Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ರಾಜಸ್ಥಾನದ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಫೋಟಗೊಂಡಿದ್ದು, ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂಬ ಸಂದೇಶವು ವೈರಲಾಗಿದೆ.

- Advertisement -
- Advertisement -

’ರಾಜಸ್ಥಾನದ ಪರಮಾಣು ಸ್ಥಾವರವಿರುವ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಪೋಟವಾಗಿ ಅಪಘಾತ ಸಂಭವಿಸಿದೆ ಆದರೆ ಯಾವ ಮಾಧ್ಯಮಗಳು ಪ್ರಸಾರ ಮಾಡಿಲ್ಲ’ ಎಂಬ ಹೇಳಿಕೆಯಿರುವ ಮೂರು ಚಿತ್ರಗಳ ಫೋಟೋ ಕೊಲಾಜ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು? 

ಜುಲೈ 7 ರಂದು ‘ಹಕೂಕ್ ಟಿವಿ’ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿಯೂ ಇದೇ ಚಿತ್ರಗಳನ್ನು ಬಳಸಲಾಗಿತ್ತು.

“ಪೋಖ್ರಾನ್ ಪರಮಾಣು ಸ್ಥಾವರದಲ್ಲಿ ಮೂರು ಬಾಂಬ್‌ಗಳನ್ನು ತಯಾರಿಸಲಾಗುತ್ತಿದ್ದು, ಅದರಲ್ಲಿ ಒಂದು ಸ್ಫೋಟಗೊಂಡಿದೆ” ಎಂದು ವೀಡಿಯೊದಲ್ಲಿನ ನಿರೂಪಣೆಯು ಹೇಳುತ್ತದೆ. ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂದು ಅದು ತಿಳಿಸಿದೆ.

ಅಲ್ಲದೆ ಚಿತ್ರಗಳನ್ನು ಟ್ವಿಟ್ಟರ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲನೆಯದಾಗಿ ಪೋಖ್ರಾನ್‌ನಲ್ಲಿ ಯಾವುದೇ ಪರಮಾಣು ಸ್ಥಾವರವಿಲ್ಲ. ಭಾರತ ತನ್ನ ಪರಮಾಣು ಪರೀಕ್ಷೆಗಳನ್ನು ಮೊದಲು 1974 ರಲ್ಲಿ ಮತ್ತು ನಂತರ 1998 ರಲ್ಲಿ ಪೋಖ್ರಾನ್‌ನಲ್ಲಿ ನಡೆದೆ ಅಷ್ಟೆ.

1 ನೇ ಚಿತ್ರ:

ಚಿತ್ರಗಳನ್ನು Yandex ಎಂಬ ಸರ್ಚ್ ಎಂಜಿನ್ ಬಳಸಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಈ ಚಿತ್ರವು 2017 ರದ್ದಾಗಿದ್ದು ಹಾಗೂ ಕಾಬೂಲ್‌ನದ್ದಾಗಿದೆ ಎಂದು ತಿಳಿದು ಬರುತ್ತದೆ. ‘ದಿ ಲೋಕಲ್’ ಎಂಬ ಜರ್ಮನ್ ವೆಬ್‌ಸೈಟ್‌ನ ಲೇಖನದಲ್ಲಿ ಇದೇ ಚಿತ್ರವನ್ನು ಬಳಸಲಾಗಿದೆ.

2017 ರಲ್ಲಿ ಕಾಬೂಲ್ ನಗರವನ್ನು ಬೆಚ್ಚಿಬೀಳಿಸಿದ ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ ಎಂದು ಲೇಖನವು ಉಲ್ಲೇಖಿಸಿದೆ. ಇದೇ ಚಿತ್ರವನ್ನು ಬೇರೆ ವೆಬ್‌ಸೈಟ್‌ಗಳು ಕೂಡಾ ಬಳಸಿದ್ದು ಇದೇ ಸನ್ನಿವೇಶವನ್ನು ಹೇಳಿವೆ. ಚಿತ್ರವು ‘ರಫಿಯುಲ್ಲಾ ಕಲೀಮ್ / ಡಿಪಿಎ’ ಎಂಬವರ ಕೃಪೆ ಎಂದು ಕೂಡಾ ಉಲ್ಲೇಖಿಸಲಾಗಿದೆ.

2 ನೇ ಚಿತ್ರ:

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ 2015 ರಲ್ಲಿ ಬಿಬಿಸಿಯಲ್ಲಿ ಪ್ರಕಟವಾದ ಲೇಖನ ಕಾಣಸಿಗುತ್ತದೆ. ಲೇಖನದಲ್ಲಿ ಈ ಚಿತ್ರವಿದ್ದು, ಅದನ್ನು ಕೆಂಟ್‌ ನ ಕ್ಲಿಫ್‌ ಎಂಬಲ್ಲಿ ಬ್ರಿಟಿಷ್ ಸೈನ್ಯವು ನಾಶಪಡಿಸಿದ ಬಾಂಬ್ ಎಂದು ಉಲ್ಲೇಖಿಸಿದೆ.

ನಾವು ಚಿತ್ರದ ಬಗ್ಗೆ ಮತ್ತಷ್ಟು ಹುಡುಕಿದಾಗ, ದಿ ಗಾರ್ಡಿಯನ್‌ನಲ್ಲಿ ಕೂಡಾ ಈ ಚಿತ್ರಕ್ಕೆ ‘ರಿಚರ್ಡ್ ವ್ಯಾಟ್ / ಪಿಎ’ ಎಂಬವರಿಗೆ ಕೃಪೆ ಕೊಟ್ಟು ಬ್ರಟಿಷ್‌ ಸೈನ್ಯ ಬಾಂಬನ್ನು ನಾಶಪಡಿಸಿತು ಎಂದು ಉಲ್ಲೇಖಿಸಿದೆ. ಅಲ್ಲದೆ ಈ ಚಿತ್ರವನ್ನು ಕ್ಲಿಕ್ಕಿಸಿದ ಫೋಟೋಗ್ರಾಫರ್‌ ರಿಚರ್ಡ್ ವ್ಯಾಟ್‌ ಅವರ ಟ್ವಿಟ್ಟರ್‌ ಅಕೌಂಟ್‌ನಲ್ಲಿಯೂ ಕೂಡಾ ಈ ಚಿತ್ರವನ್ನು ಕಾಣಬಹುದಾಗಿದೆ.

3 ನೇ ಚಿತ್ರ:

ಈ ಚಿತ್ರವನ್ನು ಕೂಡಾ ರಿವರ್ಸ್ ಸರ್ಚ್ ಮಾಡಿದಾಗ ’ಟೋಲೋ ನ್ಯೂಸ್‌’ನ ಮುಖ್ಯಸ್ಥರ ಟ್ವಿಟರ್ ಹ್ಯಾಂಡಲ್‌ನಿಂದ ಬಂದ ಚಿತ್ರವಾಗಿದೆ. ಇದು ಅಫ್ಘಾನಿಸ್ತಾನ ಮೂಲದ ಸುದ್ದಿ ಚಾನೆಲ್ ಆಗಿದ್ದು, ಈ ಚಿತ್ರಗಳು 2017 ರ ಕಾಬೂಲ್ ದಾಳಿಯ ಚಿತ್ರವಾಗಿದೆ ಟ್ವೀಟ್ ಉಲ್ಲೇಖಿಸಿದೆ.

ಈ ಚಿತ್ರವನ್ನು ಅವರ ಖಾತೆಯಲ್ಲಿ ಪರಿಶೀಲಿಸಲು ಸಾಧ್ಯವಾಗದಿದ್ದರು ಆದರೆ ಅದು 2017ರ ಚಿತ್ರವೆಂದು ಹೇಳಬಹುದು.

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿರುವಂತೆ ಚಿತ್ರವೂ ಪೋಖ್ರಾನ್‌ ಪ್ರದೇಶದ್ದಲ್ಲ ಎಂದು ಸಾಬೀತಾಗುತ್ತದೆ.


ಓದಿ: ಈ ಫೋಟೊಗಳು ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್‌ನವಲ್ಲ.. ಬದಲಿಗೆ ಬಿಹಾರದವು‌‌; ಫ್ಯಾಕ್ಟ್‌‌ಚೆಕ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...