Homeಮುಖಪುಟಪದ್ಮನಾಭ ಸ್ವಾಮಿ ದೇವಾಲಯ ತಿರುವಾಂಕೂರು ರಾಜಮನೆತನಕ್ಕೆ ಸೇರಿದ್ದು: ಸುಪ್ರೀಂ ಕೋರ್ಟ್

ಪದ್ಮನಾಭ ಸ್ವಾಮಿ ದೇವಾಲಯ ತಿರುವಾಂಕೂರು ರಾಜಮನೆತನಕ್ಕೆ ಸೇರಿದ್ದು: ಸುಪ್ರೀಂ ಕೋರ್ಟ್

ದೇವಾಲಯದ ಕೋಣೆಗಳಲ್ಲಿನ ಆಸ್ತಿಗಳ ವಿವರವಾದ ಪಟ್ಟಿಮಾಡಲು ನ್ಯಾಯಾಲಯ ಆದೇಶಿಸಿದೆ.

- Advertisement -
- Advertisement -

ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದೆಂದು ಪರಿಗಣಿಸಲಾಗಿರುವ ತಿರುವನಂತಪುರಂನ ಐತಿಹಾಸಿಕ ಶ್ರೀ ಪದ್ಮನಾಭ ಸ್ವಾಮಿ ದೇವಾಲಯದ ಆಡಳಿತದಲ್ಲಿ ತಿರುವಾಂಕೂರು ರಾಜಮನೆತನದ ಹಕ್ಕನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ.

ತಿರುವನಂತಪುರಂ ಜಿಲ್ಲಾ ನ್ಯಾಯಾಧೀಶರು ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ಆಡಳಿತ ಸಮಿತಿಯ ಮುಖ್ಯಸ್ಥರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ದೇವಾಲಯದ ಆಡಳಿತವನ್ನು ವಹಿಸಿಕೊಳ್ಳಲು ಟ್ರಸ್ಟ್ ಸ್ಥಾಪಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿದ್ದ ಕೇರಳ ಹೈಕೋರ್ಟ್‌‌ನ ಜನವರಿ 31, 2011 ರ ತೀರ್ಪನ್ನು ಸುಪ್ರೀಂ ಕೋರ್ಟ್ ಬದಿಗಿಟ್ಟಿದೆ.

ಆರ್ಥಿಕ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಐತಿಹಾಸಿಕ ದೇವಾಲಯದ ಆಡಳಿತ ಮತ್ತು ನಿರ್ವಹಣೆಯ ಕುರಿತ ಮೊಕದ್ದಮೆ ಕಳೆದ ಒಂಬತ್ತು ವರ್ಷಗಳಿಂದ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇತ್ತು.

ತಿರುವಾಂಕೂರಿನ ಕೊನೆಯ ಮಹಾರಾಜರ ನಿಧನದ ನಂತರ, ದೇವಾಲಯವನ್ನು ಸರ್ಕಾರಕ್ಕೆ ವಹಿಸಲಾಗಿದೆ ಎಂದು ಹೈಕೋರ್ಟ್ 2011 ರ ಜನವರಿ 31 ರಂದು ತೀರ್ಪು ನೀಡಿತ್ತು.

ದೇವಾಲಯವನ್ನು ರಾಜಮನೆತನದ ಮುಂದಿನ ಕುಡಿಗಳಿಗೆ ಹಸ್ತಾಂತರಿಸಲು ಯಾವುದೇ ಅವಕಾಶವಿಲ್ಲದ ಕಾರಣ ಸರ್ಕಾರವು ದೇವಾಲಯವನ್ನು ಸ್ವಾಧೀನಪಡಿಸಿಕೊಳ್ಳಬೇಕು ಎಂದು ಹೈಕೋರ್ಟ್ ತೀರ್ಪು ನೀಡಿತ್ತು.

ಹೈಕೋರ್ಟ್ ಆದೇಶದ ವಿರುದ್ಧ ಉತ್ರಾದಂ ತಿರುನಾಲ್ ಮಾರ್ತಾಂಡ ವರ್ಮಾ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ್ದರು. ನಂತರ ಸುಪ್ರೀಂ ಕೋರ್ಟ್ 2011 ರ ಮೇ 2 ರಂದು ಹೈಕೋರ್ಟ್ ಆದೇಶವನ್ನು ತಡೆಹಿಡಿದಿತ್ತು.

ಕೋಣೆ(ಕಲ್ಲಾರ) ಗಳಲ್ಲಿನ ಲೇಖನಗಳು, ಬೆಲೆಬಾಳುವ ವಸ್ತುಗಳು, ಆಭರಣಗಳ ವಿವರವಾದ ಪಟ್ಟಿ ಮಾಡಬೇಕು ಎಂದು ಉನ್ನತ ನ್ಯಾಯಾಲಯವು ನಿರ್ದೇಶಿಸಿತ್ತು.

ಜುಲೈ 8, 2011 ರಂದು ಸುಪ್ರೀಂ ಕೋರ್ಟ್ “ಬಿ. ಕೋಣೆ” ತೆರೆಯುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಬೇಕು ಎಂದು ಹೇಳಿತ್ತು.

ಜುಲೈ 2017 ರಲ್ಲಿ, ಸುಪ್ರೀಂ ಕೋರ್ಟ್ ದೇವಾಲಯದಲ್ಲಿ ಒಂದು ಕೋಣೆಯಲ್ಲಿ ‘ಅತೀಂದ್ರಿಯ’ ಶಕ್ತಿಯೊಂದಿಗೆ ಭಾರಿ ನಿಧಿ ಇದೆ ಎಂಬ ವಾದಗಳನ್ನು ಪರಿಶೀಲಿಸುವುದಾಗಿ ಹೇಳಿತ್ತು.

ಆದರೆ, ದೇವಾಲಯದ ಕೋಣೆಗಳಲ್ಲಿನ ಆಸ್ತಿಗಳ ವಿವರವಾದ ಪಟ್ಟಿಮಾಡಲು ನ್ಯಾಯಾಲಯ ಆದೇಶಿಸಿದೆ.

ಅಮಿಕಸ್ ಕ್ಯೂರಿಯಂತೆ ನೇಮಕಗೊಂಡ ಗೋಪಾಲ್ ಸುಬ್ರಮಣ್ಯಂ ಮತ್ತು ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವಿನೋದ್ ರೈ ಅವರು ದೇವಾಲಯದ ಆಡಳಿತ ಮತ್ತು ಅದರ ಆಸ್ತಿಗಳ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

ಹಿಂದಿನ ತಿರುವಾಂಕೂರು ರಾಜಮನೆತನದ ರಾಜರ ಸ್ವಂತ ವೆಚ್ಚಕ್ಕೆ ಸರಕಾರದ ಬೊಕ್ಕಸದಿಂದ ಕೊಡುವ ಹಣ ಮತ್ತು ರಾಜಪ್ರಭುತ್ವದ ಆಡಳಿತವು ಕೊನೆಗೊಂಡಿದ್ದರಿಂದ ರಾಜನ ವೈಯಕ್ತಿಕ ಸವಲತ್ತುಗಳು ಅಸ್ತಿತ್ವದಲ್ಲಿಲ್ಲ ಎಂದು ವಾದಿಸಿದರು. ದೇವಾಲಯವು ಸಾರ್ವಜನಿಕರಿಗೆ ಮುಕ್ತವಾಗಿದ್ದರೂ, ದೇವಾಲಯದ ಆಡಳಿತದ ಮೇಲೆ ರಾಜಮನೆತನಕ್ಕೆ ಹಕ್ಕಿದೆ.

ಆದಾಗ್ಯೂ, ಅಮಿಕಸ್ ಕ್ಯೂರಿ ಮತ್ತು ಹಿಂದಿನ ಸಿಎಜಿ ದೇವಾಲಯದ ಆಡಳಿತದಲ್ಲಿ ಅಕ್ರಮಗಳು ನಡೆದಿರೆಉ ಕಂಡುಕೊಂಡಿದೆ ಎಂದು ರಾಜ್ಯ ಸರ್ಕಾರ ವಾದಿಸಿತು. ಗುರುವಾಯೂರ್ ದೇವಾಲಯದಂತೆಯೇ ಆಡಳಿತಾತ್ಮಕ ಮಾದರಿಯನ್ನು ಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಪರಿಗಣಿಸಬೇಕು ಎಂದು ಕೇಳಿದೆ.

ದಕ್ಷಿಣ ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳನ್ನು ಆಳ್ವಿಕೆ ನಡೆಸಿದ್ದ ತಿರುವಾಂಕೂರು ರಾಜ ಮನೆತನವೂ 18 ನೇ ಶತಮಾನದಲ್ಲಿ ಈ ವಿಸ್ತಾರವಾದ ದೇವಾಲಯವನ್ನು ಗ್ರಾನೈಟ್‌ನಲ್ಲಿ ನಿರ್ಮಿಸಿತ್ತು.

ಭಾರತದ ಸ್ವಾತಂತ್ರ್ಯದ ನಂತರವೂ ಈ ದೇವಾಲಯವನ್ನು ಹಿಂದಿನ ರಾಜಮನೆತನದವರು ನಿಯಂತ್ರಿಸುವ ಟ್ರಸ್ಟ್‌ನಿಂದ ನಿಯಂತ್ರಿಸಲಾಗುತ್ತಿತ್ತು.

ಸುಪ್ರೀಂ ಕೋರ್ಟಿನ ಈ ತೀರ್ಪಿಗೆ ಹಲವಾರು ಜನರು ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್. ದ್ವಾರಕ್‌ನಾಥ್ “ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಹಕ್ಕು ಆಗಬೇಕಾದುದು ರಾಜಮನೆತನದ ಹಕ್ಕು ಹೇಗಾಗುತ್ತೋ ?” ಎಂದು ಹೇಳಿದ್ದಾರೆ.

ರಾಜಮನೆತನದ ಹಕ್ಕುರಕ್ಷಣೆಗೆ ಸುಪ್ರೀಂ ಕೋರ್ಟ್!!- – – – – – – – – "ಅನಂತಪದ್ಮನಾಭ ದೇವಸ್ಥಾನದ (ಬೆಲೆಕಟ್ಟಲಾಗದಷ್ಟು ಅಮೂಲ್ಯ) ಸಂಪತ್ತಿನ…

Posted by Dwarakanath Chokka on Monday, July 13, 2020


ಓದಿ: ಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...