Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ....

ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ….

- Advertisement -
- Advertisement -

ನಮ್ಮ ಸ್ವಾತಂತ್ರ್ಯ ಸಂಗ್ರಾಮ ಅಂತ್ಯಗೊಂಡಿದ್ದರಲ್ಲಿನ ಒಂದು ವಿಚಿತ್ರ ವಿಶಿಷ್ಟತೆ ಯಾವುದೆಂದರೆ; ನನ್ನ ನರನಾಡಿಗಳಲ್ಲಿ ನಾನು ಸಂಪೂರ್ಣವಾಗಿ ಹಿಂದೂ ಎಂದು ಹೇಳಿದ್ದ ಮಹಾತ್ಮ ಗಾಂಧಿ ಜಾತ್ಯಾತೀತ ಭಾರತದ ರಾಷ್ಟ್ರಪಿತ ಆದದ್ದು. ಹಾಗೆಯೇ ದೇವರು-ಧರ್ಮದಲ್ಲಿ ನಂಬಿಕೆ ಇರದಿದ್ದ, ಉರ್ದು ಭಾಷೆ ಇರಲಿ, ಇಂಗ್ಲಿಷ್ ಬಿಟ್ಟರೆ ಭಾರತದ ಒಂದೇಒಂದು ಭಾಷೆಯಲ್ಲಿ ಮಾತನಾಡಲು ಬಾರದಿದ್ದ, ಇಸ್ಲಾಂನಲ್ಲಿ ನಿಷೇಧಿಸಲ್ಪಟ್ಟಿರುವ ‘ತೀರ್ಥ’ ಮತ್ತು ಆಹಾರವನ್ನು ಸೇವಿಸುತ್ತಿದ್ದ, ನಾಸ್ತಿಕರಾಗಿದ್ದ ಮೊಹ್ಮದ್ ಅಲಿ ಜಿನ್ನಾರವರು ಇಸ್ಲಾಂ ಧರ್ಮದ ಹೆಸರಿನಲ್ಲಿ ಸ್ಥಾಪಿತವಾದ ಪಾಕಿಸ್ತಾನದ ರಾಷ್ಟ್ರಪಿತ ಆದದ್ದು!!

ಇಂಥಾ ವೈಚಿತ್ರ್ಯದ ನಡುವೆಯೂ ಇವರಿಬ್ಬರ ಮಧ್ಯೆ ಹಲವು ಸಾಮ್ಯತೆಗಳಿವೆ. ಅವುಗಳಲ್ಲಿ ಎಲ್ಲಕ್ಕಿಂತ ಮುಖ್ಯವಾಗಿ ಗಾಂಧಿ-ಜಿನ್ನಾ, ಇಬ್ಬರೂ ಹಿಂದೂ-ಮುಸ್ಲೀಮರ ನಡುವೆ ಸೌಹಾರ್ದವ ಬಯಸಿದವರು.

ಬಾಲಗಂಗಾಧರ ತಿಲಕ್‌ರವರು ಸ್ವರಾಜ್ಯ ನನ್ನ ಜನ್ಮಸಿದ್ದ ಹಕ್ಕು ಎಂಬ ಹೇಳಿಕೆಯ ಮೂಲಕ ಬ್ರಿಟಿಷ್ ಸರ್ಕಾರದ ಕೆಂಗಣ್ಣಿಗೆ ಗುರಿಯಾದಾಗ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದವರಲ್ಲಿ ಜಿನ್ನಾ ಕೂಡಾ ಒಬ್ಬರು. ಗೋಪಾಲ್ ಕೃಷ್ಣ ಗೋಖಲೆಯವರು ಒಂದುಕಡೆ ಜಿನ್ನಾರ ಬಗ್ಗೆ ಧಾರ್ಮಿಕ ಪೂರ್ವಗ್ರಹಗಳಿಂದ ಕಳಂಕಿತರಾಗದಿರುವ ಜಿನ್ನಾ ಹಿಂದೂ-ಮುಸ್ಲಿಂ ಐಕ್ಯತೆಗೆ ಹೇಳಿ ಮಾಡಿಸಿದಂತಹ ರಾಯಭಾರಿ ಎಂದು ಹೇಳಿದ್ದು ಅತಿಶಯೋಕ್ತಿಯ ಮಾತಲ್ಲ.

ಮುಸ್ಲಿಂ ಲೀಗ್‌ನವರು ಜಿನ್ನಾರನ್ನು ಅದೆಷ್ಟೇ ಓಲೈಸಿದರೂ ಸ್ವಾತಂತ್ರ್ಯ ಸಿಗಬೇಕಿದ್ದರೆ ಹಿಂದೂಗಳು ಹಾಗೂ ಮುಸ್ಲಿಮರು ಒಗ್ಗಟ್ಟಾಗಿಯೇ ಇರಬೇಕು ಎಂದು ಹೇಳುತ್ತಿದ್ದ ಜಿನ್ನಾ ಕಾಂಗ್ರೆಸ್‌ನಲ್ಲೇ ಉಳಿದರು. ಆದರೆ ಕಾಲಕ್ರಮೇಣ ಕಾಂಗ್ರೆಸ್ ಮೇಲೆ ಗಾಂಧಿಯವರ ಹಿಡಿತ ಬಿಗಿಗೊಂಡಿತು. ಅದರಲ್ಲಿದ್ದ ಹಿಂದೂ ನಾಯಕರೆಲ್ಲರೂ ಗಾಂಧಿಗೆ ಡೊಗ್ಗು ಸಲಾಮು ಹೊಡೆಯುವುದು ಹೆಚ್ಚಾಗಿ ನೆಹರೂರವರ ಬಗ್ಗೆ ಗಾಂಧಿ ಹೆಚ್ಚು ಒಲವು ತೋರಿಸಲಾರಂಭಿಸಿದರು. ಇದೇ ಹೊತ್ತಿಗೆ ಸರಿಯಾಗಿ ಹಿಂದೂ ಮಹಾಸಭಾದವರ ‘ಹಿಂದೂ ರಾಷ್ಟ್ರ’ದ ಗದ್ದಲ ಹೆಚ್ಚಾಗಿತ್ತಲ್ಲದೆ ‘ದ್ವಿರಾಷ್ಟ್ರ ನೀತಿ’ಯೂ ಹೆಚ್ಚು ಮನ್ನಣೆ ಪಡೆಯಲಾರಂಭಿಸಿತು.

ಈ ಹಂತದಲ್ಲೂ ಅವರು ಕಾಂಗ್ರೆಸ್‌ನಿಂದ ಹೊರಹೋಗಲು ಇಚ್ಛಿಸಲಿಲ್ಲ. ಆದರೆ ಬಹುಸಂಖ್ಯಾತ ಜನಾಂಗ ದಬ್ಬಾಳಿಕೆ ಮತ್ತು ಕ್ರೌರ್ಯವನ್ನು ಹೊಂದಿರುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಅಲ್ಪಸಂಖ್ಯಾತರಲ್ಲಿ ತಮ್ಮ ಹಕ್ಕು ಮತ್ತು ಹಿತಾಸಕ್ತಿಗಳ ಬಗ್ಗೆ ಆತಂಕ ಮೂಡುವುದು ಸಹಜ. ಅದನ್ನು ನಿವಾರಿಸಬೇಕಾದರೆ ಕಾನೂನಿನಲ್ಲಿ ಅವರಿಗೆ ಸಾಕಷ್ಟು ಭದ್ರತೆಯನ್ನು ಒದಗಿಸಬೇಕು. ಎಂದು ಎಚ್ಚರಿಕೆ ನೀಡಿದ್ದರು. ಅವರ ಈ ಎಚ್ಚರಿಕೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸದಿದ್ದಾಗ ನಿರಾಶೆಗೊಂಡ ಜಿನ್ನಾ ಕಾಂಗ್ರೆಸ್ ಪಕ್ಷದಿಂದಲೇ ದೂರ ಸರಿಯಲಾರಂಭಿಸಿದರು.

ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ಸಿಗುವ ನಾಲ್ಕು ದಿನ ಮುನ್ನ ಜಿನ್ನಾರವರು ಮಾಡಿದ ಭಾಷಣವೇ ಇವತ್ತು ಅಡ್ವಾಣಿಗೆ ಬಹಳ ಮೆಚ್ಚುಗೆಯಾಗಿದೆ. ಆದರೆ ಜಿನ್ನಾರವರು ಹಿಂದೂ-ಮುಸ್ಲಿಂ ಐಕ್ಯತೆ ಬಗ್ಗೆ ಹಾಗೆ ಮಾತನಾಡಿದ್ದು ಅದೊಂದೇ ಬಾರಿ ಅಲ್ಲ. ಪಾಕಿಸ್ತಾನಕ್ಕಾಗಿ ಹೋರಾಡಿದ್ದ ಜಿನ್ನಾ ಮೂಲಭೂತವಾಗಿ ಇಸ್ಲಾಂ ಧರ್ಮಕ್ಕೆ ಬದ್ದರಾಗಿಯೂ ಇರಲಿಲ್ಲ. ಹಾಗೆಯೇ ಹಿಂದೂ ದ್ವೇಷಿಯೂ ಆಗಿರಲಿಲ್ಲ. ಅವರು ಪಾಕಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ಹಲವೇ ದಿನಗಳ ನಂತರ ಎಂ.ಎಸ್.ಎಂ ಶರ್ಮ ಎಂಬ ಹಿಂದೂ ಪತ್ರಕರ್ತರಿಗೆ ನೀಡಿದ ಸಂದರ್ಶನದಲ್ಲಿ ನಾನು ಈಗಲೂ ಹಿಂದೂ-ಮುಸ್ಲಿಂರ ಐಕ್ಯತೆಯನ್ನು ಬಯಸುತ್ತೇನಲ್ಲದೆ, ಸದ್ಯದಲ್ಲೇ ಪಾಕಿಸ್ತಾನದಲ್ಲಿರುವ ಹಿಂದೂಗಳ ರಕ್ಷಣೆಗೆಂದು ನಾನೇ ‘ಪ್ರೊಟೆಕ್ಟರ್ ಜನರಲ್’ಆಗಿ ನಿಲ್ಲುತ್ತೇನೆ ಎಂದು ಹೇಳಿದ್ದರು.

ಅಂದಹಾಗೆ, ಇಲ್ಲಿ ದಾಖಲಿಸಿರುವುದಕ್ಕೆಲ್ಲಾ ಮೂಲ ಪ್ರೇರಣೆ ‘ಅಂಡರ್‌ಸ್ಟಾಂಡಿಂಗ್ ದಿ ಮುಸ್ಲಿಂ ಮೈಂಡ್’ ಎಂಬ ಪುಸ್ತಕದಲ್ಲಿ ಜಿನ್ನಾರವರನ್ನು ಕುರಿತ ಅಧ್ಯಾಯ. ಈ ಪುಸ್ತಕವನ್ನು ಬರೆದವರಿರುವವರು ಮತ್ತಿನ್ಯಾರೂ ಅಲ್ಲ… ಪ್ರಖ್ಯಾತ ಸಂಶೋಧಕರೂ, ಮಹಾತ್ಮ ಗಾಂಧಿಯವರ ಮೊಮ್ಮಗನೂ ಆಗಿರುವ ರಾಜ್‌ಮೋಹನ್ ಗಾಂಧಿಯವರು!!

ಗೌರಿ ಲಂಕೇಶ್,
ಜೂನ್ 22, 2005 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...