Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು...

ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು ಸುಳ್ಳು..

ಬಿಜೆಪಿ ನಾಯಕರು ಮಾಡಿದ ಗೊಂದಲದಿಂದ ಟ್ವೀಟರ್ ಬಳಕೆದಾರರೊಬ್ಬರು, ಕರ್ನಾಟಕ ಏಷ್ಯಾದಲ್ಲಿಲ್ಲವೇ? ರೇವಾದಲ್ಲಿರುವುದಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಕರ್ನಾಟಕದ ಪಾವಗಡ ಉದ್ಯಾನವನ್ನು ಬಿಜೆಪಿ ಏಕೆ ನಿರ್ಲಕ್ಷಿಸಿದೆ ಎಂದು ಪ್ರಶ್ನಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ರೇವಾದಲ್ಲಿ 750 ಮೆಗಾವ್ಯಾಟ್ ಸಾಮರ್ಥ್ಯದ ಅಲ್ಟ್ರಾ ಮೆಗಾ ಸೌರ ವಿದ್ಯುತ್ ಉದ್ಯಾನವನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಉದ್ಘಾಟಿಸಿದ್ದಾರೆ. ಜನವರಿಯಲ್ಲಿ ನಿಯೋಜಿಸಲಾದ ಈ ಸೌಲಭ್ಯವು ಮಧ್ಯಪ್ರದೇಶ ಮತ್ತು ದೆಹಲಿ ಮೆಟ್ರೋ ರೈಲು ನಿಗಮಕ್ಕೆ (DMRC) ವಿದ್ಯುತ್ ಸರಬರಾಜು ಮಾಡುತ್ತದೆ. ಈ ಯೋಜನೆಯನ್ನು ನಿರ್ಮಿಸಲು 1,550 ಹೆಕ್ಟೇರ್ ಪ್ರದೇಶವನ್ನು ಬಳಸಲಾಗುತ್ತದೆ. ಬಿಜೆಪಿ ಮಂತ್ರಿಗಳು ಮತ್ತು ನಾಯಕರು ಇದನ್ನು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಯೋಜನೆ ಎಂದು ಬಣ್ಣಿಸಿದ್ದಾರೆ. ಇದು ಸತ್ಯವೇ ಪರಿಶೀಲಿಸೋಣ ಬನ್ನಿ.

ಗೃಹಮಂತ್ರಿ ಅಮಿತ್‌ ಶಾರವರು 750 ಮೆಗಾ ವ್ಯಾಟ್ ಸಾಮರ್ಥ್ಯದ ಏಷ್ಯಾದ ಅತಿ ದೊಡ್ಡ ಸೌರವಿದ್ಯುತ್ ಘಟಕವನ್ನು ಉದ್ಘಾಟನೆ ಮಾಡಿದ್ದಕ್ಕೆ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಬಹಳಷ್ಟು ಜಾಲತಾಣಿಗರು ಬಿಜೆಪಿಯ ಈ ಪ್ರಚಾರಪ್ರಿಯತೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.  ಬಿಜೆಪಿ ಹೇಳಿಕೊಳ್ಳುವಂತೆ ಇದು ಏಷ್ಯಾದ ಅತಿ ದೊಡ್ಡ ಸೌರ ವಿದ್ಯುತ್ ಯೋಜನೆಯಲ್ಲ. ಏಕೆಂದರೆ 2,050 ಮೆಗಾವ್ಯಾಟ್ ಸಾಮರ್ಥ್ಯ ಹೊಂದಿರುವ ಕರ್ನಾಟಕದ ಪಾವಗಡ ಸೌರ ಉದ್ಯಾನವನವು 2018 ರಿಂದ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಏಷ್ಯಾದ ಅತಿದೊಡ್ಡ ಸೌರಶಕ್ತಿ ಉದ್ಯಾನವನವನ್ನು ಪ್ರಾರಂಭಿಸುವ ಬಿಜೆಪಿಯ ಹೇಳಿಕೆಗಳು ಸುಳ್ಳು ಎಂಬುದು ಹಲವರ ಅಭಿಪ್ರಾಯವಾಗಿದೆ.

ಬಿಜೆಪಿ ನಾಯಕರು ಮಾಡಿದ ಗೊಂದಲದಿಂದ ಟ್ವೀಟರ್ ಬಳಕೆದಾರರೊಬ್ಬರು, ಕರ್ನಾಟಕ ಏಷ್ಯಾದಲ್ಲಿಲ್ಲವೇ? ರೇವಾದಲ್ಲಿರುವುದಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಕರ್ನಾಟಕದ ಪಾವಗಡ ಉದ್ಯಾನವನ್ನು ಬಿಜೆಪಿ ಏಕೆ ನಿರ್ಲಕ್ಷಿಸಿದೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ “ಬಿಜೆಪಿ ಕೇಂದ್ರ ಸರ್ಕಾರ ಇಂದು ಮಧ್ಯಪ್ರದೇಶದಲ್ಲಿ 750 ಮೆಗಾವ್ಯಾಟ್‌ನ ಏಷ್ಯಾದ ಅತಿದೊಡ್ಡ ಸೌರ ಸ್ಥಾವರವನ್ನು ಉದ್ಘಾಟಿಸಿದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ಕರ್ನಾಟಕದ ಪಾವಗಡದಲ್ಲಿರುವ 2000 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರ ಯಾವುದು? ಇದನ್ನು ಕೇವಲ 3 ವರ್ಷಗಳಲ್ಲಿ ಕರ್ನಾಟಕದ ಅಂದಿನ ಕಾಂಗ್ರೆಸ್ ಸರ್ಕಾರವು ನಿರ್ಮಿಸಿದೆ. ಇದು 2018 ರಿಂದ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.

ಆದರೆ, ಅಂತರ್ಜಾಲದಲ್ಲಿ ತುಂಬಾ ಸಣ್ಣ ಮಟ್ಟದ ಸಂಶೋಧನೆ ನಡೆಸಿದರೆ ಸಾಕು ಈ ಎರಡೂ ಹೇಳಿಕೆಗಳು ಸುಳ್ಳು ಎಂದು HWNEWS ವರದಿ ಮಾಡಿದೆ.

ರಾಜಸ್ಥಾನದ ಜೋಧಪುರ ಜಿಲ್ಲೆಯ ಫಲೋಡಿ ತಹಸಿಲ್‌ನ ಭಾದ್ಲಾದಲ್ಲಿನ ಸೌರ ಉದ್ಯಾನವನವು ಮಾರ್ಚ್ 2020ರ ಹೊತ್ತಿಗೆ ವಿಶ್ವದ ಅತಿದೊಡ್ಡ ಸೌರ ಉದ್ಯಾನವನವಾಗಿದೆ. ಇದು ಒಟ್ಟು 10,000 ಎಕರೆ ವಿಸ್ತೀರ್ಣದಲ್ಲಿ ನಿರ್ಮಿತವಾಗಿದ್ದು, ಒಟ್ಟು 2,245 ಮೆಗಾವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ. ಇದು ರೇವಾದಲ್ಲಿ ಪಿಎಂ ಮೋದಿ ಉದ್ಘಾಟಿಸಿದ ಸ್ಥಾವರ ಮತ್ತು ಕರ್ನಾಟಕದ ಪಾವಗಡ ಸೌರ ಉದ್ಯಾನವನಕ್ಕಿಂತ ದೊಡ್ಡದಾಗಿದೆ ಎಂದು HWNEWS ವರದಿ ಮಾಡಿದೆ.

ಮಾರ್ಚ್ 19, 2020ರ ಮೆರ್ಕಾಮ್ ಇಂಡಿಯಾದ ವರದಿಯ ಪ್ರಕಾರ, ಭಾದ್ಲಾ ಸೌರ ಉದ್ಯಾನವನವು ವಿಶ್ವದ ಅತಿದೊಡ್ಡ ಸೌರ ಉದ್ಯಾನವನವಾಗಿದೆ.

 

ವಿಕಿಪೀಡಿಯಾದ ಪ್ರಕಾರ, ಪಾವಗಡ ಸ್ಥಾವರವು 2,050 ಮೆಗಾವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ ಮತ್ತು 2245 ಮೆಗಾವ್ಯಾಟ್ ಸಾಮರ್ಥ್ಯದ ಭಾದ್ಲಾ ಸೌರ ಉದ್ಯಾನದ ನಂತರ ವಿಶ್ವದ ಎರಡನೇ ಅತಿದೊಡ್ಡ ದ್ಯುತಿವಿದ್ಯುತ್‌ಜನಕ ಕೇಂದ್ರವಾಗಿದೆ.

ಹಾಗಾಗಿ ರೇವಾ ಸ್ಥಾವರವು ಏಷ್ಯಾದಲ್ಲಿ ಅತಿದೊಡ್ಡದಾಗಿದೆ ಎಂಬ ಕೆಲವು ಬಿಜೆಪಿ ಮಂತ್ರಿಗಳು ಮತ್ತು ಮುಖಂಡರು ನೀಡಿದ ಹೇಳಿಕೆಗಳು ಸುಳ್ಳು ಎಂದು ತಿಳಿದುಬಂದಿದೆ.

ರೇವಾ ಸ್ಥಾವರಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಪಾವಗಡ ವಿದ್ಯುತ್ ಉದ್ಯಾನವನದ ಬಗ್ಗೆ ಕಾಂಗ್ರೆಸ್ ಮಾಡಿದ ಹೇಳಿಕೆ ನಿಜವಾದರೂ, ಏಷ್ಯಾದಲ್ಲಿ ಮಾತ್ರವಲ್ಲದೇ, ಜಗತ್ತಿನಲ್ಲಿಯೇ ದೊಡ್ಡ ಸೌರಶಕ್ತಿ ಉದ್ಯಾನವನವು ರಾಜಸ್ಥಾನದ ಭದ್ಲಾದಲ್ಲಿದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...