Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ....

ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ….

- Advertisement -
- Advertisement -

ನಮ್ಮ ಸ್ವಾತಂತ್ರ್ಯ ಸಂಗ್ರಾಮ ಅಂತ್ಯಗೊಂಡಿದ್ದರಲ್ಲಿನ ಒಂದು ವಿಚಿತ್ರ ವಿಶಿಷ್ಟತೆ ಯಾವುದೆಂದರೆ; ನನ್ನ ನರನಾಡಿಗಳಲ್ಲಿ ನಾನು ಸಂಪೂರ್ಣವಾಗಿ ಹಿಂದೂ ಎಂದು ಹೇಳಿದ್ದ ಮಹಾತ್ಮ ಗಾಂಧಿ ಜಾತ್ಯಾತೀತ ಭಾರತದ ರಾಷ್ಟ್ರಪಿತ ಆದದ್ದು. ಹಾಗೆಯೇ ದೇವರು-ಧರ್ಮದಲ್ಲಿ ನಂಬಿಕೆ ಇರದಿದ್ದ, ಉರ್ದು ಭಾಷೆ ಇರಲಿ, ಇಂಗ್ಲಿಷ್ ಬಿಟ್ಟರೆ ಭಾರತದ ಒಂದೇಒಂದು ಭಾಷೆಯಲ್ಲಿ ಮಾತನಾಡಲು ಬಾರದಿದ್ದ, ಇಸ್ಲಾಂನಲ್ಲಿ ನಿಷೇಧಿಸಲ್ಪಟ್ಟಿರುವ ‘ತೀರ್ಥ’ ಮತ್ತು ಆಹಾರವನ್ನು ಸೇವಿಸುತ್ತಿದ್ದ, ನಾಸ್ತಿಕರಾಗಿದ್ದ ಮೊಹ್ಮದ್ ಅಲಿ ಜಿನ್ನಾರವರು ಇಸ್ಲಾಂ ಧರ್ಮದ ಹೆಸರಿನಲ್ಲಿ ಸ್ಥಾಪಿತವಾದ ಪಾಕಿಸ್ತಾನದ ರಾಷ್ಟ್ರಪಿತ ಆದದ್ದು!!

ಇಂಥಾ ವೈಚಿತ್ರ್ಯದ ನಡುವೆಯೂ ಇವರಿಬ್ಬರ ಮಧ್ಯೆ ಹಲವು ಸಾಮ್ಯತೆಗಳಿವೆ. ಅವುಗಳಲ್ಲಿ ಎಲ್ಲಕ್ಕಿಂತ ಮುಖ್ಯವಾಗಿ ಗಾಂಧಿ-ಜಿನ್ನಾ, ಇಬ್ಬರೂ ಹಿಂದೂ-ಮುಸ್ಲೀಮರ ನಡುವೆ ಸೌಹಾರ್ದವ ಬಯಸಿದವರು.

ಬಾಲಗಂಗಾಧರ ತಿಲಕ್‌ರವರು ಸ್ವರಾಜ್ಯ ನನ್ನ ಜನ್ಮಸಿದ್ದ ಹಕ್ಕು ಎಂಬ ಹೇಳಿಕೆಯ ಮೂಲಕ ಬ್ರಿಟಿಷ್ ಸರ್ಕಾರದ ಕೆಂಗಣ್ಣಿಗೆ ಗುರಿಯಾದಾಗ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದವರಲ್ಲಿ ಜಿನ್ನಾ ಕೂಡಾ ಒಬ್ಬರು. ಗೋಪಾಲ್ ಕೃಷ್ಣ ಗೋಖಲೆಯವರು ಒಂದುಕಡೆ ಜಿನ್ನಾರ ಬಗ್ಗೆ ಧಾರ್ಮಿಕ ಪೂರ್ವಗ್ರಹಗಳಿಂದ ಕಳಂಕಿತರಾಗದಿರುವ ಜಿನ್ನಾ ಹಿಂದೂ-ಮುಸ್ಲಿಂ ಐಕ್ಯತೆಗೆ ಹೇಳಿ ಮಾಡಿಸಿದಂತಹ ರಾಯಭಾರಿ ಎಂದು ಹೇಳಿದ್ದು ಅತಿಶಯೋಕ್ತಿಯ ಮಾತಲ್ಲ.

ಮುಸ್ಲಿಂ ಲೀಗ್‌ನವರು ಜಿನ್ನಾರನ್ನು ಅದೆಷ್ಟೇ ಓಲೈಸಿದರೂ ಸ್ವಾತಂತ್ರ್ಯ ಸಿಗಬೇಕಿದ್ದರೆ ಹಿಂದೂಗಳು ಹಾಗೂ ಮುಸ್ಲಿಮರು ಒಗ್ಗಟ್ಟಾಗಿಯೇ ಇರಬೇಕು ಎಂದು ಹೇಳುತ್ತಿದ್ದ ಜಿನ್ನಾ ಕಾಂಗ್ರೆಸ್‌ನಲ್ಲೇ ಉಳಿದರು. ಆದರೆ ಕಾಲಕ್ರಮೇಣ ಕಾಂಗ್ರೆಸ್ ಮೇಲೆ ಗಾಂಧಿಯವರ ಹಿಡಿತ ಬಿಗಿಗೊಂಡಿತು. ಅದರಲ್ಲಿದ್ದ ಹಿಂದೂ ನಾಯಕರೆಲ್ಲರೂ ಗಾಂಧಿಗೆ ಡೊಗ್ಗು ಸಲಾಮು ಹೊಡೆಯುವುದು ಹೆಚ್ಚಾಗಿ ನೆಹರೂರವರ ಬಗ್ಗೆ ಗಾಂಧಿ ಹೆಚ್ಚು ಒಲವು ತೋರಿಸಲಾರಂಭಿಸಿದರು. ಇದೇ ಹೊತ್ತಿಗೆ ಸರಿಯಾಗಿ ಹಿಂದೂ ಮಹಾಸಭಾದವರ ‘ಹಿಂದೂ ರಾಷ್ಟ್ರ’ದ ಗದ್ದಲ ಹೆಚ್ಚಾಗಿತ್ತಲ್ಲದೆ ‘ದ್ವಿರಾಷ್ಟ್ರ ನೀತಿ’ಯೂ ಹೆಚ್ಚು ಮನ್ನಣೆ ಪಡೆಯಲಾರಂಭಿಸಿತು.

ಈ ಹಂತದಲ್ಲೂ ಅವರು ಕಾಂಗ್ರೆಸ್‌ನಿಂದ ಹೊರಹೋಗಲು ಇಚ್ಛಿಸಲಿಲ್ಲ. ಆದರೆ ಬಹುಸಂಖ್ಯಾತ ಜನಾಂಗ ದಬ್ಬಾಳಿಕೆ ಮತ್ತು ಕ್ರೌರ್ಯವನ್ನು ಹೊಂದಿರುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಅಲ್ಪಸಂಖ್ಯಾತರಲ್ಲಿ ತಮ್ಮ ಹಕ್ಕು ಮತ್ತು ಹಿತಾಸಕ್ತಿಗಳ ಬಗ್ಗೆ ಆತಂಕ ಮೂಡುವುದು ಸಹಜ. ಅದನ್ನು ನಿವಾರಿಸಬೇಕಾದರೆ ಕಾನೂನಿನಲ್ಲಿ ಅವರಿಗೆ ಸಾಕಷ್ಟು ಭದ್ರತೆಯನ್ನು ಒದಗಿಸಬೇಕು. ಎಂದು ಎಚ್ಚರಿಕೆ ನೀಡಿದ್ದರು. ಅವರ ಈ ಎಚ್ಚರಿಕೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸದಿದ್ದಾಗ ನಿರಾಶೆಗೊಂಡ ಜಿನ್ನಾ ಕಾಂಗ್ರೆಸ್ ಪಕ್ಷದಿಂದಲೇ ದೂರ ಸರಿಯಲಾರಂಭಿಸಿದರು.

ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ಸಿಗುವ ನಾಲ್ಕು ದಿನ ಮುನ್ನ ಜಿನ್ನಾರವರು ಮಾಡಿದ ಭಾಷಣವೇ ಇವತ್ತು ಅಡ್ವಾಣಿಗೆ ಬಹಳ ಮೆಚ್ಚುಗೆಯಾಗಿದೆ. ಆದರೆ ಜಿನ್ನಾರವರು ಹಿಂದೂ-ಮುಸ್ಲಿಂ ಐಕ್ಯತೆ ಬಗ್ಗೆ ಹಾಗೆ ಮಾತನಾಡಿದ್ದು ಅದೊಂದೇ ಬಾರಿ ಅಲ್ಲ. ಪಾಕಿಸ್ತಾನಕ್ಕಾಗಿ ಹೋರಾಡಿದ್ದ ಜಿನ್ನಾ ಮೂಲಭೂತವಾಗಿ ಇಸ್ಲಾಂ ಧರ್ಮಕ್ಕೆ ಬದ್ದರಾಗಿಯೂ ಇರಲಿಲ್ಲ. ಹಾಗೆಯೇ ಹಿಂದೂ ದ್ವೇಷಿಯೂ ಆಗಿರಲಿಲ್ಲ. ಅವರು ಪಾಕಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ಹಲವೇ ದಿನಗಳ ನಂತರ ಎಂ.ಎಸ್.ಎಂ ಶರ್ಮ ಎಂಬ ಹಿಂದೂ ಪತ್ರಕರ್ತರಿಗೆ ನೀಡಿದ ಸಂದರ್ಶನದಲ್ಲಿ ನಾನು ಈಗಲೂ ಹಿಂದೂ-ಮುಸ್ಲಿಂರ ಐಕ್ಯತೆಯನ್ನು ಬಯಸುತ್ತೇನಲ್ಲದೆ, ಸದ್ಯದಲ್ಲೇ ಪಾಕಿಸ್ತಾನದಲ್ಲಿರುವ ಹಿಂದೂಗಳ ರಕ್ಷಣೆಗೆಂದು ನಾನೇ ‘ಪ್ರೊಟೆಕ್ಟರ್ ಜನರಲ್’ಆಗಿ ನಿಲ್ಲುತ್ತೇನೆ ಎಂದು ಹೇಳಿದ್ದರು.

ಅಂದಹಾಗೆ, ಇಲ್ಲಿ ದಾಖಲಿಸಿರುವುದಕ್ಕೆಲ್ಲಾ ಮೂಲ ಪ್ರೇರಣೆ ‘ಅಂಡರ್‌ಸ್ಟಾಂಡಿಂಗ್ ದಿ ಮುಸ್ಲಿಂ ಮೈಂಡ್’ ಎಂಬ ಪುಸ್ತಕದಲ್ಲಿ ಜಿನ್ನಾರವರನ್ನು ಕುರಿತ ಅಧ್ಯಾಯ. ಈ ಪುಸ್ತಕವನ್ನು ಬರೆದವರಿರುವವರು ಮತ್ತಿನ್ಯಾರೂ ಅಲ್ಲ… ಪ್ರಖ್ಯಾತ ಸಂಶೋಧಕರೂ, ಮಹಾತ್ಮ ಗಾಂಧಿಯವರ ಮೊಮ್ಮಗನೂ ಆಗಿರುವ ರಾಜ್‌ಮೋಹನ್ ಗಾಂಧಿಯವರು!!

ಗೌರಿ ಲಂಕೇಶ್,
ಜೂನ್ 22, 2005 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...