Homeಮುಖಪುಟಲಾಕ್‌ಡೌನ್ ಸಮಯದಲ್ಲಿ ಶಾಲಾ ಶುಲ್ಕ ಪಾವತಿಗೆ ಕಾಲಾವಕಾಶ ಕೋರಿದ್ದ ಪಿಐಎಲ್ ತಿರಸ್ಕರಿಸಿದ ಸುಪ್ರೀಂ

ಲಾಕ್‌ಡೌನ್ ಸಮಯದಲ್ಲಿ ಶಾಲಾ ಶುಲ್ಕ ಪಾವತಿಗೆ ಕಾಲಾವಕಾಶ ಕೋರಿದ್ದ ಪಿಐಎಲ್ ತಿರಸ್ಕರಿಸಿದ ಸುಪ್ರೀಂ

ಅರ್ಜಿದಾರರ ಪರ ಹಾಜರಾದ ವಕೀಲರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶಾಲೆಗಳಿಗೆ ಹೆಚ್ಚಿನ ಶುಲ್ಕ ವಿಧಿಸಲು ಅವಕಾಶ ನೀಡಿವೆ ಎಂದು ಸೂಚಿಸಿದರು.

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ ಶಾಲಾ ಶುಲ್ಕವನ್ನು ಮುಂದೂಡಬೇಕೆಂದು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಜೊತೆಗೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ, ಏಕೆಂದರೆ ವಾಸ್ತವ ಸ್ಥಿತಿಗತಿಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗಬಹುದು. ಈ ವಿಚಾರವನ್ನು ಹೈಕೋರ್ಟ್‌ನಲ್ಲಿ ಚರ್ಚಿಸಿ ಎಂದು ಹೇಳಿದೆ.

“ಈ ಮನವಿಯನ್ನು ರಾಜ್ಯ ಹೈಕೋರ್ಟ್‌ಗಳ ಮುಂದೆ ಸಲ್ಲಿಸಬೇಕಿತ್ತು. ಇದು ಸುಪ್ರೀಂ ಕೋರ್ಟ್‌ಗೆ ಏಕೆ ಬಂದಿದೆ? ಪರಿಸ್ಥಿತಿ ನಿಜಕ್ಕೂ ತೀವ್ರವಾಗಿದೆ” ಎಂದು ತ್ರಿಸದಸ್ಯ ನ್ಯಾಯಾಧೀಶರ ಪೀಠದ ಮುಖ್ಯಸ್ಥರಾದ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಮೂರ್ತಿಗಳಾದ ಆರ್. ಸುಭಾಷ್ ರೆಡ್ಡಿ ಮತ್ತು ಎ ಎಸ್ ಬೋಪಣ್ಣ ಅವರನ್ನೂ ಒಳಗೊಂಡ ನ್ಯಾಯಪೀಠ, “ಪ್ರತಿ ರಾಜ್ಯದ ಸಮಸ್ಯೆಗಳು ವಿಭಿನ್ನವಾಗಿವೆ. ನೀವು ಇಡೀ ದೇಶಕ್ಕಾಗಿ ಮನವಿ ಸಲ್ಲಿಸಿದ್ದೀರಿ. ಇಡೀ ದೇಶಕ್ಕಾಗಿ ಯಾರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ಸ್ಪಷ್ಟವಲ್ಲದ ವಿಷಯವಾಗಿದೆ” ಎಂದಿದ್ದಾರೆ.

ಅರ್ಜಿದಾರರ ಪರ ಹಾಜರಾದ ವಕೀಲರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶಾಲೆಗಳಿಗೆ ಹೆಚ್ಚಿನ ಶುಲ್ಕ ವಿಧಿಸಲು ಅವಕಾಶ ನೀಡಿವೆ ಎಂದು ಸೂಚಿಸಿದರು.

“ಈ ಹಂತದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು. ಅರ್ಜಿದಾರರು ತಮ್ಮ ಮನವಿಯನ್ನು ಹಿಂತೆಗೆದುಕೊಳ್ಳಲು ಮತ್ತು ಹೈಕೋರ್ಟ್‌ಗಳನ್ನು ಸಂಪರ್ಕಿಸುವಂತೆ ಹೇಳಲಾಗಿದೆ.

ರಾಜಸ್ಥಾನ, ಒಡಿಶಾ, ಪಂಜಾಬ್, ಗುಜರಾತ್, ಹರಿಯಾಣ, ಉತ್ತರಾಖಂಡ, ದೆಹಲಿ ಮತ್ತು ಮಹಾರಾಷ್ಟ್ರದ ವಿದ್ಯಾರ್ಥಿಗಳ ಪೋಷಕರು ಸಲ್ಲಿಸಿದ ಮನವಿಯು ಹಣಕಾಸಿನ ತೊಂದರೆಗಳನ್ನು ಉಲ್ಲೇಖಿಸಿ ಲಾಕ್ ಡೌನ್ ಅವಧಿಗೆ ಶಾಲಾ ಶುಲ್ಕವನ್ನು ಪಾವತಿಸುವುದನ್ನು ನಿಷೇಧಿಸಲು ಅಥವಾ ಮುಂದೂಡಲು ಕೋರಿತ್ತು.

ಆನ್‌ಲೈನ್ ವರ್ಚುವಲ್ ತರಗತಿಗಳ ನಡವಳಿಕೆಗೆ ನಿಜವಾದ ಖರ್ಚಿನ ಆಧಾರದ ಮೇಲೆ ಪ್ರಮಾಣಾನುಗುಣವಾದ ಶುಲ್ಕವನ್ನು ಮಾತ್ರ ವಿಧಿಸಲು ಖಾಸಗಿ ಅನುದಾನರಹಿತ / ಅನುದಾನಿತ ಶಾಲೆಗಳಿಗೆ ನಿರ್ದೇಶನ ನೀಡುವಂತೆ ಕೇಂದ್ರ ಮತ್ತು ರಾಜ್ಯಗಳನ್ನು ಕೋರಬೇಕೆಂದು ನ್ಯಾಯಾಲಯವನ್ನು ಕೋರಿದೆ.

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಪೋಷಕರು ತಮ್ಮ ಮಕ್ಕಳನ್ನು ಶಾಲೆ ಬಿಡಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಮನವಿಯಲ್ಲಿ ಸೂಚಿಸಲಾಗಿದೆ.


ಇದನ್ನೂ ಓದಿ: ಶಾಲಾ ಕಾಲೇಜುಗಳ ಶುಲ್ಕ ಮನ್ನಾಗೆ ಆಗ್ರಹಿಸಿ ಪಶ್ಚಿಮ ಬಂಗಾಳದಾದ್ಯಂತ ಎಸ್‌ಎ‌ಫ್‌ಐ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...