Homeಚಳವಳಿಜೈಲಿನಲ್ಲಿ ಕವಿ ವರವರ ರಾವ್‌ರನ್ನು ಕೊಲ್ಲಬೇಡಿ! ಕುಟುಂಬ ಸದಸ್ಯರ ಮನವಿ

ಜೈಲಿನಲ್ಲಿ ಕವಿ ವರವರ ರಾವ್‌ರನ್ನು ಕೊಲ್ಲಬೇಡಿ! ಕುಟುಂಬ ಸದಸ್ಯರ ಮನವಿ

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಜೈಲಿನಲ್ಲಿರುವ ಖ್ಯಾತ ತೆಲುಗು ಕ್ರಾಂತಿಕಾರಿ ಕವಿ ವರವರ ರಾವ್ (79) ಅವರ ಜೀವಕ್ಕೆ ಅಪಾಯವಿದ್ದು, ದಯವಿಟ್ಟು ಅವರನ್ನು ಜೈಲಿನಲ್ಲಿ ಕೊಲ್ಲಬೇಡಿ ಎಂದು ಕುಟುಂಬವು ಮನವಿ ಮಾಡಿದೆ.

ಆನ್‌ಲೈನ್‌ನಲ್ಲಿ ಪತ್ರಿಕಾಗೊಷ್ಟಿ ನಡೆಸಿದ ಅವರ ಪತ್ನಿ ಹೇಮಲತಾ ಮಾತನಾಡಿ ರಾವ್ ಒಬ್ಬ ಶಿಕ್ಷಕ, ವಾಗ್ಮಿ ಮತ್ತು ಕವಿ. ತನ್ನ ಜೀವನದಲ್ಲಿ ಪದಗಳು ಅಥವಾ ಆಲೋಚನೆಗಳಿಗಾಗಿ ಎಂದಿಗೂ ಮುಗ್ಗರಿಸಿಲ್ಲ. ಆದರೆ ಈಗ ಅವರು ಮಾತನಾಡಲು ಪದಗಳಿಗಾಗಿ ಹುಡುಕುತ್ತಿರುವುದು ಭಯಾನಕವಾಗಿದೆ. ಕೂಡಲೇ ಅವರಿಗೆ ಚಿಕಿತ್ಸೆ ಮತ್ತು ಹಾರೈಕೆಯ ಅಗತ್ಯವಿದೆ ಎಂದು ಹೇಳಿದ್ದಾರೆ.

ಜುಲೈ 11 ರಂದು ಫೋನ್ ಮೂಲಕ ವರವರ ರಾವ್‌ರೊಂದಿಗೆ ಮಾತನಾಡಿದ ಸಮಯದಲ್ಲಿ, ಅವರು ಸ್ಪಷ್ಟವಾಗಿ ಮಾತನಾಡಿಲ್ಲ. ಅವರ ಆರೋಗ್ಯದ ಬಗೆಗಿ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. 70 ವರ್ಷಗಳ ಹಿಂದೆ ಮತ್ತು 40 ವರ್ಷಗಳ ಹಿಂದೆಯೇ ನಿಧನ ಹೊಂದಿರುವ ತಮ್ಮ ತಂದೆ ಮತ್ತು ತಾಯಿಯ ಅಂತ್ಯಕ್ರಿಯೆಯ ಬಗ್ಗೆ ಒಂದು ರೀತಿಯ ಭ್ರಮನಿರಸನ ಮತ್ತು ಭ್ರಮೆಯ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಮಾತನಾಡಲು ಪದಗಳಿಗಾಗಿ ಅವರು ಹುಡುಕಾಡುತ್ತಿದ್ದರು. ಇದೆಲ್ಲವೂ ಅವರ ಆರೋಗ್ಯ ಸಂಪೂರ್ಣ ಹದಗೆಟ್ಟಿರುವುದನ್ನು ತೋರಿಸುತ್ತದೆ ಎಂದು ಅವರ ಪತ್ನಿ ದೂರಿದ್ದಾರೆ.

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಪ್ರಸ್ತುತ ನವೀ ಮುಂಬಯಿಯ ತಾಲೋಜ ಜೈಲಿನಲ್ಲಿರುವ ತೆಲುಗು ಕವಿ ಮತ್ತು ಹೋರಾಟಗಾರ ವರವರ ರಾವ್‌ 2018ರಿಂದ ಜೈಲಿನಲ್ಲಿದ್ದಾರೆ. ಜೈಲಿನಲ್ಲಿ ಕೋವಿಡ್ -19 ಗೆ ಒಳಗಾಗುವ ಸಾಧ್ಯತೆಯನ್ನು ಉಲ್ಲೇಖಿಸಿ ರಾವ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಜೂನ್ 27 ರಂದು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

“ರಾಜ್ಯ ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದೆ. ಅವರ ಮೆದುಳಿಗೆ ಹಾನಿಯಾಗುತ್ತಿದೆ. ಈ ಸಮಯದಲ್ಲಿ ನಮ್ಮ ಏಕೈಕ ಬೇಡಿಕೆಯೆಂದರೆ ಅವರಿಗೆ ವೈದ್ಯಕೀಯ ಆರೈಕೆ ನೀಡುವುದು ಇಲ್ಲವೇ ಜಾಮೀನು ನೀಡಿ ಅವರನ್ನು ಕುಟುಂಬಕ್ಕೆ ನೀಡುವುದು. ನಾವು ಅವರನ್ನು ನೋಡಿಕೊಳ್ಳುತ್ತೇವೆ. ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಬದುಕುವ ಹಕ್ಕನ್ನು ನೀಡುತ್ತದೆ. ವರವರ ರಾವ್ ಅವರ ಜೀವನ ಅಪಾಯದಲ್ಲಿದೆ. ದಯವಿಟ್ಟು ಅವರನ್ನು ಜೈಲಿನಲ್ಲಿ ಕೊಲ್ಲಬೇಡಿ” ಎಂದು ರಾವ್ ಅವರ ಸೋದರಳಿಯ ಎನ್ ವೇಣುಗೋಪಾಲ್ ರಾವ್ ಹೇಳಿದ್ದಾರೆ.

ಕುಟುಂಬ ಸದಸ್ಯರ ಪ್ರಕಾರ, ರಾವ್ ಅವರನ್ನು ಮೇ 28, 2020 ರಂದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ತಲೋಜಾ ಜೈಲಿನಿಂದ ಜೆಜೆ ಆಸ್ಪತ್ರೆಗೆ ಸ್ಥಳಾಂತರಿಸಿದಾಗಿನಿಂದ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮೂರು ದಿನಗಳ ನಂತರ ಜೈಲಿಗೆ ಕಳುಹಿಸಲಾಗಿದ್ದರೂ ಸಹ, ಅಲ್ಲಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗಿಲ್ಲ ಮತ್ತು ಅವರಿಗೆ ಇನ್ನೂ ತುರ್ತು ಆರೋಗ್ಯ ರಕ್ಷಣೆಯ ಅವಶ್ಯಕತೆಯಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

1969 ರಿಂದ ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ನಡೆದ ಹೋರಾಟದಲ್ಲಿ ರಾವ್‌ ಮುಂಚೂಣಿಯಲ್ಲಿದ್ದಾರೆ. ಆದರೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅಥವಾ ಸರ್ಕಾರದ ಯಾವುದೇ ಅಧಿಕಾರಿಗಳು ಕುಟುಂಬದ ಮನವಿಗೆ ಸ್ಪಂದಿಸಿಲ್ಲ ಎಂದು ರಾವ್ ಪತ್ನಿ ಹೇಮಲತಾ ದೂರಿದ್ದಾರೆ.

ಡಿಸೆಂಬರ್ 29, 2017 ರಂದು ಪುಣೆಯ ಭೀಮಾ ಕೋರೆಗಾಂವ್ ಗ್ರಾಮದಲ್ಲಿ ಎಲ್ಗಾರ್ ಪರಿಷತ್ ಕಾರ್ಯಕ್ರಮ ಆರೋಜಿಸಿ ಪ್ರಚೋದನಾಕಾರಿ ಭಾಷಣ ಮಾಡಿ, ಆ ಮೂಲಕ ದಲಿತರ ಮೇಲಿನ ಹಲ್ಲೆಗೆ ಕಾರಣರಾಗಿದ್ದಾರೆ. ಇದು ಕೇಂದ್ರ ಸರ್ಕಾರವನ್ನು ಉರುಳಿಸುವ ಕ್ರಿಮಿನಲ್ ಪಿತೂರಿಯ ಭಾಗವಾಗಿದೆ ಎಂಬ ಆರೋಪದ ಮೇಲೆ 11 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅವರಲ್ಲಿ ವರವರ ರಾವ್‌ ಕೂಡ ಒಬ್ಬರಾಗಿದ್ದಾರೆ.


ಇದನ್ನೂ ಓದಿ; ಭೀಮಾ ಕೋರೆಗಾಂವ್- ಕೇಂದ್ರದ ಹಸ್ತಕ್ಷೇಪ ದುರುದ್ದೇಶಪೂರಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...