Homeಅಂತರಾಷ್ಟ್ರೀಯಭಾರತದೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಶಿಕ್ಷೆ: ಭೂತಾನ್

ಭಾರತದೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಶಿಕ್ಷೆ: ಭೂತಾನ್

ಕಳೆದ ವಾರ, ಚೀನಾ ಸರ್ಕಾರವು ಭೂತಾನ್‌ನ “ಪೂರ್ವ ವಲಯ” ಗಳನ್ನು ಉಭಯ ದೇಶಗಳ ನಡುವಿನ ವಿವಾದಿತ ಪ್ರದೇಶಗಳ ಭಾಗವಾಗಿ ಸೇರಿಸಿಕೊಂಡಿತು.

- Advertisement -
- Advertisement -

ಭಾರತ – ಚೀನಾ ನಡುವೆ ನಡೆದ ಭೀಕರ ಗಡಿ ಚಕಮಕಿಯ ನಂತರ ಭಾರತೀಯ ಮತ್ತು ಚೀನಾದ ಸೈನಿಕರು ಲಡಾಖ್‌ನಿಂದ ಹಿಂತಿರುಗುತ್ತಿದ್ದಂತೆ ಏಷ್ಯಾದ ಎರಡು ದೈತ್ಯ ರಾಷ್ಟ್ರಗಳ ನಡುವೆ ಸಿಕ್ಕಿಕೊಂಡಂತೆ ಭಾಸವಾಗುತ್ತಿದೆ ಎಂದು ಭೂತಾನ್ ಹೇಳಿದೆ.

ಕಳೆದ ವಾರ, ಚೀನಾ ಸರ್ಕಾರವು ಭೂತಾನ್‌ನ “ಪೂರ್ವ ವಲಯ” ಗಳನ್ನು ಉಭಯ ದೇಶಗಳ ನಡುವಿನ ವಿವಾದಿತ ಪ್ರದೇಶಗಳ ಭಾಗವಾಗಿ ಸೇರಿಸಿಕೊಂಡಿತು. “ಪೂರ್ವ, ಮಧ್ಯ ಮತ್ತು ಪಶ್ಚಿಮ ಕ್ಷೇತ್ರಗಳಲ್ಲಿ ದೀರ್ಘಕಾಲದ ವಿವಾದಗಳಿವೆ” ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಯುನೈಟೆಡ್ ನೇಷನ್ಸ್ ಡೆವಲಪ್ಮೆಂಟ್ ಪ್ರೊಗ್ರಾಂನ ಜಾಗತಿಕ ಪರಿಸರ ಸೌಲಭ್ಯದಿಂದ ದೂರದ ಪೂರ್ವ ಭೂತಾನ್ ನಲ್ಲಿರುವ ಸಕ್ಟೆಂಗ್ ವನ್ಯಜೀವಿ ಅಭಯಾರಣ್ಯಕ್ಕೆ ಧನಸಹಾಯವನ್ನು ನಿಲ್ಲಿಸುವ ಪ್ರಯತ್ನವನ್ನು ಚೀನಾ ಅನುಸರಿಸುತ್ತಿದೆ. ಯುನೈಟೆಡ್ ಸ್ಟೇಟ್ಸ್ ಮೂಲದ ಜಾಗತಿಕ ಸಂಸ್ಥೆಯು ಪರಿಸರ ಯೋಜನೆಗಳಿಗೆ ಹಣವನ್ನು ನೀಡುತ್ತದೆ. ಈಗ ಅಭಯಾರಣ್ಯವು “ವಿವಾದಿತ ಪ್ರದೇಶ” ದಲ್ಲಿದೆ ಎಂದು ಚೀನಾ ಹೇಳಿಕೊಂಡಿದೆ.

ಭೂತಾನ್‌ನ ಸುದ್ದಿ ವರದಿಗಳು ಹೇಳುವಂತೆ, ಚೀನಾ ಸರ್ಕಾರವು ಉಭಯ ದೇಶಗಳ ರಾಜತಾಂತ್ರಿಕ ವಿಷಯಗಳನ್ನು ಹಂಚಿಕೊಳ್ಳಲಾಗುವುದಿಲ್ಲ ಎಂಬ ಪ್ರತಿಭಟನಾತ್ಮಕ ಕ್ರಮ ತೆಗೆದುಕೊಳ್ಳಲಾಗಿದೆ. ಆದರೆ ಚೀನಾ ಸರ್ಕಾರ ಇದನ್ನು ನಿರಾಕರಿಸಿದೆ.

ಚೀನಾದ ಈ ಕ್ರಮವು ಭಾರತದೊಂದಿಗಿನ ದ್ವೇಷದೊಂದಿಗೆ ಸಂಬಂಧ ಹೊಂದಿರಬಹುದು ಎಂದು ಹಲವರು ಹೇಳುತ್ತಾರೆ.

“ಸಿನೊ-ಭೂತಾನ್ ಗಡಿ ವಿವಾದವು ಅಷ್ಟೇನೂ ತೀವ್ರವಾಗಿಲ್ಲ. ಭೂತಾನ್ ಭಾರತದೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಸೇಡು ತೀರಿಸಿಕೊಳ್ಳಲು ಚೀನಾ ಬಯಸುತ್ತಿದೆ” ಎಂದು ಭೂತಾನ್‌ನ ಒಟ್ಟು ರಾಷ್ಟ್ರೀಯ ಸಂತೋಷ ಅಧ್ಯಯನ ಕೇಂದ್ರದ ಮುಖ್ಯಸ್ಥ ಡೋರ್ಜಿ ಪೆಂಜೋರ್ “Security of Bhutan: Walking Between the Giants” ಎಂಬ ಶೀರ್ಷಿಕೆಯ ಲೇಖನದಲ್ಲಿ ಬರೆದಿದ್ದಾರೆ.

ನಮಗೆ ಚೀನಾದೊಂದಿಗೆ ಯಾವುದೇ ಸಂಬಂಧವಿಲ್ಲ. ಆದರೂ ನಾವು ಚೀನಾದೊಂದಿಗೆ ವಿವಾದಕ್ಕೆ ಸಿಲುಕುತ್ತಿದ್ದೇವೆ. ಏಕೆಂದರೆ ಭಾರತವು ಚೀನಾದೊಂದಿಗೆ ವಿವಾದಗಳನ್ನು ಎದುರಿಸುತ್ತಿದೆ. ಚೀನಾ ಮತ್ತು ಭಾರತದ ನಡುವಿನ ಸಂಬಂಧ ಸುಧಾರಿಸಿದರೆ ನಮಗೆ ತೊಂದರೆಯಿಲ್ಲ ಎಂದು ಅವರು ಹೇಳಿದರು.

ಸಾರ್ವಜನಿಕ ವಲಯದಲ್ಲಿ ವಿಶ್ವಾಸಾರ್ಹ ಮಾಹಿತಿಯ ಕೊರತೆಯಿದೆ. ಸ್ಥಳೀಯ ಮಾಧ್ಯಮಗಳು ಇಲ್ಲಿಯವರೆಗಿನ ಬೆಳವಣಿಗೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿವೆ. ಭೂತಾನಿಯರಲ್ಲಿ ಭಾರತೀಯ ಮಾಧ್ಯಮಗಳ ಮೇಲೆ ನಂಬಿಕೆ ಬಹಳ ಕಡಿಮೆ ಎಂದು ಪತ್ರಕರ್ತರು ಹೇಳಿದ್ದಾರೆ.

ಐತಿಹಾಸಿಕವಾಗಿ ನಡೆದಂತೆ, ಭೂತಾನ್ ಸಹಾನುಭೂತಿ ಭಾರತದೊಂದಿಗೆ ಮುಂದುವರೆದಿದೆ ಎಂದು ಡಕಾಲ್ ಹೇಳಿದರು. “ಒಂದೇ ಸಮಸ್ಯೆ ಎಂದರೆ ನೇಪಾಳದಂತೆಯೇ, ಭಾರತೀಯ ಮಾಧ್ಯಮಗಳು ಭೂತಾನ್ ಬಗ್ಗೆ ತಪ್ಪು ಮಾಹಿತಿಯನ್ನು ಹರಡುತ್ತವೆ. ಇದು ಇಲ್ಲಿಯ ಬಹಳಷ್ಟು ಜನರನ್ನು ಆತಂಕಕ್ಕೆ ತಳ್ಳಿದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಭಾರತ-ಚೀನಾ ಗಡಿ ಬಿಕ್ಕಟ್ಟಿಗೆ ಕಾರಣಗಳೇನು? ಈಗಲಾದರೂ ಮೌನ ಮುರಿಯುವರೆ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...