Homeಮುಖಪುಟಸಚಿನ್ ಪೈಲಟ್ ಜೊತೆಗಿದ್ದ ಶಾಸಕರು ಮರಳಿದ್ದಾರೆ: ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ

ಸಚಿನ್ ಪೈಲಟ್ ಜೊತೆಗಿದ್ದ ಶಾಸಕರು ಮರಳಿದ್ದಾರೆ: ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ

- Advertisement -
- Advertisement -

ಸಚಿನ್ ಪೈಲಟ್‌ ಜೊತೆಗೆ ದೆಹಲಿಗೆ ಹೋಗಿದ್ದ ರಾಜಸ್ಥಾನದ ಕಾಂಗ್ರೆಸ್ ಶಾಸಕರೊಂದಿಗೆ ನಾವು ಮಾತುಕತೆ ನಡೆಸಿದ್ದೇವೆ ಮತ್ತು ಅವರಲ್ಲಿ ಹಲವರು ಜೈಪುರಕ್ಕೆ ಮರಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ, ಆದರೆ ಅದು ಸಾಧ್ಯವಾಗುವುದಿಲ್ಲ. ನಮ್ಮ ಸರ್ಕಾರ ಸುಭದ್ರ ವಾಗಿದೆ ಎಂದು ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ತಿಳಿಸಿದ್ದಾರೆಂದು ಎಎನ್‌ಐ ವರದಿ ಮಾಡಿದೆ.

ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯ ಶಾಸಕರ ಕುದುರೆ ವ್ಯಾಪಾರ ಮಾಡುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ತಮ್ಮ ನಿಷ್ಠೆಯನ್ನು ಬದಲಿಸಲು ಕಾಂಗ್ರೆಸ್ ಶಾಸಕರಿಗೆ ಎಷ್ಟೇ ಪ್ರಲೋಭನೆ ನೀಡಿದ್ದರೂ, ನಮ್ಮ ಶಾಸಕರು, ಕಾಂಗ್ರೆಸ್ ಬೆಂಬಲಿತ ಸ್ವತಂತ್ರರು ಎಲ್ಲರೂ ಒಂದಾಗುತ್ತಾರೆ ಎಂದು ಅವಿನಾಶ್ ಪಾಂಡೆ ಟ್ವೀಟ್‌ ಮಾಡಿದ್ದಾರೆ.

ಸರ್ಕಾರಕ್ಕೆ ಯಾವುದೇ ಬೆದರಿಕೆ ಇಲ್ಲ, ಎಲ್ಲಾ ಕಾಂಗ್ರೆಸ್ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಗೆಹ್ಲೋಟ್ ಸರ್ಕಾರ ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತದೆ ಎಂದು ಪಾಂಡೆ ತಿಳಿಸಿದ್ದಾರೆ.

ಹಲವಾರು ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಜೊತೆಗಿರುವುದಾಗಿ ತಿಳಿಸಿದ್ದೇವೆ.  “ರಾಜಸ್ಥಾನದಲ್ಲಿ, ಗೆಹ್ಲೋಟ್ ಎಂದರೆ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಎಂದರೆ ಗೆಹ್ಲೋಟ್. ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಮತ್ತು ಅದು ತನ್ನ ಅವಧಿಯನ್ನು ಪೂರ್ಣಗೊಳಿಸುತ್ತದೆ” ಎಂದು ಕಾಂಗ್ರೆಸ್ ಶಾಸಕ ರಾಮ್‌ಲಾಲ್ ಜಾತ್ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಶಾಸಕರಿಂದ ಜನರು ಪಾಠಗಳನ್ನು ಕಲಿಯಬೇಕು. ಅವರು ಪಕ್ಷ ಬಿಟ್ಟ ನಂತರ ತಿಂಗಳುಗಟ್ಟಲೆ ಸುಮ್ಮನೆ ಕುಳಿತಿದ್ದರು. ರಾಜ್ಯಸಭೆಯ ಚುನಾವಣೆ ಸಮೀಪಿಸುತ್ತಿದ್ದಾಗ ಅವರಲ್ಲಿ ಕೆಲವರನ್ನು ಮಂತ್ರಿಗಳನ್ನಾಗಿ ಮಾಡಲಾಗಿದೆ. ಈಗ ಉಪ ಚುನಾವಣೆ ನಡೆದರೆ ಅವರು ಸೋಲುತ್ತಾರೆ ಮತ್ತು ಮಂತ್ರಿ ಹುದ್ದೆಯನ್ನು ಕಳೆದುಕೊಳ್ಳುತ್ತಾರೆ. ಜನರು ಇದರ ಬಗ್ಗೆ ಯೋಚಿಸಬೇಕು ಎಂದು ರಾಜ್ಯ ಕ್ರೀಡಾ ಸಚಿವ ಅಶೋಕ್ ಚಂದ್ನಾ ಹೇಳಿದ್ದಾರೆ.

ಇನ್ನು ಸರ್ಕಾರ ಉರುಳಿಸುವ ಸಂಚಿನ ಕುರಿತಂತೆ ಸಚಿನ್ ಪೈಲಟ್‌ಗೆ ಸಮನ್ಸ್ ಕೊಟ್ಟು ಟೀಕೆಗೊಳಗಾಗಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಸಿಎಂ, ಡಿಸಿಎಂ, ಚೀಫ್ ವಿಪ್ ಸೇರಿದಂತೆ ಇತರ ಕೆಲವು ಮಂತ್ರಿಗಳು ಮತ್ತು ಶಾಸಕರು ಬಿಜೆಪಿಯಿಂದ ಕುದುರೆ ವ್ಯಾಪಾರದ ಕುರಿತು ಕಾಂಗ್ರೆಸ್ ಶಾಸಕಾಂಗ ಪಕ್ಷದ ದೂರಿಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ಎಸ್‌ಒಜಿಯಿಂದ ನೋಟಿಸ್ ಪಡೆದಿದ್ದಾರೆ. ಕೆಲವು ಮಾಧ್ಯಮಗಳು ಇದನ್ನು ವಿಭಿನ್ನವಾಗಿ ಪ್ರಸ್ತುತಪಡಿಸುವುದು ಸೂಕ್ತವಲ್ಲ ಎಂದು ಗೆಹ್ಲೋಟ್ ಹೇಳಿದ್ದಾರೆ.


ಇದನ್ನೂ ಓದಿ: ನಾವು ಯಾವಾಗ ಎಚ್ಚರಗೊಳ್ಳುತ್ತೇವೆ? ರಾಜಸ್ಥಾನ ಬಿಕ್ಕಟ್ಟಿನ ಮಧ್ಯೆ ಕಪಿಲ್ ಸಿಬಲ್ ಆತ್ಮಾವಲೋಕನ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...