Homeಕರ್ನಾಟಕವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

- Advertisement -
- Advertisement -

ಕೊರೊನಾ ಎಲ್ಲರನ್ನು ನಿರಾಶೆ ಮತ್ತು ಆತಂಕದಲ್ಲಿ ಮುಳುಗಿಸಿದೆ. ಕೊರೊನಾ ಕಾರಣಕ್ಕೆ ಹೇರಿದ ಲಾಕ್‌ಡೌನ್‌ನಿಂದ ಲಕ್ಷಾಂತರ ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಅಂತವರ ಸಾಲಿಗೆ ಹೊಸ ಸೇರ್ಪಡೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಸೇರುವ ಆತಂಕ ಎದುರಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಒಂದು ವರ್ಷದ ಅವಧಿಗೆ ವೇತನ, ಭತ್ಯೆ ರಹಿತ ವಿಶೇಷ ರಜೆ ಮಂಜೂರು ಮಾಡಿದೆ. ಕೊರೊನಾ ಕಾಲದಲ್ಲಿಯೂ ಜೀವ ಕೈಯ್ಯಲ್ಲಿ ಹಿಡಿದು ಭಯದಿಂದಲೇ ಸೇವೆ ಸಲ್ಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ನೌಕರರ ಪಾಲಿಗೆ ಇದು ಅರಗಿಸಲಾಗದ ಸಂಗತಿಯಾಗಿದೆ.

1948ರಲ್ಲಿ ಪ್ರಾರಂಭವಾದ ಕೆಎಸ್‌ಆರ್‌ಟಿಸಿ ಸಂಸ್ಥೆಯು ಪ್ರಸ್ತುತ ದೇಶದ ಐದನೇ ಅತಿದೊಡ್ಡ ಸಾರ್ವಜನಿಕ ಸಾರಿಗೆ ಸಂಸ್ಥೆಯಾಗಿದೆ. ಕರ್ನಾಟಕದ ನಾಲ್ಕೂ ವಿಭಾಗಗಳನ್ನು ಸೇರಿಸಿದರೆ 24 ಸಾವಿರಕ್ಕಿಂತಲೂ ಹೆಚ್ಚಿನ ಬಸ್ಸುಗಳು ಸಂಸ್ಥೆಗಿದ್ದು, ಒಟ್ಟು 1.2 ಲಕ್ಷಕ್ಕಿಂತಲೂ ಹೆಚ್ಚು ಉದ್ಯೋಗಿಗಳಿದ್ದಾರೆ. ದಿನವೊಂದಕ್ಕೆ ಸರಾಸರಿ 9 ಕೋಟಿ ರೂ ವ್ಯವಹಾರವನ್ನು ಸಂಸ್ಥೆಯ ಬಸ್ಸುಗಳಲ್ಲಿ ದಿನವೊಂದಕ್ಕೆ 30 ಲಕ್ಷ ಜನ ಪ್ರಯಾಣಿಸುತ್ತಿದ್ದರು ಎಂದು ಅದರ ವೆಬ್‌ಸೈಟ್‌ ತಿಳಿಸುತ್ತದೆ.

ಪ್ರಸ್ತುತ ಸಂಸ್ಥೆಯ ಈ ವೇತನರಹಿತ ರಜೆ ಪ್ರಸ್ತಾಪವು ನೌಕರರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಒಂದು ವರ್ಷದ ವರೆಗೂ ಯಾವುದೇ ಭತ್ಯೆಯಿಲ್ಲದೆ ರಜೆಯನ್ನು ಮಂಜೂರು ಮಾಡಲು ಹೊರಟಿರುವುದು ನೌಕರರಲ್ಲಿ ಆತಂಕ ಉಂಟು ಮಾಡಿದೆ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು “ಇದು ಇನ್ನೂ ಅಭಿಪ್ರಾಯ ಕೋರುವ ಹಂತದಲ್ಲಿದ್ದು, ಆದೇಶ‌ವಾಗಿಲ್ಲ. ಇದರಲ್ಲಿ ಯಾವುದೇ ಒತ್ತಡವಾಗಲಿ, ನಿರ್ಬಂಧವಾಗಲಿ ಇರುವುದಿಲ್ಲವೆಂದು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆಯೂ ಸಾರಿಗೆ ಸಂಸ್ಥೆಯಲ್ಲಿ ಐದು ವರ್ಷಗಳ ಅವಧಿಗೆ ಹೆಚ್ಚಿನ ವಿದ್ಯಾಭ್ಯಾಸ, ಆರೋಗ್ಯ ಸಮಸ್ಯೆ ಹಾಗೂ ಇತರೆ ತುರ್ತು ಪರಿಸ್ಥಿತಿಯಲ್ಲಿ ವೇತನ‌ರಹಿತ ರಜೆ ತೆಗೆದುಕೊಳ್ಳುವ ಅವಕಾಶವಿತ್ತು ಎಂದು ಅವರು ಹೇಳುತ್ತಾರೆ.

ಅಲ್ಲದೆ ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

ಆದರೆ ಕೊರೊನಾ ಸಮಯದಲ್ಲಿ ಎಲ್ಲರೂ ಆರ್ಥಿಕ ಸಮಸ್ಯೆಯಲ್ಲಿರುವಾಗ ಇರುವ ಕೆಲಸವನ್ನು ಬಿಟ್ಟು ರಜೆ ತೆಗೆದುಕೊಳ್ಳುವ ನಿರ್ಧಾರವನ್ನು ಯಾರು ಕೈಗೊಳ್ಳುತ್ತಾರೆ ಎಂಬುವುದಾಗಿದೆ. ಒಂದು ವೇಳೆ ಯಾರು ರಜೆ ಪಡೆಯಲು ನಿರ್ಧರಿಸದಿದ್ದರೆ ನಿಗಮದ ಮುಂದಿನ ನಡೆಯೇನು? ಇಷ್ಟು ದಿನ ಸಂಸ್ಥೆಗಾಗಿ ಬೆವರು ಸುರಿಸಿದ ಕಾರ್ಮಿಕರನ್ನು ಈ ಸಮಯದಲ್ಲಿ ಕೈಬಿಡಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಪ್ರಸ್ತುತ ತನ್ನ ವೆಬ್ಸೈಟ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಂತೆ ಕೆಎಸ್‌ಆರ್‌ಟಿಸಿ 180 ಕೋಟಿ ನಷ್ಟದಲ್ಲಿದೆ ಎಂದು ಹೇಳಲಾಗುತ್ತಿದ್ದರೂ ಒಂದು ಸರ್ಕಾರಿ ಸಂಸ್ಥೆಗೆ ಇದೇನು ದೊಡ್ಡ ಮೊತ್ತದ ಹಣವೇನು ಅಲ್ಲ.

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಸಂಸ್ಥೆಯು ತನ್ನ ಒಟ್ಟು ಬಸ್‌ಗಳಲ್ಲಿ ಶೇ.20 ರಷ್ಟನ್ನು ಮಾತ್ರ ಕಾರ್ಯಾಚರಣೆಗಿಳಿಸಿದೆ. ಹಾಗಾಗಿ ಎಲ್ಲಾ ಡಿಪೋಗಳಲ್ಲಿ ಬೆಳಿಗ್ಗೆ 6 ಗಂಟೆಗೆ ಸಿಬ್ಬಂದಿ ಬಂದು ಕ್ಯೂನಲ್ಲಿ ನಿಂತುಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆಯಾಗಿದ್ದು 20% ಬಸ್ಸುಗಳಲ್ಲಿನ ಸಿಬ್ಬಂದಿಗೆ ಕೆಲಸ ಸಿಗುತ್ತಿದೆ. ಉಳಿದವರು ವೇತನ ರಹಿತ ರಜೆ ಪಡೆದು ಮನೆಗೆ ತೆರಳಬೇಕಾಗಿದೆ ಎಂದು ಹೆಸರು ಹೇಳಲು ಇಚ್ಛಿಸಿದ ಸಿಬ್ಬಂದಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.

55 ವರ್ಷ ಮೇಲ್ಪಟ್ಟ ಮತ್ತು ಆರೋಗ್ಯ ಸಮಸ್ಯೆಗಳಿರುವವರನ್ನು ಈಗಾಗಲೇ ಮನೆಗೆ ಕಳಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಡಿಪೋ ಹತ್ತಿರ ಸುಳಿಯದಂತೆ ತಡೆಯಲಾಗಿದೆ. ಉಳಿದವರಲ್ಲಿಯೂ ಶೇ.80 ರಷ್ಟು ಸಿಬ್ಬಂದಿ ಕೆಲಸವಿಲ್ಲದೇ ಕಷ್ಟದಲ್ಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...