Homeಮುಖಪುಟಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್‌

ಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್‌

ಇದು ಕ್ರಿಕೆಟ್‌ನಂತಿದ್ದು, ಚೆನ್ನಾಗಿ ಆಡುವವರೆಗೂ ನಾವು ತಂಡದಲ್ಲಿರಬೇಕು. ನಾನು ಇನ್ನೂ ಇಲ್ಲಿದ್ದರೆ ಪಕ್ಷವು ತೊಂದರೆಗೊಳಗಾಗಬಹುದು ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಅಸ್ಸಾಂ ಬಿಜೆಪಿ ಶಾಸಕ ಶಿಲಾದಿತ್ಯ ದೇವ್‌ ಪಕ್ಷ ತೊರೆಯುವುದಾಗಿ ಭಾನುವಾರ ಘೋಷಿಸಿದ್ದಾರೆ. ನಾಯಕರ ನಿರ್ಲಕ್ಷ್ಯ ಮತ್ತು ಗುಂಪುಗಾರಿಕೆಯನ್ನು ಆರೋಪಿಸಿ “ನಾನು ಹೊಗುವುದೆ ಉತ್ತಮ” ಎಂದು ಹೇಳಿರುವ ಅವರು ಬೇರೆ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಸದಾ ಸುದ್ದಿಯಲ್ಲಿರುವ ಅವರು ತಮ್ಮ ಕ್ಷೇತ್ರದ ಹೊಜೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ, ಮುಂದಿನ ವರ್ಷ ವಿಧಾನಸಭಾ ಚುನಾವಣೆಯವರೆಗೆ ಶಾಸಕರಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸುವುದಾಗಿ ಹೇಳಿದರು.

“ನಾನು 30 ವರ್ಷಗಳಿಂದ ಬಿಜೆಪಿಯಲ್ಲಿದ್ದೇನೆ. ಆದರೆ ಈಗ ನಮ್ಮಂತಹವರಿಗೆ ಯಾವುದೇ ಬೆಲೆಯಿಲ್ಲದಾಗಿದೆ. ನನ್ನನ್ನು ಮಂತ್ರಿಯನ್ನಾಗಿ ಮಾಡಲು ಲಾಬಿ ನಡೆಸಿದ್ದೇನೆಂದು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ನಾನು ದೆಹಲಿಯಲ್ಲಿ 17 ವರ್ಷಗಳ ಕಾಲ ಸಚಿವಾಲಯ ಸೇರಿದಂತೆ ಕೆಲಸ ಮಾಡಿದ್ದೇನೆ, ” ಎಂದು ಅವರು ಹೇಳಿದರು.

“ಆದರೆ ಇಂದು ನಾವು (ರಾಜಕೀಯವಾಗಿ) ಕೊಲ್ಲಲ್ಪಡುವಂತಹ ಪರಿಸ್ಥಿತಿಯನ್ನು ಸೃಷ್ಟಿಸಲಾಗುತ್ತಿದೆ. ಹಾಗಾಗಿ ನನ್ನ ಪ್ರತಿಷ್ಠೆಯಿಂದ ದೂರ ಹೋಗಬೇಕು. ನನ್ನ ಹಿತೈಷಿಗಳೊಡನೆ ಸಮಾಲೋಚಿಸಿದ ನಂತರ ಜುಲೈ 14 ರಂದು ಬಿಜೆಪಿಯಿಂದ ನಿವೃತ್ತಿ ಹೊಂದುತ್ತೇನೆ, ಆದರೆ ರಾಜೀನಾಮೆ ನೀಡುವುದಿಲ್ಲ,” ಎಂದು ದೇವ್ ಸುದ್ದಿಗಾರರಿಗೆ ತಿಳಿಸಿದರು.

ನಿವೃತ್ತಿಯಾಗುವುದರ ಅರ್ಥವೇನು ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಕಾಂಗ್ರೆಸ್ ಅಥವಾ ಎಐಯುಡಿಎಫ್ ನಂತಹ ಬೇರೆ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಜನರಿಗೆ ಮಾತ್ರ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಶಿಲಾದಿತ್ಯ ದೇವ್ ರಾಜ್ಯ ಬಿಜೆಪಿ ಅಧ್ಯಕ್ಷ ರಂಜೀತ್ ಕುಮಾರ್ ದಾಸ್ ಅವರ ನಿರ್ಲಕ್ಷ್ಯವನ್ನು ಆರೋಪಿಸಿ, “ಕಳೆದ ರಾತ್ರಿ ಅವರು ನನ್ನ ಕರೆ ಸ್ವೀಕರಿಸಿದ್ದಾರೆ, ಶೀಘ್ರದಲ್ಲೇ ನನಗೆ ಕರೆ ಮಾಡುವುದಾಗಿ ಹೇಳಿದ್ದರು, ಆದರೆ ಇನ್ನೂ ಯಾವುದೇ ಕರೆ ಬಂದಿಲ್ಲ. ಅವರಿಗೆ ಜುಲೈ 14 ರಂದು ನಿವೃತ್ತಿ ಹೊಂದಲಿದ್ದೇನೆ ಎಂದು ಮಾಹಿತಿ ನೀಡಿದ್ದೇನೆ ಆದರೆ ಇನ್ನೂ ಯಾವುದೇ ಉತ್ತರ ಬಂದಿಲ್ಲ” ಎಂದು ಹೇಳಿದ್ದಾರೆ.

ಪಕ್ಷದಲ್ಲಿ ಹಲವಾರು ನಾಯಕರಿದ್ದರೂ ಬಿಕ್ಕಟ್ಟಿನ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಒಬ್ಬ ನಾಯಕ ಕೂಡ ಇಲ್ಲ ಎಂದು ದೇವ್ ಆರೋಪಿಸಿದ್ದಾರೆ.

“ಬಹುಶಃ ನಾನು ಇಂದು ಬಿಜೆಪಿಯಲ್ಲಿ ಅನರ್ಹನಾಗಿದ್ದೇನೆ. ಆದ್ದರಿಂದ ಜನರ ಮುಂದೆ ಮುಜುಗರಕ್ಕೊಳಗಾಗುವುದಕ್ಕಿಂತ ಪಕ್ಷವನ್ನು ತೊರೆಯುವುದು ಉತ್ತಮ. ಇದು ಕ್ರಿಕೆಟ್‌ನಂತಿದೆ. ಚೆನ್ನಾಗಿ ಆಡುವವರೆಗೂ ನಾವು ತಂಡದಲ್ಲಿರಬೇಕು. ನಾನು ಇನ್ನೂ ಇಲ್ಲಿದ್ದರೆ ಪಕ್ಷವು ತೊಂದರೆಗೊಳಗಾಗಬಹುದು, ಉಳಿದ 10 ತಿಂಗಳಲ್ಲಿ ನಾನು ಜನರಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

126 ಸದಸ್ಯರ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿಯಲ್ಲಿ 60 ಸದಸ್ಯರಿದ್ದರೆ, ಅದರ ಮಿತ್ರರಾಷ್ಟ್ರಗಳಾದ ಎಜಿಪಿಯಲ್ಲಿ 14 ಶಾಸಕರು ಮತ್ತು ಬಿಪಿಎಫ್ 12 ಶಾಸಕರು ಇದ್ದಾರೆ, ಜೊತೆಗೆ ಒಕ್ಕೂಟವು ಒಬ್ಬ ಪಕ್ಷೇತರ ಶಾಸಕನ ಬೆಂಬಲವನ್ನು ಕೂಡ ಹೊಂದಿದೆ.

ಹೆಚ್ಚಾಗಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ದೇವ್ ಸುದ್ದಿಯಲ್ಲಿರುತ್ತಿದ್ದರು. ಅಸ್ಸಾಮೀಸ್ ಮತ್ತು ಬಂಗಾಳಿಗಳನ್ನು ವಿಭಜಿಸಲು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ 2018 ರಲ್ಲಿ ಸಿಲ್ಚಾರ್ ಪೊಲೀಸ್ ಠಾಣೆಯಲ್ಲಿ ಅವರ ಮೇಲೆ ಎಫ್ಐಆರ್ ದಾಖಲಾಗಿತ್ತು.

ಅದೇ ವರ್ಷ ನಾಗಾನ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ರಾಜ್ಯದ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಕುರಿತು ಕೋಮುವಾದಿ ಹೇಳಿಕೆ ನೀಡಿದ್ದಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು.

ಅಂತಿಮ ಎನ್‌ಆರ್‌ಸಿಯಲ್ಲಿ ಮುಸ್ಲಿಂ-ಬಾಂಗ್ಲಾದೇಶಿಗಳ ಹೆಸರನ್ನು ಪ್ರಕಟಿಸಲಾಗಿದೆ, ಆದರೆ ಹಿಂದೂ ನಿರಾಶ್ರಿತರನ್ನು ವಿದೇಶಿಯರಂತೆ ತೋರಿಸಲಾಗುತ್ತಿದೆ ಎಂದು ದೇವ್ ಆರೋಪಿಸಿದ್ದರು.


ಓದಿ: ರಾಜಕೀಯ ವಿಶ್ಲೇಷಕ ಗರ್ಗಾ ಚಟರ್ಜಿಯನ್ನು ಬಂಧಿಸಲು ಅಸ್ಸಾಂ ಸಿಎಂ ಆದೇಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...