Homeಅಂತರಾಷ್ಟ್ರೀಯಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ಸೆಂಟ್ರಲ್ ಪಾರ್ಕ್ ಬಳಿಯ ಐಷಾರಾಮಿ ಗಗನಚುಂಬಿ ಕಟ್ಟಡವಾದ ಟ್ರಂಪ್ ಟವರ್‌‌ನಲ್ಲಿ 2017 ಕ್ಕಿಂತ ಮೊದಲು ಟ್ರಂಪ್ ವಾಸಿಸುತ್ತಿದ್ದರು.

- Advertisement -
- Advertisement -

ಮ್ಯಾನ್‌‌ಹಟನ್ ಫಿಫ್ತ್ ಅವೆನ್ಯೂದ ಟ್ರಂಪ್‌ಟವರ್ ಹೊರಗಿನ ಪಾದಚಾರಿ ಮಾರ್ಗದಲ್ಲಿ ಗುರುವಾರ ಬೃಹತ್ ಗಾತ್ರದಲ್ಲಿ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಎಂದು ಬರೆಯಲಾಗಿದೆ. ಅಮೆರಿಕದ ಇತರೆಡೆ ಕೂಡಾ ಚಳವಳಿಯನ್ನು ಬೆಂಬಲಿಸುವ ಇದೇ ರೀತಿಯ ಭಿತ್ತಿಚಿತ್ರಗಳ ಪ್ರದರ್ಶನ ಮುಂದುವರಿದಿದೆ.

ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನದ ವಿರುದ್ಧ ಪದೇ ಪದೇ ವಾಗ್ಧಾಳಿ ನಡೆಸಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಟ್ರಂಪ್‌ಟವರ್ ಪಾದಚಾರಿ ಮಾರ್ಗದಲ್ಲಿ ತುಂಬಿ ಹೋಗಿರುವ ಹಳದಿ ಬಣ್ಣದ ಅಕ್ಷರಗಳಲ್ಲಿ ಮೂಡಿದ ಬರಹದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಆದರೆ ಕಳೆದ ತಿಂಗಳು ಈ ಯೋಜನೆಯನ್ನು ರೂಪಿಸಿದಾಗ, “ಡೆಮಾಕ್ರಟಿಕ್ ನಾಯಕರು ನಗರದ ಪ್ರಸಿದ್ಧ ಬೀದಿಯನ್ನು ದ್ವೇಷದ ಸಂಕೇತದೊಂದಿಗೆ ಅವಹೇಳನ ಮಾಡಿದ್ದಾರೆ” ಎಂದು ಟ್ರಂಪ್ ಆರೋಪಿಸಿದ್ದರು.

ವಿವಿಧ ಸಂಸ್ಥೆಗಳ ಹಲವಾರು ಸ್ವಯಂಸೇವಕರು ಘೋಷಣೆಯನ್ನು ಬರೆದರು. ನಾಗರಿಕ ಹಕ್ಕುಗಳ ನಾಯಕ ಅಲ್ ಶಾರ್ಪ್ಟನ್ ಮತ್ತು ನ್ಯೂಯಾರ್ಕ್ ಮೇಯರ್ ಬಿಲ್ ಡೆ ಬ್ಲಾಸಿಯೊ ಕೂಡಾ ಅದರಲ್ಲಿ ಭಾಗವಹಿಸಿದರು.

ಮಿನ್ನಿಯಾಪೋಲಿಸ್‌ನಲ್ಲಿ ನಿರಾಯುಧದಾರಿ ಕಪ್ಪು ವ್ಯಕ್ತಿ ಜಾರ್ಜ್ ಫ್ಲಾಯ್ಡ್‌ ಎಂಬವರನ್ನು ಪೊಲೀಸರು ಹತ್ಯೆ ಮಾಡಿದ ನಂತರ ಪ್ರತಿಭಟನೆಗಳು ಭುಗಿಲೆದ್ದಿವೆ. ಅಲ್ಲದೆ ವಿಶ್ವದಾದ್ಯಂತ ಬೆಂಬಲ ಗಳಿಸಿವೆ.

ವಾಷಿಂಗ್ಟನ್ ಮೇಯರ್ ಮುರಿಯಲ್ ಬೌಸರ್ ತನ್ನ ನಗರದ 16 ನೇ ಬೀದಿಯಲ್ಲಿರುವ ಪ್ರದೇಶ ವೈಟ್‌ಹೌಸ್‌ ಬ್ಲಾಕ್ ಅನ್ನು ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಪ್ಲಾಜಾ ಎಂದು ಮರುನಾಮಕರಣ ಮಾಡಿದ್ದಾರೆ. ಪ್ರಸ್ತುತ ಈ ಪ್ರದೇಶವು ಜನಾಂಗೀಯ ವಿರೋಧಿ ಪ್ರತಿಭಟನೆಯ ಕೇಂದ್ರಬಿಂದುವಾಗಿದೆ.

ಸೆಂಟ್ರಲ್ ಪಾರ್ಕ್ ಬಳಿಯ ಐಷಾರಾಮಿ ಗಗನಚುಂಬಿ ಕಟ್ಟಡವಾದ ಟ್ರಂಪ್ ಟವರ್‌‌ನಲ್ಲಿ 2017 ಕ್ಕಿಂತ ಮೊದಲು ಟ್ರಂಪ್ ವಾಸಿಸುತ್ತಿದ್ದರು.


ಓದಿ: ವರ್ಣಭೇದ ನೀತಿ, ಫೇರ್‌ನೆಸ್ ಕ್ರೀಮ್‌ಗಳು, ಮತ್ತು ಬ್ಲಾಕ್ ಲೈವ್ಸ್‌ ಮ್ಯಾಟರ್‌ ಎನ್ನುವ ನಟಿಯರು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...