Homeಚಳವಳಿಲಿಂಗತ್ವ ಕಂದರವನ್ನು ಹೆಚ್ಚಿಸಿದ ಲಾಕ್‌ಡೌನ್‌: ಮಹಿಳೆಯರನ್ನು ಮರೆತುಬಿಟ್ಟ ಸರ್ಕಾರ

ಲಿಂಗತ್ವ ಕಂದರವನ್ನು ಹೆಚ್ಚಿಸಿದ ಲಾಕ್‌ಡೌನ್‌: ಮಹಿಳೆಯರನ್ನು ಮರೆತುಬಿಟ್ಟ ಸರ್ಕಾರ

ಭಾರತದಲ್ಲಿ ಪ್ರತಿನಿತ್ಯ 70,000 ಮಹಿಳೆಯರು ಹೆರುತ್ತಾರೆ, ಮತ್ತು 45,000 ಹೆಣ್ಣುಮಕ್ಕಳು ಗರ್ಭಪಾತ ಮಾಡಿಸುತ್ತಾರೆ ಎಂಬುದನ್ನು ಸರಕಾರ ಮರೆತುಬಿಟ್ಟಿದೆ. ಪ್ರತಿನಿತ್ಯ 10,000ದಷ್ಟು ಮಹಿಳೆಯರಿಗೆ ಆರೋಗ್ಯ ಶುಶ್ರೂಸೆ ಬೇಕಾಗುತ್ತದೆ.

- Advertisement -
- Advertisement -

ಭಾರತವು ಕೊರೋನ ಪಿಡುಗು ಮತ್ತು ನಂತರ ಹೇರಲಾದ ಲಾಕ್‌ಡೌನ್ ಪರಿಣಾಮವಾಗಿ ಕಳೆದ ಕೆಲವು ತಿಂಗಳುಗಳಿಂದ ಹಿಂದೆಂದೂ ಕಂಡಿರದಂತಹ ಬಿಕ್ಕಟ್ಟನ್ನು ಅನುಭವಿಸುತ್ತಿದೆ. ಈ ನಿರ್ಧಾರದ ಅಯೋಜಿತ ಮತ್ತು ಕಠೋರ ಸ್ವರೂಪವು ಆರೋಗ್ಯ ಮತ್ತು ಶುಶ್ರೂಷೆಯ ಬಿಕ್ಕಟ್ಟಿನ ಹೊರತಾಗಿ ದೊಡ್ಡ ಪ್ರಮಾಣದ ಮಾನವೀಯ ದುರಂತಕ್ಕೆ ಕಾರಣವಾಯಿತು. ಅತ್ಯಂತ ಕಣ್ಣಿಗೆ ರಾಚುವ ದುಷ್ಪರಿಣಾಮವು ಅನೌಪಚಾರಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲಾಯಿತು. ಅವರು ಹತಾಶರಾಗಿ ನಗರಗಳಿಂದ ನೂರಾರು ಮೈಲಿ ದೂರದಲ್ಲಿರುವ ತಮ್ಮ ಊರುಗಳಿಗೆ ಧಾವಿಸಬೇಕಾಯಿತು. ಇನ್ನೂ ಕೂಡಾ ಅವರು ಆದಾಯ ನಷ್ಟ, ಉಪವಾಸ ಮತ್ತು ಬಡತನಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ನರಳುತ್ತಿದ್ದಾರೆ. ಆದರೆ, ಕಣ್ಣಿಗೆ ಬೀಳದ ಪರಿಣಾಮವು ಮಹಿಳೆಯರು, ಹೆಣ್ಣು ಮಕ್ಕಳು ಮತ್ತು ಅಸಮ ಲಿಂಗತ್ವವಿರುವ ವ್ಯಕ್ತಿಗಳ ಮೇಲಾಗಿದ್ದು, ಅವರು ಮೌನವಾಗಿ ತಮ್ಮ ನೋವನ್ನು ಅದುಮಿಕೊಂಡು ಕಷ್ಟಪಡುತ್ತಿದ್ದಾರೆ.

ಈ ಬಿಕ್ಕಟ್ಟಿನ ಮುಂಚೂಣಿಯಲ್ಲಿ ಆರೋಗ್ಯ ಕಾರ್ಯಕರ್ತೆಯರಾಗಿರುವ, ಆಯಾಗಳು, ದಾದಿಯರು ಮತ್ತು ಸ್ವಚ್ಛತಾ ಕಾರ್ಮಿಕರಾಗಿ ಕೆಲಸ ಮಾಡುವ ಮಹಿಳೆಯರು ನಮ್ಮ ಕಣ್ಣಿಗೆ ಬೀಳುತ್ತಿಲ್ಲ. ನಮ್ಮ ಆರೋಗ್ಯ ವ್ಯವಸ್ಥೆಯಲ್ಲಿ 70 ಶೇಕಡಾದಷ್ಟು ಮಹಿಳೆಯರೇ ಇರುವುದೆಂದು ನಮಗೆಲ್ಲಾ ಗೊತ್ತಿದೆ. ಆದರೂ, ಅವರ ಸಹಜ ಹಕ್ಕುಗಳಿಗೆ ಯಾವುದೇ ಖಾತರಿಯಿಲ್ಲ. ಸಾಮಾನ್ಯವಾಗಿ ಆರೋಗ್ಯ ವ್ಯವಸ್ಥೆಯ ಶ್ರೇಣೀಕೃತ ವ್ಯವಸ್ಥೆಯಲ್ಲಿ ಅತ್ಯಂತ ಕೆಳಗೆ ಇರುವವರೇ ಮಹಿಳೆಯರು. 10 ಲಕ್ಷಕ್ಕೂ ಹೆಚ್ಚು  ಹಲವಾರು ರಾಜ್ಯಗಳಲ್ಲಿ ಕನಿಷ್ಟ ವೇತನವನ್ನೂ ಪಡೆಯದೇ ಅತ್ಯಂತ ಹೆಚ್ಚು ಅಪಾಯವಿರುವ ಸಮುದಾಯ ಕಣ್ಗಾವಲಿನಲ್ಲಿ ತೊಡಗಿರುವುದು ನಮಗೆ ಕಾಣಿಸುತ್ತಿಲ್ಲ.

ದಾದಿಯರು ಹೇಗೆ ಆಸ್ಪತ್ರೆಗಳು ಸಂಬಳವಿಲ್ಲದೇ ಕೆಲಸ ಮಾಡಲು ಕೆಲವು ತಿಂಗಳುಗಳಿಂದ ಒತ್ತಾಯಿಸುತ್ತಿವೆ ಎಂಬ ಕುರಿತು ಗಮನ ಸೆಳೆಯಲು ಸಾಂಕೇತಿಕ ಮುಷ್ಕರವನ್ನೂ ನಡೆಸಿದ್ದಾರೆ. ವೈದ್ಯರುಗಳಿಗಿಂತ ಹೆಚ್ಚು ಸಮಯವನ್ನು ಕೊರೋನ ರೋಗಿಗಳ ಸಂಪರ್ಕದಲ್ಲಿ ಕಳೆಯುವ ಮಹಿಳಾ ಆರೋಗ್ಯ ಕಾರ್ಯಕರ್ತರಿಗೆ ಅಗತ್ಯವಾದ ಪಿಪಿಇ ಕಿಟ್‌ಗಳನ್ನು ಸಾಕಷ್ಟು ಪ್ರಮಾಣದಲ್ಲಿ ನೀಡಲಾಗುತ್ತಿಲ್ಲ ಎಂದು ಅವರು ದೂರಿದ್ದಾರೆ. ಮಹಿಳಾ ದಾದಿಯರು ಅಶೌಚ ಮತ್ತು ಅಸುರಕ್ಷಿತ ತಾಣಗಳಲ್ಲಿ ರಾತ್ರಿ ಹೊತ್ತು ಉಳಿಯುವಂತೆ ಮಾಡಲಾಗಿದ್ದರೆ, ಹೆಚ್ಚಾಗಿ ಪುರುಷರೇ ಆಗಿರುವ ವೈದ್ಯರುಗಳನ್ನು ಹೊಟೇಲುಗಳಲ್ಲಿ ವಾಸಿಸಲು ಅವಕಾಶ ನೀಡಲಾಗಿದೆ.

ಮನೆಯೊಳಗೂ ಮಹಿಳೆಯರು ಮಾಡುವ ಸಂಬಳವಿಲ್ಲದ ಕಾಯಕದ ಹೊರೆಯು ಹೆಚ್ಚಿದೆ.  ಏಕೆಂದರೆ, ಮನೆಯಲ್ಲಿ ಅಸ್ವಸ್ಥ ಕುಟುಂಬದ ಸದಸ್ಯರ ಆರೈಕೆ ಮಾಡುವವರೂ ಅವರೇ, ಕ್ವಾರಂಟೈನ್‌ನಲ್ಲಿರುವವರನ್ನು ನೋಡಿಕೊಳ್ಳುವವರೂ ಅವರೇ, ಮನೆಗಳಿಗೆ ಪಡಿತರ ತರುವವರು, ಕೆಲವು ಕಡೆಗಳಲ್ಲಿ ದೂರದೂರದಿಂದ ನೀರು ತರುವವರೂ ಅವರೇ. ಇವೆಲ್ಲವೂ ಅವರನ್ನು ಹೆಚ್ಚಿನ ಸೋಂಕು ಅಪಾಯಕ್ಕೆ ತಳ್ಳುತ್ತದೆ.

ಈ ಸಂದರ್ಭದಲ್ಲಿ ಶಾಲೆಗಳಲ್ಲಿ ಮಧ್ಯಾಹ್ನದ ಊಟ ಮತ್ತು ಅಂಗನವಾಡಿಗಳ ಪೌಷ್ಠಿಕ ಪೂರಕ ಆಹಾರ ಲಭಿಸದೇ ಇರುವುದರಿಂದ ಮತ್ತು ನಗರಗಳಿಗೆ ವಲಸೆ ಹೋಗಿದ್ದ ಹೆಚ್ಚಿನ ಪುರುಷರು ಮನೆಗೆ ಮರಳಿರುವುದರಿಂದ ಪ್ರತಿಯೊಂದು ಮನೆಯಲ್ಲಿ, ಮುಖ್ಯವಾಗಿ ಬಡವರ ಮನೆಗಳಲ್ಲಿ ಆಹಾರಕ್ಕಾಗಿ ಒತ್ತಡವು ಹೆಚ್ಚಿದೆ. ಸಾಮಾನ್ಯವಾಗಿ ಮಹಿಳೆಯರು ಕೊನೆಗೆ ಉಣ್ಣುತ್ತಾರೆ ಮತ್ತು ಪುರುಷರಿಗೆ ಹೋಲಿಸಿದರೆ ಕಡಿಮೆ ಪೌಷ್ಟಿಕಾಂಶವುಳ್ಳ ಆಹಾರ ಸೇವಿಸುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿದೆ.

ಈಗ ಆಹಾರದ ಲಭ್ಯತೆ ಕಡಿಮೆಯಾಗಿರುವಾಗ, ಮುಖ್ಯವಾಗಿ ಗರ್ಭಿಣಿಯರು ಮತ್ತು ಮೊಲೆಯೂಡಿಸುವ ಮಹಿಳೆಯರ ಪರಿಸ್ಥಿತಿ ಹದಗೆಡಲಿದೆ. ಇದು ಒಂದು ಆತಂಕಕಾರಿ ವಿಷಯವಾಗಿದೆ. ಯಾಕೆಂದರೆ, ಭಾರತವು ಈಗಾಗಲೇ ಮಹಿಳೆಯರಲ್ಲಿ ರಕ್ತಹೀನತೆ ಮತ್ತು ದೈಹಿಕ ದೌರ್ಬಲ್ಯದ ಮಟ್ಟದಲ್ಲಿ ಅತ್ಯಂತ ಕೆಳಗಿನ ಸ್ಥಾನದಲ್ಲಿದ್ದು, ನಾಚಿಕೆಗೇಡಿನ ಪರಿಸ್ಥಿತಿಯಲ್ಲಿದೆ. ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ 2016 (NFHS-4) ತೋರಿಸಿರುವಂತೆ, ಗರ್ಭಿಣಿಯರು ಮತ್ತು ಮೊಲೆಯೂಡಿಸುವ ಮಹಿಳೆಯರೂ ಸೇರಿದಂತೆ ಒಟ್ಟಾರೆ ಮಹಿಳೆಯರಲ್ಲಿ ಅರ್ಧದಷ್ಟು ಮಂದಿ ರಕ್ತಹೀನತೆಯಿಂದ ಬಳಲುತ್ತಿದ್ದಾರೆ.

ಮನೆಗಳ ಒಳಗೆಯೇ, ಅತ್ಯಂತ ಹೆಚ್ಚಿನ ಮಾನಸಿಕ ಒತ್ತಡದ ಸಂದರ್ಭದಲ್ಲಿ ಕೌಟುಂಬಿಕ ಹಿಂಸೆಯು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಲಾಕ್‌ಡೌನ್ ಸಮಯದಲ್ಲಿ ಹಿಂಸಾಚಾರದ ವರದಿ ಮಾಡುವುದು ಅಥವಾ ಔಷಧಾಲಯಗಳು ಮುಚ್ಚಿರುವುದರಿಂದ ಸೂಕ್ತವಾದ ಚಿಕಿತ್ಸೆ ಪಡೆಯುವುದು ಕೂಡಾ ಅತ್ಯಂತ ಕಷ್ಟಸಾಧ್ಯ ವಿಷಯವಾಗಿದೆ. ಅದಕ್ಕಿಂತ ಹೆಚ್ಚಾಗಿ ಹಿಂಸಾತ್ಮಕವಾಗಿ ಲಾಕ್‌ಡೌನ್ ಅನುಷ್ಟಾನಗೊಳಿಸುತ್ತಿರುವ ಪೊಲೀಸರನ್ನು ಸಂಪರ್ಕಿಸಿ ನೆರವು ಪಡೆಯುವುದೂ ಕೂಡಾ ತುಂಬಾ ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಮಹಿಳೆಯರು, ಹೆಣ್ಣುಮಕ್ಕಳು ಮತ್ತು ಅಸಮ ಲಿಂಗತ್ವ ಹೊಂದಿರುವ ವ್ಯಕ್ತಿಗಳು ಹಾಗೂ ಲೈಂಗಿಕ ಕಾರ್ಮಿಕರು ಸಾಕಷ್ಟು ಹೆಚ್ಚಿನ ಪ್ರಮಾಣದಲ್ಲಿ ಲೈಂಗಿಕ ಕಿರುಕುಳ ಹೊಂದಿರುವ ಸಾಧ್ಯತೆಗಳು ಇವೆ. ಅವರಿಗೆ ಈ ಬಲಾತ್ಕಾರದ ಲಾಕ್‌ಡೌನ್ ಸಂದರ್ಭದಲ್ಲಿ ರಕ್ಷಣೆ, ಸಂತಾನೋತ್ಪತ್ತಿ ನಿರೋಧಕ ಸಾಧನಗಳ ಲಭ್ಯತೆ ಇರುವುದು ಸಾಧ್ಯವಿಲ್ಲ. ಇದು ಎಚ್ಐವಿ ಮತ್ತಿತರ ಲೈಂಗಿಕವಾಗಿ ಹರಡುವ ರೋಗಗಳ, ಬಯಸದಿರುವ ಗರ್ಭ, ಗರ್ಭಪಾತ ಇತ್ಯಾದಿ ಅಪಾಯಗಳನ್ನು ಗಣನೀಯವಾಗಿ ಹೆಚ್ಚುಮಾಡುತ್ತದೆ.

ಭಾರತದಲ್ಲಿ ಸಂತಾನೋತ್ಪತ್ತಿ ಆರೋಗ್ಯ ಸೇವೆಗಳ ಪ್ರತಿಷ್ಠಾನ (FRHSI) ಅಧ್ಯಯನದ ಪ್ರಕಾರ ಈ ಲಾಕ್‌ಡೌನ್ ಎಂಟು ಲಕ್ಷಕ್ಕೂ ಹೆಚ್ಚು ಅಸುರಕ್ಷಿತ ಗರ್ಭಪಾತಕ್ಕೆ ಕಾರಣವಾಗಲಿದೆ. 23 ಲಕ್ಷ ಬಯಸದ ಗರ್ಭಗಳಿಂದ 1,750ರಷ್ಟು ತಾಯಂದಿರ ಮರಣವು (ಎಂಎಂಅರ್) ಸಂಭವಿಸಲಿವೆ. ಹೆಣ್ಣುಮಕ್ಕಳ ಋತುಕಾಲದ (ಮುಟ್ಟು ಕಾಲದ) ಸುರಕ್ಷಾ ಸಾಧನಗಳು ಸ್ಯಾನಿಟರಿ ಪ್ಯಾಡ್) ಇತ್ಯಾದಿ ಇಲ್ಲಿಯವರೆಗೆ ಶಾಲೆಯಿಂದ, ಅಂಗನವಾಡಿಯಿಂದ ಅಥವಾ ಆಶಾ ಕಾರ್ಯಕರ್ತೆಯರಿಂದ ದೊರಕುತ್ತಿದ್ದವು. ಈಗ ಅದೂ ಇಲ್ಲವಾಗಿದೆ. ದುಬಾರಿಯಾದ ಇಂತಹ ಉತ್ಪನ್ನಗಳನ್ನು ಖರೀದಿಸಲು ಎಷ್ಟು ಹೆಣ್ಣುಮಕ್ಕಳಿಗೆ ಸಾಧ್ಯವಿದೆ ಮತ್ತು ಎಷ್ಟು ಜನ ಈ ಲಾಕ್‌ಡೌನ್ ಸಂದರ್ಭದಲ್ಲಿ ಹೋಗಿ ಕೊಳ್ಳಲು ಸಾಧ್ಯ?

ಅವಸರದ ಲಾಕ್‌ಡೌನ್ ನಿರ್ಧಾರದ ಸಂದರ್ಭದಲ್ಲಿ ಭಾರತದಲ್ಲಿ ಪ್ರತಿನಿತ್ಯ 70,000 ಮಹಿಳೆಯರು ಹೆರುತ್ತಾರೆ, ಮತ್ತು 45,000 ಹೆಣ್ಣುಮಕ್ಕಳು ಗರ್ಭಪಾತ ಮಾಡಿಸುತ್ತಾರೆ ಎಂಬುದನ್ನು ಸರಕಾರ ಮರೆತುಬಿಟ್ಟಿದೆ. ಪ್ರತಿನಿತ್ಯ 10,000ದಷ್ಟು ಮಹಿಳೆಯರಿಗೆ ವಿಶೇಷ ಶುಶ್ರೂಷೆ ಬೇಕಾಗಿರುವ ಹೆರಿಗೆ ಸಂಬಂಧಿ ಕಷ್ಟಗಳು ಎದುರಾಗುತ್ತವೆ ಎಂಬುದೂ ಸರಕಾರಕ್ಕೆ ಮರೆತುಹೋದಂತಿದೆ. ಇಂತವರಿಗೆ ಸರಕಾರಿ ಆಗಲೀ, ಖಾಸಗಿಯಾಗಲೀ ಯಾವುದೇ ಸೇವೆಯನ್ನು ಪಡೆಯಲು ಸಾಧ್ಯವಾಗುತ್ತಿಲ್ಲ.

 

ಲಾಕ್‌ಡೌನ್‌ನ ಅವಸರದ ನಿರ್ಧಾರದ ಈ ಸಂದರ್ಭದಲ್ಲಿ ಹಲವಾರು ಗರ್ಭಿಣಿಯರು ಐದಾರು ಆಸ್ಪತ್ರೆಗಳಿಗೆ ಅಲೆದಾಡಿದ ಮಾಧ್ಯಮ ವರದಿಗಳಿವೆ. ಅವುಗಳು ರೋಗಿಗಳನ್ನು ದಾಖಲಿಸಲು ಹಿಂಜರಿಯುತ್ತಿರುವುದೇ ಇದಕ್ಕೆ ಕಾರಣ. ಮಹಿಳೆಯರು ಮನೆಗಳಲ್ಲಿ, ರೈಲುಗಳಲ್ಲಿ, ವಾಹನಗಳಲ್ಲಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇಂತಹ ಪ್ರಕರಣಗಳ ಕುರಿತು ದೂರುಗಳು ತೆಲಂಗಾಣ, ಮುಂಬಯಿ ಮತ್ತು ದಿಲ್ಲಿ ಹೈಕೋರ್ಟ್‌ಗಳಲ್ಲಿ ದಾಖಲಾಗಿವೆ. ಹಲವಾರು ಮಹಿಳೆಯರು ಬಹಿರಂಗವಾಗಿ ತಮ್ಮ ಊರುಗಳಿಗೆ ನೂರಾರು ಮೈಲಿ ನಡೆಯುತ್ತಾ ರಸ್ತೆಗಳಲ್ಲಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅವರ ಮಾಲಕರಾಗಲೀ, ಸರಕಾರವಾಗಲೀ ಅವರ ನೆರವಿಗೆ ಬಂದಿಲ್ಲ. ಇದಕ್ಕಿಂತ ನಾಚಿಕೆಗೆಡು ಬೇರೆ ಇದೆಯೇ ಒಂದು ದೇಶಕ್ಕೆ?

ಇದು ಭಾರತವು ಎದುರಿಸಬೇಕಾಗಿರುವ ಮೊದಲ ಬಿಕ್ಕಟ್ಟು ಏನೂ ಅಲ್ಲ. ಈ ದೇಶದಲ್ಲಿ ಮಹಿಳೆಯರು ಮತ್ತವರ ಆರೋಗ್ಯದ ಬಗ್ಗೆ ದಂಗುಬಡಿಸುವಂತಹ ಅಸಡ್ಡೆ ತೋರಲಾಗಿದೆ. ಯಾವುದೇ ಸಾಂಕ್ರಾಮಿಕ ರೋಗವು ಪುರುಷರು, ಮಹಿಳೆಯರು, ಅಸಮ ಲಿಂಗತ್ವ ಹೊಂದಿರುವವರು ಮತ್ತು ಮಕ್ಕಳ ಮೇಲೆ ಬೇರೆಬೇರೆ ರೀತಿಯ ಪರಿಣಾಮಗಳನ್ನು ಬೀರುತ್ತವೆ ಎಂಬ ಸೂಕ್ಷ್ಮತೆಯನ್ನು ನಮ್ಮ ಯೋಜಕರು ತಿಳಿದುಕೊಳ್ಳಬೇಕಾಗುತ್ತದೆ. ಜಾತಿ, ಧರ್ಮ, ಅಂತಸ್ತು, ಪ್ರಾದೇಶಿಕತೆ, ಸಂಪನ್ಮೂಲ ಮತ್ತು ಸೌಲಭ್ಯಗಳ ಲಭ್ಯತೆಯ ಆಧಾರದಲ್ಲೂ ಇವುಗಳು ಬದಲಾಗುತ್ತವೆ ಎಂಬುದನ್ನು ಕೂಡಾ ಅವರು ತಿಳಿದುಕೊಳ್ಳಬೇಕು. ಈ ಪಿಡುಗು ಈಗಾಗಲೇ ನಮ್ಮ ಸಮಾಜದಲ್ಲಿ ಇರುವ ಲಿಂಗತ್ವ ಸಂಬಂಧಿ ಕಂದರವನ್ನು ಇನ್ನಷ್ಟು ಆಲ, ಅಗಲ ಮಾಡದಂತೆ ತಡೆಯಬೇಕು.

  • ಜಶೋಧರ ದಾಸ್‌ಗುಪ್ತಾ

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...