Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ರಾಜಸ್ಥಾನದ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಫೋಟಗೊಂಡಿದ್ದು, ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂಬ ಸಂದೇಶವು ವೈರಲಾಗಿದೆ.

- Advertisement -
- Advertisement -

’ರಾಜಸ್ಥಾನದ ಪರಮಾಣು ಸ್ಥಾವರವಿರುವ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಪೋಟವಾಗಿ ಅಪಘಾತ ಸಂಭವಿಸಿದೆ ಆದರೆ ಯಾವ ಮಾಧ್ಯಮಗಳು ಪ್ರಸಾರ ಮಾಡಿಲ್ಲ’ ಎಂಬ ಹೇಳಿಕೆಯಿರುವ ಮೂರು ಚಿತ್ರಗಳ ಫೋಟೋ ಕೊಲಾಜ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು? 

ಜುಲೈ 7 ರಂದು ‘ಹಕೂಕ್ ಟಿವಿ’ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿಯೂ ಇದೇ ಚಿತ್ರಗಳನ್ನು ಬಳಸಲಾಗಿತ್ತು.

“ಪೋಖ್ರಾನ್ ಪರಮಾಣು ಸ್ಥಾವರದಲ್ಲಿ ಮೂರು ಬಾಂಬ್‌ಗಳನ್ನು ತಯಾರಿಸಲಾಗುತ್ತಿದ್ದು, ಅದರಲ್ಲಿ ಒಂದು ಸ್ಫೋಟಗೊಂಡಿದೆ” ಎಂದು ವೀಡಿಯೊದಲ್ಲಿನ ನಿರೂಪಣೆಯು ಹೇಳುತ್ತದೆ. ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂದು ಅದು ತಿಳಿಸಿದೆ.

ಅಲ್ಲದೆ ಚಿತ್ರಗಳನ್ನು ಟ್ವಿಟ್ಟರ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲನೆಯದಾಗಿ ಪೋಖ್ರಾನ್‌ನಲ್ಲಿ ಯಾವುದೇ ಪರಮಾಣು ಸ್ಥಾವರವಿಲ್ಲ. ಭಾರತ ತನ್ನ ಪರಮಾಣು ಪರೀಕ್ಷೆಗಳನ್ನು ಮೊದಲು 1974 ರಲ್ಲಿ ಮತ್ತು ನಂತರ 1998 ರಲ್ಲಿ ಪೋಖ್ರಾನ್‌ನಲ್ಲಿ ನಡೆದೆ ಅಷ್ಟೆ.

1 ನೇ ಚಿತ್ರ:

ಚಿತ್ರಗಳನ್ನು Yandex ಎಂಬ ಸರ್ಚ್ ಎಂಜಿನ್ ಬಳಸಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಈ ಚಿತ್ರವು 2017 ರದ್ದಾಗಿದ್ದು ಹಾಗೂ ಕಾಬೂಲ್‌ನದ್ದಾಗಿದೆ ಎಂದು ತಿಳಿದು ಬರುತ್ತದೆ. ‘ದಿ ಲೋಕಲ್’ ಎಂಬ ಜರ್ಮನ್ ವೆಬ್‌ಸೈಟ್‌ನ ಲೇಖನದಲ್ಲಿ ಇದೇ ಚಿತ್ರವನ್ನು ಬಳಸಲಾಗಿದೆ.

2017 ರಲ್ಲಿ ಕಾಬೂಲ್ ನಗರವನ್ನು ಬೆಚ್ಚಿಬೀಳಿಸಿದ ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ ಎಂದು ಲೇಖನವು ಉಲ್ಲೇಖಿಸಿದೆ. ಇದೇ ಚಿತ್ರವನ್ನು ಬೇರೆ ವೆಬ್‌ಸೈಟ್‌ಗಳು ಕೂಡಾ ಬಳಸಿದ್ದು ಇದೇ ಸನ್ನಿವೇಶವನ್ನು ಹೇಳಿವೆ. ಚಿತ್ರವು ‘ರಫಿಯುಲ್ಲಾ ಕಲೀಮ್ / ಡಿಪಿಎ’ ಎಂಬವರ ಕೃಪೆ ಎಂದು ಕೂಡಾ ಉಲ್ಲೇಖಿಸಲಾಗಿದೆ.

2 ನೇ ಚಿತ್ರ:

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ 2015 ರಲ್ಲಿ ಬಿಬಿಸಿಯಲ್ಲಿ ಪ್ರಕಟವಾದ ಲೇಖನ ಕಾಣಸಿಗುತ್ತದೆ. ಲೇಖನದಲ್ಲಿ ಈ ಚಿತ್ರವಿದ್ದು, ಅದನ್ನು ಕೆಂಟ್‌ ನ ಕ್ಲಿಫ್‌ ಎಂಬಲ್ಲಿ ಬ್ರಿಟಿಷ್ ಸೈನ್ಯವು ನಾಶಪಡಿಸಿದ ಬಾಂಬ್ ಎಂದು ಉಲ್ಲೇಖಿಸಿದೆ.

ನಾವು ಚಿತ್ರದ ಬಗ್ಗೆ ಮತ್ತಷ್ಟು ಹುಡುಕಿದಾಗ, ದಿ ಗಾರ್ಡಿಯನ್‌ನಲ್ಲಿ ಕೂಡಾ ಈ ಚಿತ್ರಕ್ಕೆ ‘ರಿಚರ್ಡ್ ವ್ಯಾಟ್ / ಪಿಎ’ ಎಂಬವರಿಗೆ ಕೃಪೆ ಕೊಟ್ಟು ಬ್ರಟಿಷ್‌ ಸೈನ್ಯ ಬಾಂಬನ್ನು ನಾಶಪಡಿಸಿತು ಎಂದು ಉಲ್ಲೇಖಿಸಿದೆ. ಅಲ್ಲದೆ ಈ ಚಿತ್ರವನ್ನು ಕ್ಲಿಕ್ಕಿಸಿದ ಫೋಟೋಗ್ರಾಫರ್‌ ರಿಚರ್ಡ್ ವ್ಯಾಟ್‌ ಅವರ ಟ್ವಿಟ್ಟರ್‌ ಅಕೌಂಟ್‌ನಲ್ಲಿಯೂ ಕೂಡಾ ಈ ಚಿತ್ರವನ್ನು ಕಾಣಬಹುದಾಗಿದೆ.

3 ನೇ ಚಿತ್ರ:

ಈ ಚಿತ್ರವನ್ನು ಕೂಡಾ ರಿವರ್ಸ್ ಸರ್ಚ್ ಮಾಡಿದಾಗ ’ಟೋಲೋ ನ್ಯೂಸ್‌’ನ ಮುಖ್ಯಸ್ಥರ ಟ್ವಿಟರ್ ಹ್ಯಾಂಡಲ್‌ನಿಂದ ಬಂದ ಚಿತ್ರವಾಗಿದೆ. ಇದು ಅಫ್ಘಾನಿಸ್ತಾನ ಮೂಲದ ಸುದ್ದಿ ಚಾನೆಲ್ ಆಗಿದ್ದು, ಈ ಚಿತ್ರಗಳು 2017 ರ ಕಾಬೂಲ್ ದಾಳಿಯ ಚಿತ್ರವಾಗಿದೆ ಟ್ವೀಟ್ ಉಲ್ಲೇಖಿಸಿದೆ.

ಈ ಚಿತ್ರವನ್ನು ಅವರ ಖಾತೆಯಲ್ಲಿ ಪರಿಶೀಲಿಸಲು ಸಾಧ್ಯವಾಗದಿದ್ದರು ಆದರೆ ಅದು 2017ರ ಚಿತ್ರವೆಂದು ಹೇಳಬಹುದು.

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿರುವಂತೆ ಚಿತ್ರವೂ ಪೋಖ್ರಾನ್‌ ಪ್ರದೇಶದ್ದಲ್ಲ ಎಂದು ಸಾಬೀತಾಗುತ್ತದೆ.


ಓದಿ: ಈ ಫೋಟೊಗಳು ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್‌ನವಲ್ಲ.. ಬದಲಿಗೆ ಬಿಹಾರದವು‌‌; ಫ್ಯಾಕ್ಟ್‌‌ಚೆಕ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...