Homeಮುಖಪುಟವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್

ವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್

- Advertisement -
- Advertisement -

ನಟ ಶಿವರಾಜ್‌ಕುಮಾರ್ ಇಂದು 58ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಶಿವರಾಜ್ ಅವರ ಆತ್ಮೀಯ ಸ್ನೇಹಿತರೂ ಆದ ನಟ-ನಿರ್ದೇಶಕ ಚಿ.ಗುರುದತ್ ಹ್ಯಾಟ್ರಿಕ್ ಹೀರೋ ಜೊತೆಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಳ್ಳುತ್ತಾ ಶುಭಾಶಯ ಕೋರಿದ್ದಾರೆ.

***

ಬಾಲ್ಯದಲ್ಲಿ ಒಟ್ಟಿಗೇ ಆಡಿಕೊಂಡು ಬೆಳೆದ ಶಿವಣ್ಣ ಮತ್ತು ನಾನು `ಆನಂದ್’ (1986) ಚಿತ್ರದೊಂದಿಗೆ ಒಟ್ಟಿಗೇ ಬಣ್ಣ ಹಚ್ಚಿದವರು. `ಆನಂದ್’ ಚಿತ್ರಕ್ಕಾಗಿ ನನಗೆ ಅವರೇ ಒಂದು ತಿಂಗಳು ಕಾರು ಡ್ರೈವಿಂಗ್ ಹೇಳಿಕೊಟ್ಟಿದ್ದರು. ಚಿತ್ರೀಕರಣದಲ್ಲಿ ಡ್ರೈವಿಂಗ್ ಕೈಕೊಟ್ಟಾಗ ಅಲ್ಲಿಯೂ ಶಿವಣ್ಣನ ನೆರವು ಬೇಕಾಗುತ್ತಿತ್ತು. ಮುಂದೆ ಕೂಡ ನನ್ನ ಸಿನಿಮಾ ಬದುಕಿನ ಪ್ರಮುಖ ಹಂತಗಳಲ್ಲಿ ಅವರ ನೆರವು ಒದಗಿಬಂದಿತು. ನನ್ನನ್ನು ನಿರ್ಮಾಪಕನನ್ನಾಗಿ (ಆನಂದಜ್ಯೋತಿ) ಮತ್ತು ನಿರ್ದೇಶಕನನ್ನಾಗಿ (ಸಮರ) ಮಾಡಿದ್ದು ಕೂಡ ಶಿವಣ್ಣನೇ.

ನಾನು, ಅವರು ಮತ್ತು ಬಾಲು (ಬಾಲರಾಜ್) ನಾಯಕರಾಗಿ ನಟಿಸಿದ `ಸಂಯುಕ್ತ’ ಆಗ ಕನ್ನಡದಲ್ಲೊಂದು ಉತ್ತಮ ಥ್ರಿಲ್ಲರ್ ಸಿನಿಮಾ. ಕಾಕೋಳು ಸರೋಜಾ ರಾವ್ ಅವರ ಕಾದಂಬರಿಯನ್ನು ಆಧರಿಸಿ ಮಾಡಿದ ಈ ಸಿನಿಮಾದ ನಿರ್ದೇಶಕರು ಚಂದ್ರಶೇಖರ ಶರ್ಮಾ. ಹಾಗೆ ನೋಡಿದರೆ ಇದು ನಾನು ಮತ್ತು ಬಾಲರಾಜ್ ನಟಿಸಬೇಕೆಂದಿದ್ದ ಸಿನಿಮಾ. ಅಂತಿಮ ಹಂತದಲ್ಲಿ ಶಿವರಾಜ್‌ಕುಮಾರ್ ತಂಡಕ್ಕೆ ಸೇರಿಕೊಂಡರು. ಆಗ ಹ್ಯಾಟ್ರಿಕ್ ಹೀರೋ (ಆನಂದ್, ರಥಸಪ್ತಮಿ ಮತ್ತು ಮನಮೆಚ್ಚಿದ ಹುಡುಗಿ) ಆಗಿದ್ದ ಶಿವರಾಜಕುಮಾರ್‌ಗೆ ಇದು ನಾಲ್ಕನೇ ಸಿನಿಮಾ. ದೊಡ್ಡ ಯಶಸ್ಸು ಕಂಡ ಹೀರೋ ಎನ್ನುವ ಯಾವುದೇ ಸಣ್ಣ ಹಿಂಜರಿಕೆಯೂ ಇಲ್ಲದೆ ಖುಷಿಯಿಂದ ನಮಗೆ ಜೊತೆಯಾದರು. ನಮ್ಮಿಬ್ಬರ ಸಿನಿಮಾ ಬದುಕಿಗೆ ನೆರವಾಗುತ್ತದೆ ಎನ್ನುವ ದೃಷ್ಟಿಯಿಂದ ಯೋಜನೆಗೆ ಕೈಜೋಡಿಸಿದರು. ಮೊದಲು ಚಿಕ್ಕ ಪ್ರಾಜೆಕ್ಟ್ ಎಂದುಕೊಂಡಿದ್ದ ಇದು ಶಿವರಾಜ್ ಸೇರ್ಪಡೆಯಿಂದ ದೊಡ್ಡ ಸಿನಿಮಾ ಆಗಿ ಯಶಸ್ಸು ಕಂಡಿತು.

ಸದಾ ಚಟುವಟಿಕೆಯಿಂದಿರುವ ಶಿವರಾಜ್ ಶೂಟಿಂಗ್ ಸೆಟ್‍ನಲ್ಲಿದ್ದರೆ ಒಂದು ರೀತಿ ಉತ್ಸಾಹ. ದಿನೇಶ್‍ಬಾಬು ನಿರ್ದೇಶನದ `ಇನ್‍ಸ್ಪೆಕ್ಟರ್ ವಿಕ್ರಂ’ ಶೂಟಿಂಗ್ ಸಂದರ್ಭವೊಂದು ನನಗೆ ನೆನಪಾಗುತ್ತದೆ. ಶಿವಣ್ಣ ಹೀರೋ ಆಗಿ ನಟಿಸಿದ್ದ ಚಿತ್ರದಲ್ಲಿ ನನಗೊಂದು ಪ್ರಮುಖ ಪಾತ್ರವಿತ್ತು. ಕೆಮ್ಮಣ್ಣುಗುಂಡಿಯಲ್ಲಿ ನಡೆಯುತ್ತಿದ್ದ ಚಿತ್ರೀಕರಣದಲ್ಲಿ ನಾವೆಲ್ಲರೂ ಪಾಲ್ಗೊಂಡಿದ್ದೆವು. ನಿರ್ದೇಶಕ ದಿನೇಶ್ ಬಾಬು ಅವರ ಆತ್ಮೀಯರೂ ಆಗಿದ್ದ ತಮಿಳು ನಟ ನಾರಾಯಣ್ ಚಿತ್ರದ ಖಳ ಪಾತ್ರದಲ್ಲಿ ನಟಿಸುತ್ತಿದ್ದರು. ಸನ್ನಿವೇಶವೊಂದರಲ್ಲಿ ನಾರಾಯಣ್ ವೇಗವಾಗಿ ಕಾರು ಓಡಿಸಿಕೊಂಡು ಬಂದು ಒಮ್ಮೆಗೇ ಬ್ರೇಕ್ ಹಾಕಿ ಕಾರನ್ನು ತಿರುಗಿಸಿ ನಿಲ್ಲಿಸಬೇಕಿತ್ತು. ನಾಲ್ಕೈದು ಟೇಕ್‍ಗಳಾದರೂ ಶಾಟ್ ಓಕೆಯಾಗಲಿಲ್ಲ. ಕೊನೆಗೆ ನಾರಾಯಣ್‍ಗೆ ತಾವು ಡ್ಯೂಪ್ ಆಗುವುದಾಗಿ ಶಿವಣ್ಣ ಎದ್ದುನಿಂತರು! ಅದು ರಿಸ್ಕೀ ಶಾಟ್ ಆದ್ದರಿಂದ ಎಲ್ಲರೂ ಬೇಡವೆಂದೆವು. ನಮ್ಮ ಮಾತು ಕೇಳದ ಶಿವಣ್ಣ, ನಾರಾಯಣ್‍ರ ಷರ್ಟ್ ಹಾಕಿಕೊಂಡು ಕಾರು ಹತ್ತಿದರು. ಡ್ರೈವಿಂಗ್ ಎಕ್ಸ್‌ಪರ್ಟ್ ಆಗಿದ್ದರಿಂದ ಅವರಿಗೊಂದಿಷ್ಟು ಟೆಕ್ನಿಕ್‍ಗಳು ಗೊತ್ತಿದ್ದವು. ನಿರ್ದೇಶಕರ ಕಲ್ಪನೆಗೆ ತಕ್ಕಂತೆ ಒಂದೇ ಟೇಕ್‍ಗೆ ರಿಸ್ಕೀ ಶಾಟ್ ಓಕೆ ಮಾಡಿದರು. ಕೊಂಚ ಎಡವಟ್ಟಾಗಿದ್ದರೂ ಕಾರು ಪಲ್ಟಿಯಾಗುವ ಸಾಧ್ಯತೆಗಳಿದ್ದವು. ಹೆದರದ ಶಿವಣ್ಣ ವಿಲನ್‍ಗೆ `ಡ್ಯೂಪ್’ ಆಗಿ ಎಲ್ಲರಿಂದಲೂ ಚಪ್ಪಾಳೆ ಗಿಟ್ಟಿಸಿದರು!

ನಾಯಕನೇ ನೃತ್ಯ ಸಂಯೋಜಿಸಿದಾಗ…

ಶಿವರಾಜ್ ಪ್ರೋತ್ಸಾಹದ ಮೇರೆಗೆ `ಸಮರ’ ಚಿತ್ರದ ಮೂಲಕ ನಾನು ನಿರ್ದೇಶಕನ ಹ್ಯಾಟ್ ಧರಿಸುವಂತಾಯ್ತು. ಶಿವರಾಜಕುಮಾರ್ ಮತ್ತು ಸುಧಾರಾಣಿ ಚಿತ್ರದ ಹೀರೋ-ಹಿರೋಯಿನ್. ಸಿಂಗಾಪೂರದಲ್ಲಿ ಚಿತ್ರದ ಎರಡು ಹಾಡುಗಳನ್ನು ಚಿತ್ರಿಸುವುದೆಂದು ನಿರ್ಧರಿಸಿದ್ದೆವು. ಅಂದುಕೊಂಡಂತೆಯೇ ಬೆಂಗಳೂರಿನಿಂದ ನಮ್ಮದೊಂದು ಚಿಕ್ಕ ತಂಡದೊಂದಿಗೆ ಸಿಂಗಾಪೂರಕ್ಕೆ ಹೋದೆವು. ನೃತ್ಯ ನಿರ್ದೇಶಕ ಜಾನ್ ಬಾಲು ಚೆನ್ನೈನಿಂದ ಬಂದು ನಮ್ಮನ್ನು ಕೂಡಿಕೊಳ್ಳಬೇಕಿತ್ತು. ಕಾರಣಾಂತರಗಳಿಂದಾಗಿ ಅವರು ಚೆನ್ನೈನಲ್ಲೇ ಉಳಿಯುವಂತಾದಾಗ ನಾವು ಕಂಗಾಲಾದೆವು.

ನಮಗೆ ಅಲ್ಲಿ ಚಿತ್ರಿಸಲು ಅನುಮತಿ ಸಿಕ್ಕಿದ್ದು ನಾಲ್ಕು ದಿನವಷ್ಟೇ. ನಿರ್ದೇಶಕನಾದ ನಾನು ತಲೆ ಮೇಲೆ ಕೈಹೊತ್ತು ಕುಳಿತಿದ್ದರೆ, ಶಿವಣ್ಣ ತಾವೇ `ನೃತ್ಯ ನಿರ್ದೇಶಕ’ನಾಗುವುದಾಗಿ ಹೇಳಿದರು! ಸಂಪೂರ್ಣ ವಿಫಲವಾಗಬೇಕಿದ್ದ ಸಿಂಗಾಪೂರ್ ಟೂರ್‌ಗೆ ಮತ್ತೆ ಜೀವ ಬಂದಂತಾಯಿತು. ನಾನು ಮೇಕಪ್-ಟಚ್‍ಅಪ್, ಟ್ರ್ಯಾಲಿ ಹ್ಯಾಂಡ್ಲಿಂಗ್ ನೋಡಿಕೊಂಡರೆ ಹೀರೋ ಶಿವಣ್ಣ ನೃತ್ಯ ನಿರ್ದೇಶಕರಾದರು. ನೃತ್ಯದಲ್ಲಿ ಅಪಾರ ಪರಿಣತಿಯಿರುವ ಶಿವಣ್ಣ ಚಿತ್ರದ ಎರಡು ಹಾಡುಗಳಿಗೆ ನೃತ್ಯ ಸಂಯೋಜಿಸಿದರು. ತಮ್ಮ ನೃತ್ಯ ಸಂಯೋಜನೆಗೆ ತಾವೇ ಹೆಜ್ಜೆ ಹಾಕುತ್ತಾ ಸಿಂಗಾಪೂರ ಪ್ರವಾಸವನ್ನು ಯಶಸ್ವಿಗೊಳಿಸಿದರು.

  • ಚಿ.ಗುರುದತ್ 

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: ಈ ಜನಪ್ರಿಯ ಕೂಸುಮರಿಯ ಫೋಟೋ ಸೆರೆಯಾದದ್ದು ಹೇಗೆ!?| ಚಿ. ಉದಯಶಂಕರ್ ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...