Homeಎಲೆಮರೆಜನಪದ ಹಾಡುಗಳನ್ನು ಯೂಟೂಬ್ ಮೂಲಕ ಕೋಟಿ ಜನರಿಗೆ ಮುಟ್ಟಿಸಿದ ರೇವಣಸಿದ್ಧ ದ್ಯಾಮಗೋಳ

ಜನಪದ ಹಾಡುಗಳನ್ನು ಯೂಟೂಬ್ ಮೂಲಕ ಕೋಟಿ ಜನರಿಗೆ ಮುಟ್ಟಿಸಿದ ರೇವಣಸಿದ್ಧ ದ್ಯಾಮಗೋಳ

ರೇವಣಸಿದ್ಧ ದ್ಯಾಮಗೋಳ ಒಂದು ಸಂಸ್ಥೆ, ವಿಶ್ವವಿದ್ಯಾಲಯ ಮಾಡಲಾರದಷ್ಟು ಕೆಲಸವನ್ನು ತಾವೊಬ್ಬರೆ ಮಾಡಿದ್ದಾರೆ. ಆಫ್‍ಲೈನಲ್ಲಿದ್ದ ನೂರಾರು ಅಜ್ಞಾತ ಜನಪದ ಕಲಾವಿದರನ್ನು ಆನ್‍ಲೈನ್ ಲೋಕಕ್ಕೆ ಪರಿಚಯಿಸಿದ್ದಾರೆ.

- Advertisement -
- Advertisement -

ಆ ಹುಡುಗ ಚಡಚಣದಲ್ಲಿ ಡಿಗ್ರಿ ಮುಗಿಸಿದ ನಂತರ ಬಿಜಾಪುರದ ಜಿಎಸ್‍ಎಸ್ ಕಾಲೇಜಿನಲ್ಲಿ ಬಿಎಡ್ ಪೂರೈಸಿ, ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ತನ್ನ ಊರಾದ ಮೈಲಾರ ಎಂಬ ಚಿಕ್ಕ ಹಳ್ಳಿಯಲ್ಲಿದ್ದ. ಮನೆಯಲ್ಲಿ ತಂದೆ ಕಾಕಾ ಹಾಡಿಕಿ ಸಂಘದಲ್ಲಿದ್ದರು. ಡೊಳ್ಳಿನ ಪದ ಹಾಡತಿದ್ದರು. ಯಾರೋ ಮೊಬೈಲದಾಗ ಡೊಳ್ಳಿನ ಹಾಡ ಹಚ್ಚಿಕೊಟ್ಟರು. ಅಪ್ಪ ಮಗನಿಗೆ ‘ರೇವಣಸಿದ್ಧ ಈ ಮೊಬೈಲದಾಗ ಹಾಡ ಹೆಂಗ್ ಬಿಡತಾರು ನೋಡಿಕೋ’ ಎಂದರು. ಮಗನ ಗ್ಯಾನ ಮೊಬೈಲಿನ ಮ್ಯಾಲೆ ಬಿತ್ತು. ಹೀಗೆ ನೋಡ್ತಾ ನೋಡ್ತಾ ಪದಾನ ಮೊಬೈಲದಾಗ ಹೆಂಗ್ ಬಿಡ್ತಾರ ಅಂತ ತಿಳಕಂಡು ಆಗಸ್ಟ್ 6, 2017 ರಲ್ಲಿ ಯೂಟೂಬ್ ಅಕೌಂಟ್ ಕ್ರಿಯೇಟ್ ಮಾಡಿ, ತಾನೂ ತನ್ನ ಅಪ್ಪ ಕಕ್ಕರು ಹಾಡೋ ಹಾಡ ಮೊಬೈಲಿನ್ಯಾಗ ಬಿಡಾಕತ್ತಿದ.

ಇದೀಗ ಈ ಹುಡುಗ ಹೀಗೆ ಯೂಟೂಬಿಗೆ 1260 ವೀಡಿಯೋಗಳನ್ನು ಅಪ್ಲೋಡ್ ಮಾಡಿದ್ದಾನೆ, 87 ಸಾವಿರದಷ್ಟು ಚಂದಾದಾರರಿದ್ದಾರೆ, ಮೂರು ಕೋಟಿ ನಲವತ್ನಾಲ್ಕು ಲಕ್ಷದಷ್ಟು ವೀಕ್ಷಣೆ ಇದೆ. ಇದೀಗ ಜನಪದ ಹಾಡಿಕೆ ಮದ್ಯೆ ಜಾಹೀರಾತುಗಳು ಕಾಣಿಸಿಕೊಳ್ಳುತ್ತವೆ. ಯೂಟೂಬಿನಿಂದ ಪ್ರತಿ ತಿಂಗಳು ಕನಿಷ್ಠ ಹತ್ತು ಸಾವಿರ ಈ ಹುಡುಗನ ಅಕೌಂಟಿಗೆ ಜಮೆ ಆಗುತ್ತದೆ. ಇಂದು ಉತ್ತರ ಕರ್ನಾಟಕ ಹೈದರಬಾದ ಕರ್ನಾಟಕದ ಮುನ್ನೂರಕ್ಕಿಂತ ಹೆಚ್ಚು ಜನಪದ ಕವಿಗಳ ಹಾಡಿಕೆಯ, ಡೊಳ್ಳಿನ ಹಾಡು, ಭಜನೆ, ಮೊಹರಂ ಪದ, ಗೀಗೀ, ಸೋಬಾನೆ, ಚೌಡಕಿ ಪದ ಹೀಗೆ ಹಲವು ಜನಪದ ಪ್ರಕಾರಗಳ ಹಾಡುಗಳನ್ನು `ರೇವಣಸಿದ್ಧ ದ್ಯಾಮಗೋಳ್’ ಎನ್ನುವ ಯೂಟೂಬ್ ಚಾನಲ್ಲಿನಲ್ಲಿ ನೀವು ಕೇಳಬಹುದು.

ರೇವಣಸಿದ್ಧ ದ್ಯಾಮಗೋಳಗೆ ಈಗ 28 ವರ್ಷದ ಹರೆಯ. ಪುಟಿಯುವ ಉತ್ಸಾಹ. ಇಂಥ ಕಡೆ ಜನಪದ ಹಾಡಿಕೆ ಇದೆ ಎಂದು ಗೊತ್ತಾದರೆ, ಬೈಕಿಗೆ ಪೆಟ್ರೋಲ್ ತುಂಬಿಸಿ, ಟ್ರೈಪ್ಯಾಡ್ ತಗೊಂಡು ಹೊರಡುತ್ತಾನೆ. ಹಾಡಿಕೆ ಇರೋ ಕಡೆ ಹೋಗಿ, ಹಾಡಿಕೆ ಮಾಡುವ ಕಲಾವಿದರಿಗೆ ಕಾಣಿಕೆ ಸಲ್ಲಿಸಿ ಆಶೀರ್ವಾದ ತಗೊಳ್ತಾನೆ. ನನ್ನ ಬಗ್ಗೆ ಏನೂ ಹೇಳಬ್ಯಾಡ್ರಿ ಅಂದ್ರೂನು, ಹಾಡಿಕೆ ಆರಂಭಿಸುವ ಮುನ್ನ ಕಲಾವಿದರು `ರೇವಣಸಿದ್ಧ ದ್ಯಾಮಗೋಳ ಅವರು ತಮ್ಮ ಚಾನಲದಿಂದ ನಮ್ಮನ್ನ ಬೆಳಸ್ಯಾರ, ಬಾಳ ಪ್ರಚಾರ ಮಾಡ್ಯಾರ, ನಮಿಗೆ ಅವರ ಕಡೆಲಿಂದ ಬಾಳ ದುಡಿಮಿ ಆಗ್ಯಾತಿ, ಹಂಗಾಗಿ ಅವ್ರು ಬ್ಯಾಡ ಅಂದ್ರೂ ನಾವು ಅವರನ್ನ ನೆನಿಯೋದು ನಮ್ಮ ಧರ್ಮ ಐತಿ. ರೇವಣಸಿದ್ಧಪ್ಪರೋನ್ನ ದೇವರು ಆಯುಶ್ಯಾರೋಗ್ಯ ಕೊಟ್ ಚೆನ್ನಾಗಿ ಇಟ್ಟಿರಲಿ’ ಅಂತ ಹಾರೈಸುತ್ತಾರೆ. ಈ ಹುಡುಗ ನಾಚಿಕೆಯ ಮುದ್ದೆಯಾಗಿ ತಾನು ರೆಕಾರ್ಡ್ ಮಾಡುವುದರಲ್ಲಿ ತಲ್ಲೀನನಾಗುತ್ತಾನೆ.

ನಾನು ಗಮನಿಸಿದಂತೆ ಆಡಿಯೋ-ವೀಡಿಯೋ ಸಂಸ್ಥೆಗಳನ್ನು ಹೊರತುಪಡಿಸಿ ಹೀಗೆ ವೈಯಕ್ತಿಕ ನೆಲೆಯಲ್ಲಿ ಚಾನಲ್ ರೂಪಿಸಿ ಜನಪದ ಹಾಡಿಕೆ ವೀಡಿಯೋಗಳನ್ನು ಕೆಲವರು ಅಪ್ಲೋಡ್ ಮಾಡಿದ್ದಾರೆ. ಆದರೆ ಆ ಎಲ್ಲಾ ಚಾನಲ್ಲುಗಳಲ್ಲಿಯೇ ಅತಿಹೆಚ್ಚು ಚಂದಾದಾರಿಕೆ ಮತ್ತು ವೀಕ್ಷೆಣೆಯನ್ನು ದ್ಯಾಮಗೋಳ್ ಚಾನಲ್ ಹೊಂದಿದೆ. ಹಿಂದೆ ಆಡಿಯೋ ರೆಕಾರ್ಡ್ ಆಗಿದ್ದ ಕ್ಯಾಸೆಟ್‍ಗಳನ್ನು ತೆಗೆದುಕೊಂಡು, ಆ ಕ್ಯಾಸೆಟ್‍ನಲ್ಲಿ ಹಾಡಿದ ಕವಿಗಳ ಒಪ್ಪಿಗೆ ಪಡೆದು, ಕ್ಯಾಸೆಟ್ ಹಾಡಿಕೆಯನ್ನು ಎಂಪಿ-3 ಆಡಿಯೋ ಫೈಲನ್ನಾಗಿ ವರ್ಗಾಯಿಸಿಕೊಂಡು ಆ ನಂತರ, ಎಂಪಿ-3 ಪೈಲನ್ನು ವೀಡಿಯೋವಾಗಿ ರೂಪಾಂತರಿಸಲಾಗುತ್ತದೆ. ಇಂತಹ ಸಂದರ್ಭದಲ್ಲಿ ಕೆಸೆಟ್ಟಿನ ಪೋಸ್ಟರ್ ಅನ್ನು ವೀಡಿಯೋದ ಕವರ್ ಫೋಟೋವಾಗಿ ಬಳಸಲಾಗುತ್ತದೆ. ಆಗ ಕ್ಯಾಸೆಟ್ ಮೇಲಿನ ಮುಖ ಹೊದಿಕೆ, ಅದೇ ಹಾಡುಗಳ ವೀಡಿಯೋ ಮುಖಹೊದಿಕೆಯಾಗಿ ಬದಲಾಗುತ್ತದೆ.

ಹೀಗೆ ರೂಪಾಂತರಿಸುವಾಗ ಹಾಡಿಕೆ ಮಾಡಿದ ಕವಿಯ ಫೋಟೋ ಮತ್ತು ವೀಡಿಯೋದಲ್ಲಿಯೇ ಕವಿಯ ಮೊಬೈಲ್ ನಂಬರನ್ನು ಕೊಡಲಾಗುತ್ತದೆ. ಯೂಟೂಬಲ್ಲಿ ಈ ಹಾಡು ಕೇಳಿದವರು ಇಷ್ಟವಾದರೆ ಹಾಡಿಕೆ ತಂಡಕ್ಕೆ ಪೋನಚ್ಚಿ ಮಾತಾಡಿಸಿ ತಮ್ಮ ಊರಿನ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಾರೆ. `ಮೊದಲಾದರೆ ಹೀಗೆ ರೆಕಾರ್ಡ್ ಮಾಡಬೇಕಾದರೆ ಜನಪದ ಕಲಾವಿದರನ್ನೇ ರೆಕಾರ್ಡಿಂಗ್ ಸ್ಟುಡಿಯೋಕ್ಕೆ ಕರೆಯಿಸಬೇಕಿತ್ತು. ಹೀಗೆ ರೆಕಾರ್ಡ್ ಮಾಡಲು ಸ್ವತಃ ಜನಪದ ಕಲಾವಿದರೆ ರೆಕಾರ್ಡಿಂಗ್ ಕಂಪನಿಗಳಿಗೆ ಹಣ ಕೊಟ್ಟದ್ದೂ ಇದೆ. ಈಗ ಹಾಗಿಲ್ಲ. ನಾವೇ ಹಾಡುವಲ್ಲಿಗೆ ಹೋಗಿ ರೆಕಾರ್ಡ್ ಮಾಡಿಕೊಂಡು ಬಂದು ಯೂಟೂಬಿಗೆ ಹಾಕುತ್ತೇವೆ. ನಾನು ಅಪ್ಲೋಡ್ ಮಾಡಿದ್ದಕ್ಕಿಂತ ಒಳ್ಳೆಯ ಹಾಡುಗಳು ಇದಾವ್ ಸರ್, ಅಂತವುಗಳನ್ನೆಲ್ಲಾ ಸಂಗ್ರಹಿಸಬೇಕು ಅಂತ ಆಸೆ ಇದೆ’ ಎಂದು ರೇವಣಸಿದ್ಧ ಹೇಳುತ್ತಾರೆ.

ಮುಂದುವರಿದು `ನಮ್ಮ ಚಾನಲ್ ಫೇಮಸ್ ಆಗಿರೋದ್ರಿಂದ, ನಮ್ಮ ಚಾನಲದಾಗ ಹಾಡು ಹಾಕಿದ್ರೆ ಹೆಚ್ಚು ಪ್ರಚಾರ ಆಗಿ ಹಾಡಿಕಿ ಆರ್ಡರ್ ಸಿಗುತ್ತೆ ಅಂತೇಳಿ ಕೆಲವೊಮ್ಮೆ ಜನಪದ ಕಲಾವಿದರೆ ನಮ್ಮ ಹಾಡ ಯೂಟೂಬದಾಗ ಬಿಡರಿ ಅಂತೇಳಿ ಹಣ ಕೊಡೋಕೆ ಬರ್ತಾರೆ. ಆದರೆ ನಾನು ಯಾವ ಕಲಾವಿದರಿಂದಲೂ ಹಣ ಪಡೆಯೋಲ್ಲ. ಯೂಟೂಬಿಂದ ನನ್ನ ಕೆಲಸಕ್ಕೆ ಒಂದಷ್ಟು ಹಣ ಕೊಡ್ತಾರೆ. ಹಾಗಾಗಿ ನಿಮ್ಮಿಂದ ಹಣ ನಾನು ತಗೊಳ್ಳಲ್ಲ ಎಂದು ಹೇಳುತ್ತೇನೆ’ ಎಂದು ತನ್ನ ವೃತ್ತಿನಿಷ್ಠೆಯನ್ನು ವಿವರಿಸುತ್ತಾರೆ.

ಅವರು ಅಪ್‌ಲೋಡ್ ಮಾಡಿರುವ ಒಂದು ಹಾಡು ಕೇಳಿ

ಕಲ್ಬುರ್ಗಿ, ಅಫಜಲಫುರ, ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಮಹರಾಷ್ಟ್ರದ ಸಾಂಗಲಿ, ಜತ್ತ ಮೊದಲಾದ ಕಡೆಗಳ ಸುಮಾರು ಇನ್ನೂರಕ್ಕಿಂತ ಹೆಚ್ಚು ಜನಪದ ಹಾಡಿಕೆ ತಂಡಗಳು ರೇವಣಸಿದ್ಧ ಅವರಿಗೆ ಸಂಪರ್ಕವಿದೆ. ಶಿವರಾಯ ಮಾಸ್ತರ್, ಕಲ್ಮೇಶ, ಕೇದಾರ ಮಾಸ್ತರ್, ಗುರುಲಿಂಗ ಮಾಸ್ತರ ಸಂಕನಾಳ, ನಾಗೂರು ಲಕ್ಷ್ಮಣ, ಸುಮಿತ್ರಾ ಮುಗಳಿಹಾಳ, ಸಾವಿತ್ರಿ ಕಿರಣಗಿ, ಆಕಾಶ ಮನಗುಳಿ ಮುಂತಾದ ಜನಪ್ರಿಯ ಜನಪದ ಕವಿಗಳು ಪದಕಟ್ಟುವ ಬಗ್ಗೆ, ಹಾಡಿಕೆ ಬಗ್ಗೆ ರೇವಣಸಿದ್ಧ ಅಭಿಮಾನ ಇಟ್ಟುಕೊಂಡಿದ್ದಾರೆ. ರೇವಣಸಿದ್ಧ ಸದ್ಯಕ್ಕೆ ತಂದೆ ರಾಮಚಂದ್ರ, ತಾಯಿ ಕಮಲಾಬಾಯಿ, ಕಾಕಾ ಲಕ್ಷ್ಮಣ, ಅಣ್ಣಂದಿರಾದ ಶಿವಣ್ಣ ಮತ್ತು ಸಂತೋಷ್, ಒಂದು ವರ್ಷದ ಹಿಂದೆ ಮದುವೆಯಾದ ಪತ್ನಿ ಮೋನಿಕಾರೊಂದಿಗೆ ನೆಲೆಸಿ, ಹೈಸ್ಕೂಲ್ ಮೇಷ್ಟ್ರಾಗುವ ಕನಸೊತ್ತು ಸಿಇಟಿಗೆ ಅಗತ್ಯವಾದ ಓದು ಓದಿಕೊಂಡಿದ್ದಾರೆ.

ರೇವಣಸಿದ್ಧ ದ್ಯಾಮಗೋಳ ಒಂದು ಸಂಸ್ಥೆ, ವಿಶ್ವವಿದ್ಯಾಲಯ ಮಾಡಲಾರದಷ್ಟು ಕೆಲಸವನ್ನು ತಾವೊಬ್ಬರೆ ಮಾಡಿದ್ದಾರೆ. ಆಫ್‍ಲೈನಲ್ಲಿದ್ದ ನೂರಾರು ಅಜ್ಞಾತ ಜನಪದ ಕಲಾವಿದರನ್ನು ಆನ್‍ಲೈನ್ ಲೋಕಕ್ಕೆ ಪರಿಚಯಿಸಿದ್ದಾರೆ. ಎಷ್ಟೋ ಜನಪದ ಕಲಾ ತಂಡಗಳಿಗೆ ತಮ್ಮ ಚಾನಲ್ ಮೂಲಕ ಹಾಡಿಕೆಯ ಅವಕಾಶಗಳನ್ನು ಕಲ್ಪಿಸಿಕೊಟ್ಟು ನೆರವಾಗಿದ್ದಾರೆ. ಜಾನಪದ ಸಂಶೋಧಕರಿಗೆ/ಅಧ್ಯಯನಕಾರರಿಗೆ ಆಕರ ಒದಗಿಸಿದ್ದಾರೆ. ನನ್ನ ಪೋಸ್ಟ್ ಡಾಕ್ಟರಲ್ ಸಂಶೋಧನೆಯ ಭಾಗವಾಗಿ ಜನಪದ ಹಾಡಿಕೆ ಕೇಳುವಾಗಲೆ ನನಗೂ ರೇವಣಸಿದ್ಧ ಅವರು ಪರಿಚಯವಾದದ್ದು. ರೇವಣಸಿದ್ಧ ಅವರ ನಿರಂತರ ಶ್ರಮದ ಫಲವಾಗಿ ಯೂಟೂಬಿನಿಂದ ಒಂದಷ್ಟು ಹಣ ಸಂದಾಯವಾದರೂ, ಅದು ಅವರ ಶ್ರಮಕ್ಕೆ ಕಡಿಮೆಯೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯವಾಗಲಿ, ಕರ್ನಾಟಕದ ಜಾನಪದ ಪರಿಷತ್ತಾಗಲಿ, ಜಾನಪದ ಅಕಾಡೆಮಿಯಾಗಲಿ ಇಂಥವರನ್ನು ಗುರುತಿಸಬೇಕಿದೆ.

ಫೇಸ್ ಬುಕ್ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ

ರೇವಣಸಿದ್ಧ ದ್ಯಾಮಗೊಳ ಅವರ ಯೂಟೂಬ್ ಚಾನಲ್ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ

  • ಅರುಣ್ ಜೋಳದ ಕೂಡ್ಲಿಗಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅರುಣ್ ಸರ್,
    ನೀವೂ ಕೂಡ ಇಂಥ ಎಲೆಮರೆಯ ಪ್ರತಿಭೆಯನ್ನು ನಮಗೆ ಪರಿಚಯಿಸುವ ಮುಖಾಂತರ ಬೇರೆಯವರಿಗೂ ಸ್ಪೂರ್ತಿಯಾಗುವಂತ ರೇವಣಸಿದ್ಧರನ್ನು ಹುಡುಕಿ ಕೊಟ್ಟಿದ್ದೀರಿ.
    ಕಂಡಿತವಾಗಿಯೂ ಇಂಥ ಪ್ರತಿಭೆಗಳನ್ನು ಗುರುತಿಸಿ ಕರೆತಂದು ಇಡೀ ಲೋಕಕ್ಕೆ ಪರಿಚಯಿಸುಂಥ ಕೆಲಸ ವಿಶ್ವವಿದ್ಯಾಲಯ, ಅಕಾಡೆಮಿಗಳು ಮಾಡಲೆಎಬೇಕಾದ ಅನಿವಾರ್ಯತೆಯಿದೆ. ಇದು ಅವುಗಳ ಕರ್ತವ್ಯವೂ ಕೂಡ ಎಂದರೆ ತಪ್ಪಾಗದು.
    -ರಾಜಶೇಖರ ಚಂ.ಡೊಂಬರಮತ್ತೂರ
    ಹಾವೇರಿ ಜಿಲ್ಲೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...