Homeಮುಖಪುಟಅಸ್ಸಾಂ: ಪ್ರವಾಹ ಹಾಗೂ ಭೂಕುಸಿತದಿಂದ 70 ಜನರು ಮೃತ

ಅಸ್ಸಾಂ: ಪ್ರವಾಹ ಹಾಗೂ ಭೂಕುಸಿತದಿಂದ 70 ಜನರು ಮೃತ

ಅರುಣಾಚಲ ಪ್ರದೇಶದಲ್ಲಿ ಕೂಡಾ ಪ್ರವಾಹವು ಪಾಸಿಘಾಟ್, ನಮ್ಸಾಯಿ ಮತ್ತು ದಿಬಾಂಗ್ ಪಟ್ಟಣಗಳ ತಗ್ಗು ಪ್ರದೇಶಗಳನ್ನು ಮುಳುಗಿಸಿದೆ.

- Advertisement -
- Advertisement -

ಅಸ್ಸಾಂ ರಾಜ್ಯದಲ್ಲಿ ಭಾನುವಾರ ಸಂಭವಿಸಿದ ಧಾರಾಕಾರ ಮಳೆಯಿಂದಾದ ಪ್ರವಾಹ ಮತ್ತು ಭೂಕುಸಿತದಿಂದಾಗಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಇವುಗಳೊಂದಿಗೆ ಪ್ರವಾಹ ಹಾಗು ಭೂಕುಸಿತದಿಂದಾದ ಸಾವು 70 ಕ್ಕೆ ಏರಿದೆ.

ನಾಗಾವ್ನ್ ಜಿಲ್ಲೆಯ ಪ್ರವಾಹದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಕಮ್ರೂಪ್ (ಮೆಟ್ರೋ) ಜಿಲ್ಲೆಯ ಗುವಾಹಟಿಯ ಹೊರವಲಯದಲ್ಲಿರುವ ಜೋರಾಬತ್‌ನಲ್ಲಿ ಭೂಕುಸಿತ ಸಂಭವಿಸಿದ ಘಟನೆಯಲ್ಲಿ ಅನೇಕರು ಸಾವನ್ನಪ್ಪಿದ್ದಾರೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ರಾಜ್ಯದ 24 ಜಿಲ್ಲೆಗಳಲ್ಲಿ 2,015 ಹಳ್ಳಿಗಳು ನೆರೆ ಪೀಡಿತವಾಗಿದ್ದು, 12.97 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ಥರಾಗಿದ್ದಾರೆ. 82,546 ಹೆಕ್ಟೇರ್ ಪ್ರದೇಶಗಳಲ್ಲಿರುವ ಬೆಲೆಗಳ ಮೇಲೆ ಪರಿಣಾಮ ಬೀರಿದೆ.

ಪ್ರವಾಹದ ನೀರು ನದಿಗಳನ್ನು ಮೀರಿ ಹರಿಯುತ್ತಿದ್ದು, ಸೇತುವೆಗಳು ಮತ್ತು ರಸ್ತೆಗಳನ್ನು ಹಾನಿಗೊಳಿಸಿದೆ. ಪ್ರಮುಖ ನದಿಗಳಾದ ಬ್ರಹ್ಮಪುತ್ರ, ಬುರ್ಹಿ ಡೆಹಿಂಗ್, ಧನ್ಸಿರಿ, ಜಿಯಾ ಭಾರಾಲಿ, ಪುತಿಮರಿ, ಬೆಕಿ, ಕೋಪಿಲಿ ಮತ್ತು ಸಂಕೋಷ್ ನದಿಗಳಲ್ಲಿ ಪ್ರವಾಹ ಉಂಟಾಗಿದೆ. ಬ್ರಹ್ಮಪುತ್ರ ನದಿಯೂ ಹಲವಾರು ಕಡೆಗಳಲ್ಲಿ ಅಪಾಯ ಮಟ್ಟದ ಎರಡು ಅಡಿಗಿಂತ ಹೆಚ್ಚು ಹರಿಯುತ್ತಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

16 ಜಿಲ್ಲೆಗಳಲ್ಲಿ 224 ಪರಿಹಾರ ಶಿಬಿರಗಳನ್ನು ಪ್ರಾರಂಭಿಸಿದ್ದು, ಅಲ್ಲಿ 21,071 ನಿರಾಶ್ರಿತರು ಆಶ್ರಯ ಪಡೆಯುತ್ತಿದ್ದಾರೆ. ಸ್ಥಳೀಯರನ್ನು ಹೊರತುಪಡಿಸಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯ ಸಿಬ್ಬಂದಿ ಜನರನ್ನು ರಕ್ಷಿಸುವಲ್ಲಿ ನಿರತರಾಗಿದೆ.

ಪ್ರವಾಹಕ್ಕೆ ಸಿಲುಕಿರುವ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ 41 ಪ್ರಾಣಿಗಳು ಈವರೆಗೆ ಸಾವನ್ನಪ್ಪಿದೆ. ಇವುಗಳಲ್ಲಿ ಕೆಲವು ಪ್ರಾಣಿಗಳ ಸಾವು ಉದ್ಯಾನವನದ ಪಕ್ಕದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ವಾಹನ ಅಫಘಾತದಿಂದ ಸಂಭವಿಸಿವೆ.

ಭಾನುವಾರ ನಡೆದ ಸಭೆಯಲ್ಲಿ ಪರಿಸ್ಥಿತಿಯನ್ನು ಗಮನಿಸಿದ ನಂತರ, ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಸಚಿವರು, ಸಂಸದರು ಮತ್ತು ಶಾಸಕರಿಗೆ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯನ್ನು ಅಂದಾಜು ಮಾಡಲು ಸೂಚಿಸಿದರು. ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನು ಯುದ್ದೋಪಾದಿಯಲ್ಲಿ ಸರಿಪಡಿಸಬೇಕು ಎಂದು ಅವರು ನಿರ್ದೇಶಿಸಿದರು.

ನೆರೆಯ ಅರುಣಾಚಲ ಪ್ರದೇಶದಲ್ಲಿ ಕೂಡಾ ಪ್ರವಾಹವು ಪಾಸಿಘಾಟ್, ನಮ್ಸಾಯಿ ಮತ್ತು ದಿಬಾಂಗ್ ಪಟ್ಟಣಗಳ ತಗ್ಗು ಪ್ರದೇಶಗಳನ್ನು ಮುಳುಗಿಸಿದೆ. ಭೂಕುಸಿತದಿಂದಾಗಿ ರಾಜ್ಯದ ಹಲವಾರು ಭಾಗಗಳ ಸಂಪರ್ಕ ಕಡಿತಗೊಂಡಿದೆ. ಎರಡು ದಿನಗಳ ಹಿಂದೆ ಪಾಪುಮ್ ಪಾರೆ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಭೂಕುಸಿತ ಘಟನೆಗಳಲ್ಲಿ ಎಂಟು ಜನರು ಮೃತಪಟ್ಟಿದ್ದರು. ಸಿಯಾಂಗ್, ಡಿಕ್ರಾಂಗ್, ಡಿಬಾಂಗ್ ಮತ್ತು ಸುಬನ್ಸಿರಿ ಮುಂತಾದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ವರದಿಯಾಗಿವೆ.


ಓದಿ: ಅಸ್ಸಾಂನಲ್ಲಿ ಮತ್ತೆ ಪ್ರವಾಹ; 25 ಜಿಲ್ಲೆಗಳಲ್ಲಿ ಭಾರೀ ಮಳೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...