Homeಕರ್ನಾಟಕವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

- Advertisement -
- Advertisement -

ಕೊರೊನಾ ಎಲ್ಲರನ್ನು ನಿರಾಶೆ ಮತ್ತು ಆತಂಕದಲ್ಲಿ ಮುಳುಗಿಸಿದೆ. ಕೊರೊನಾ ಕಾರಣಕ್ಕೆ ಹೇರಿದ ಲಾಕ್‌ಡೌನ್‌ನಿಂದ ಲಕ್ಷಾಂತರ ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಅಂತವರ ಸಾಲಿಗೆ ಹೊಸ ಸೇರ್ಪಡೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಸೇರುವ ಆತಂಕ ಎದುರಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಒಂದು ವರ್ಷದ ಅವಧಿಗೆ ವೇತನ, ಭತ್ಯೆ ರಹಿತ ವಿಶೇಷ ರಜೆ ಮಂಜೂರು ಮಾಡಿದೆ. ಕೊರೊನಾ ಕಾಲದಲ್ಲಿಯೂ ಜೀವ ಕೈಯ್ಯಲ್ಲಿ ಹಿಡಿದು ಭಯದಿಂದಲೇ ಸೇವೆ ಸಲ್ಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ನೌಕರರ ಪಾಲಿಗೆ ಇದು ಅರಗಿಸಲಾಗದ ಸಂಗತಿಯಾಗಿದೆ.

1948ರಲ್ಲಿ ಪ್ರಾರಂಭವಾದ ಕೆಎಸ್‌ಆರ್‌ಟಿಸಿ ಸಂಸ್ಥೆಯು ಪ್ರಸ್ತುತ ದೇಶದ ಐದನೇ ಅತಿದೊಡ್ಡ ಸಾರ್ವಜನಿಕ ಸಾರಿಗೆ ಸಂಸ್ಥೆಯಾಗಿದೆ. ಕರ್ನಾಟಕದ ನಾಲ್ಕೂ ವಿಭಾಗಗಳನ್ನು ಸೇರಿಸಿದರೆ 24 ಸಾವಿರಕ್ಕಿಂತಲೂ ಹೆಚ್ಚಿನ ಬಸ್ಸುಗಳು ಸಂಸ್ಥೆಗಿದ್ದು, ಒಟ್ಟು 1.2 ಲಕ್ಷಕ್ಕಿಂತಲೂ ಹೆಚ್ಚು ಉದ್ಯೋಗಿಗಳಿದ್ದಾರೆ. ದಿನವೊಂದಕ್ಕೆ ಸರಾಸರಿ 9 ಕೋಟಿ ರೂ ವ್ಯವಹಾರವನ್ನು ಸಂಸ್ಥೆಯ ಬಸ್ಸುಗಳಲ್ಲಿ ದಿನವೊಂದಕ್ಕೆ 30 ಲಕ್ಷ ಜನ ಪ್ರಯಾಣಿಸುತ್ತಿದ್ದರು ಎಂದು ಅದರ ವೆಬ್‌ಸೈಟ್‌ ತಿಳಿಸುತ್ತದೆ.

ಪ್ರಸ್ತುತ ಸಂಸ್ಥೆಯ ಈ ವೇತನರಹಿತ ರಜೆ ಪ್ರಸ್ತಾಪವು ನೌಕರರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಒಂದು ವರ್ಷದ ವರೆಗೂ ಯಾವುದೇ ಭತ್ಯೆಯಿಲ್ಲದೆ ರಜೆಯನ್ನು ಮಂಜೂರು ಮಾಡಲು ಹೊರಟಿರುವುದು ನೌಕರರಲ್ಲಿ ಆತಂಕ ಉಂಟು ಮಾಡಿದೆ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು “ಇದು ಇನ್ನೂ ಅಭಿಪ್ರಾಯ ಕೋರುವ ಹಂತದಲ್ಲಿದ್ದು, ಆದೇಶ‌ವಾಗಿಲ್ಲ. ಇದರಲ್ಲಿ ಯಾವುದೇ ಒತ್ತಡವಾಗಲಿ, ನಿರ್ಬಂಧವಾಗಲಿ ಇರುವುದಿಲ್ಲವೆಂದು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆಯೂ ಸಾರಿಗೆ ಸಂಸ್ಥೆಯಲ್ಲಿ ಐದು ವರ್ಷಗಳ ಅವಧಿಗೆ ಹೆಚ್ಚಿನ ವಿದ್ಯಾಭ್ಯಾಸ, ಆರೋಗ್ಯ ಸಮಸ್ಯೆ ಹಾಗೂ ಇತರೆ ತುರ್ತು ಪರಿಸ್ಥಿತಿಯಲ್ಲಿ ವೇತನ‌ರಹಿತ ರಜೆ ತೆಗೆದುಕೊಳ್ಳುವ ಅವಕಾಶವಿತ್ತು ಎಂದು ಅವರು ಹೇಳುತ್ತಾರೆ.

ಅಲ್ಲದೆ ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

ಆದರೆ ಕೊರೊನಾ ಸಮಯದಲ್ಲಿ ಎಲ್ಲರೂ ಆರ್ಥಿಕ ಸಮಸ್ಯೆಯಲ್ಲಿರುವಾಗ ಇರುವ ಕೆಲಸವನ್ನು ಬಿಟ್ಟು ರಜೆ ತೆಗೆದುಕೊಳ್ಳುವ ನಿರ್ಧಾರವನ್ನು ಯಾರು ಕೈಗೊಳ್ಳುತ್ತಾರೆ ಎಂಬುವುದಾಗಿದೆ. ಒಂದು ವೇಳೆ ಯಾರು ರಜೆ ಪಡೆಯಲು ನಿರ್ಧರಿಸದಿದ್ದರೆ ನಿಗಮದ ಮುಂದಿನ ನಡೆಯೇನು? ಇಷ್ಟು ದಿನ ಸಂಸ್ಥೆಗಾಗಿ ಬೆವರು ಸುರಿಸಿದ ಕಾರ್ಮಿಕರನ್ನು ಈ ಸಮಯದಲ್ಲಿ ಕೈಬಿಡಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಪ್ರಸ್ತುತ ತನ್ನ ವೆಬ್ಸೈಟ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಂತೆ ಕೆಎಸ್‌ಆರ್‌ಟಿಸಿ 180 ಕೋಟಿ ನಷ್ಟದಲ್ಲಿದೆ ಎಂದು ಹೇಳಲಾಗುತ್ತಿದ್ದರೂ ಒಂದು ಸರ್ಕಾರಿ ಸಂಸ್ಥೆಗೆ ಇದೇನು ದೊಡ್ಡ ಮೊತ್ತದ ಹಣವೇನು ಅಲ್ಲ.

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಸಂಸ್ಥೆಯು ತನ್ನ ಒಟ್ಟು ಬಸ್‌ಗಳಲ್ಲಿ ಶೇ.20 ರಷ್ಟನ್ನು ಮಾತ್ರ ಕಾರ್ಯಾಚರಣೆಗಿಳಿಸಿದೆ. ಹಾಗಾಗಿ ಎಲ್ಲಾ ಡಿಪೋಗಳಲ್ಲಿ ಬೆಳಿಗ್ಗೆ 6 ಗಂಟೆಗೆ ಸಿಬ್ಬಂದಿ ಬಂದು ಕ್ಯೂನಲ್ಲಿ ನಿಂತುಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆಯಾಗಿದ್ದು 20% ಬಸ್ಸುಗಳಲ್ಲಿನ ಸಿಬ್ಬಂದಿಗೆ ಕೆಲಸ ಸಿಗುತ್ತಿದೆ. ಉಳಿದವರು ವೇತನ ರಹಿತ ರಜೆ ಪಡೆದು ಮನೆಗೆ ತೆರಳಬೇಕಾಗಿದೆ ಎಂದು ಹೆಸರು ಹೇಳಲು ಇಚ್ಛಿಸಿದ ಸಿಬ್ಬಂದಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.

55 ವರ್ಷ ಮೇಲ್ಪಟ್ಟ ಮತ್ತು ಆರೋಗ್ಯ ಸಮಸ್ಯೆಗಳಿರುವವರನ್ನು ಈಗಾಗಲೇ ಮನೆಗೆ ಕಳಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಡಿಪೋ ಹತ್ತಿರ ಸುಳಿಯದಂತೆ ತಡೆಯಲಾಗಿದೆ. ಉಳಿದವರಲ್ಲಿಯೂ ಶೇ.80 ರಷ್ಟು ಸಿಬ್ಬಂದಿ ಕೆಲಸವಿಲ್ಲದೇ ಕಷ್ಟದಲ್ಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...