Homeಮುಖಪುಟ3/4 ರಷ್ಟು ಭಾರತೀಯರು OTTಯಲ್ಲಿ ಚಲನಚಿತ್ರಗಳನ್ನು ವೀಕ್ಷಿಸಲು ಬಯಸುತ್ತಾರೆ

3/4 ರಷ್ಟು ಭಾರತೀಯರು OTTಯಲ್ಲಿ ಚಲನಚಿತ್ರಗಳನ್ನು ವೀಕ್ಷಿಸಲು ಬಯಸುತ್ತಾರೆ

ಆ್ಯಪ್ ಡಿಸ್ಟ್ರಿಬ್ಯೂಷನ್ ಪ್ಲಾಟ್‌ಫಾರ್ಮ್ ಮೊಮ್ಯಾಜಿಕ್ ನಡೆಸಿದ ಸಮೀಕ್ಷೆಯಲ್ಲಿ 54 ಪ್ರತಿಶತದಷ್ಟು ಗ್ರಾಹಕರು ಇನ್ನೂ ಥಿಯೇಟರ್ ಹಾಲ್‌ಗಳಲ್ಲಿ ಪಾನೀಯಗಳು ಮತ್ತು ತಿಂಡಿಗಳನ್ನು ಪಡೆದುಕೊಳ್ಳುತ್ತಾರೆ ಎಂದು ತಿಳಿದಿದೆ. 44 ಪ್ರತಿಶತದಷ್ಟು ಜನರು ಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

- Advertisement -
- Advertisement -

ನಾಲ್ಕು ಭಾರತೀಯರಲ್ಲಿ ಮೂವರು OTT ಪ್ಲಾಟ್‌ಫಾರ್ಮ್‌ಗಳಲ್ಲಿ ಚಲನಚಿತ್ರವನ್ನು ನೋಡಲು ಬಯಸುತ್ತಾರೆ. ಕೇವಲ ನಾಲ್ಕರಲ್ಲಿ ಒಬ್ಬರು  ಸಿನೆಮಾ ಹಾಲ್‌ಗೆ ಹೋಗಲು ಇಷ್ಟಪಡುತ್ತಾರೆ ಎಂದು ಹೊಸ ಸಮೀಕ್ಷೆಯೊಂದು ಶುಕ್ರವಾರ ತಿಳಿಸಿದೆ.

ಕೊರೊನಾ ಕಾರಣದಿಂದ ಚಿತ್ರಮಂದಿರಗಳು ಬಂದ್ ಆಗಿವೆ. ಈ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಚಿತ್ರಮಂದಿರಗಳು ತೆರೆದರೆ ಸಿನಿಮಾ ವೀಕ್ಷಕರ ಮನಸ್ಥಿತಿ ಹೇಗಿರುತ್ತದೆ ಎಂದು ತಿಳಿಯಲು ನಡೆಸಿದ ಸಮೀಕ್ಷೆ ಇದಾಗಿದೆ.

ಆ್ಯಪ್ ಡಿಸ್ಟ್ರಿಬ್ಯೂಷನ್ ಪ್ಲಾಟ್‌ಫಾರ್ಮ್ ಮೊಮ್ಯಾಜಿಕ್ ನಡೆಸಿದ ಸಮೀಕ್ಷೆಯಲ್ಲಿ 54 ಪ್ರತಿಶತದಷ್ಟು ಗ್ರಾಹಕರು ಇನ್ನೂ ಥಿಯೇಟರ್ ಹಾಲ್‌ಗಳಲ್ಲಿ ಪಾನೀಯಗಳು ಮತ್ತು ತಿಂಡಿಗಳನ್ನು ಪಡೆದುಕೊಳ್ಳುತ್ತಾರೆ ಎಂದು ತಿಳಿದಿದೆ. 44 ಪ್ರತಿಶತದಷ್ಟು ಜನರು ಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

“ಶೇಕಡಾ 71 ರಷ್ಟು ಜನರು ಚಿತ್ರಮಂದಿರದಲ್ಲಿ ನೋಡುವುದಕ್ಕೆ ಟಿಕೆಟ್ ದರ ಒಂದು ಪ್ರಮುಖ ಅಂಶವೆಂದು ತಿಳಿದಿದೆ. ನಂತರ 27 ಪ್ರತಿಶತದಷ್ಟು ಜನರು ಟಿಕೆಟ್ ದರ ಪ್ರಮುಖವಲ್ಲ ಎಂದು ಹೇಳಿದ್ದಾರೆ” ಎಂದು ಮೊಮಾಜಿಕ್ ಟೆಕ್ನಾಲಜೀಸ್ ಸಿಇಒ ಮತ್ತು ಸಂಸ್ಥಾಪಕ ಅರುಣ್ ಗುಪ್ತಾ ಹೇಳಿದ್ದಾರೆ.

75 ರಷ್ಟು ಮಂದಿ ಪ್ರತಿಕ್ರಿಯಿಸಿದ್ದು, ಚಲನಚಿತ್ರ ಮಂದಿರದಲ್ಲಿ ಆಸನಗಳ ನಡುವೆ ಸಾಮಾಜಿಕ ದೂರವಿರುವುದು ಒಟ್ಟಾರೆ ನೋಡುವ ಅನುಭವದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರೆ, ಕೇವಲ 23 ಪ್ರತಿಶತದಷ್ಟು ಜನರು ಮಾತ್ರ ತಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

ಅಲ್ಲದೆ, “ಶೇಕಡಾ 72 ರಷ್ಟು ಗ್ರಾಹಕರು ಚಲನಚಿತ್ರ ಮಂದಿರಕ್ಕಿಂತ ಹೆಚ್ಚಾಗಿ, ಮನೆಯಲ್ಲಿ ವೀಕ್ಷಿಸಲು ದೊಡ್ಡ ಪರದೆಯ ಟಿವಿ ಮತ್ತು ಹೋಮ್ ಥಿಯೇಟರ್ ಖರೀದಿಸಲು ಹೂಡಿಕೆ ಮಾಡುವುದಾಗಿ ಹೇಳಿದರು” ಎಂದು ಗುಪ್ತಾ ಹೇಳಿದರು.

ಕುಟುಂಬದೊಂದಿಗೆ ಮತ್ತೆ ಚಿತ್ರಮಂದಿರಕ್ಕೆ ತೆರಳಿ ಸಿನಿಮಾ ವೀಕ್ಷಿಸುತ್ತೀರಾ ಎಂಬ ಪ್ರಶ್ನೆಗೆ 44 ಪ್ರತಿಶತದಷ್ಟು ಗ್ರಾಹಕರು ತಾವು ಉತ್ಸುಕರಾಗಿದ್ದೇವೆಂದು ಹೇಳಿದರೆ, 26 ಪ್ರತಿಶತದಷ್ಟು ಜನರು ಹೆಚ್ಚು ಉತ್ಸುಕರಾಗಲಿಲ್ಲ, ಆದರೆ 15 ಪ್ರತಿಶತದಷ್ಟು ಜನರು ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಬೇಸರದಿಂದಿದ್ದಾರೆ.

ಹಲವಾರು ಚಲನಚಿತ್ರ ನಿರ್ಮಾಪಕರು ಮುಂದಿನ ತಿಂಗಳುಗಳಲ್ಲಿ ತಮ್ಮ ಚಲನಚಿತ್ರಗಳನ್ನು ವಿವಿಧ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ ಮಾಡಲು ಸಿದ್ಧರಾಗಿದ್ದಾರೆ. ಡಿಸ್ನಿ + ಹಾಟ್‌ಸ್ಟಾರ್ ತನ್ನ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಏಳು ಮುಖ್ಯವಾಹಿನಿಯ ಚಲನಚಿತ್ರಗಳನ್ನು ಪ್ರದರ್ಶಿಸುತ್ತದೆ.

ಈ ವರ್ಷದ ಮಾರ್ಚ್ 13 ರಿಂದ ಮಾರಣಾಂತಿಕ ಕೊರೊನಾವೈರಸ್‌ನಿಂದಾಗಿ ಚಲನಚಿತ್ರೋದ್ಯಮ ಸ್ಥಗಿತಗೊಂಡಿದೆ.


ಇದನ್ನೂ ಓದಿ: ಕೊರೊನಾ ಸಂಕಟ : ಸಿನಿಮಾ ಮಂದಿಯ ಪೀಕಲಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...