ಬಿಜೆಪಿ ಸರ್ಕಾರ ಉತ್ತರ ಪ್ರದೇಶವನ್ನು ’ಅಪರಾಧ ಪ್ರದೇಶ’ವನ್ನಾಗಿ ಬದಲಾಯಿಸಿದೆ ಎಂದು ಕಾಂಗ್ರೆಸ್ ಪಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶ ಮಕ್ಕಳ ಮೇಲೆ ದೌರ್ಜನ್ಯದಲ್ಲಿ, ದಲಿತರ ಮೇಲಿನ ದೌರ್ಜನ್ಯದಲ್ಲಿ, ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ, ಹತ್ಯೆಗಳಲ್ಲಿ ಒಂದನೇ ಸ್ಥಾನದಲ್ಲಿದೆ ಎಂದು ಉಲ್ಲೇಖಿಸಿದ ಅವರು, ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯೂ ಹದಗೆಟ್ಟಿದೆ ಎಂದು ಹೇಳಿದರು.
ರಾಜಕಾರಣಿ-ಅಪರಾಧಿಗಳ ಮೈತ್ರಿಗಳು ಉತ್ತರ ಪ್ರದೇಶದ ಮೇಲೆ ಪ್ರಾಬಲ್ಯ ಹೊಂದಿವೆ. ಕಾನ್ಪುರ ಪ್ರಕರಣದಲ್ಲಿ ಈ ಮೈತ್ರಿಯ ಸಂಬಂಧ ಬೆಳಕಿಗೆ ಬಂದಿದ್ದು, ಅಂತಹ ಅಪರಾಧಿಯನ್ನು ಬೆಳೆಸುವಲ್ಲಿ ಯಾರು-ಯಾರು ತೊಡಗಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಹೇಳಿದ್ದಾರೆ.
ಇಡೀ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ನ ಪ್ರಸ್ತುತ ನ್ಯಾಯಾಧೀಶರು ನ್ಯಾಯಾಂಗ ವಿಚಾರಣೆ ನಡೆಸಬೇಕು ಎಂದ ಅವರು ಎನ್ಕೌಂಟರ್ನ ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.
उप्र की कानून-व्यवस्था बदतर हो चुकी है। राजनेता-अपराधी गठजोड़ प्रदेश पर हावी है। कानपुर कांड में इस गठजोड़ की सांठगांठ खुलकर सामने आई।
कौन-कौन लोग इस तरह के अपराधी की परवरिश में शामिल हैं- ये सच सामने आना चाहिए।
सुप्रीम कोर्ट के मौजूदा जज से पूरे कांड की न्यायिक जाँच होनी चाहिए pic.twitter.com/vRHQlsaJ3y
— Priyanka Gandhi Vadra (@priyankagandhi) July 10, 2020
ದರೋಡೆಕೋರ ವಿಕಾಸ್ ದುಬೆ ಇಂದು ಬೆಳಿಗ್ಗೆ ಹತ್ಯೆಯಾಗಿದ್ದು, ಪೊಲೀಸರು ಆತ ತಪ್ಪಿಸಲು ಹೋದಾಗ ಎನ್ಕೌಂಟರ್ ಆಗಿದೆ ಎಂದು ಹೇಳಿದ್ದಾರೆ. ಎಂಟು ಮಂದಿ ಪೊಲೀಸರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ದುಬೆಯನ್ನು ಮಧ್ಯಪ್ರದೇಶದ ಉಜ್ಜಯನಿಯಲ್ಲಿ ನಿನ್ನೆ ಬಂಧಿಸಿ ಉತ್ತರ ಪ್ರದೇಶಕ್ಕೆ ಕರೆತರುವಾಗ ಈ ಘಟನೆ ನಡೆದಿದೆ.
ಹೆಚ್ಚಿನ ಜನರು ಇದನ್ನು ನಕಲಿ ಎನ್ಕೌಂಟರ್ ಎಂದಿದ್ದು, ಒಬ್ಬನನ್ನು ಕೊಲ್ಲುವ ಮೂಲಕ ನೂರಾರು ಅಪರಾಧಿಗಳನ್ನು ರಕ್ಷಿಸಲಾಗಿದೆ ಎಂದು ಎಂದು ಆರೋಪಿಸಿದ್ದಾರೆ.
ಓದಿ: ವಿಕಾಸ್ ದುಬೆ ಹಾಗೂ ಕಾನ್ಪುರ ಘಟನೆಯ ಕುರಿತು ಸಂಪೂರ್ಣ ಮಾಹಿತಿ