Homeಮುಖಪುಟವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್

ವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್

- Advertisement -
- Advertisement -

ನಟ ಶಿವರಾಜ್‌ಕುಮಾರ್ ಇಂದು 58ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಶಿವರಾಜ್ ಅವರ ಆತ್ಮೀಯ ಸ್ನೇಹಿತರೂ ಆದ ನಟ-ನಿರ್ದೇಶಕ ಚಿ.ಗುರುದತ್ ಹ್ಯಾಟ್ರಿಕ್ ಹೀರೋ ಜೊತೆಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಳ್ಳುತ್ತಾ ಶುಭಾಶಯ ಕೋರಿದ್ದಾರೆ.

***

ಬಾಲ್ಯದಲ್ಲಿ ಒಟ್ಟಿಗೇ ಆಡಿಕೊಂಡು ಬೆಳೆದ ಶಿವಣ್ಣ ಮತ್ತು ನಾನು `ಆನಂದ್’ (1986) ಚಿತ್ರದೊಂದಿಗೆ ಒಟ್ಟಿಗೇ ಬಣ್ಣ ಹಚ್ಚಿದವರು. `ಆನಂದ್’ ಚಿತ್ರಕ್ಕಾಗಿ ನನಗೆ ಅವರೇ ಒಂದು ತಿಂಗಳು ಕಾರು ಡ್ರೈವಿಂಗ್ ಹೇಳಿಕೊಟ್ಟಿದ್ದರು. ಚಿತ್ರೀಕರಣದಲ್ಲಿ ಡ್ರೈವಿಂಗ್ ಕೈಕೊಟ್ಟಾಗ ಅಲ್ಲಿಯೂ ಶಿವಣ್ಣನ ನೆರವು ಬೇಕಾಗುತ್ತಿತ್ತು. ಮುಂದೆ ಕೂಡ ನನ್ನ ಸಿನಿಮಾ ಬದುಕಿನ ಪ್ರಮುಖ ಹಂತಗಳಲ್ಲಿ ಅವರ ನೆರವು ಒದಗಿಬಂದಿತು. ನನ್ನನ್ನು ನಿರ್ಮಾಪಕನನ್ನಾಗಿ (ಆನಂದಜ್ಯೋತಿ) ಮತ್ತು ನಿರ್ದೇಶಕನನ್ನಾಗಿ (ಸಮರ) ಮಾಡಿದ್ದು ಕೂಡ ಶಿವಣ್ಣನೇ.

ನಾನು, ಅವರು ಮತ್ತು ಬಾಲು (ಬಾಲರಾಜ್) ನಾಯಕರಾಗಿ ನಟಿಸಿದ `ಸಂಯುಕ್ತ’ ಆಗ ಕನ್ನಡದಲ್ಲೊಂದು ಉತ್ತಮ ಥ್ರಿಲ್ಲರ್ ಸಿನಿಮಾ. ಕಾಕೋಳು ಸರೋಜಾ ರಾವ್ ಅವರ ಕಾದಂಬರಿಯನ್ನು ಆಧರಿಸಿ ಮಾಡಿದ ಈ ಸಿನಿಮಾದ ನಿರ್ದೇಶಕರು ಚಂದ್ರಶೇಖರ ಶರ್ಮಾ. ಹಾಗೆ ನೋಡಿದರೆ ಇದು ನಾನು ಮತ್ತು ಬಾಲರಾಜ್ ನಟಿಸಬೇಕೆಂದಿದ್ದ ಸಿನಿಮಾ. ಅಂತಿಮ ಹಂತದಲ್ಲಿ ಶಿವರಾಜ್‌ಕುಮಾರ್ ತಂಡಕ್ಕೆ ಸೇರಿಕೊಂಡರು. ಆಗ ಹ್ಯಾಟ್ರಿಕ್ ಹೀರೋ (ಆನಂದ್, ರಥಸಪ್ತಮಿ ಮತ್ತು ಮನಮೆಚ್ಚಿದ ಹುಡುಗಿ) ಆಗಿದ್ದ ಶಿವರಾಜಕುಮಾರ್‌ಗೆ ಇದು ನಾಲ್ಕನೇ ಸಿನಿಮಾ. ದೊಡ್ಡ ಯಶಸ್ಸು ಕಂಡ ಹೀರೋ ಎನ್ನುವ ಯಾವುದೇ ಸಣ್ಣ ಹಿಂಜರಿಕೆಯೂ ಇಲ್ಲದೆ ಖುಷಿಯಿಂದ ನಮಗೆ ಜೊತೆಯಾದರು. ನಮ್ಮಿಬ್ಬರ ಸಿನಿಮಾ ಬದುಕಿಗೆ ನೆರವಾಗುತ್ತದೆ ಎನ್ನುವ ದೃಷ್ಟಿಯಿಂದ ಯೋಜನೆಗೆ ಕೈಜೋಡಿಸಿದರು. ಮೊದಲು ಚಿಕ್ಕ ಪ್ರಾಜೆಕ್ಟ್ ಎಂದುಕೊಂಡಿದ್ದ ಇದು ಶಿವರಾಜ್ ಸೇರ್ಪಡೆಯಿಂದ ದೊಡ್ಡ ಸಿನಿಮಾ ಆಗಿ ಯಶಸ್ಸು ಕಂಡಿತು.

ಸದಾ ಚಟುವಟಿಕೆಯಿಂದಿರುವ ಶಿವರಾಜ್ ಶೂಟಿಂಗ್ ಸೆಟ್‍ನಲ್ಲಿದ್ದರೆ ಒಂದು ರೀತಿ ಉತ್ಸಾಹ. ದಿನೇಶ್‍ಬಾಬು ನಿರ್ದೇಶನದ `ಇನ್‍ಸ್ಪೆಕ್ಟರ್ ವಿಕ್ರಂ’ ಶೂಟಿಂಗ್ ಸಂದರ್ಭವೊಂದು ನನಗೆ ನೆನಪಾಗುತ್ತದೆ. ಶಿವಣ್ಣ ಹೀರೋ ಆಗಿ ನಟಿಸಿದ್ದ ಚಿತ್ರದಲ್ಲಿ ನನಗೊಂದು ಪ್ರಮುಖ ಪಾತ್ರವಿತ್ತು. ಕೆಮ್ಮಣ್ಣುಗುಂಡಿಯಲ್ಲಿ ನಡೆಯುತ್ತಿದ್ದ ಚಿತ್ರೀಕರಣದಲ್ಲಿ ನಾವೆಲ್ಲರೂ ಪಾಲ್ಗೊಂಡಿದ್ದೆವು. ನಿರ್ದೇಶಕ ದಿನೇಶ್ ಬಾಬು ಅವರ ಆತ್ಮೀಯರೂ ಆಗಿದ್ದ ತಮಿಳು ನಟ ನಾರಾಯಣ್ ಚಿತ್ರದ ಖಳ ಪಾತ್ರದಲ್ಲಿ ನಟಿಸುತ್ತಿದ್ದರು. ಸನ್ನಿವೇಶವೊಂದರಲ್ಲಿ ನಾರಾಯಣ್ ವೇಗವಾಗಿ ಕಾರು ಓಡಿಸಿಕೊಂಡು ಬಂದು ಒಮ್ಮೆಗೇ ಬ್ರೇಕ್ ಹಾಕಿ ಕಾರನ್ನು ತಿರುಗಿಸಿ ನಿಲ್ಲಿಸಬೇಕಿತ್ತು. ನಾಲ್ಕೈದು ಟೇಕ್‍ಗಳಾದರೂ ಶಾಟ್ ಓಕೆಯಾಗಲಿಲ್ಲ. ಕೊನೆಗೆ ನಾರಾಯಣ್‍ಗೆ ತಾವು ಡ್ಯೂಪ್ ಆಗುವುದಾಗಿ ಶಿವಣ್ಣ ಎದ್ದುನಿಂತರು! ಅದು ರಿಸ್ಕೀ ಶಾಟ್ ಆದ್ದರಿಂದ ಎಲ್ಲರೂ ಬೇಡವೆಂದೆವು. ನಮ್ಮ ಮಾತು ಕೇಳದ ಶಿವಣ್ಣ, ನಾರಾಯಣ್‍ರ ಷರ್ಟ್ ಹಾಕಿಕೊಂಡು ಕಾರು ಹತ್ತಿದರು. ಡ್ರೈವಿಂಗ್ ಎಕ್ಸ್‌ಪರ್ಟ್ ಆಗಿದ್ದರಿಂದ ಅವರಿಗೊಂದಿಷ್ಟು ಟೆಕ್ನಿಕ್‍ಗಳು ಗೊತ್ತಿದ್ದವು. ನಿರ್ದೇಶಕರ ಕಲ್ಪನೆಗೆ ತಕ್ಕಂತೆ ಒಂದೇ ಟೇಕ್‍ಗೆ ರಿಸ್ಕೀ ಶಾಟ್ ಓಕೆ ಮಾಡಿದರು. ಕೊಂಚ ಎಡವಟ್ಟಾಗಿದ್ದರೂ ಕಾರು ಪಲ್ಟಿಯಾಗುವ ಸಾಧ್ಯತೆಗಳಿದ್ದವು. ಹೆದರದ ಶಿವಣ್ಣ ವಿಲನ್‍ಗೆ `ಡ್ಯೂಪ್’ ಆಗಿ ಎಲ್ಲರಿಂದಲೂ ಚಪ್ಪಾಳೆ ಗಿಟ್ಟಿಸಿದರು!

ನಾಯಕನೇ ನೃತ್ಯ ಸಂಯೋಜಿಸಿದಾಗ…

ಶಿವರಾಜ್ ಪ್ರೋತ್ಸಾಹದ ಮೇರೆಗೆ `ಸಮರ’ ಚಿತ್ರದ ಮೂಲಕ ನಾನು ನಿರ್ದೇಶಕನ ಹ್ಯಾಟ್ ಧರಿಸುವಂತಾಯ್ತು. ಶಿವರಾಜಕುಮಾರ್ ಮತ್ತು ಸುಧಾರಾಣಿ ಚಿತ್ರದ ಹೀರೋ-ಹಿರೋಯಿನ್. ಸಿಂಗಾಪೂರದಲ್ಲಿ ಚಿತ್ರದ ಎರಡು ಹಾಡುಗಳನ್ನು ಚಿತ್ರಿಸುವುದೆಂದು ನಿರ್ಧರಿಸಿದ್ದೆವು. ಅಂದುಕೊಂಡಂತೆಯೇ ಬೆಂಗಳೂರಿನಿಂದ ನಮ್ಮದೊಂದು ಚಿಕ್ಕ ತಂಡದೊಂದಿಗೆ ಸಿಂಗಾಪೂರಕ್ಕೆ ಹೋದೆವು. ನೃತ್ಯ ನಿರ್ದೇಶಕ ಜಾನ್ ಬಾಲು ಚೆನ್ನೈನಿಂದ ಬಂದು ನಮ್ಮನ್ನು ಕೂಡಿಕೊಳ್ಳಬೇಕಿತ್ತು. ಕಾರಣಾಂತರಗಳಿಂದಾಗಿ ಅವರು ಚೆನ್ನೈನಲ್ಲೇ ಉಳಿಯುವಂತಾದಾಗ ನಾವು ಕಂಗಾಲಾದೆವು.

ನಮಗೆ ಅಲ್ಲಿ ಚಿತ್ರಿಸಲು ಅನುಮತಿ ಸಿಕ್ಕಿದ್ದು ನಾಲ್ಕು ದಿನವಷ್ಟೇ. ನಿರ್ದೇಶಕನಾದ ನಾನು ತಲೆ ಮೇಲೆ ಕೈಹೊತ್ತು ಕುಳಿತಿದ್ದರೆ, ಶಿವಣ್ಣ ತಾವೇ `ನೃತ್ಯ ನಿರ್ದೇಶಕ’ನಾಗುವುದಾಗಿ ಹೇಳಿದರು! ಸಂಪೂರ್ಣ ವಿಫಲವಾಗಬೇಕಿದ್ದ ಸಿಂಗಾಪೂರ್ ಟೂರ್‌ಗೆ ಮತ್ತೆ ಜೀವ ಬಂದಂತಾಯಿತು. ನಾನು ಮೇಕಪ್-ಟಚ್‍ಅಪ್, ಟ್ರ್ಯಾಲಿ ಹ್ಯಾಂಡ್ಲಿಂಗ್ ನೋಡಿಕೊಂಡರೆ ಹೀರೋ ಶಿವಣ್ಣ ನೃತ್ಯ ನಿರ್ದೇಶಕರಾದರು. ನೃತ್ಯದಲ್ಲಿ ಅಪಾರ ಪರಿಣತಿಯಿರುವ ಶಿವಣ್ಣ ಚಿತ್ರದ ಎರಡು ಹಾಡುಗಳಿಗೆ ನೃತ್ಯ ಸಂಯೋಜಿಸಿದರು. ತಮ್ಮ ನೃತ್ಯ ಸಂಯೋಜನೆಗೆ ತಾವೇ ಹೆಜ್ಜೆ ಹಾಕುತ್ತಾ ಸಿಂಗಾಪೂರ ಪ್ರವಾಸವನ್ನು ಯಶಸ್ವಿಗೊಳಿಸಿದರು.

  • ಚಿ.ಗುರುದತ್ 

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: ಈ ಜನಪ್ರಿಯ ಕೂಸುಮರಿಯ ಫೋಟೋ ಸೆರೆಯಾದದ್ದು ಹೇಗೆ!?| ಚಿ. ಉದಯಶಂಕರ್ ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...