Homeಕರೋನಾ ತಲ್ಲಣಸಂಸದೀಯ ಸಮಿತಿಯಿಂದ ಪಿಎಂ ಕೇರ್ಸ್‌ ಪರಾಮರ್ಶೆಗೆ ಬಿಜೆಪಿ ವಿರೋಧ!

ಸಂಸದೀಯ ಸಮಿತಿಯಿಂದ ಪಿಎಂ ಕೇರ್ಸ್‌ ಪರಾಮರ್ಶೆಗೆ ಬಿಜೆಪಿ ವಿರೋಧ!

ಬೇರೆ ಸಮಿತಿಯ ಸಭೆಗಿಂತ ಭಿನ್ನವಾಗಿ ಬಿಜೆಪಿಯ ಎಲ್ಲಾ ಸದಸ್ಯರು ಈ ಸಭೆಯಲ್ಲಿ ಬಹುತೇಕ ಪೂರ್ಣ ಹಾಜರಾತಿಯಲ್ಲಿದ್ದು ಪ್ರಸ್ತಾಪವ್ನನು ವಿಫಲಗೊಳಿಸಿದರು.

- Advertisement -
- Advertisement -

ಈ ಹಿಂದೆ 2 ಜಿ ಸ್ಪೆಕ್ಟ್ರಮ್ ಹಗರಣದಂತಹ ವಿಷಯಗಳನ್ನು ಕೈಗೆತ್ತಿಕೊಂಡಿರುವ ಪ್ರಮುಖ ಸಂಸದೀಯ ಸಮಿತಿ‌ಗಳಲ್ಲಿ ಒಂದಾದ ಸಾರ್ವಜನಿಕ ಲೆಕ್ಕಪತ್ರ ಸಮಿತಿ (PAC)ಯು, ಕೊರೊನಾ ಸಾಂಕ್ರಾಮಿಕ ಬಿಕ್ಕಟ್ಟನ್ನು ನಿಭಾಯಿಸಲು ಸ್ಥಾಪಿಸಲಾದ ಹೊಸ ಪಿಎಂ ಕೇರ್‌ ನಿಧಿಯನ್ನು ಪರಾಮರ್ಶಿಸುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.

ಸಮಿತಿಯ ಅಧ್ಯಕ್ಷರಾದ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರದ ಬಗ್ಗೆ ಯೋಚಿಸಿ ತಮ್ಮ ಆತ್ಮಸಾಕ್ಷಿಗನುಗುಣವಾಗಿ ನಡೆದುಕೊಂಡು ಪ್ರಮುಖ ವಿಷಯದ ಬಗ್ಗೆ ಒಮ್ಮತ ಕಂಡುಕೊಳ್ಳಬೇಕೆಂದು ಸದಸ್ಯರಿಗೆ ಮನವಿ ಮಾಡಿದರು.

ಬಿಜು ಜನತಾದಳ ಮತ್ತು ಡಿಎಂಕೆ ಸದಸ್ಯರು ಈ ಪ್ರಸ್ತಾಪವನ್ನು ಅನುಮೋದಿಸಿದರೂ, ಆಡಳಿತಾರೂಢ ಬಿಜೆಪಿಯ ಸದಸ್ಯರೆ ಹೆಚ್ಚಿದ್ದ ಸಭೆಯಲ್ಲಿ ಪಿಎಂ ಕೇರ್ಸ್‌ ಬಗ್ಗೆ ಪರಿಶೀಲನೆ ನಡೆಸುವ ಚೌಧರಿ ಅವರ ಪ್ರಸ್ತಾಪವನ್ನು ವಿರೋಧಿಸಿದರು ಎಂದು ಮೂಲಗಳು ತಿಳಿಸಿವೆ.

ಪಿಎಂ ಕೇರ್ಸ್‌ ಹಣದ ಖರ್ಚಿನ ಬಗ್ಗೆ ಬಿಜೆಪಿ ಸದಸ್ಯರಿಗೆ ಆತಂಕವಿರುವ ಕಾರಣಕ್ಕಾಗಿ ಸಂಸದೀಯ ಸಮಿತಿಯ ಪರಿಶೀಲನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ವೈಯಕ್ತಿಕ ಮತ್ತು ಖಾಸಗಿ ವಲಯದ ದೇಣಿಗೆಗಳನ್ನು ಸೆಳೆಯಲು ರಾಷ್ಟ್ರೀಯ ತುರ್ತು ಪರಿಸ್ಥಿತಿಗಾಗಿ ಸ್ಥಾಪಿಸಲಾದ ಪಿಎಂ ಕೇರ್ಸ್ ನಿಧಿಯನ್ನು ಸರ್ಕಾರದ ಲೆಕ್ಕಪರಿಶೋಧಕರಿಂದ ಪರಿಶೀಲಿಸಲಾಗುವುದಿಲ್ಲ. ಅದನ್ನು ಸ್ವತಂತ್ರ ಲೆಕ್ಕ ಪರಿಶೋಧಕರು ನೋಡುತ್ತಾರೆ ಎಂದು ಸರ್ಕಾರ ಹೇಳಿದೆ.

ರಾಷ್ಟ್ರವ್ಯಾಪಿ ಲಾಕ್‌ಡೌನ್ ಅನ್ನು ತೆಗೆದುಹಾಕಿದ ನಂತರ ಸಮಿತಿ ಇದೇ ಮೊದಲು ಸಭೆಸೇರಿದ್ದು, ಬೇರೆ ಸಂಸದೀಯ ಸಮಿತಿಯ ಸಭೆಗೆ ಭಾಗವಹಿಸದ ಬಿಜೆಪಿಯ ಎಲ್ಲಾ ಸದಸ್ಯರು ಈ ಸಭೆಯಲ್ಲಿ ಬಹುತೇಕ ಪೂರ್ಣ ಹಾಜರಾತಿ ಖಚಿತಪಡಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಈ ಕಾರಣದಿಂದಾಗಿ, ಸಂಸದೀಯ ಸಮಿತಿಯು ವಿಶ್ವದ ಅತಿದೊಡ್ಡ ಲಾಕ್‌ಡೌನ್‌ಗಳಲ್ಲಿ ಸರ್ಕಾರದ ಪ್ರತಿಕ್ರಿಯೆ ಹೇಗಿತ್ತು ಹಾಗೂ ಅದು ಹೇಗೆ ಬಿಕ್ಕಟ್ಟನ್ನು ನಿಭಾಯಿಸುತ್ತಿದೆ ಎಂಬುದನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಹಾಗೂ  ವಿಶ್ಲೇಷಿಸಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಕೊರೊನಾಗೆ ಲಸಿಕೆ ಮುಂದಿನ ವರ್ಷವೇ ಸಾಧ್ಯ: ಸಂಸದೀಯ ಸಮಿತಿಗೆ ವಿಜ್ಞಾನಿಗಳ ಹೇಳಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...