ಅಂತ ಹೇಳಕ್ಕಾಗದಿಲ್ಲ” ಎಂದ ವಾಟಿಸ್ಸೆ.

“ಪಾಪ ಕೃಷ್ಣೇಗೌಡನಿಗೆ ಬಂದಿರದು ಅಂಗೆ ಅಲವೆ. ಯಾರಿಂದ ಬತ್ತು ಅಂತ್ಲೆ ಗೊತ್ತಿಲ್ಲ” ಎಂದ ಉಗ್ರಿ.

“ಥೇಟ್ ಡಿ.ಕೆ.ಶಿವಕುಮಾರನಂಗವುನೆ ಕಣೊ ಅವುನು. ನೋಡಿದ್ರೆ ಅವಳಿಜವಳಿ ಅನ್ನಬೇಕು.”

“ಅಂತೂ ಡಿ.ಕೆ.ಶಿವಕುಮಾರ್ ಕಡಿಗೂ ಅಧ್ಯಕ್ಷಾದ ಬುಡತ್ತಗೆ.”

“ಅವುನು ವಳ್ಯೊನೇನ್ಲ” ಎಂದಳು.

“ವಳ್ಳೆಯವನು ಅಂದ್ರೆ ಯಾವ ತರನಕ್ಕ. ನಿನ್ನ ಗಂಡನಂಗಿರಬೇಕೊ, ನನ್ನಂಗಿರಬೇಕೊ ಇಲ್ಲ ಈ ಉಗ್ರಿ ತರ ಇರಬೇಕೊ ಯಾವ ತರ ಅಂತ ಹೇಳು.”

“ಬಡವುರಾಧಾರಿನೆ ಅಂತ ಕೇಳಿದೆ ಕಂಡ್ಳ.”

“ಬಡವುರಾಧಾರಿ ಅನ್ನದ್ರಲ್ಲಿ ಯರಡು ಮಾತಿಲ್ಲ ಕಣಕ್ಕ. ದಿವ್ಸ ಮನೆ ಹತ್ರಕ್ಕೆ ನೂರಾರು ಜನ ಬತ್ತರೆ. ಯಾಕೆ ಅಂದ್ರೆ ಯಾರೊ ನಿನ್ನಂಥವುಳಿಗೆ ಹೆರಿಗೆಯಾಗಬೇಕಿರುತ್ತೆ ದುಡ್ಡಿರದಿಲ್ಲ ಡಿ.ಕೆ.ಶಿ ಹುಡಿಕ್ಕಂಡು ಬತ್ತಳೆ.”

“ನನ್ನಂಥೊಳು ಅಂತ ಯಾಕಂತಿಲ ಮುಂಡೆ ಮಗನೆ.”

“ಪರೆಗ್‍ಜಾಂಪಲ್ಲು ಕಣಕ್ಕ ಸಿಟ್ಟಾಗಬ್ಯಾಡ. ಇನ್ನ ಯಂತ್ಯಂಥ ಜನ ಬತ್ತರೆ ಗೊತ್ತ. ಕ್ಯಾನ್ಸರ್ ಆದೊರು, ಆರಟಾಪರೇಶನ್ ಜನ, ತಿಥಿ ಮಾಡೋರು, ನಾಮಕರಣ ಮಾಡೋರು, ತಿರುಪ್ತಿಗೋಗರು, ಅಯ್ಯಪ್ಪ ಸ್ವಾಮಿ ಹುಡಿಕ್ಕಂಡೋಗವು ಹಿಂಗೆ ಈ ಸಮಾಜದ ಸಕಲಿಸ್ಟು ರೋಗನು ಡಿ.ಕೆ.ಶಿ ಮನೆತಕ್ಕೆ ಬತ್ತದೆ.”

“ಅವಿರುಗ್ಯಲ್ಲ ದುಡ್ಡು ಕೊಟ್ಟನೆ.”

“ಯಾರ್ನು ಬರಿಕೈಲಿ ಕಳಸದಿಲ್ಲ ಕಣಕ್ಕ. ನಾನೇ ನಿಂತುಗಂಡು ನೋಡಿದಂಗೆ ಲಕ್ಷಾಂತೃಪಾಯಿ ದಾನ ಮಾಡ್ತನೆ.”

“ಬೇಕಾದಷ್ಟು ಸಂಪಾದ್ನೆ ಮಾಡ್ಯವುನೆ ಕೊಡ್ತನೆ.”

“ಮಿಸ್ಟರ್ ಉಗ್ರಿ, ಸಂಪಾದ್ನೆ ಮಾಡಿದೊರ್ಯಲ್ಲ ದಾನ ಮಾಡಿದ್ರೆ ನಮ್ಮಂಥೊರು ಹಿಂಗಿರತಿರಲಿಲ್ಲ ಕಣೊ. ಡಿ.ಕೆ.ಶಿಗಿಂತ ಅವುನ ತಮ್ಮನಂತೂ ದಾನಸೂರ ಕರ್ಣ ಕಣೊ.”

“ಕರ್ಣ ಏನು ದುಡದಿದ್ನೆ ದುರ್ಯೋಧನ ಮಾಡಿ ಮಡಗಿದ್ದ ಅವುನು ಕೊಟ್ಟ ಅಂಗೆ ಇವುನುವೆ.”

“ನೋಡೊ ಉಗ್ರಿ, ಸಣ್ಣಮಾತ ಯಲ್ಲಾರು ವಿಷಯದಲ್ಲೂ ಮಾತಾಡಕ್ಕೆ ಬರದಿಲ್ಲ. ಈ ಡಿ.ಕೆ. ಬ್ರದರ್ಸೆ ಡಿಪರೆಂಟು ಕಣೊ, ಏನಪ್ಪ ಅಂದ್ರೆ ಇವುರು ಆಸ್ತಿ ಮಾಡಿಕಂಡು ಪವರಿಗೆ ಬತ್ತಾ ಅವುರೆ, ಆದ್ರಿಂದ ಆಸ್ತಿ ಮಾಡೊ ಅಗತ್ಯ ಇಲ್ಲ. ಅದೇ ಎಡೂರಪ್ಪ ಮುಖ್ಯಮಂತ್ರಿಯಾದೇಟಿಗೆ ಬರೀ ಆಸ್ತಿ ಮಾಡದ್ನೆ ಆಡಳತ ಅನ್ನಕಂಡಿದ್ದ. ಡಿ.ಕೆ.ಶಿ ಆಸ್ತಿ ಅದರಿಂದ್ಲೆ ತೊಂದ್ರೆ ಅನುಭವಿಸಿದೋನು. ನಮ್ಮ ಜನಾಂಗದಲ್ಲಿ ಕುಮಾರಣ್ಣನಿಗಿಂತ ವಳ್ಳೆ ಪರಸನ್ನು.”

“ಅದ್ಯಂಗೇಳತಿಯೋ.”

“ಯಂಗೇ ಅಂದ್ರೆ ಡಿ.ಕೆ.ಶಿ ಕಾಂಗ್ರೆಸ್ಸಿಂದ ಬಂದವುನು. ಅವುನು ಕಾಂಗ್ರೆಸ್ಸಿಗ. ಆ ಪಾರ್ಟಿ ಸಿದ್ಧಾಂತ ಮಾತಾಡ್ತನೆ. ಅದೇ ಕುಮಾರಣ್ಣ ಯಾವ ಪಾರ್ಟಿ ಅಂತ್ಲೂ ಹೇಳಕ್ಕ ಬರದಿಲ್ಲ. ಒಟ್ಟಿನಲ್ಲಿ ನಂಬಿಕೆಗೆ ಯೋಗ್ಯನಲ್ಲ ಅಂತ ಅವನಿಂದ ದೂರ ಹೋದೊರು ಹೇಳ್ತ ಅವುರೆ. ಆದ್ರೆ ಡಿ.ಕೆ.ಶಿ ಅಂಗಲ್ಲ ಏನಪ್ಪ ಅಂದ್ರೆ ಒಂದಿಷ್ಟು ರೌಡಿ ಇಮೇಜದೆ.”

“ಸದ್ದಿಕೆ ಅದುಬೇಕು ಕಣೊ. ಈ ಬಿಜೆಪಿಗಳ ಹೆದರಸಬೇಕಾದ್ರೆ ರೌಡಿ ಗಂಟ್ಳೇಬೇಕು ಅದ್ಕೆ ಹೆದರದವುರು.”

“ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು.”

“ಅವುನ್ನೊಂದು ಸತಿ ತೋರುಸ್ಲ.”

“ಹೋಗನಿರಕ್ಕ ಮನೆತಕ್ಕೆ ಹೋಗನ. ಯಸ್ಸೆಂ ಕೃಷ್ಣನ ಕಡಿಯೋರು ಅಂದ್ರೆ ಊಟ ಮಾಡ್ಸಿ ಕಳುಸ್ತನೆ.”

“ !?

  • ಬಿ.ಚಂದ್ರೇಗೌಡ

ಇದನ್ನು ಓದಿ: ಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...