Homeಮುಖಪುಟವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ದುಬೆಗಿದ್ದ ರಾಜಕೀಯ ನಂಟುಗಳು ಬಯಲಾಗಬಾರದು ಎಂಬ ಕಾರಣಕ್ಕೆ ಪೊಲೀಸರು ಎನ್ ಕೌಂಟರ್ ಕತೆ ಸೃಷ್ಟಿಸಿ, ಕಾನ್ಪುರದಿಂದ 30 ಕಿಮೀ ಇರುವಾಗಲೇ ದುಬೆಯನ್ನು ಕೊಂದರೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

- Advertisement -
- Advertisement -

ಶುಕ್ರವಾರ ಬೆಳಿಗ್ಗೆ ಉತ್ತರಪ್ರದೇಶದ ಕುಖ್ಯಾತ ಕ್ರಿಮಿನಲ್ ವಿಕಾಸ್ ದುಬೆಯನ್ನು ಪೊಲೀಸರು ಹತ್ಯೆ ಮಾಡಿದ ನಂತರ, ಪೋಲೀಸರು ಬಿಡುಗಡೆ ಮಾಡಿರುವ ವೀಡಿಯೋ ಸಾಕ್ಷಿಗಳ ಮೇಲೆ 5 ಪ್ರಶ್ನೆಗಳನ್ನು ಸಾರ್ವಜನಿಕರು ಕೇಳಿದ್ದಾರೆ.

ರಸ್ತೆ ಅಪಘಾತದ ನಂತರ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ದರೋಡೆಕೋರ ವಿಕಾಸ್ ದುಬೆಯನ್ನು ಎನ್‌ಕೌಂಟರ್‌ ಮಾಡಲಾಯಿತು ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ನಿನ್ನೆ ಬಂಧನಕ್ಕೊಳಗಾದ ನಂತರ ಕಾನ್ಪುರಕ್ಕೆ ಪೋಲಿಸ್ ಬೆಂಗಾವಲಿನಲ್ಲಿ ವಿಕಾಸ್ ದುಬೆಯನ್ನು ಕರೆತರಲಾಗುತ್ತಿತ್ತು. ಕಾನ್ಪುರದಿಂದ ಕೇವಲ 30 ಕಿ.ಮೀ ದೂರದಲ್ಲಿ, ಬೆಂಗಾವಲಿನಲ್ಲಿದ್ದ ಮೂರು ಕಾರುಗಳಲ್ಲಿ ಒಂದು ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಅದರಲ್ಲಿದ್ದ ದುಬೆ ಈ ಸಂದರ್ಭದ ಲಾಭ ಪಡೆದು, ತಪ್ಪಿಸಿಕೊಳ್ಳಲು ಯತ್ನಿಸಿದ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಈ ಪೊಲೀಸ್ ಎನ್‌ಕೌಂಟರ್ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ 5 ಪ್ರಶ್ನೆಗಳನ್ನು ಕೇಳಲಾಗಿದೆ. ಅವುಗಳೆಂದರೆ

1. ದುಬೆಯನ್ನು ಬೇರೆ ಕಾರಿಗೆ ಶಿಫ್ಟ್ ಮಾಡಿದ್ದು ಏಕೆ? ಅಪಘಾತಕ್ಕೂ ಮೊದಲು ಬೆಳಿಗ್ಗೆ 4 ಗಂಟೆಗೆ ಟೋಲ್ ಪ್ಲಾಜಾದಲ್ಲಿನ ವಿಡಿಯೋ ತೋರಿಸುವಂತೆ ಪಲ್ಟಿಯಾದ ಕಾರಿನಲ್ಲಿ ದುಬೆ ಇರಲಿಲ್ಲ. ಬದಲಿಗೆ ಬೇರೆ ಕಾರಿನಲ್ಲಿದ್ದ. ಅಂದರೆ ನಂತರ ಆತನನ್ನು ಬೇರೆ ಕಾರಿಗೆ ಶಿಫ್ಟ್ ಮಾಡಿದ್ದಕ್ಕೆ ಕಾರಣಗಳೇನು? ಶಿಫ್ಟ್‌ ಮಾಡುವ ಅಗತ್ಯವಾದರೂ ಏನಿತ್ತು?

2. ಪೊಲೀಸರನ್ನು ಹಿಂಬಾಲಿಸುತ್ತಿದ್ದ ಮೀಡಿಯಾ ತಂಡಗಳನ್ನು ಎನ್ ಕೌಂಟರ್ ನಡೆದ ಸ್ಥಳದಿಂದ 2 ಕಿಮೀ ದೂರದಲ್ಲಿಯೇ ತಡೆದು ನಿಲ್ಲಸಿದ್ದು ಏಕೆ?

3. ಘಟನೆಗೆ ಸಾಕ್ಷಿಯಾದ ಕೆಲವರು ಗುಂಡಿನ ಸಪ್ಪಳ ಕೇಳಿದೆವು ಎನ್ನುತ್ತಿದ್ದಾರೆ ಹೊರತು ಕಾರ ಮಗುಚಿ ಬಿದ್ದ ಅಪಘಾತದ ಬಗ್ಗೆ ಏನೂ ಗೊತ್ತಿಲ್ಲ ಎನ್ನುತ್ತಿದ್ದಾರೆ. ಅದಾಗಲೇ ಪೊಲೀಸರು ಸ್ಥಳೀಯರನ್ನು ಜಾಗ ಖಾಲಿ ಮಾಡಿಸಿದ್ದು ಏಕೆ?

4. ಕೊಲೆ ಸೇರಿ 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಒಬ್ಬನಿಗೆ ಕೈಕೋಳ (ಹ್ಯಾಂಡ್ ಕಾಫ್) ಹಾಕಿರಲಿಲ್ಲವೇಕೆ? ಆತ ಗಾಯಗೊಂಡ ಪೊಲೀಸರೊಬ್ಬರ ಬಂದೂಕು ಕಿತ್ತುಕೊಂಡ ಎಂದು ಪೊಲೀಸರೇ ಹೇಳಿದ್ದಾರೆ. ಕೈಕೊಳ ಹಾಕಿದ್ದರು ಕಿತ್ತುಕೊಳ್ಳಲು ಹೇಗೆ ಸಾಧ್ಯ?

5. ಕಾರ್ ಬಿದ್ದ ಜಾಗದಲ್ಲಿ ಯಾವುದೇ ಬ್ಯಾರಿಕೇಡ್ ಇರಲಿಲ್ಲ. ಹೊಲಗಳತ್ತ ಸಾಗುವ ಒಂದು ಅಡ್ಡ ದಾರಿಯಿದೆ. ದುಬೆ ಅದರಲ್ಲೇ ಓಡಿ ಹೋಗಲು ಯತ್ನಿಸಿದ ಎಂಬ ಪೊಲೀಸರ ಹೇಳಿಕೆಯೂ ಅನುಮಾನಾಸ್ಪದವಾಗಿದೆ.

ದುಬೆಗಿದ್ದ ರಾಜಕೀಯ ನಂಟುಗಳು ಬಯಲಾಗಬಾರದು ಎಂಬ ಕಾರಣಕ್ಕೆ ಪೊಲೀಸರು ಎನ್ ಕೌಂಟರ್ ಕತೆ ಸೃಷ್ಟಿಸಿ, ಕಾನ್ಪುರದಿಂದ 30 ಕಿಮೀ ಇರುವಾಗಲೇ ದುಬೆಯನ್ನು ಕೊಂದರೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶರವೇಗದಲ್ಲಿ ಓಡಾಡುತ್ತಿದೆ.

ನಿನ್ನೆಯಷ್ಟೇ ಸುಪ್ರೀಂಕೋರ್ಟಿನಲ್ಲಿ ಸಲ್ಲಿಕೆಯಾದ ಅರ್ಜಿಯಲ್ಲಿ ಕಾನ್ಪುರ್ ತಲುಪುವ ಮೊದಲೇ ದುಬೆಯನ್ನ ಪೊಲೀಸರು ಕೊಲ್ಲಬಹುದಾಗಿದ್ದು, ಆತನನ್ನು ಜೀವಂತ ತರುವಂತೆ ಆದೇಶಿಸಬೇಕು ಎಂದು ಕೇಳಲಾಗಿತ್ತು.


ಇದನ್ನೂ ಓದಿ: ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...