Homeಮುಖಪುಟಜನಪರ ಹೋರಾಟಗಳ ಸಂಗಾತಿ ಮೈಸೂರಿನ ಮರಿದಂಡಯ್ಯ ಬುದ್ಧ ನಿಧನ

ಜನಪರ ಹೋರಾಟಗಳ ಸಂಗಾತಿ ಮೈಸೂರಿನ ಮರಿದಂಡಯ್ಯ ಬುದ್ಧ ನಿಧನ

- Advertisement -
- Advertisement -

ಚಳವಳಿಗಳು ನದಿಯಂತೆ. ಕಾಲದ ಅಡೆತಡೆಗಳನ್ನು ಎದುರಿಸುತ್ತ ನಿಲ್ಲದೇ ಹರಿಯುತ್ತಿರಬೇಕು. ಚಳವಳಿ ಎಂದೂ ನಿಂತ ನೀರಲ್ಲ. ಧುಮ್ಮಿಕ್ಕಿ ಹರಿವ ವರ್ಷಧಾರೆ. ನಿರಂತರ ಹರಿವ ಹೋರಾಟದ ನದಿಯಲ್ಲಿ ಸಹಸ್ರ ಸಹಸ್ರ ಮಂದಿ ಈಜಿದ್ದಾರೆ. ಗುರಿ ಮುಟ್ಟುವ ಮುನ್ನವೇ ಅರ್ಧದಲ್ಲಿಯೇ ನಿರ್ಗಮಿಸಿದ ಚಳವಳಿಗಾರರೇ ಬಹುತೇಕರು. ಅಂತವರ ಸಾಲಿಗೆ ಮತ್ತೊಬ್ಬ ಹೋರಾಟಗಾರ ಸೇರಿದ್ದಾರೆ. ಮೂರುವರೆ ದಶಕಗಳು ಸಾಮಾಜಿಕ ಶುದ್ಧೀಕರಣ ಕ್ರಿಯೆಯಲ್ಲಿ ನಿರತರಾಗಿದ್ದ ಮೈಸೂರಿನ ಜನಪರ ಚಳವಳಿಗಳ ಸಂಗಾತಿ ಮರಿದಂಡಯ್ಯ ಬುದ್ಧ, ಮಧ್ಯದಲ್ಲಿಯೇ ನಿರ್ಗಮಿಸಿ ಸಂಗಾತಿಗಳಲ್ಲಿ ಶೂನ್ಯಭಾವ ತುಂಬಿದ್ದಾರೆ.

ಮೈಸೂರಿನ ಎಲ್ಲಾ ಮಾದರಿಯ ಚಳವಳಿಗಳಲ್ಲಿ, ಎಡಪಂಥೀಯ, ಪ್ರಗತಿಪರ ನಿಲುವಿನ ಸಮಾರಂಭಗಳಲ್ಲಿ ಕಾಣುತ್ತಿದ್ದವರು ಮರಿದಂಡಯ್ಯ ಬುದ್ಧ. ಪತ್ರಿಕಾ ಕಚೇರಿಗಳಿಗೆ ಒಂದಿಲ್ಲೊಂದು ಪತ್ರಿಕಾ ಹೇಳಿಕೆ ಹಿಡಿದು ಬರುತ್ತಿದ್ದ ಅವರು ಮಿತಭಾಷಿ. ಸಾರ್ವಜನಿಕ ವೇದಿಕೆಗಳಲ್ಲಿ ಮಾತಾಡಿದ್ದು ಇಲ್ಲವೇ ಇಲ್ಲ. ಪ್ರಚಾರಕ್ಕೆಂದೂ ಹಪಾಹಪಿಸಿದವರಲ್ಲ. ಪ್ರತಿಭಟನೆಗಳಲ್ಲಿ ತಮ್ಮ ಹೆಸರು ಬರೆದುಕೊಳ್ಳುವಂತೆ ಒಮ್ಮೆಯೂ ಹೇಳಿದವರಲ್ಲ. ಆದರೆ ಮೈಸೂರಿನ ಎಲ್ಲಾ ಚಳವಳಿಗಳಲ್ಲಿ ಅವರ ದನಿ ಇದ್ದೇ ಇರುತ್ತಿತ್ತು.

ಎತ್ತರ ನಿಲುವು, ಪೈಲ್ವಾನನ ದೇಹಾಕೃತಿ, ಸದಾ ಬಿಳಿಯ ಜುಬ್ಬಾ ಧರಿಸುತ್ತಿದ್ದ ಅವರ ಹೆಸರೇ ವಿಚಿತ್ರ ಅನಿಸಿತ್ತು. ಮರಿದಂಡಯ್ಯ ಬುದ್ಧ ಅವರ ಹೆಸರು. ಮಾನವತಾವಾದಿ ಬುದ್ಧನ ಹೆಸರನ್ನು ತಮ್ಮ ಹೆಸರ ಜೊತೆ ಇಟ್ಟುಕೊಂಡಿದ್ದ ಅವರು ಸಮಾಜದ ತರತಮಗಳ ಬಗೆಗೆ ನೋಯುತ್ತ ಮೌನಿಯಾಗಿರುವಂತೆ ಕಾಣುತ್ತಿದ್ದರು. ಅನ್ಯಾಯದ ವಿರುದ್ಧದ ಹೆಜ್ಜೆ ಹಾಕುತ್ತಿದ್ದ ಎಲ್ಲರೊಂದಿಗೂ ನಡೆದರು. ನಡೆಯುತ್ತ ನಡೆಯುತ್ತ ದಣಿದು ಅನಾರೋಗ್ಯ ಪೀಡಿತರಾಗಿ ತಮ್ಮ ನಡಿಗೆ ನಿಲ್ಲಿಸಿಬಿಟ್ಟರು.

ಇತ್ತೀಚೆಗೆ ಗುರುಗಳಾದ ನಾ.ದಿವಾಕರ ಅವರು ‘ಮರಿದಂಡಯ್ಯ ಬುದ್ಧ ತೀವ್ರ ಅನಾರೋಗ್ಯದಲ್ಲಿದ್ದಾರೆ ಎಂದು ತಿಳಿಸಿದ್ದರು. ಅದಾಗಿ ಎರಡು ದಿನಗಳಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ. ಸಮಾಜದ ತರಮತಗಳ ವಿರುದ್ಧ ಹೋರಾಡುತ್ತಿದ್ದ ಅವರು ತಮ್ಮ ದೇಹದ ವಿರುದ್ಧ ಹೋರಾಡಿ ಗೆಲ್ಲಲಾಗದಿದ್ದು ನೋವಿನ ಸಂಗತಿ.

“ದಲಿತ ಚಳುವಳಿಯಲ್ಲಿ, ಕಮ್ಯುನಿಸ್ಟ್ ಚಳುವಳಿಯಲ್ಲಿ, ಮಾನವ ಹಕ್ಕು ಹೋರಾಟಗಳಲ್ಲಿ, ಎಲ್ಲ ರೀತಿಯ ಸಾಮಾಜಿಕ ಚಳುವಳಿಗಳಲ್ಲಿ ಸಕ್ರಿಯವಾಗಿದ್ದ ಮರಿದಂಡಯ್ಯ ಬುದ್ಧ ತಮ್ಮ ಸರಳ ಜೀವನದಿಂದಲೇ ಜನಾನುರಾಗಿಯಾಗಿದ್ದರು. ಕೂಲಿಕಾರ್ಮಿಕ ಸಂಘದ ಮೂಲಕ ಮೈಸೂರಿನ ಸಾವಿರಾರು ಕೂಲಿ ಕಾರ್ಮಿಕರಿಗೆ, ಪೌರ ಕಾರ್ಮಿಕರಿಗೆ ಆಸರೆಯಾಗಿದ್ದ ಮರಿದಂಡಯ್ಯ ಬುದ್ಧ ಕಾಯಕ ಜೀವಿ. ನಡೆದಾಡುವ ಚೇತನ. ಸ್ವಂತ ವಾಹನ ಇಲ್ಲದೆಯೇ ಅಗತ್ಯವಿದ್ದೆಡೆ, ಅವಶ್ಯಕತೆ ಇದ್ದವರಿಗೆ ಸಹಾಯ ಹಸ್ತ ನೀಡುತ್ತಲೇ ತಮ್ಮ ಬದುಕು ಸವೆಸಿದ ಬುದ್ಧ ಸಾಂಸಾರಿಕ ಜೀವನಕ್ಕಿಂತಲೂ ಸಮಾಜಮುಖಿಯಾಗಿಯೇ ಬದುಕಲು ಇಚ್ಚಿಸಿದವರು” ಎಂದು ಚಿಂತಕರಾದ ನಾ ದಿವಾಕರ್‌ರವರು ನುಡಿನಮನ ಸಲ್ಲಿಸಿದ್ದಾರೆ.

‘ಓಹೊ… ದಿನಾ ನೋಡ್ತಾ ಇದ್ದೆ ಇವರನ್ನ ಒಂದು ಜುಬ್ಬ ಹಾಕೊಂಡು ಓಡಾಡೋರು, ಪ್ರತಿಭಟನೆಗಳಲ್ಲಿ ಕಾಣಿಸಿಕೊಳ್ಳುವವರು’ ಎಂದು ಗೆಳೆಯ ರಂಗಕರ್ಮಿ ಶಿರಾ ಸೋಮಶೇಖರ್ ನೆನಪಿಸಿಕೊಳ್ಳುತ್ತಾನೆ. ಅವರನ್ನು ಮೈಸೂರಿನ ರಸ್ತೆಗಳಲ್ಲಿ ಮುಂದೆ ಎಂದೆಂದೂ ಕಾಣಲಾಗುವುದಿಲ್ಲ. ಹೋರಾಟಗಾರರ ಎದೆಯಲ್ಲಿ ಅವರು ಸದಾ ಜೀವಂತ.

ವಿನೋದ್ ಮಹದೇವಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...