Homeಫ್ಯಾಕ್ಟ್‌ಚೆಕ್FactCheck: ಸತ್ತ ವ್ಯಕ್ತಿ ಬಾಯಿಂದ ಮೋದಿ ಹೊಗಳಿಸಿದ ಪೋಸ್ಟ್‌ ಕಾರ್ಡ್‌: ಸತ್ಯ ತಿಳಿಯುತ್ತಲೇ ಮತ್ತೊಂದು ಸುಳ್ಳು...

FactCheck: ಸತ್ತ ವ್ಯಕ್ತಿ ಬಾಯಿಂದ ಮೋದಿ ಹೊಗಳಿಸಿದ ಪೋಸ್ಟ್‌ ಕಾರ್ಡ್‌: ಸತ್ಯ ತಿಳಿಯುತ್ತಲೇ ಮತ್ತೊಂದು ಸುಳ್ಳು ಪ್ರಕಟ!

- Advertisement -
- Advertisement -

ಫೇಕ್‌ನ್ಯೂಸ್‌ ವೆಬ್‌ಸೈಟ್‌ ಎಂತಲೇ ಕುಖ್ಯಾತಿ ಗಳಿಸಿರುವ ಪೋಸ್ಟ್‌ ಕಾರ್ಡ್‌ ಕನ್ನಡ ಸುಳ್ಳು ಸುದ್ದಿ ಪ್ರಕಟಿಸಿ, ಸತ್ತ ವ್ಯಕ್ತಿಯ ಫೋಟೊ ಹಾಕಿ ಮೋದಿ ಹೊಗಳಿದ್ದಾರೆ ಎಂದು ಪ್ರಸಾರ ಮಾಡಿ ಸಿಕ್ಕಿಬಿದ್ದಿದೆ. ಈ ಕುರಿತು ನೆಟ್ಟಿಗರು ಅದರ ಸ್ಥಾಪಕನ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ನಡೆದುದಿಷ್ಟು…

ಜೂನ್ 15 ರಂದು ಲಡಾಖ್‌ ಗಡಿಯಲ್ಲಿ ಭಾರತ – ಚೀನಾ ನಡುವೆ ನಡೆದ ಸಂಘ‍ರ್ಷದಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ. ಅಲ್ಲದೇ ಭಾರತದ ವಾಸ್ತವಿಕ ನಿಯಂತ್ರಿತ ರೇಖೆಯೊಳಗೆ ಕಾಲಿಟ್ಟಿದೆ. ಅಂದಿನಿಂದ ನರೇಂದ್ರ ಮೋದಿ ಸರ್ಕಾರವನ್ನು ಜನ ಪ್ರಶ್ನಿಸುತ್ತಿದ್ದಾರೆ. ಕೊನೆಗೂ ಎರಡು ದೇಶಗಳ ಮಾತುಕತೆಯ ನಂತರ ಎರಡೂ ದೇಶಗಳ ಸೈನ್ಯ ವಾಪಸ್ ತೆರಳಿವೆ. ಇದಿಷ್ಟು ವಾಸ್ತವವನ್ನು ಇಟ್ಟುಕೊಂಡು ಮೋದಿಯನ್ನು ಹೊಗಳುವ ಭರದಲ್ಲಿ ಪೋಸ್ಟ್‌ ಕಾರ್ಡ್‌ ಸುಳ್ಳು ಸುದ್ದಿ ಹಬ್ಬಿಸಿದೆ.

“ಗಡಿಯಲ್ಲಿ ಚೀನಾ ನಿರ್ಮಿಸಿದ್ದ ಉದ್ವಿಗ್ನ ಸ್ಥಿತಿಯನ್ನು ಭಾರತ ಸಮರ್ಥವಾಗಿ ಎದುರಿಸಿದೆ. ಇದು ಚೀನಾದಿಂದ ಒದಗುವ ಬೆದರಿಕೆಯನ್ನು ಧೈರ್ಯದಿಂದ ಎದುರಿಸಲು ಇತರ ದೇಶಗಳಿಗೆ ಶಕ್ತಿ ತುಂಬಲಿದೆ. ಚೀನಾಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹೆಮ್ಮೆ ಎನಿಸುತ್ತದೆ”. – ಅಮೆರಿಕದ ಸಂಸದ ಜಾನ್ ಕೆನಡಿ ಎಂಬ ವಿಷಯವುಳ್ಳ ಪೋಸ್ಟರ್ ಮಾಡಿ, ಅದರಲ್ಲಿ ಜಾನ್ ಕೆನಡಿ ಫೋಟೊ ಹಾಕಿ ಪೋಸ್ಟ್‌ ಕಾರ್ಡ್‌ ಕನ್ನಡ ಸೇರಿದಂತೆ ಹಲವಾರು ಫೇಸ್‌ಬುಕ್‌ ಪುಟಗಳಲ್ಲಿ ಷೇರ್ ಮಾಡಲಾಗಿದೆ.

ಆದರೆ ಸ್ಪಲ್ಪ ಸಮಯದಲ್ಲಿಯೇ ನೆಟ್ಟಿಗರು ಅಮೆರಿಕ ಮಾಜಿ ಅಧ್ಯಕ್ಷ ಜಾನ್ ಕೆನಡಿ ಮರಣ ಹೊಂದಿ 57 ವರ್ಷಗಳಾಗಿವೆ. ಸುಳ್ಳು ಸುದ್ದಿ ಹರಡುವುದನ್ನು ನಿಲ್ಲಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಜಾನ್ ಕೆನಡಿ 1963ರಲ್ಲಿ ಸಾವನಪ್ಪಿರುವ ವಿಕಿಪೀಡಿಯ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಪೋಸ್ಟ್ ಕಾರ್ಡ್ ಮೊದಲು ಹರಡಿದ್ದ ಪೋಸ್ಟರ್

ನಂತರ ಮುಖಭಂಗಕ್ಕೊಳಗಾದ ಪೋಸ್ಟ್ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ ಆ ಪೋಸ್ಟರ್‌ ಅನ್ನು ಡಿಲೀಟ್ ಮಾಡಿದ್ದಾರೆ. ಕೂಡಲೇ ಜಾನ್ ಕೆನಡಿಯ ಜಾಗದಲ್ಲಿ ಜಾನ್ ನೀಲಿ ಕೆನಡಿಯ ಫೋಟೊ ಹಾಕಿ ಮತ್ತೊಂದು ಪೋಸ್ಟರ್ ಅನ್ನು ಪೋಸ್ಟ್ ಮಾಡಿದ್ದಾರೆ.

https://www.facebook.com/mvhindu/posts/1236827983315356

ಈ ಕುರಿತು ಗೂಗಲ್‌ನಲ್ಲಿ ಹುಡಕಾಡಿದಾಗ ಮೋದಿ ಕುರಿತು ಇತ್ತೀಚೆಗೆ ಜಾನ್‌ ನೀಲಿ ಕೆನಡಿ ಮಾತನಾಡಿರುವ ಯಾವುದೇ ವರದಿಗಳು ಲಭ್ಯವಿಲ್ಲ. ಆದರೆ ನ್ಯೂಸ್‌ಬಸ್ಟ್‌.ಇನ್ ಎನ್ನು ಭಾರತೀಯ ಮೂಲಕ ವೆಬ್ ಸೈಟ್ ಒಂದು ಮಾತ್ರ ಈ ಸುದ್ದಿಯನ್ನು ಪ್ರಕಟಿಸಿದೆ. ಆದರೆ ಅದರ ಫೇಸ್‌ಬುಕ್‌ ಪುಟವು ಕೇವಲ 43 ಲೈಕ್‌ಗಳನ್ನು ಹಾಗೂ 473 ಫಾಲೋವರ್‌ಗಳನ್ನು ಮಾತ್ರ ಹೊಂದಿದೆ. ಆ ವರದಿಯನ್ನು ಕೇವಲ ಒಬ್ಬರು ಮಾತ್ರ ಓದಿದ್ದಾರೆ.. ಅಲ್ಲಿಗೆ ಅದು ಕೂಡ ಫೇಕ್‌ ನ್ಯೂಸ್ ಎಂದು ಸಾಬೀತಾಗಿದೆ.

ಒಟ್ಟಿನಲ್ಲಿ ಸುಳ್ಳು ಸುದ್ದಿ ಹರಡುವುದರಲ್ಲಿ ಎತ್ತಿದ ಕೈ ಆದ ಮಹೇಶ್ ವಿಕ್ರಂ ಹೆಗಡೆ ಮತ್ತು ಫೋಸ್ಟ್ ಕಾರ್ಡ್ ಮತ್ತೊಂದು ಸುಳ್ಳು ಸುದ್ದಿ ಹರಡಿ ಸಿಕ್ಕಿಕೊಂಡಿದೆ. ನೆಟ್ಟಿಗರು ದೊಡ್ಡ ಮಟ್ಟದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. PEOPLE ARE VERY MUCH AWARE ABOUT GOSI MEDIA N THEIR DIRTY LIES… TO DISTRACT N DIVERT FROM CURRENT MAJOR ISSUES N TO FOOL PEOPLE ASHTE..
    BUT CANT FOOL ANYMORE.
    ENJOY ACHHEDIN..🤣🤣🤣

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...