Homeಅಂಕಣಗಳುಆಘಾತವಾಣಿ | ಅಟ್ಯಾಕ್ ಹನ್ಮಂತಥೂತ್ತೇರಿ: ರಾಜ್ಯೋತ್ಸವ ಪ್ರಶಸ್ತೀನ ರಸ್ತೆ ಮಾಡೋರಿಗೆ, ಮನೆಕಟ್ಟೋರಿಗೂ ಕೊಡ್ಬೇಕು ಕಣ್ರೀ...

ಥೂತ್ತೇರಿ: ರಾಜ್ಯೋತ್ಸವ ಪ್ರಶಸ್ತೀನ ರಸ್ತೆ ಮಾಡೋರಿಗೆ, ಮನೆಕಟ್ಟೋರಿಗೂ ಕೊಡ್ಬೇಕು ಕಣ್ರೀ…

- Advertisement -
- Advertisement -

ಯಾಹೂ |

ಮೋಹನ್‌ರಾಂ ಎಂಬ ತಿಕ್ಕಲು ಬ್ರಾಹ್ಮಣ ಲಂಕೇಶರಿಂದ ಉಗಿಸಿಕೊಂಡು ಹೋದ 36 ವರ್ಷಗಳ ನಂತರ ಮತ್ತೆ ಕಾಣಿಸಿಕೊಂಡಿದ್ದಾನಂತಲ್ಲಾ. ಅಂದರೆ ಲಂಕೇಶ್ ಎಷ್ಟರ ಮಟ್ಟಿಗೆ ಉಗಿದಿರಬಹುದೆಂದು ವೇದ್ಯವಾಗುತ್ತದೆ. ಇಂತವನನ್ನು ನೋಡಿಯೇ ಏನೋ ದೇವನೂರು ಒಂದು ಕತೆ ಬರೆದಿದ್ದರು. ಮೋಹನ ಶಾಸ್ತ್ರಿ ಎಂಬ ಗುಮಾಸ್ತನಿದ್ದ. ಅವನ ಬಾಸು ಲಂಕೇಗೌಡ. ಈ ಲಂಕೇಗೌಡ ಗುಮಾಸ್ತನಿಗೆ ಕೆಟ್ಟದಾಗಿ ಬೈಯ್ಯುತ್ತಿದ್ದ. ಇದರಿಂದ ಸೇಡಿಗೆ ತುತ್ತಾದ ಮೋಹನಶಾಸ್ತ್ರಿ ಲಂಕೇಗೌಡನ ಸರ‍್ವಿಸ್ ರಿಜಿಸ್ಟರಿನಲ್ಲಿ ಗೌಡನ ಆಕಾರ ಬರೆದು ಮುಂದಿನ ಎರಡು ಹಲ್ಲಿಲ್ಲ ಎಂದು ಬರೆದು ನಿವೃತ್ತನಾಗಿದ್ದನಂತೆ. ಲಂಕೇಗೌಡ ನಿವೃತ್ತನಾಗುವಾಗ ಅನಿವಾರ್ಯವಾಗಿ ಎರಡಲ್ಲು ಕೀಳಿಸಿಕೊಂಡು ಪಿಂಚನಿ ಪಡೆದನಂತೆ. ನಮ್ಮ ನಡುವಿನ ಪುರೋಹಿತಶಾಹಿಗಳ ಪಿಂಡಗಳು ಆಂತರ್ಯದಲ್ಲಿ ಹೊಂದಿರುವ ಹಗೆ ಎಂತದ್ದು ಎಂಬುದನ್ನು ಹೇಳಲು ದೇವನೂರು ಈ ಕತೆಯನ್ನು ಪಂಚಮದಲ್ಲಿ ಬರೆದಿದ್ದರು. ಮೂವತ್ತಾರು ವರ್ಷಗಳ ನಂತರ ಲಂಕೇಶರ ಹಲ್ಲು ಎಣಿಸಿರುವ ಸದರಿ ಮೋಹನ್ ರಾಂ ಎಂಬುವನ ಬಗ್ಗೆ ಲಂಕೇಶ್ ಹೇಳಿದ್ದೇನೆಂದರೆ, ‘ಆತ ಸುಳ್ಳು ಬರೆಯುತ್ತಾನೆ, ಈಗತಾನೆ ಬಾಂಬೆಯಿಂದ ಬಂದೆ. ಅಮಿತಾ ಬಚ್ಚನ್ ಇಂಟ್ರೂ ಮಾಡಿದೆ ಎಂದು ಮನೆಯಲ್ಲಿ ಕುಳಿತು ಬರೆದು ತಂದಿದ್ದ ಅದಕ್ಕೆ ಓಡಿಸಿದೆ’ ಎಂದು ಹೇಳಿದ್ದರಲ್ಲಾ, ಥೂತ್ತೇರಿ.

* * * *

ಎಂದಿನಂತೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಪ್ರಕಟಣೆಗೊಂಡಿವೆ. ಸಮ್ಮಿಶ್ರ ಸರಕಾರವೊಂದು ನೇಮಿಸಿದ್ದ ಆಯ್ಕೆ ಸಮಿತಿಯ ಸದರಿ ವಿದ್ವಾಂಸರು ಆಯ್ಕೆ ಮಾಡಿದ ಪ್ರತಿಭಾವಂತರ ಬಗ್ಗೆ ಚಕಾರವೆತ್ತದ ಜಯಮಾಲ ಹಾಗು ಮುಖ್ಯಮಂತ್ರಿ ಕುಮಾರಸ್ವಾಮಿ ಇನ್ನೇನು ಅನುಮೋದನೆಯ ಸೀಲು ಒತ್ತಿ ಪತ್ರಿಕೆಗಳಿಗೆ ಬಿಡುಗಡೆ ಮಡಬೇಕೆನ್ನುವಷ್ಟರಲ್ಲಿ ಸದರಿ ಪಟ್ಟಿಯನ್ನು ಕಿತ್ತುಕೊಂಡ ಡಿ.ಕೆ.ಶಿವಕುಮಾರ್ ಎಂಬ ಕರ್ನಾಟಕ ರಾಜಕಾರಣದ ಸಮಸ್ಯೆ, ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಅಂದ್ರೆ ಬರೀ ಸಾಹಿತಿಗಳು, ಜನಪದ ಕಲಾವಿದರಿಗಷ್ಟೇ ಕೊಡಬಾರ್ದು ಕಂಡ್ರೀ. ರಾಜಕಾರಣಿಗಳು, ನಮಗೆ ಪಾಠ ಹೇಳಿದ ಮೇಷ್ಟ್ರು, ನಮ್ಮ ಪರ ವಾದ ಮಾಡೋ ಲಾಯರ್‌ಗಳು, ರಸ್ತೆ ಮಾಡೋರು, ಮನೆಕಟ್ಟೋರನ್ನೂ ಪರಿಗಣಿಸಬೇಕು’ ಎಂದು ರಾಜ್ಯೋತ್ಸವ ಪಟ್ಟಿಯೊಳಕ್ಕೆ ತನ್ನ ಅಭಿರುಚಿಯನ್ನ ಸೇರಿಸಿದರಂತಲ್ಲಾ. ಆಗ ಮುಖ್ಯಮಂತ್ರಿಯಾಗಿ ಯಾರನ್ನು ಸೇರಿಸಲಾಗದ ಕುಮಾರಸ್ವಾಮಿ ಅನಿವಾರ್ಯವಾಗಿ ಡಿ.ಕೆ.ಸಿ. ಅಭಿರುಚಿಯನ್ನು ಮನ್ನಿಸಿದರಂತಲ್ಲಾ, ಥೂತ್ತೇರಿ.

* * * *

ಈ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ತಮ್ಮ ಮಹತ್ವ ಕಳೆದುಕೊಂಡಿದ್ದು ಬಂಗಾರಪ್ಪನ ಕಾಲದಲ್ಲಂತಲ್ಲಾ. ಹಿಂದುಳಿದ ವರ್ಗದ ನಾಯಕರಾದ ಬಂ ಸಾಮಾಜಿಕ ನ್ಯಾಯವನ್ನು ರಾಜ್ಯೋತ್ಸವ ಪ್ರಶಸ್ತಿ ಮುಖಾಂತರ ಸರಿಮಾಡಲು ಹೋಗಿ ಪ್ರಶಸ್ತಿ ಹಂಚಿದ ಪರಿಗೆ ಬೆದರಿದ ಪತ್ರಕರ್ತರು ಇದೇನು ಸಾರ್ ಅನರ್ಹರಿಗೆಲ್ಲಾ ಪ್ರಶಸ್ತಿ ಕೊಟ್ಟರಲ್ಲ ಎಂದಾಗ ಅರ್ಹರಿಗೆ ಮುಂದಿನ ಬಾರಿ ಕೊಡೋಣ ಬಿಡಿ ಎಂದರು. ಅರ್ಹರ‍್ಯಾರು, ಅವರು ಪಡೆದ ಸವಲತ್ತುಗಳೇನು ಎಂಬುದು ’ಬಂ’ಗೆ ಗೊತ್ತಿತ್ತು. ಆ ನಂತರ ಬಂದ ಬಿ.ಜೆ.ಪಿ ಸರಕಾರದಲ್ಲಿ ಬಿಸಿಬೇಳೆ ಬಾತು ಮಾಡುವವರಿಗೆಲ್ಲಾ ಪ್ರಶಸ್ತಿಗಳು ಸಿಕ್ಕವು. ಒಂದೆರಡು ಕನ್ನಡ ರಾಜ್ಯೋತ್ಸವ ಮಾಡಿದವನಿಗೂ ಈಶ್ವರಪ್ಪ ಪ್ರಶಸ್ತಿ ಕೊಡಿಸಿದರೆ, ನಾನು ಈಶ್ವರಪ್ಪನಿಗೇನು ಕಡಿಮೆ ಎಂದು ಭಾವಿಸಿದ ಯಡೂರಪ್ಪನ ಮಗಳು ಮಾತುಮಾತಿಗು ತನ್ನನ್ನು ನಗಿಸುತ್ತಿದ್ದ ಹುಡುಗನಿಗೂ ಒಂದು ರಾಜ್ಯೋತ್ಸವ ಪ್ರಶಸ್ತಿ ಕೊಡಿಸಿದಳು. ಅದೇ ತರಹ ಈಗೊಂದು ಪ್ರಶಸ್ತಿ ವ್ಯರ್ಥವಾಗಿ ಹೋಯ್ತು. ಪ್ರತಿಭಾವಂತರೊಬ್ಬರ ಕೈಯಿಂದ ಪ್ರಶಸ್ತಿ ಕಿತ್ತುಕೊಂಡ ಡಿ.ಕೆ.ಶಿ ಅದನ್ನ ಮಾರ್ಗರೇಟ್ ಆಳ್ವರಿಗೆ ಕೊಟ್ಟಿದ್ದಾರೆ. ಈ ಮಾಜಿ ರಾಜ್ಯಪಾಲೆ ನಿರಾಕರಿಸಬಹುದಿತ್ತು. ಎಲ್ಲರ ಬಳಿ ಘನತೆವೆತ್ತ ಗುಣ ಸುಳಿಯುವುದು ಕಡಿಮೆಯಂತಲ್ಲಾ, ಥೂತ್ತೇರಿ.

* * * *

ರಾಜ್ಯೋತ್ಸವ ಪ್ರಶಸ್ತಿ ವಿಷಯ ಬಿತ್ತರಿಸುವಲ್ಲಿ ಕೆಲವು ಪತ್ರಿಕೆಗಳು ಹರಾಜಾಗಿ ಹೋದವಂತಲ್ಲಾ ಉದಾಹರಣೆ ಕೊಡುವುದಾದರೆ, ಪ್ರಶಸ್ತಿಯ ಆಯ್ಕೆ ಸಮಿತಿಯೇ ರಚನೆಯಾಗಿಲ್ಲ ಎಂದು ಅವು ಕರೆಯುತ್ತಿದ್ದಾಗ ಆಯ್ಕೆ ಸಮಿತಿ ಕಲಾಗ್ರಾಮದಲ್ಲಿ ಆಯ್ಕೆಯಲ್ಲಿ ನಿರತವಾಗಿತ್ತು. ಎರಡೂ ಪಕ್ಷದ ಒತ್ತಡದಲ್ಲಿ ಕುಮಾರಸ್ವಾಮಿ ನಲುಗಿ ಹೋಗಿದ್ದಾರೆ ಎಂದು ಬರೆಯುತ್ತಿದ್ದಾಗ ಕುಮಾರಸ್ವಾಮಿ ಚುನಾವಣಾ ಪ್ರಚಾರದಲ್ಲಿದ್ದರು.

ಪ್ರಶಸ್ತಿ ಕೊಡುವ ಹಿಂದಿನ ದಿನ ಆಯ್ಕೆ ನಡೆಸಿ ಮರುದಿನ ವಿತರಿಸಲಾಗುವುದೆಂದು ಪತ್ರಿಕೆಗಳು ಬರೆಯುವಾಗ ಎರಡು ವಾರಗಳ ಆಯ್ಕೆ ಪರಿಶ್ರಮದಿಂದ ಮುಕ್ತವಾದ ಆಯ್ಕೆ ಸಮಿತಿ ಕುಮಾರಸ್ವಾಮಿಗೆ ತಮ್ಮ ವರದಿಕೊಟ್ಟಿತ್ತು. ಹೀಗೆ ಮನಸ್ಸಿಗೆ ಬಂದ ವರದಿ ಬರೆಯುತ್ತಿದ್ದ ಪತ್ರಿಕೆಗಳನ್ನು ಕಂಡು ನಗುವುದರ ಬದಲು ನಗಿಸಲಾಗುತ್ತಿತ್ತು. ಏಕೆಂದರೆ ಏನೊಂದೂ ಪರಿಶೀಲಿಸದೆ ಕುಳಿತಲ್ಲೇ ಒಂದು ಊಹಾತ್ಮಕ ವರದಿ ಬರೆದು ಕೊಡುವುದರಿಂದ ಅನಾಹುತಗಳು ಜರುಗುವ ಸಂಭವವಿರುತ್ತದೆ. ಪಬ್ಲಿಕ್ ಟಿವಿಯ ಕಡ್ಡಿ ರಂಗ ಚಿಕ್ಕಮಗಳೂರು ಡಿ.ವೈ.ಎಸ್.ಪಿ ವಿಷಯದಲ್ಲಿಯೂ ಹೀಗೆಯೇ ಸುಳ್ಳು ಸುದ್ದಿ ಬಿತ್ತರಿಸಿದ್ದ. ಅವರ ಆತ್ಮಹತ್ಯೆಗೆ ಕಾರಣನಾದವರು ನಮ್ಮ ಕಣ್ಣು ಮುಂದಿರುವುದರಿಂದ ಪತ್ರಕರ್ತರು ಆದಷ್ಟೂ ಕಣ್ಣು ಕಿವಿ ತೊಳೆಯುವುದೊಳ್ಳೆಯದಂತಲ್ಲಾ, ಥೂತ್ತೇರಿ.

* * * *

ಪ್ರಶಸ್ತಿಗಳ ಬಗ್ಗೆ ಮನಸ್ಸಿಗೆ ಬಂದ ಸುಳ್ಳು ಸುದ್ದಿ ಬರೆದ ಪತ್ರಿಕೆಗಳು ಆ ನಂತರ ತಮ್ಮ ಜವಾಬ್ದಾರಿಯ ಕಡೆ ಗಮನಹರಿಸಲಿಲ್ಲವಂತಲ್ಲಾ. ಆಯ್ಕೆಯಾದ ೬೩ ಜನರಲ್ಲಿನ ವೈವಿಧ್ಯಮಯ ಪ್ರತಿಭೆ ಬೆರಗು ಹುಟ್ಟಿಸುವಂತಿತ್ತು. ತಮ್ಮ ಕ್ಷೌರದ ಅಂಗಡಿಯಲ್ಲೇ ಸಮಾಜವಾದದ ಚಳುವಳಿ ರೂಪಿಸಿದ ರಾಚಪ್ಪ ಹಡಪದ. ಇವರನ್ನು ನೋಡಿ ಮಾತನಾಡಿಸಲು ತೇಜಸ್ವಿ ಸ್ಕೂಟರಿನಲ್ಲೇ ಹೋಗಿದ್ದರಂತೆ. ಇನ್ನು ಕೈಗೆ ಕಾಸು ಸಿಕ್ಕ ಕೂಡಲೇ ಕೆರೆ, ಚೆಕ್ ಡ್ಯಾಂ ಕಟ್ಟುವ ಕಲ್ಮನೆ ಕಾಮೇಗೌಡ, ಆ ಕಾಲಕ್ಕೆ ಕ್ರಾಂತಿ ಮಾಡಿದ ಅಮ್ಮೆಂಬಳ ಆನಂದ, ಜನಪದ ನಿಧಿ ಗುಲ್ಬರ್ಗದ ಶಂಕ್ರಮ್ಮ ಇಂತಹ ಇತಿಹಾಸಗಳನ್ನ ಕೆದಕಿದರೆ ಸಾಕು, ಸಾರ್ಥಕ ಬದುಕೊಂದು ನಮ್ಮ ಮುಂದೆ ತೆರೆದುಕೊಳ್ಳುತ್ತದೆ. ಹೊಸ ತಲೆಮಾರಿಗೆ ಇವರ ಬದುಕು ಸ್ಪೂರ್ತಿ ನೀಡಬಲ್ಲದು. ಇವರ ಪ್ರತಿಭೆ ಪ್ರಭಾವ ಬೀರಬಹುದು. ಇದಾವುದನ್ನು ಗ್ರಹಿಸದೆ ಕೇವಲ ಅವರ ಹೆಸರುಗಳನ್ನಷ್ಟೇ ಪ್ರಕಟಿಸಿ ಕೈತೊಳೆದುಕೊಂಡ ಪತ್ರಿಕೆಗಳು ಮತ್ತು ದೃಶ್ಯ ಮಾಧ್ಯಮಗಳು ಸತ್ತು ಎಷ್ಟೋ ವರ್ಷಗಳಾಗಿವೆಯಂತಲ್ಲಾ. ವಿಶೇಷವೆಂದರೆ, ಸಾಂಸ್ಕೃತಿಕವಾಗಿ ಸತ್ತಂತಿರುವ ಈ ಮಾಧ್ಯಮಗಳ ವಿಷಯದಲ್ಲಿ ಜನರೂ ಕೂಡ ನಿರ್ಲಕ್ಷ್ಯದಿಂದಿದ್ದಾರಂತಲ್ಲಾ, ಥೂತ್ತೇರಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...