Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು...

ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು ಸುಳ್ಳು..

ಬಿಜೆಪಿ ನಾಯಕರು ಮಾಡಿದ ಗೊಂದಲದಿಂದ ಟ್ವೀಟರ್ ಬಳಕೆದಾರರೊಬ್ಬರು, ಕರ್ನಾಟಕ ಏಷ್ಯಾದಲ್ಲಿಲ್ಲವೇ? ರೇವಾದಲ್ಲಿರುವುದಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಕರ್ನಾಟಕದ ಪಾವಗಡ ಉದ್ಯಾನವನ್ನು ಬಿಜೆಪಿ ಏಕೆ ನಿರ್ಲಕ್ಷಿಸಿದೆ ಎಂದು ಪ್ರಶ್ನಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ರೇವಾದಲ್ಲಿ 750 ಮೆಗಾವ್ಯಾಟ್ ಸಾಮರ್ಥ್ಯದ ಅಲ್ಟ್ರಾ ಮೆಗಾ ಸೌರ ವಿದ್ಯುತ್ ಉದ್ಯಾನವನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಉದ್ಘಾಟಿಸಿದ್ದಾರೆ. ಜನವರಿಯಲ್ಲಿ ನಿಯೋಜಿಸಲಾದ ಈ ಸೌಲಭ್ಯವು ಮಧ್ಯಪ್ರದೇಶ ಮತ್ತು ದೆಹಲಿ ಮೆಟ್ರೋ ರೈಲು ನಿಗಮಕ್ಕೆ (DMRC) ವಿದ್ಯುತ್ ಸರಬರಾಜು ಮಾಡುತ್ತದೆ. ಈ ಯೋಜನೆಯನ್ನು ನಿರ್ಮಿಸಲು 1,550 ಹೆಕ್ಟೇರ್ ಪ್ರದೇಶವನ್ನು ಬಳಸಲಾಗುತ್ತದೆ. ಬಿಜೆಪಿ ಮಂತ್ರಿಗಳು ಮತ್ತು ನಾಯಕರು ಇದನ್ನು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಯೋಜನೆ ಎಂದು ಬಣ್ಣಿಸಿದ್ದಾರೆ. ಇದು ಸತ್ಯವೇ ಪರಿಶೀಲಿಸೋಣ ಬನ್ನಿ.

ಗೃಹಮಂತ್ರಿ ಅಮಿತ್‌ ಶಾರವರು 750 ಮೆಗಾ ವ್ಯಾಟ್ ಸಾಮರ್ಥ್ಯದ ಏಷ್ಯಾದ ಅತಿ ದೊಡ್ಡ ಸೌರವಿದ್ಯುತ್ ಘಟಕವನ್ನು ಉದ್ಘಾಟನೆ ಮಾಡಿದ್ದಕ್ಕೆ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಬಹಳಷ್ಟು ಜಾಲತಾಣಿಗರು ಬಿಜೆಪಿಯ ಈ ಪ್ರಚಾರಪ್ರಿಯತೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.  ಬಿಜೆಪಿ ಹೇಳಿಕೊಳ್ಳುವಂತೆ ಇದು ಏಷ್ಯಾದ ಅತಿ ದೊಡ್ಡ ಸೌರ ವಿದ್ಯುತ್ ಯೋಜನೆಯಲ್ಲ. ಏಕೆಂದರೆ 2,050 ಮೆಗಾವ್ಯಾಟ್ ಸಾಮರ್ಥ್ಯ ಹೊಂದಿರುವ ಕರ್ನಾಟಕದ ಪಾವಗಡ ಸೌರ ಉದ್ಯಾನವನವು 2018 ರಿಂದ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಏಷ್ಯಾದ ಅತಿದೊಡ್ಡ ಸೌರಶಕ್ತಿ ಉದ್ಯಾನವನವನ್ನು ಪ್ರಾರಂಭಿಸುವ ಬಿಜೆಪಿಯ ಹೇಳಿಕೆಗಳು ಸುಳ್ಳು ಎಂಬುದು ಹಲವರ ಅಭಿಪ್ರಾಯವಾಗಿದೆ.

ಬಿಜೆಪಿ ನಾಯಕರು ಮಾಡಿದ ಗೊಂದಲದಿಂದ ಟ್ವೀಟರ್ ಬಳಕೆದಾರರೊಬ್ಬರು, ಕರ್ನಾಟಕ ಏಷ್ಯಾದಲ್ಲಿಲ್ಲವೇ? ರೇವಾದಲ್ಲಿರುವುದಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಕರ್ನಾಟಕದ ಪಾವಗಡ ಉದ್ಯಾನವನ್ನು ಬಿಜೆಪಿ ಏಕೆ ನಿರ್ಲಕ್ಷಿಸಿದೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ “ಬಿಜೆಪಿ ಕೇಂದ್ರ ಸರ್ಕಾರ ಇಂದು ಮಧ್ಯಪ್ರದೇಶದಲ್ಲಿ 750 ಮೆಗಾವ್ಯಾಟ್‌ನ ಏಷ್ಯಾದ ಅತಿದೊಡ್ಡ ಸೌರ ಸ್ಥಾವರವನ್ನು ಉದ್ಘಾಟಿಸಿದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ಕರ್ನಾಟಕದ ಪಾವಗಡದಲ್ಲಿರುವ 2000 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರ ಯಾವುದು? ಇದನ್ನು ಕೇವಲ 3 ವರ್ಷಗಳಲ್ಲಿ ಕರ್ನಾಟಕದ ಅಂದಿನ ಕಾಂಗ್ರೆಸ್ ಸರ್ಕಾರವು ನಿರ್ಮಿಸಿದೆ. ಇದು 2018 ರಿಂದ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.

ಆದರೆ, ಅಂತರ್ಜಾಲದಲ್ಲಿ ತುಂಬಾ ಸಣ್ಣ ಮಟ್ಟದ ಸಂಶೋಧನೆ ನಡೆಸಿದರೆ ಸಾಕು ಈ ಎರಡೂ ಹೇಳಿಕೆಗಳು ಸುಳ್ಳು ಎಂದು HWNEWS ವರದಿ ಮಾಡಿದೆ.

ರಾಜಸ್ಥಾನದ ಜೋಧಪುರ ಜಿಲ್ಲೆಯ ಫಲೋಡಿ ತಹಸಿಲ್‌ನ ಭಾದ್ಲಾದಲ್ಲಿನ ಸೌರ ಉದ್ಯಾನವನವು ಮಾರ್ಚ್ 2020ರ ಹೊತ್ತಿಗೆ ವಿಶ್ವದ ಅತಿದೊಡ್ಡ ಸೌರ ಉದ್ಯಾನವನವಾಗಿದೆ. ಇದು ಒಟ್ಟು 10,000 ಎಕರೆ ವಿಸ್ತೀರ್ಣದಲ್ಲಿ ನಿರ್ಮಿತವಾಗಿದ್ದು, ಒಟ್ಟು 2,245 ಮೆಗಾವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ. ಇದು ರೇವಾದಲ್ಲಿ ಪಿಎಂ ಮೋದಿ ಉದ್ಘಾಟಿಸಿದ ಸ್ಥಾವರ ಮತ್ತು ಕರ್ನಾಟಕದ ಪಾವಗಡ ಸೌರ ಉದ್ಯಾನವನಕ್ಕಿಂತ ದೊಡ್ಡದಾಗಿದೆ ಎಂದು HWNEWS ವರದಿ ಮಾಡಿದೆ.

ಮಾರ್ಚ್ 19, 2020ರ ಮೆರ್ಕಾಮ್ ಇಂಡಿಯಾದ ವರದಿಯ ಪ್ರಕಾರ, ಭಾದ್ಲಾ ಸೌರ ಉದ್ಯಾನವನವು ವಿಶ್ವದ ಅತಿದೊಡ್ಡ ಸೌರ ಉದ್ಯಾನವನವಾಗಿದೆ.

 

ವಿಕಿಪೀಡಿಯಾದ ಪ್ರಕಾರ, ಪಾವಗಡ ಸ್ಥಾವರವು 2,050 ಮೆಗಾವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ ಮತ್ತು 2245 ಮೆಗಾವ್ಯಾಟ್ ಸಾಮರ್ಥ್ಯದ ಭಾದ್ಲಾ ಸೌರ ಉದ್ಯಾನದ ನಂತರ ವಿಶ್ವದ ಎರಡನೇ ಅತಿದೊಡ್ಡ ದ್ಯುತಿವಿದ್ಯುತ್‌ಜನಕ ಕೇಂದ್ರವಾಗಿದೆ.

ಹಾಗಾಗಿ ರೇವಾ ಸ್ಥಾವರವು ಏಷ್ಯಾದಲ್ಲಿ ಅತಿದೊಡ್ಡದಾಗಿದೆ ಎಂಬ ಕೆಲವು ಬಿಜೆಪಿ ಮಂತ್ರಿಗಳು ಮತ್ತು ಮುಖಂಡರು ನೀಡಿದ ಹೇಳಿಕೆಗಳು ಸುಳ್ಳು ಎಂದು ತಿಳಿದುಬಂದಿದೆ.

ರೇವಾ ಸ್ಥಾವರಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಪಾವಗಡ ವಿದ್ಯುತ್ ಉದ್ಯಾನವನದ ಬಗ್ಗೆ ಕಾಂಗ್ರೆಸ್ ಮಾಡಿದ ಹೇಳಿಕೆ ನಿಜವಾದರೂ, ಏಷ್ಯಾದಲ್ಲಿ ಮಾತ್ರವಲ್ಲದೇ, ಜಗತ್ತಿನಲ್ಲಿಯೇ ದೊಡ್ಡ ಸೌರಶಕ್ತಿ ಉದ್ಯಾನವನವು ರಾಜಸ್ಥಾನದ ಭದ್ಲಾದಲ್ಲಿದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...