Homeಕರ್ನಾಟಕಬೆಂಗಳೂರಿಗರ ತ್ಯಾಜ್ಯದ ದುರ್ವಾಸನೆ ನೆರೆಯ ಹಳ್ಳಿಗರು ಸಹಿಸಬೇಕು

ಬೆಂಗಳೂರಿಗರ ತ್ಯಾಜ್ಯದ ದುರ್ವಾಸನೆ ನೆರೆಯ ಹಳ್ಳಿಗರು ಸಹಿಸಬೇಕು

2017 ರ ವರೆಗೂ ಅತ್ಯಂತ ಸುಂದರವಾಗಿದ್ದ ಗ್ರಾಮವೂ ಬಿಬಿಎಂಪಿ ತ್ಯಾಜ್ಯ ತುಂಬಿಸುವ ತಾಣವಾಗಿ ಆಯ್ಕೆ ಮಾಡಿದ ನಂತರ ದುರ್ವಾಸನೆಯ ಊರಾಗಿದೆ ಎನ್ನುತ್ತಾರೆ ಗ್ರಾಮಸ್ಥರು.

- Advertisement -
- Advertisement -

ಒಂದು ಕೋಟಿಗೂ ಹೆಚ್ಚು ಜನಸಂಖ್ಯೆಯಿರುವ ಬೆಂಗಳೂರಿಗರ 6,000 ಟನ್‌ಗಿಂತಲೂ ಹೆಚ್ಚಿರುವ ದೈನದಿಂನ ತ್ಯಾಜ್ಯದ ದುರ್ವಾಸನೆಯನ್ನು ನೆರೆಯ ಹಳ್ಳಿಗಳಾದ ಮಂಡೂರು, ಮಾವಲ್ಲಿಪುರ, ಬೆಲ್ಲಹಳ್ಳಿ ಮುಂತಾದ ಹಳ್ಳಿಯ ನಿವಾಸಿಗಳು ಅನಿವಾರ್ಯವಾಗಿ ಸಹಿಸುವಂತಾಗಿದೆ.

2017 ರವರೆಗೂ ಅತ್ಯಂತ ಸುಂದರವಾಗಿದ್ದ ಮಂಡೂರು ಗ್ರಾಮವೂ ಬಿಬಿಎಂಪಿ ಇದನ್ನು ತ್ಯಾಜ್ಯ ತುಂಬಿಸುವ ತಾಣವಾಗಿ ಆಯ್ಕೆ ಮಾಡಿದ ನಂತರ ದುರ್ವಾಸನೆಯ ಊರಾಗಿದೆ ಎಂದು ಹೇಳುವ ಸಿಲ್ಲಾವಲಿ, ಪ್ರತಿದಿನ ನೂರಾರು ಟ್ರಕ್‌ಗಳು ​​ಈ ಪ್ರದೇಶದಲ್ಲಿ ತ್ಯಾಜ್ಯವನ್ನು ಎಸೆಯುತ್ತಿರುವುದರಿಂದ ರೋಗಗಳು ಬರುತ್ತಿದೆ ಎಂದು ಹೇಳುತ್ತಾರೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಯಾರೂ ಇಲ್ಲದ ಬಂಜರು ಭೂಮಿಯಲ್ಲಿ ತ್ಯಾಜ್ಯವನ್ನು ಹಾಕಬೇಕು ಎಂದು ಹೇಳುತ್ತದೆ. ತ್ಯಾಜ್ಯ ಹಾಕಲು ದೊಡ್ಡ ಜಾಗ ಅಗತ್ಯವಿದೆಯಲ್ಲದೆ, ರೋಗಕಾರಕಗಳು, ನೊಣಗಳು ಅಲ್ಲಿ ಉತ್ಪತ್ತಿಯಾಗುವುದಲ್ಲದೆ, ಅದು ಹಸಿರುಮನೆ ಅನಿಲಗಳ ಉತ್ಪಾದನೆಗೆ ಸಹಕಾರಿಯಾಗುತ್ತದೆ ಹಾಗೂ ಬೆಂಕಿಯ ಅಪಾಯ ಕೂಡಾ ಉಂಟು ಮಾಡುತ್ತದೆ.

ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಮಾರ್ಗಸೂಚಿಗಳ ಪ್ರಕಾರ, ತ್ಯಾಜ್ಯ ವಿಲೇವಾರಿ ತಾಣವು ಅಧಿಸೂಚಿತ ಜನವಸತಿ ಪ್ರದೇಶದಿಂದ ಕನಿಷ್ಠ 500 ಮೀಟರ್ ದೂರದಲ್ಲಿರಬೇಕು ಮತ್ತು ತಮ್ಮ ಗಡಿಯ ಸುತ್ತ 500 ಮೀಟರ್ ವಲಯವನ್ನು ‘ಅಭಿವೃದ್ಧಿಯಿಲ್ಲದ ಬಫರ್ ವಲಯ’ ಎಂದು ಘೋಷಿಸಬೇಕು ಎಂದು ಹೇಳುತ್ತದೆ.

2014 ರಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ತೀರ್ಮಾನಿಸಿದ್ದ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ತಾಣಗಳು ಬೆಂಗಳೂರಿನ ಬಫರ್ ವಲಯಗಳ ಒಳಗೆ ಇವೆ ಮತ್ತು ಆ ಪ್ರದೇಶಗಳ ಜನರು ಎದುರಿಸುತ್ತಿರುವ ದುರ್ವಸನೆಯ ರಗಳೆಯ ಬಗ್ಗೆ ದೂರುಗಳಿವೆ.

ಅಸ್ತಿತ್ವದಲ್ಲಿರುವ ಮತ್ತು ಭವಿಷ್ಯದ ತ್ಯಾಜ್ಯ ವಿಲೇವಾರಿ ತಾಣಗಳು ಬಫರ್ ವಲಯದೊಳಗೆ ಇರಬಾರದು ಎಂದು ಕೆಎಸ್‌ಪಿಸಿಬಿ ಬಿಬಿಎಂಪಿಗೆ ನಿರ್ದೇಶನ ನೀಡಿತ್ತು ಆದರೆ ಬಿಬಿಎಂಪಿ ಇದಕ್ಕಾಗಿ ಯಾವುದೇ ಕ್ರಮಗಳನ್ನು ಇದುವರೆಗೂ ತೆಗೆದುಕೊಂಡಿಲ್ಲ.

ವಿಶ್ವಬ್ಯಾಂಕ್ ಅಧ್ಯಯನವೊಂದರ ಪ್ರಕಾರ, 90% ಕ್ಕಿಂತಲೂ ಹೆಚ್ಚು ತ್ಯಾಜ್ಯವನ್ನು ಅನಿಯಂತ್ರಿತ ಡಂಪ್‌ಗಳಲ್ಲಿ ವಿಲೇವಾರಿ ಮಾಡಲಾಗುತ್ತದೆ ಅಥವಾ ಭಾರತದಂತಹ ದೇಶಗಳಲ್ಲಿ ಬಹಿರಂಗವಾಗಿ ಸುಡಲಾಗುತ್ತದೆ.

ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ಅಧ್ಯಕ್ಷೆ ಮತ್ತು ಪ್ರಾಧ್ಯಾಪಕಿಯಾದ ಪ್ರೊ.ನಂದಿನಿ ಎನ್ ಅವರು ಹೇಳುವ ಪ್ರಕಾರ, ಈ ತ್ಯಾಜ್ಯದ ತಾಣಗಳು ಇ. ಕೋಲಿ ಹಾಗೂ ಫೆಕಲ್ ಸ್ಟ್ರೆಪ್ಟೋಕೊಕಿ (ಬಯೋ-ಏರೋಸಾಲ್) ನಂತಹ ಸೂಕ್ಷ್ಮಜೀವಿಗಳನ್ನು ಹೆಚ್ಚಿಸುತ್ತವೆ. ಇದು ಗಾಳಿಯಿಂದ ಹತ್ತಿರದಲ್ಲಿ ವಾಸಿಸುತ್ತಿರುವ ಪ್ರದೇಶಕ್ಕೆ ಹರಡುತ್ತದೆ. ಈ ಬಯೋಎರೋಸೋಲ್‌ಗಳು ಒಡ್ಡಿಕೊಳ್ಳುವುದರಿಂದ ವೈರಸ್‌ಗಳು, ಬ್ಯಾಕ್ಟೀರಿಯಾ, ಶಿಲೀಂಧ್ರಗಳು, ಆಸ್ತಮಾ, ಅಲರ್ಜಿಕ್ ರಿನಿಟಿಸ್ ಮತ್ತು ಕ್ಯಾನ್ಸರ್ ನಂತಹ ಸಾಂಕ್ರಾಮಿಕ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಅವರು ಹೇಳುತ್ತಾರೆ.

ಮೆಡಿಕಲ್ ತ್ಯಾಜ್ಯದ ಕಳಪೆ ನಿರ್ವಹಣೆಯು ಆರೋಗ್ಯ ಕಾರ್ಯಕರ್ತರು, ತ್ಯಾಜ್ಯ ನಿರ್ವಹಿಸುವವರು, ರೋಗಿಗಳು ಮತ್ತು ಸಮುದಾಯವನ್ನು ಸೋಂಕಿಗೆ ಒಡ್ಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳುತ್ತದೆ.

ಲೇಕ್‌ಸೈಡ್ ಸೆಂಟರ್ ಫಾರ್ ಹೆಲ್ತ್ ಪ್ರಮೋಷನ್‌ನ ಮಕ್ಕಳ ಶ್ವಾಸಕೋಶಶಾಸ್ತ್ರಜ್ಞ ಡಾ.ಎಚ್. ​​ಪರಮೇಶ್ ಅವರ ಪ್ರಕಾರ, ಮಾಲಿನ್ಯಕಾರಕಗಳಾದ ಮೀಥೇನ್, ಸಾರಜನಕ, ಇಂಗಾಲ ಮತ್ತು ಡಯಾಕ್ಸಿನ್‌ಗಳು ಆಸ್ತಮಾ, ಚರ್ಮರೋಗ ಮತ್ತು ಬ್ಲಡ್ಡ‍ರ್‌ ಕ್ಯಾನ್ಸರ್ ನಂತಹ ಉಸಿರಾಟದ ತೊಂದರೆ ಹಾಗೂ ಸಂತಾನೋತ್ಪತ್ತಿ ಮತ್ತು ಬೆಳವಣಿಗೆಯ ಸಮಸ್ಯೆಗಳನ್ನು ಉಂಟುಮಾಡುತ್ತದೆ  ಎಂದು ಹೇಳುತ್ತಾರೆ.

ನಗರ ತ್ಯಾಜ್ಯದ ಸುಧಾರಿತ ಸಂಗ್ರಹಣೆ, ನಿರ್ವಹಣೆ ಮತ್ತು ವಿಲೇವಾರಿಯು ಹವಾಮಾನ ಮತ್ತು ಆರೋಗ್ಯ ಎರಡಕ್ಕೂ ಉಪಯುಕ್ತವಾದ ಪ್ರಮುಖ ತಂತ್ರವಾಗಿದೆ. ಮೀಥೇನ್ ಹೊರಸೂಸುವಿಕೆಯನ್ನು ಒಳಚರಂಡಿ, ಜಾನುವಾರು ಗೊಬ್ಬರ ಮತ್ತು ಘನತ್ಯಾಜ್ಯದಿಂದ ಪಡೆದು ಜೈವಿಕ ಅನಿಲವಾಗಿ ಬಳಸಬಹುದು ಎಂದು ಅಧ್ಯಯನ ಹೇಳಿದೆ.

ಭಾರತದ ಪರಿಸರ ಭದ್ರತಾ ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯ ಡಾ.ಯೆಲ್ಲಪ ರೆಡ್ಡಿ, ತ್ಯಾಜ್ಯ ಉತ್ಪಾದನೆಯೇ ಪ್ರಮುಖ ಸಮಸ್ಯೆ ಎಂದು ಪ್ರಸ್ತಾಪಿಸಿದ ಅವರು ತ್ಯಾಜ್ಯವನ್ನು ಹೆಚ್ಚಿಸುವ ಪ್ಲಾಸ್ಟಿಕನು ಕಡಿಮೆ ಬಳಸುವಂತೆ ಹಾಗೂ ಜೈವಿಕ ವಿಘಟನೀಯ ವಸ್ತುಗಳನ್ನು ಬಳಸುವಂತೆ ಅವರು ಸಲಹೆ ನೀಡಿದರು. ವಿತರಣಾ ಕಂಪನಿಗಳು ಸಹ ತಮ್ಮ ಪ್ಯಾಕೇಜಿಂಗ್ ಅನ್ನು ಜೈವಿಕ ವಿಘಟನೀಯವಾಗಿಸಬೇಕು ಎಂದರು.

ಕೃಪೆ: ಡೆಕ್ಕನ್ ಹೆರಾಲ್ಡ್


ಓದಿ: ಸಿಲಿಕಾನ್ ಸಿಟಿಯಲ್ಲಿ ಡಿಜಿಟಲ್ ಡಿವೈಡ್; ಬೆಂಗಳೂರು ಭೇಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...