Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ರಾಜಸ್ಥಾನದ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಫೋಟಗೊಂಡಿದ್ದು, ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂಬ ಸಂದೇಶವು ವೈರಲಾಗಿದೆ.

- Advertisement -
- Advertisement -

’ರಾಜಸ್ಥಾನದ ಪರಮಾಣು ಸ್ಥಾವರವಿರುವ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಪೋಟವಾಗಿ ಅಪಘಾತ ಸಂಭವಿಸಿದೆ ಆದರೆ ಯಾವ ಮಾಧ್ಯಮಗಳು ಪ್ರಸಾರ ಮಾಡಿಲ್ಲ’ ಎಂಬ ಹೇಳಿಕೆಯಿರುವ ಮೂರು ಚಿತ್ರಗಳ ಫೋಟೋ ಕೊಲಾಜ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು? 

ಜುಲೈ 7 ರಂದು ‘ಹಕೂಕ್ ಟಿವಿ’ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿಯೂ ಇದೇ ಚಿತ್ರಗಳನ್ನು ಬಳಸಲಾಗಿತ್ತು.

“ಪೋಖ್ರಾನ್ ಪರಮಾಣು ಸ್ಥಾವರದಲ್ಲಿ ಮೂರು ಬಾಂಬ್‌ಗಳನ್ನು ತಯಾರಿಸಲಾಗುತ್ತಿದ್ದು, ಅದರಲ್ಲಿ ಒಂದು ಸ್ಫೋಟಗೊಂಡಿದೆ” ಎಂದು ವೀಡಿಯೊದಲ್ಲಿನ ನಿರೂಪಣೆಯು ಹೇಳುತ್ತದೆ. ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂದು ಅದು ತಿಳಿಸಿದೆ.

ಅಲ್ಲದೆ ಚಿತ್ರಗಳನ್ನು ಟ್ವಿಟ್ಟರ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲನೆಯದಾಗಿ ಪೋಖ್ರಾನ್‌ನಲ್ಲಿ ಯಾವುದೇ ಪರಮಾಣು ಸ್ಥಾವರವಿಲ್ಲ. ಭಾರತ ತನ್ನ ಪರಮಾಣು ಪರೀಕ್ಷೆಗಳನ್ನು ಮೊದಲು 1974 ರಲ್ಲಿ ಮತ್ತು ನಂತರ 1998 ರಲ್ಲಿ ಪೋಖ್ರಾನ್‌ನಲ್ಲಿ ನಡೆದೆ ಅಷ್ಟೆ.

1 ನೇ ಚಿತ್ರ:

ಚಿತ್ರಗಳನ್ನು Yandex ಎಂಬ ಸರ್ಚ್ ಎಂಜಿನ್ ಬಳಸಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಈ ಚಿತ್ರವು 2017 ರದ್ದಾಗಿದ್ದು ಹಾಗೂ ಕಾಬೂಲ್‌ನದ್ದಾಗಿದೆ ಎಂದು ತಿಳಿದು ಬರುತ್ತದೆ. ‘ದಿ ಲೋಕಲ್’ ಎಂಬ ಜರ್ಮನ್ ವೆಬ್‌ಸೈಟ್‌ನ ಲೇಖನದಲ್ಲಿ ಇದೇ ಚಿತ್ರವನ್ನು ಬಳಸಲಾಗಿದೆ.

2017 ರಲ್ಲಿ ಕಾಬೂಲ್ ನಗರವನ್ನು ಬೆಚ್ಚಿಬೀಳಿಸಿದ ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ ಎಂದು ಲೇಖನವು ಉಲ್ಲೇಖಿಸಿದೆ. ಇದೇ ಚಿತ್ರವನ್ನು ಬೇರೆ ವೆಬ್‌ಸೈಟ್‌ಗಳು ಕೂಡಾ ಬಳಸಿದ್ದು ಇದೇ ಸನ್ನಿವೇಶವನ್ನು ಹೇಳಿವೆ. ಚಿತ್ರವು ‘ರಫಿಯುಲ್ಲಾ ಕಲೀಮ್ / ಡಿಪಿಎ’ ಎಂಬವರ ಕೃಪೆ ಎಂದು ಕೂಡಾ ಉಲ್ಲೇಖಿಸಲಾಗಿದೆ.

2 ನೇ ಚಿತ್ರ:

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ 2015 ರಲ್ಲಿ ಬಿಬಿಸಿಯಲ್ಲಿ ಪ್ರಕಟವಾದ ಲೇಖನ ಕಾಣಸಿಗುತ್ತದೆ. ಲೇಖನದಲ್ಲಿ ಈ ಚಿತ್ರವಿದ್ದು, ಅದನ್ನು ಕೆಂಟ್‌ ನ ಕ್ಲಿಫ್‌ ಎಂಬಲ್ಲಿ ಬ್ರಿಟಿಷ್ ಸೈನ್ಯವು ನಾಶಪಡಿಸಿದ ಬಾಂಬ್ ಎಂದು ಉಲ್ಲೇಖಿಸಿದೆ.

ನಾವು ಚಿತ್ರದ ಬಗ್ಗೆ ಮತ್ತಷ್ಟು ಹುಡುಕಿದಾಗ, ದಿ ಗಾರ್ಡಿಯನ್‌ನಲ್ಲಿ ಕೂಡಾ ಈ ಚಿತ್ರಕ್ಕೆ ‘ರಿಚರ್ಡ್ ವ್ಯಾಟ್ / ಪಿಎ’ ಎಂಬವರಿಗೆ ಕೃಪೆ ಕೊಟ್ಟು ಬ್ರಟಿಷ್‌ ಸೈನ್ಯ ಬಾಂಬನ್ನು ನಾಶಪಡಿಸಿತು ಎಂದು ಉಲ್ಲೇಖಿಸಿದೆ. ಅಲ್ಲದೆ ಈ ಚಿತ್ರವನ್ನು ಕ್ಲಿಕ್ಕಿಸಿದ ಫೋಟೋಗ್ರಾಫರ್‌ ರಿಚರ್ಡ್ ವ್ಯಾಟ್‌ ಅವರ ಟ್ವಿಟ್ಟರ್‌ ಅಕೌಂಟ್‌ನಲ್ಲಿಯೂ ಕೂಡಾ ಈ ಚಿತ್ರವನ್ನು ಕಾಣಬಹುದಾಗಿದೆ.

3 ನೇ ಚಿತ್ರ:

ಈ ಚಿತ್ರವನ್ನು ಕೂಡಾ ರಿವರ್ಸ್ ಸರ್ಚ್ ಮಾಡಿದಾಗ ’ಟೋಲೋ ನ್ಯೂಸ್‌’ನ ಮುಖ್ಯಸ್ಥರ ಟ್ವಿಟರ್ ಹ್ಯಾಂಡಲ್‌ನಿಂದ ಬಂದ ಚಿತ್ರವಾಗಿದೆ. ಇದು ಅಫ್ಘಾನಿಸ್ತಾನ ಮೂಲದ ಸುದ್ದಿ ಚಾನೆಲ್ ಆಗಿದ್ದು, ಈ ಚಿತ್ರಗಳು 2017 ರ ಕಾಬೂಲ್ ದಾಳಿಯ ಚಿತ್ರವಾಗಿದೆ ಟ್ವೀಟ್ ಉಲ್ಲೇಖಿಸಿದೆ.

ಈ ಚಿತ್ರವನ್ನು ಅವರ ಖಾತೆಯಲ್ಲಿ ಪರಿಶೀಲಿಸಲು ಸಾಧ್ಯವಾಗದಿದ್ದರು ಆದರೆ ಅದು 2017ರ ಚಿತ್ರವೆಂದು ಹೇಳಬಹುದು.

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿರುವಂತೆ ಚಿತ್ರವೂ ಪೋಖ್ರಾನ್‌ ಪ್ರದೇಶದ್ದಲ್ಲ ಎಂದು ಸಾಬೀತಾಗುತ್ತದೆ.


ಓದಿ: ಈ ಫೋಟೊಗಳು ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್‌ನವಲ್ಲ.. ಬದಲಿಗೆ ಬಿಹಾರದವು‌‌; ಫ್ಯಾಕ್ಟ್‌‌ಚೆಕ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...