Homeಮುಖಪುಟವಿಕಾಸ್ ದುಬೆ ಹತ್ಯೆ ತನಿಖೆಗೆ ವಿಶೇಷ ತಂಡ: ವಿವಾದಾತ್ಮಕ ಎನ್ ಕೌಂಟರ್ ಆರೋಪಿ ರವೀಂದರ್ ಗೌಡ್...

ವಿಕಾಸ್ ದುಬೆ ಹತ್ಯೆ ತನಿಖೆಗೆ ವಿಶೇಷ ತಂಡ: ವಿವಾದಾತ್ಮಕ ಎನ್ ಕೌಂಟರ್ ಆರೋಪಿ ರವೀಂದರ್ ಗೌಡ್ ಸದಸ್ಯ!

DIG ಜೆ. ರವೀಂದ್ರ ಗೌಡ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ, ಹೆಚ್ಚುವರಿ ಪೊಲೀಸ್ DG ಹರಿರಾಮ್ ಶರ್ಮಾ ಈ ಮೂವರು SITಯ ಸದಸ್ಯರಾಗಿದ್ದಾರೆ.

- Advertisement -
- Advertisement -

ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಅವರನ್ನು ಕಳೆದ ವಾರ ವಿವಾದಾತ್ಮಕವಾಗಿ ಹತ್ಯೆಗೈದಿರುವ ಬಗ್ಗೆ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರ ಸ್ಥಾಪಿಸಿದ ವಿಶೇಷ ತನಿಖಾ ತಂಡದ (SIT) ಸದಸ್ಯರೊಬ್ಬರು 13 ವರ್ಷಗಳ ಹಿಂದೆ ನಕಲಿ ಎನ್‌ಕೌಂಟರ್‌ನಲ್ಲಿ  ಒಬ್ಬ ಅಮಾಯಕ ವ್ಯಕ್ತಿಯನ್ನು ಕೊಂದ ಆರೋಪ ಎದುರಿಸುತ್ತಿದ್ದಾರೆ.

DIG ಜೆ. ರವೀಂದರ್ ಗೌಡ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ, ಹೆಚ್ಚುವರಿ ಪೊಲೀಸ್ DG ಹರಿರಾಮ್ ಶರ್ಮಾ ಈ ಮೂವರು SITಯ ಸದಸ್ಯರಾಗಿದ್ದಾರೆ.

2007 ರ ಎನ್‌ಕೌಂಟರ್‌ನಲ್ಲಿ ಬರೇಲಿಯಲ್ಲಿ ಯುವ ಔಷಧ ವ್ಯಾಪಾರಿ ಕೊಲ್ಲಲ್ಪಟ್ಟಿದ್ದರು. ಇದರ ಸಿಬಿಐ ತನಿಖೆಗೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿತ್ತು. ನಂತರ ಸಿಬಿಐ ಗೌಡ್ ಅವರ ಮೇಲೆ ಚಾರ್ಜ್ ಶೀಟ್ ಸಲ್ಲಿಸಿತ್ತು. ಆದರೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಸರ್ಕಾರವು ಕಾನೂನು ಕ್ರಮ ಜರುಗಿಸಲು ಅನುಮತಿಯನ್ನು ತಡೆಹಿಡಿದಿತ್ತು. ಯೋಗಿ ಆದಿತ್ಯನಾಥ್ ಬಿಜೆಪಿ ಸರ್ಕಾರವು ಅನುಮತಿ ನೀಡಿಲ್ಲ.

“ಇಂತಹ ಅಧಿಕಾರಿಯನ್ನು ಮೂರು ಸದಸ್ಯರ ಉನ್ನತ ಮಟ್ಟದ SITಯಲ್ಲಿ ಏಕೆ ಸೇರಿಸಬೇಕು. ನಕಲಿ ಎನ್ಕೌಂಟರ್ ನಿಂದ ಕಳಂಕಿತರಾದವರನ್ನು, ನಕಲಿ ಎನ್ಕೌಂಟರ್ ಎಂದು ಆರೋಪಿಸಿ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಮತ್ತೊಂದು ಪ್ರಕರಣದಲ್ಲಿ ತನಿಖೆ ಮಾಡಲು ಸೇರಿಸಿದ್ದಾರೆ ಎಂಬುದು ನಿಜವಾಗಿಯೂ ಆಘಾತಕಾರಿ” ಎಂದು ಹೈಕೋರ್ಟ್‌ನ ಹಿರಿಯ ವಕೀಲ ಐ.ಬಿ. ಸಿಂಗ್ ಹೇಳಿದ್ದಾರೆ.

ಜುಲೈ 31 ರೊಳಗೆ ತನ್ನ ವರದಿಯನ್ನು ಸಲ್ಲಿಸುವಂತೆ SIT ಗೆ ಕೋರಲಾಗಿದೆ. ಆದರೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ, ಹೆಚ್ಚುವರಿ ಪೊಲೀಸ್ DG ಹರಿರಾಮ್ ಶರ್ಮಾ ಅವರೊಂದಿಗೆ ಈ ಮೇಲಿನ ಆರೋಪ ಹೊತ್ತಿರುವ ಗೌಡ್ ಸೇರ್ಪಡೆ ಅನುಮಾನಗಳನ್ನು ಹುಟ್ಟುಹಾಕಿದೆ.

2005 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಗೌಡ್, ಜೂನ್ 30, 2007 ರಂದು ಬರೇಲಿಯಲ್ಲಿ ಯುವ ಔಷಧ ವ್ಯಾಪಾರಿ ಮುಕುಲ್ ಗುಪ್ತಾ ಅವರ ನಕಲಿ ಎನ್‌ಕೌಂಟರ್‌ನಲ್ಲಿನ ಪಾತ್ರಕ್ಕಾಗಿ ಅಪಖ್ಯಾತಿಗೆ ಗುರಿಯಾಗಿದ್ದರು. ಈ ಅಧಿಕಾರಿ ಕೇವಲ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದರು.

ಗುಪ್ತಾ ಅವರ ತಂದೆ ಬ್ರಿಜೇಂದ್ರ ಗುಪ್ತಾ ತಮ್ಮ ಮುಗ್ಧ ಮಗನಿಗೆ ನಡೆದ ಅನ್ಯಾಯದ ವಿರುದ್ಧ ಹೋರಾಡಲು ನಿರ್ಧರಿಸಿದ್ದರು. ಸಿಬಿಐ ತನಿಖೆಗಾಗಿ ಅಲಹಾಬಾದ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅವರ ಮನವಿಯನ್ನು ಕೋರ್ಟ್ ಅಂಗೀಕರಿಸಿತು. ಇದರಲ್ಲಿ ಗೌಡ್ ಸೇರಿದಂತೆ 10 ಪೊಲೀಸರನ್ನು ಆಗಸ್ಟ್ 26, 2014 ರಂದು ಚಾರ್ಜ್ ಶೀಟ್ ಮಾಡಲಾಗಿತ್ತು. ಆಘಾತಕಾರಿ ಸಂಗತಿಯೆಂದರೆ, ಗುಪ್ತಾ ಅವರ ಹೆತ್ತವರನ್ನು ಒಂದು ವರ್ಷದ ನಂತರ, ಏಪ್ರಿಲ್ 2015 ರಲ್ಲಿ ಕೊಲ್ಲಲಾಯಿತು. ಈ ಕೊಲೆಗಳ ಬಗ್ಗೆಯೂ ತನಿಖೆ ಪೂರ್ಣಗೊಂಡಿಲ್ಲ.

ಇಷ್ಟೆಲ್ಲಾ ಆರೋಪಗಳನ್ನು ಎದುರಿಸುತ್ತಿರುವ ಪೋಲಿಸರನ್ನು, ತನಿಖೆ ನಡೆಸುವ ತಂಡದಲ್ಲಿ ಸೇರಿಸಿರುವುದರ ಕುರಿತು ಸರ್ಕಾರ ಮತ್ತು ಅಧಿಕಾರಿಗಳು ಮೌನ ವಹಿಸಿದ್ದಾರೆ.


ಇದನ್ನೂ ಓದಿ: ವಿಕಾಸ್ ದುಬೆ ಹತ್ಯೆ ಅನುಮಾನಾಸ್ಪದ: ಸಾರ್ವಜನಿಕರಿಂದ 5 ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...