Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ರಾಜಸ್ಥಾನದ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಫೋಟಗೊಂಡಿದ್ದು, ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂಬ ಸಂದೇಶವು ವೈರಲಾಗಿದೆ.

- Advertisement -
- Advertisement -

’ರಾಜಸ್ಥಾನದ ಪರಮಾಣು ಸ್ಥಾವರವಿರುವ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಪೋಟವಾಗಿ ಅಪಘಾತ ಸಂಭವಿಸಿದೆ ಆದರೆ ಯಾವ ಮಾಧ್ಯಮಗಳು ಪ್ರಸಾರ ಮಾಡಿಲ್ಲ’ ಎಂಬ ಹೇಳಿಕೆಯಿರುವ ಮೂರು ಚಿತ್ರಗಳ ಫೋಟೋ ಕೊಲಾಜ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು? 

ಜುಲೈ 7 ರಂದು ‘ಹಕೂಕ್ ಟಿವಿ’ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿಯೂ ಇದೇ ಚಿತ್ರಗಳನ್ನು ಬಳಸಲಾಗಿತ್ತು.

“ಪೋಖ್ರಾನ್ ಪರಮಾಣು ಸ್ಥಾವರದಲ್ಲಿ ಮೂರು ಬಾಂಬ್‌ಗಳನ್ನು ತಯಾರಿಸಲಾಗುತ್ತಿದ್ದು, ಅದರಲ್ಲಿ ಒಂದು ಸ್ಫೋಟಗೊಂಡಿದೆ” ಎಂದು ವೀಡಿಯೊದಲ್ಲಿನ ನಿರೂಪಣೆಯು ಹೇಳುತ್ತದೆ. ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂದು ಅದು ತಿಳಿಸಿದೆ.

ಅಲ್ಲದೆ ಚಿತ್ರಗಳನ್ನು ಟ್ವಿಟ್ಟರ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲನೆಯದಾಗಿ ಪೋಖ್ರಾನ್‌ನಲ್ಲಿ ಯಾವುದೇ ಪರಮಾಣು ಸ್ಥಾವರವಿಲ್ಲ. ಭಾರತ ತನ್ನ ಪರಮಾಣು ಪರೀಕ್ಷೆಗಳನ್ನು ಮೊದಲು 1974 ರಲ್ಲಿ ಮತ್ತು ನಂತರ 1998 ರಲ್ಲಿ ಪೋಖ್ರಾನ್‌ನಲ್ಲಿ ನಡೆದೆ ಅಷ್ಟೆ.

1 ನೇ ಚಿತ್ರ:

ಚಿತ್ರಗಳನ್ನು Yandex ಎಂಬ ಸರ್ಚ್ ಎಂಜಿನ್ ಬಳಸಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಈ ಚಿತ್ರವು 2017 ರದ್ದಾಗಿದ್ದು ಹಾಗೂ ಕಾಬೂಲ್‌ನದ್ದಾಗಿದೆ ಎಂದು ತಿಳಿದು ಬರುತ್ತದೆ. ‘ದಿ ಲೋಕಲ್’ ಎಂಬ ಜರ್ಮನ್ ವೆಬ್‌ಸೈಟ್‌ನ ಲೇಖನದಲ್ಲಿ ಇದೇ ಚಿತ್ರವನ್ನು ಬಳಸಲಾಗಿದೆ.

2017 ರಲ್ಲಿ ಕಾಬೂಲ್ ನಗರವನ್ನು ಬೆಚ್ಚಿಬೀಳಿಸಿದ ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ ಎಂದು ಲೇಖನವು ಉಲ್ಲೇಖಿಸಿದೆ. ಇದೇ ಚಿತ್ರವನ್ನು ಬೇರೆ ವೆಬ್‌ಸೈಟ್‌ಗಳು ಕೂಡಾ ಬಳಸಿದ್ದು ಇದೇ ಸನ್ನಿವೇಶವನ್ನು ಹೇಳಿವೆ. ಚಿತ್ರವು ‘ರಫಿಯುಲ್ಲಾ ಕಲೀಮ್ / ಡಿಪಿಎ’ ಎಂಬವರ ಕೃಪೆ ಎಂದು ಕೂಡಾ ಉಲ್ಲೇಖಿಸಲಾಗಿದೆ.

2 ನೇ ಚಿತ್ರ:

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ 2015 ರಲ್ಲಿ ಬಿಬಿಸಿಯಲ್ಲಿ ಪ್ರಕಟವಾದ ಲೇಖನ ಕಾಣಸಿಗುತ್ತದೆ. ಲೇಖನದಲ್ಲಿ ಈ ಚಿತ್ರವಿದ್ದು, ಅದನ್ನು ಕೆಂಟ್‌ ನ ಕ್ಲಿಫ್‌ ಎಂಬಲ್ಲಿ ಬ್ರಿಟಿಷ್ ಸೈನ್ಯವು ನಾಶಪಡಿಸಿದ ಬಾಂಬ್ ಎಂದು ಉಲ್ಲೇಖಿಸಿದೆ.

ನಾವು ಚಿತ್ರದ ಬಗ್ಗೆ ಮತ್ತಷ್ಟು ಹುಡುಕಿದಾಗ, ದಿ ಗಾರ್ಡಿಯನ್‌ನಲ್ಲಿ ಕೂಡಾ ಈ ಚಿತ್ರಕ್ಕೆ ‘ರಿಚರ್ಡ್ ವ್ಯಾಟ್ / ಪಿಎ’ ಎಂಬವರಿಗೆ ಕೃಪೆ ಕೊಟ್ಟು ಬ್ರಟಿಷ್‌ ಸೈನ್ಯ ಬಾಂಬನ್ನು ನಾಶಪಡಿಸಿತು ಎಂದು ಉಲ್ಲೇಖಿಸಿದೆ. ಅಲ್ಲದೆ ಈ ಚಿತ್ರವನ್ನು ಕ್ಲಿಕ್ಕಿಸಿದ ಫೋಟೋಗ್ರಾಫರ್‌ ರಿಚರ್ಡ್ ವ್ಯಾಟ್‌ ಅವರ ಟ್ವಿಟ್ಟರ್‌ ಅಕೌಂಟ್‌ನಲ್ಲಿಯೂ ಕೂಡಾ ಈ ಚಿತ್ರವನ್ನು ಕಾಣಬಹುದಾಗಿದೆ.

3 ನೇ ಚಿತ್ರ:

ಈ ಚಿತ್ರವನ್ನು ಕೂಡಾ ರಿವರ್ಸ್ ಸರ್ಚ್ ಮಾಡಿದಾಗ ’ಟೋಲೋ ನ್ಯೂಸ್‌’ನ ಮುಖ್ಯಸ್ಥರ ಟ್ವಿಟರ್ ಹ್ಯಾಂಡಲ್‌ನಿಂದ ಬಂದ ಚಿತ್ರವಾಗಿದೆ. ಇದು ಅಫ್ಘಾನಿಸ್ತಾನ ಮೂಲದ ಸುದ್ದಿ ಚಾನೆಲ್ ಆಗಿದ್ದು, ಈ ಚಿತ್ರಗಳು 2017 ರ ಕಾಬೂಲ್ ದಾಳಿಯ ಚಿತ್ರವಾಗಿದೆ ಟ್ವೀಟ್ ಉಲ್ಲೇಖಿಸಿದೆ.

ಈ ಚಿತ್ರವನ್ನು ಅವರ ಖಾತೆಯಲ್ಲಿ ಪರಿಶೀಲಿಸಲು ಸಾಧ್ಯವಾಗದಿದ್ದರು ಆದರೆ ಅದು 2017ರ ಚಿತ್ರವೆಂದು ಹೇಳಬಹುದು.

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿರುವಂತೆ ಚಿತ್ರವೂ ಪೋಖ್ರಾನ್‌ ಪ್ರದೇಶದ್ದಲ್ಲ ಎಂದು ಸಾಬೀತಾಗುತ್ತದೆ.


ಓದಿ: ಈ ಫೋಟೊಗಳು ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್‌ನವಲ್ಲ.. ಬದಲಿಗೆ ಬಿಹಾರದವು‌‌; ಫ್ಯಾಕ್ಟ್‌‌ಚೆಕ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...