Homeಮುಖಪುಟರಾಜಸ್ಥಾನದಲ್ಲಿ ಆಪರೇಷನ್ ಕಮಲ; ಹಲವು ಕಾಂಗ್ರೆಸ್ ಶಾಸಕರೊಂದಿಗೆ ದೆಹಲಿಯಲ್ಲಿ ಸಚಿನ್ ಪೈಲಟ್‌

ರಾಜಸ್ಥಾನದಲ್ಲಿ ಆಪರೇಷನ್ ಕಮಲ; ಹಲವು ಕಾಂಗ್ರೆಸ್ ಶಾಸಕರೊಂದಿಗೆ ದೆಹಲಿಯಲ್ಲಿ ಸಚಿನ್ ಪೈಲಟ್‌

- Advertisement -
- Advertisement -

ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಯಶಸ್ವಿ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದ ಬಿಜೆಪಿಯ ಕಣ್ಣು ಈಗ ರಾಜಸ್ಥಾನದ ಮೇಲೆ ನೆಟ್ಟಿದೆ. ತಮ್ಮ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ವಿರೋಧ ಪಕ್ಷ ಬಿಜೆಪಿ ಪ್ರಯತ್ನಿಸುತ್ತಿದ್ದು, ಶಾಸಕರಿಗೆ ತಲಾ 15 ಕೋಟಿ ರೂಗಳ ಆಮಿಷವೊಡ್ಡಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್‌ ಹಲವು ಕಾಂಗ್ರೆಸ್ ಶಾಸಕರೊಂದಿಗೆ ದೆಹಲಿಯಲ್ಲಿ ಬೀಡುಬಿಟ್ಟಿರುವುದು ಕಾಂಗ್ರೆಸ್ ತಲೆನೋವಿಗೆ ಕಾರಣವಾಗಿದೆ.

ನಿನ್ನೆ ತಾನೇ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಗೆಹ್ಲೋಟ್ “COVID-19 ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಜನರಿಗಾಗಿ ಕೆಲಸ ಮಾಡುತ್ತಿರುವಾಗ ಬಿಜೆಪಿಯು ಸರ್ಕಾರ ಉರುಳಿಸುವ ಕುತಂತ್ರ ಹೆಣೆದಿದೆ ಎಂದು ಕಿಡಿಕಾರಿದ್ದರು.

ಇಂದು ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿ ಮಾಹಿತಿ ಪಡೆದಿದ್ದಾರೆ. ಎಂತಹ ಬಿಕ್ಕಟ್ಟು ಇದ್ದರೂ ಸಹ ಅದನ್ನು ಆಂತರೀಕವಾಗಿ ಚರ್ಚಿಸಿ ಬಗೆಹರಿಸಿಕೊಳ್ಳಬೇಕೆಂದು ಸೋನಿಯಾ ಗಾಂಧಿ ತಿಳಿಸಿದ್ದಾರೆಂದು ಮೂಲಗಳು ಹೇಳಿವೆ.

ಇಂದು ಹಲವು ಕಾಂಗ್ರೆಸ್ ಶಾಸಕರೊಂದಿಗೆ ದೆಹಲಿ ತಲುಪಿರುವ ಸಚಿನ್ ಪೈಲಟ್ ಯಾರ ಫೋನ್ ಕರೆಗೂ ಉತ್ತರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. “ಸಾಮಾನ್ಯವಾಗಿ ಸುಲಭಕ್ಕೆ ಸಿಗುತ್ತಿದ್ದ ಸಚಿನ್ ಪೈಲಟ್ ಕಳೆದ 24 ಗಂಟೆಗಳಿಂದ ನಮ್ಮ ಪೋನ್‌ ಕರೆಗಳಿಗೆ ಉತ್ತರಿಸುತ್ತಿಲ್ಲ. ಇದು ಸರ್ಕಾರ ಅಸ್ಥಿರದಲ್ಲಿರುವುದರ ಸಂಕೇತ” ಎಂದು ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಟ್ವೀಟ್ ಮಾಡಿದ್ದಾರೆ.

ಸಚಿನ್ ಪೈಲಟ್ ಮಧ್ಯಪ್ರದೇಶ ಜ್ಯೋತಿರಾದಿತ್ಯ ಸಿಂಧಿಯಾ ಆಗಲು ಹೊರಟಿದ್ದಾರೆ ಎಂದು ಹಲವಾರು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಪಕ್ಷ ಬದಲಿಸಲು ಕಾಂಗ್ರೆಸ್‌ ಶಾಸಕರಿಗೆ 15 ಕೋಟಿ ರೂಗಳ ಆಮಿಷವೊಡ್ಡಿದ್ದಾರೆ ಎಂಬ ಮಾತುಗಳು ಪದೇ ಪದೇ ಕೇಳಿಬರುತ್ತಿವೆ. ಒಟ್ಟಾರೆ ನಿರಂತರವಾಗಿ ಬಿಜೆಪಿಯು ಸರ್ಕಾರ ಉರುಳಿಸಲು ಪ್ರಯತ್ನಿಸಿತ್ತಿದ್ದು, ಕೋವಿಡ್ ಸಮಯದಲ್ಲಿ ಅಸ್ಥಿರತೆ ಉಂಟು ಮಾಡಲು ಮುಂದಾಗಿದ್ದಾರೆ ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

“2014 ರಲ್ಲಿ ಕೇಂದ್ರ ಬಿಜೆಪಿ ಅಧಿಕಾರ ಹಿಡಿದಾಗಿನಿಂದಲೂ ಅದರ ನಿಜ ಮುಖವನ್ನು ಬಹಿರಂಗಪಡಿಸಲಾಗಿದೆ. ಅವರು ಮೊದಲು ರಹಸ್ಯವಾಗಿ ಮಾಡಿದ್ದನ್ನು ಈಗ ಬಹಿರಂಗವಾಗಿ ಮಾಡುತ್ತಾರೆ. ಗೋವಾ, ಕರ್ನಾಟಕ, ಮಧ್ಯಪ್ರದೇಶ ಮತ್ತು ಈಶಾನ್ಯ ರಾಜ್ಯಗಳಲ್ಲಿ ನೀವು ಇದನ್ನು ನೋಡಿದ್ದೀರಿ” ಎಂದು ಗೆಹ್ಲೋಟ್ ತಿಳಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕರು ಈ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ಕೆಲವು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ರಾಜಸ್ಥಾನ ಪೊಲೀಸರ ಎಸ್‌ಒಜಿ (ವಿಶೇಷ ಕಾರ್ಯಾಚರಣೆ ಗುಂಪು) ಮತ್ತು ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ಗೆ ದೂರು ಸಲ್ಲಿಸಿರುವ ಕಾಂಗ್ರೆಸ್ ನಾಯಕ ಮಹೇಶ್ ಜೋಶಿ,  ಬಿಜೆಪಿ ಭಯಭೀತರಾಗಿದೆ ಎಂದು ಹೇಳಿದ್ದಾರೆ.

200 ಸದಸ್ಯರ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ 107 ಸ್ಥಾನಗಳನ್ನು ಹೊಂದಿದ್ದು, 12 ಸ್ವತಂತ್ರ ಅಭ್ಯರ್ಥಿಗಳ ಬೆಂಬಲವನ್ನು ಹೊಂದಿದೆ. ಇದಲ್ಲದೆ ಇತರ ಪಕ್ಷಗಳ ಐದು ಶಾಸಕರು ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸಿದ್ದಾರೆ.


ಇದನ್ನೂ ಓದಿ: ಸರ್ಕಾರ ಉರುಳಿಸಲು ಶಾಸಕರಿಗೆ ಬಿಜೆಪಿ 15 ಕೋಟಿ ನೀಡುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...