Homeಮುಖಪುಟಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್‌

ಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್‌

ಇದು ಕ್ರಿಕೆಟ್‌ನಂತಿದ್ದು, ಚೆನ್ನಾಗಿ ಆಡುವವರೆಗೂ ನಾವು ತಂಡದಲ್ಲಿರಬೇಕು. ನಾನು ಇನ್ನೂ ಇಲ್ಲಿದ್ದರೆ ಪಕ್ಷವು ತೊಂದರೆಗೊಳಗಾಗಬಹುದು ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಅಸ್ಸಾಂ ಬಿಜೆಪಿ ಶಾಸಕ ಶಿಲಾದಿತ್ಯ ದೇವ್‌ ಪಕ್ಷ ತೊರೆಯುವುದಾಗಿ ಭಾನುವಾರ ಘೋಷಿಸಿದ್ದಾರೆ. ನಾಯಕರ ನಿರ್ಲಕ್ಷ್ಯ ಮತ್ತು ಗುಂಪುಗಾರಿಕೆಯನ್ನು ಆರೋಪಿಸಿ “ನಾನು ಹೊಗುವುದೆ ಉತ್ತಮ” ಎಂದು ಹೇಳಿರುವ ಅವರು ಬೇರೆ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಸದಾ ಸುದ್ದಿಯಲ್ಲಿರುವ ಅವರು ತಮ್ಮ ಕ್ಷೇತ್ರದ ಹೊಜೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ, ಮುಂದಿನ ವರ್ಷ ವಿಧಾನಸಭಾ ಚುನಾವಣೆಯವರೆಗೆ ಶಾಸಕರಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸುವುದಾಗಿ ಹೇಳಿದರು.

“ನಾನು 30 ವರ್ಷಗಳಿಂದ ಬಿಜೆಪಿಯಲ್ಲಿದ್ದೇನೆ. ಆದರೆ ಈಗ ನಮ್ಮಂತಹವರಿಗೆ ಯಾವುದೇ ಬೆಲೆಯಿಲ್ಲದಾಗಿದೆ. ನನ್ನನ್ನು ಮಂತ್ರಿಯನ್ನಾಗಿ ಮಾಡಲು ಲಾಬಿ ನಡೆಸಿದ್ದೇನೆಂದು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ನಾನು ದೆಹಲಿಯಲ್ಲಿ 17 ವರ್ಷಗಳ ಕಾಲ ಸಚಿವಾಲಯ ಸೇರಿದಂತೆ ಕೆಲಸ ಮಾಡಿದ್ದೇನೆ, ” ಎಂದು ಅವರು ಹೇಳಿದರು.

“ಆದರೆ ಇಂದು ನಾವು (ರಾಜಕೀಯವಾಗಿ) ಕೊಲ್ಲಲ್ಪಡುವಂತಹ ಪರಿಸ್ಥಿತಿಯನ್ನು ಸೃಷ್ಟಿಸಲಾಗುತ್ತಿದೆ. ಹಾಗಾಗಿ ನನ್ನ ಪ್ರತಿಷ್ಠೆಯಿಂದ ದೂರ ಹೋಗಬೇಕು. ನನ್ನ ಹಿತೈಷಿಗಳೊಡನೆ ಸಮಾಲೋಚಿಸಿದ ನಂತರ ಜುಲೈ 14 ರಂದು ಬಿಜೆಪಿಯಿಂದ ನಿವೃತ್ತಿ ಹೊಂದುತ್ತೇನೆ, ಆದರೆ ರಾಜೀನಾಮೆ ನೀಡುವುದಿಲ್ಲ,” ಎಂದು ದೇವ್ ಸುದ್ದಿಗಾರರಿಗೆ ತಿಳಿಸಿದರು.

ನಿವೃತ್ತಿಯಾಗುವುದರ ಅರ್ಥವೇನು ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಕಾಂಗ್ರೆಸ್ ಅಥವಾ ಎಐಯುಡಿಎಫ್ ನಂತಹ ಬೇರೆ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಜನರಿಗೆ ಮಾತ್ರ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಶಿಲಾದಿತ್ಯ ದೇವ್ ರಾಜ್ಯ ಬಿಜೆಪಿ ಅಧ್ಯಕ್ಷ ರಂಜೀತ್ ಕುಮಾರ್ ದಾಸ್ ಅವರ ನಿರ್ಲಕ್ಷ್ಯವನ್ನು ಆರೋಪಿಸಿ, “ಕಳೆದ ರಾತ್ರಿ ಅವರು ನನ್ನ ಕರೆ ಸ್ವೀಕರಿಸಿದ್ದಾರೆ, ಶೀಘ್ರದಲ್ಲೇ ನನಗೆ ಕರೆ ಮಾಡುವುದಾಗಿ ಹೇಳಿದ್ದರು, ಆದರೆ ಇನ್ನೂ ಯಾವುದೇ ಕರೆ ಬಂದಿಲ್ಲ. ಅವರಿಗೆ ಜುಲೈ 14 ರಂದು ನಿವೃತ್ತಿ ಹೊಂದಲಿದ್ದೇನೆ ಎಂದು ಮಾಹಿತಿ ನೀಡಿದ್ದೇನೆ ಆದರೆ ಇನ್ನೂ ಯಾವುದೇ ಉತ್ತರ ಬಂದಿಲ್ಲ” ಎಂದು ಹೇಳಿದ್ದಾರೆ.

ಪಕ್ಷದಲ್ಲಿ ಹಲವಾರು ನಾಯಕರಿದ್ದರೂ ಬಿಕ್ಕಟ್ಟಿನ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಒಬ್ಬ ನಾಯಕ ಕೂಡ ಇಲ್ಲ ಎಂದು ದೇವ್ ಆರೋಪಿಸಿದ್ದಾರೆ.

“ಬಹುಶಃ ನಾನು ಇಂದು ಬಿಜೆಪಿಯಲ್ಲಿ ಅನರ್ಹನಾಗಿದ್ದೇನೆ. ಆದ್ದರಿಂದ ಜನರ ಮುಂದೆ ಮುಜುಗರಕ್ಕೊಳಗಾಗುವುದಕ್ಕಿಂತ ಪಕ್ಷವನ್ನು ತೊರೆಯುವುದು ಉತ್ತಮ. ಇದು ಕ್ರಿಕೆಟ್‌ನಂತಿದೆ. ಚೆನ್ನಾಗಿ ಆಡುವವರೆಗೂ ನಾವು ತಂಡದಲ್ಲಿರಬೇಕು. ನಾನು ಇನ್ನೂ ಇಲ್ಲಿದ್ದರೆ ಪಕ್ಷವು ತೊಂದರೆಗೊಳಗಾಗಬಹುದು, ಉಳಿದ 10 ತಿಂಗಳಲ್ಲಿ ನಾನು ಜನರಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

126 ಸದಸ್ಯರ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿಯಲ್ಲಿ 60 ಸದಸ್ಯರಿದ್ದರೆ, ಅದರ ಮಿತ್ರರಾಷ್ಟ್ರಗಳಾದ ಎಜಿಪಿಯಲ್ಲಿ 14 ಶಾಸಕರು ಮತ್ತು ಬಿಪಿಎಫ್ 12 ಶಾಸಕರು ಇದ್ದಾರೆ, ಜೊತೆಗೆ ಒಕ್ಕೂಟವು ಒಬ್ಬ ಪಕ್ಷೇತರ ಶಾಸಕನ ಬೆಂಬಲವನ್ನು ಕೂಡ ಹೊಂದಿದೆ.

ಹೆಚ್ಚಾಗಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ದೇವ್ ಸುದ್ದಿಯಲ್ಲಿರುತ್ತಿದ್ದರು. ಅಸ್ಸಾಮೀಸ್ ಮತ್ತು ಬಂಗಾಳಿಗಳನ್ನು ವಿಭಜಿಸಲು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ 2018 ರಲ್ಲಿ ಸಿಲ್ಚಾರ್ ಪೊಲೀಸ್ ಠಾಣೆಯಲ್ಲಿ ಅವರ ಮೇಲೆ ಎಫ್ಐಆರ್ ದಾಖಲಾಗಿತ್ತು.

ಅದೇ ವರ್ಷ ನಾಗಾನ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ರಾಜ್ಯದ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಕುರಿತು ಕೋಮುವಾದಿ ಹೇಳಿಕೆ ನೀಡಿದ್ದಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು.

ಅಂತಿಮ ಎನ್‌ಆರ್‌ಸಿಯಲ್ಲಿ ಮುಸ್ಲಿಂ-ಬಾಂಗ್ಲಾದೇಶಿಗಳ ಹೆಸರನ್ನು ಪ್ರಕಟಿಸಲಾಗಿದೆ, ಆದರೆ ಹಿಂದೂ ನಿರಾಶ್ರಿತರನ್ನು ವಿದೇಶಿಯರಂತೆ ತೋರಿಸಲಾಗುತ್ತಿದೆ ಎಂದು ದೇವ್ ಆರೋಪಿಸಿದ್ದರು.


ಓದಿ: ರಾಜಕೀಯ ವಿಶ್ಲೇಷಕ ಗರ್ಗಾ ಚಟರ್ಜಿಯನ್ನು ಬಂಧಿಸಲು ಅಸ್ಸಾಂ ಸಿಎಂ ಆದೇಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...