Homeಕರ್ನಾಟಕವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

- Advertisement -
- Advertisement -

ಕೊರೊನಾ ಎಲ್ಲರನ್ನು ನಿರಾಶೆ ಮತ್ತು ಆತಂಕದಲ್ಲಿ ಮುಳುಗಿಸಿದೆ. ಕೊರೊನಾ ಕಾರಣಕ್ಕೆ ಹೇರಿದ ಲಾಕ್‌ಡೌನ್‌ನಿಂದ ಲಕ್ಷಾಂತರ ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಅಂತವರ ಸಾಲಿಗೆ ಹೊಸ ಸೇರ್ಪಡೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಸೇರುವ ಆತಂಕ ಎದುರಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಒಂದು ವರ್ಷದ ಅವಧಿಗೆ ವೇತನ, ಭತ್ಯೆ ರಹಿತ ವಿಶೇಷ ರಜೆ ಮಂಜೂರು ಮಾಡಿದೆ. ಕೊರೊನಾ ಕಾಲದಲ್ಲಿಯೂ ಜೀವ ಕೈಯ್ಯಲ್ಲಿ ಹಿಡಿದು ಭಯದಿಂದಲೇ ಸೇವೆ ಸಲ್ಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ನೌಕರರ ಪಾಲಿಗೆ ಇದು ಅರಗಿಸಲಾಗದ ಸಂಗತಿಯಾಗಿದೆ.

1948ರಲ್ಲಿ ಪ್ರಾರಂಭವಾದ ಕೆಎಸ್‌ಆರ್‌ಟಿಸಿ ಸಂಸ್ಥೆಯು ಪ್ರಸ್ತುತ ದೇಶದ ಐದನೇ ಅತಿದೊಡ್ಡ ಸಾರ್ವಜನಿಕ ಸಾರಿಗೆ ಸಂಸ್ಥೆಯಾಗಿದೆ. ಕರ್ನಾಟಕದ ನಾಲ್ಕೂ ವಿಭಾಗಗಳನ್ನು ಸೇರಿಸಿದರೆ 24 ಸಾವಿರಕ್ಕಿಂತಲೂ ಹೆಚ್ಚಿನ ಬಸ್ಸುಗಳು ಸಂಸ್ಥೆಗಿದ್ದು, ಒಟ್ಟು 1.2 ಲಕ್ಷಕ್ಕಿಂತಲೂ ಹೆಚ್ಚು ಉದ್ಯೋಗಿಗಳಿದ್ದಾರೆ. ದಿನವೊಂದಕ್ಕೆ ಸರಾಸರಿ 9 ಕೋಟಿ ರೂ ವ್ಯವಹಾರವನ್ನು ಸಂಸ್ಥೆಯ ಬಸ್ಸುಗಳಲ್ಲಿ ದಿನವೊಂದಕ್ಕೆ 30 ಲಕ್ಷ ಜನ ಪ್ರಯಾಣಿಸುತ್ತಿದ್ದರು ಎಂದು ಅದರ ವೆಬ್‌ಸೈಟ್‌ ತಿಳಿಸುತ್ತದೆ.

ಪ್ರಸ್ತುತ ಸಂಸ್ಥೆಯ ಈ ವೇತನರಹಿತ ರಜೆ ಪ್ರಸ್ತಾಪವು ನೌಕರರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಒಂದು ವರ್ಷದ ವರೆಗೂ ಯಾವುದೇ ಭತ್ಯೆಯಿಲ್ಲದೆ ರಜೆಯನ್ನು ಮಂಜೂರು ಮಾಡಲು ಹೊರಟಿರುವುದು ನೌಕರರಲ್ಲಿ ಆತಂಕ ಉಂಟು ಮಾಡಿದೆ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು “ಇದು ಇನ್ನೂ ಅಭಿಪ್ರಾಯ ಕೋರುವ ಹಂತದಲ್ಲಿದ್ದು, ಆದೇಶ‌ವಾಗಿಲ್ಲ. ಇದರಲ್ಲಿ ಯಾವುದೇ ಒತ್ತಡವಾಗಲಿ, ನಿರ್ಬಂಧವಾಗಲಿ ಇರುವುದಿಲ್ಲವೆಂದು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆಯೂ ಸಾರಿಗೆ ಸಂಸ್ಥೆಯಲ್ಲಿ ಐದು ವರ್ಷಗಳ ಅವಧಿಗೆ ಹೆಚ್ಚಿನ ವಿದ್ಯಾಭ್ಯಾಸ, ಆರೋಗ್ಯ ಸಮಸ್ಯೆ ಹಾಗೂ ಇತರೆ ತುರ್ತು ಪರಿಸ್ಥಿತಿಯಲ್ಲಿ ವೇತನ‌ರಹಿತ ರಜೆ ತೆಗೆದುಕೊಳ್ಳುವ ಅವಕಾಶವಿತ್ತು ಎಂದು ಅವರು ಹೇಳುತ್ತಾರೆ.

ಅಲ್ಲದೆ ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

ಆದರೆ ಕೊರೊನಾ ಸಮಯದಲ್ಲಿ ಎಲ್ಲರೂ ಆರ್ಥಿಕ ಸಮಸ್ಯೆಯಲ್ಲಿರುವಾಗ ಇರುವ ಕೆಲಸವನ್ನು ಬಿಟ್ಟು ರಜೆ ತೆಗೆದುಕೊಳ್ಳುವ ನಿರ್ಧಾರವನ್ನು ಯಾರು ಕೈಗೊಳ್ಳುತ್ತಾರೆ ಎಂಬುವುದಾಗಿದೆ. ಒಂದು ವೇಳೆ ಯಾರು ರಜೆ ಪಡೆಯಲು ನಿರ್ಧರಿಸದಿದ್ದರೆ ನಿಗಮದ ಮುಂದಿನ ನಡೆಯೇನು? ಇಷ್ಟು ದಿನ ಸಂಸ್ಥೆಗಾಗಿ ಬೆವರು ಸುರಿಸಿದ ಕಾರ್ಮಿಕರನ್ನು ಈ ಸಮಯದಲ್ಲಿ ಕೈಬಿಡಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಪ್ರಸ್ತುತ ತನ್ನ ವೆಬ್ಸೈಟ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಂತೆ ಕೆಎಸ್‌ಆರ್‌ಟಿಸಿ 180 ಕೋಟಿ ನಷ್ಟದಲ್ಲಿದೆ ಎಂದು ಹೇಳಲಾಗುತ್ತಿದ್ದರೂ ಒಂದು ಸರ್ಕಾರಿ ಸಂಸ್ಥೆಗೆ ಇದೇನು ದೊಡ್ಡ ಮೊತ್ತದ ಹಣವೇನು ಅಲ್ಲ.

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಸಂಸ್ಥೆಯು ತನ್ನ ಒಟ್ಟು ಬಸ್‌ಗಳಲ್ಲಿ ಶೇ.20 ರಷ್ಟನ್ನು ಮಾತ್ರ ಕಾರ್ಯಾಚರಣೆಗಿಳಿಸಿದೆ. ಹಾಗಾಗಿ ಎಲ್ಲಾ ಡಿಪೋಗಳಲ್ಲಿ ಬೆಳಿಗ್ಗೆ 6 ಗಂಟೆಗೆ ಸಿಬ್ಬಂದಿ ಬಂದು ಕ್ಯೂನಲ್ಲಿ ನಿಂತುಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆಯಾಗಿದ್ದು 20% ಬಸ್ಸುಗಳಲ್ಲಿನ ಸಿಬ್ಬಂದಿಗೆ ಕೆಲಸ ಸಿಗುತ್ತಿದೆ. ಉಳಿದವರು ವೇತನ ರಹಿತ ರಜೆ ಪಡೆದು ಮನೆಗೆ ತೆರಳಬೇಕಾಗಿದೆ ಎಂದು ಹೆಸರು ಹೇಳಲು ಇಚ್ಛಿಸಿದ ಸಿಬ್ಬಂದಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.

55 ವರ್ಷ ಮೇಲ್ಪಟ್ಟ ಮತ್ತು ಆರೋಗ್ಯ ಸಮಸ್ಯೆಗಳಿರುವವರನ್ನು ಈಗಾಗಲೇ ಮನೆಗೆ ಕಳಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಡಿಪೋ ಹತ್ತಿರ ಸುಳಿಯದಂತೆ ತಡೆಯಲಾಗಿದೆ. ಉಳಿದವರಲ್ಲಿಯೂ ಶೇ.80 ರಷ್ಟು ಸಿಬ್ಬಂದಿ ಕೆಲಸವಿಲ್ಲದೇ ಕಷ್ಟದಲ್ಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...